Breaking News

ಜಾಗಿಂಗ್‌ ಮಾಡ್ತಿದ್ದ ಮಹಿಳೆಯರ ವಿಡಿಯೋ ಮಾಡಿ ತಗ್ಲಾಕೊಂಡ ಕಾಮುಕ ಯುವಕ; ಸ್ಥಳೀಯರಿಂದ ತರಾಟೆ

ಬೆಂಗಳೂರು: ಬೆಳ್ಳಂಬೆಳಗ್ಗೆ ಜಾಗಿಂಗ್‌ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡಿ ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ಹೆಚ್‌.ಎಸ್‌.ಆರ್‌ ಬಡಾವಣೆಯ ಅರಗ ಕೆರೆ ಬಳಿ ನಡೆದಿದೆ. ಸರ್ಜಾಪುರದಲ್ಲಿ ವಾಸವಿರುವ ಗೋಲ್ಡನ್ ಕುಮಾರ್ ಎಂಬಾತ ಈ ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ. ಕದ್ದು ಮುಚ್ಚಿ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಯುವಕನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ನಗರದ ಅರಗ ಕೆರೆ ಬಳಿ ಎಂದಿನಂತೆ ಮಹಿಳೆಯೊಬ್ಬರು ಜಾಗಿಂಗ್‌ಗೆ ಬಂದಿದ್ದರು. ಈ ವೇಳೆ ಯುವಕ ಆಕೆಯ ವಿಡಿಯೋ ರೆಕಾರ್ಡ್‌ ಮಾಡುವಾಗ ರೆಡ್‌ಹ್ಯಾಂಡ್‌ …

Read More »

ಒಳಹರಿವಿಗಿಂತ 3 ಪಟ್ಟು ಅಧಿಕ ನೀರು ತಮಿಳುನಾಡಿಗೆ – ಕೆಆರ್‌ಎಸ್ ಡ್ಯಾಂ ಮಟ್ಟ 108 ಅಡಿಗೆ ಕುಸಿತ

ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ  ಹೊರಹರಿವಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಆರ್‌ಎಸ್ ಡ್ಯಾಂನಿಂದ ನೀರು ಹರಿಸಲಾಗುತ್ತಿದೆ. ಇತ್ತ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಕುಸಿದ ಪರಿಣಾಮ ನೀರಿನ ಮಟ್ಟದಲ್ಲಿ ಇಳಿಕೆ ಕಂಡುಬಂದಿದೆ. ಎರಡು ದಿನಗಳ ಹಿಂದೆ 7,697 ಕ್ಯೂಸೆಕ್ ಇದ್ದ ಹೊರಹರಿವು, ನಿನ್ನೆ 8,544 ಕ್ಯೂಸೆಕ್‌ಗೆ ಹೆಚ್ಚಳವಾಗಿತ್ತು. ಇಂದು ಹೊರಹರಿವಿನ ಪ್ರಮಾಣ ಬರೋಬ್ಬರಿ 9,253 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆ ತಗ್ಗಿದ ಹಿನ್ನೆಲೆಯಲ್ಲಿ ಡ್ಯಾಂಗೆ ನೀರಿನ …

Read More »

ಕಲಬುರಗಿಯಲ್ಲಿ ಭೀಕರ ಅಪಘಾತ – ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ  ತಾಯಿಯೊಂದಿಗೆ ಮೂರು ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಟೋ – ಲಾರಿ ಮಧ್ಯೆ ಭೀಕರ ಅಪಘಾತ ನಡೆದು ಶರಣಮ್ಮ (30) ಎಂಬ ಮಹಿಳೆ ಮತ್ತು ಆಕೆಯ 3 ತಿಂಗಳ ಮಗು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ವಾಡಿ ಪಟ್ಟಣಕ್ಕೆ ಆಗಮಿಸುವ ವೇಳೆ ಆಟೋಗೆ ಲಾರಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಅತ್ತೆ …

Read More »

ಮದ್ರಾಸ್‌ ಹೈಕೋರ್ಟ್‌ನಲ್ಲಿ ಸ್ಟಾಲಿನ್‌ಗೆ ಮುಖಭಂಗ

ಚೆನ್ನೈ: ತಾನು ಪ್ರತಿನಿಧಿಸುವ ಕೊಳತ್ತೂರು ಕ್ಷೇತ್ರದಲ್ಲಿ ಟಿವಿಕೆ ಶಾಸಕ ವಿ.ಎಸ್.ಬಾಬು ಅವರ ಗೆಲುವನ್ನು ಅಸಿಂಧುಗೊಳಿಸುವಂತೆ ಕೋರಿ ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌  ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ. ಧರ್ಮಾಧಿಕಾರಿ ಮತ್ತು ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರಿದ್ದ ಪೀಠವು ಸ್ಟಾಲಿನ್ ಅವರ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿತು. ಈಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಾಬು ಅವರು ಸ್ಟಾಲಿನ್ ಅವರನ್ನು 8,795 …

Read More »

ದುನಿಯಾ ವಿಜಯ್ – ನಾಗರತ್ನ ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು; 2 ಕೋಟಿ ಜೀವನಾಂಶಕ್ಕೆ ಆದೇಶ

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್  ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿದೆ. ಹಲವು ವರ್ಷಗಳಿಂದ ಕೋರ್ಟ್ ಅಂಗಳದಲ್ಲಿದ್ದ ವಿಚ್ಛೇದನ ಪ್ರಕರಣವನ್ನ ಇತ್ಯರ್ಥಪಡಿಸಿರುವ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ, ದಂಪತಿಗೆ ಅಧಿಕೃತವಾಗಿ ವಿಚ್ಛೇದನ ಮಂಜೂರು ಮಾಡಿದೆ. ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್‌ ಹಾಗೂ ಪತ್ನಿ ನಾಗರತ್ನಾ ಅವರಿಗೆ ನ್ಯಾ. ಡಿಕೆ ಸಿಂಗ್ ಹಾಗು ಶಾಂತಿಭೂಷಣ್ ಅವರ …

Read More »

ಮೋದಿ ಸಂಪುಟ ಪುನರ್‌ರಚನೆಗೆ ವೇದಿಕೆ ಸಿದ್ಧ? – ಯುವ ಮುಖಗಳು, ಮಿತ್ರಪಕ್ಷಗಳಿಗೆ ಆದ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೊಂದು ಮಹತ್ವದ ಪುನರ್‌ರಚನೆ ನಡೆಯುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ. ಮುಂಬರುವ ವಿಧಾನಸಭಾ ಚುನಾವಣೆಗಳು, ಸಚಿವರ ಕಾರ್ಯಕ್ಷಮತೆ, ಪ್ರಾದೇಶಿಕ ಸಮತೋಲನ ಹಾಗೂ ಮಿತ್ರಪಕ್ಷಗಳ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಸಂಪುಟಕ್ಕೆ ಹೊಸ ಮುಖಗಳನ್ನು ಸೇರ್ಪಡೆ ಮಾಡುವ ಸಾಧ್ಯತೆ ಇದೆ. ಪ್ರಸ್ತುತ ಕೇಂದ್ರ ಸಚಿವ ಸಂಪುಟದಲ್ಲಿ ಸುಮಾರು 69 ಸಚಿವರಿದ್ದಾರೆ. ಗರಿಷ್ಠ 81 ಸಚಿವರಿಗೆ ಅವಕಾಶವಿದೆ. ಹೀಗಾಗಿ, ಹೆಚ್ಚುವರಿ ಸಚಿವರನ್ನು …

Read More »

ಖಾಸಗಿ ದ್ವಿಚಕ್ರ ವಾಹನ ಮಾಲೀಕರಿಗೆ ಬೈಕ್‌ ಟ್ಯಾಕ್ಸಿ ನಿರ್ವಹಿಸಲು ಅವಕಾಶ ಕೊಡಿ: ರಾಜ್ಯಗಳಿಗೆ ಗಡ್ಕರಿ ಮನವಿ

ನವದೆಹಲಿ: ಖಾಸಗಿ ದ್ವಿಚಕ್ರ ವಾಹನ ಮಾಲೀಕರು ಬೈಕ್‌ ಟ್ಯಾಕ್ಸಿ  ಸೇವೆ ನಿರ್ವಹಿಸಲು ಅವಕಾಶ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಬುಧವಾರ ಮಾತನಾಡಿದ್ದು, ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಖಾಸಗಿ ದ್ವಿಚಕ್ರ ವಾಹನಗಳ ಮೂಲಕ ಪ್ರಯಾಣಿಕರನ್ನ ಸಾಗಿಸುವ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಲಾಗಿದೆ. ಆದರೆ ಕೆಲ ರಾಜ್ಯಗಳಲ್ಲಿ ಇಂತಹ ಸೇವೆಗಳಿಗೆ ಇನ್ನೂ ಅವಕಾಶ ನೀಡಲಾಗಿಲ್ಲ. …

Read More »

ಕಾಂಗ್ರೆಸ್ ಶಾಸಕನಿಂದ ಕಮೀಷನ್ ಆರೋಪ ವಿಚಾರ ತನಿಖೆ ಆಗಲಿ: ಯು‌.ಟಿ. ಖಾದರ್

ಬೆಂಗಳೂರು: ಸಚಿವರ ಹೆಸರಿನಲ್ಲಿ ಕಮೀಷನ್ ಕೇಳಿದ ಪ್ರಕರಣ ತನಿಖೆ ಆಗಲಿ ಎಂದು ಸಚಿವ ಯುಟಿ. ಖಾದರ್ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕ ಅಶೋಕ್ ರೈ  ಅವರಿಂದ 7% ಕಮೀಷನ್ ಆರೋಪ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವರ ಹೆಸರು ಹೇಳಿ ಕಮೀಷನ್ ತಗೋತಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಗ್ರಾಮೀಣಾಭಿವೃದ್ದಿ ಸಚಿವರು ತಕ್ಷಣ ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರಿಗೂ ನಾನು ತನಿಖೆ ಮಾಡೋಕೆ ಮನವಿ …

Read More »

26 ಎಕ್ರೆ ಸರ್ಕಾರಿ ಜಮೀನಿಗೆ ಅಕ್ರಮ ಇ-ಖಾತೆ – ನಗರಸಭೆ ಅಧಿಕಾರಿಗಳ ವಿರುದ್ಧ ದೂರು ಹಿನ್ನಲೆ ತನಿಖಾ ತಂಡ ರಚನೆ

ಚಿಕ್ಕಬಳ್ಳಾಪುರ: ತಾಲೂಕಿನ ಅಣಕನೂರು ಗ್ರಾಮದ ಸರ್ವೆ ನಂ.109 ರಲ್ಲಿರುವ 26 ಎಕರೆ ಸರ್ಕಾರಿ ಜಮೀನಿಗೆ ಖಾಸಗಿ ಮಹಿಳೆಯ ಹೆಸರಲ್ಲಿ ಅಕ್ರಮವಾಗಿ ಇ-ಖಾತೆ ಸೃಜಿಸಿದ ಆರೋಪ ಕೇಳಿಬಂದಿದೆ. ಚಿಕ್ಕಬಳ್ಳಾಪುರ ನಗರಸಭೆ ಪೌರಾಯುಕ್ತ ಹಾಗೂ ಅಧಿಕಾರಿಗಳ ವಿರುದ್ಧ ದೂರು ನೀಡಿದ ಹಿನ್ನೆಲೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಅಕ್ರಮ ಇ-ಖಾತೆ ಪ್ರಕರಣದ ತನಿಖೆಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ. ಪ್ರಭು ಅವರು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿ ಆದೇಶಿಸಿದ್ದಾರೆ. ಎಸಿ ಅಶ್ವಿನ್, ಪಿಡಿ ಮಂಜುನಾಥ್ …

Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೊಳದಲ್ಲಿ ಮುಳುಗಿ ಕುಳಿತಿದ್ದ ರೌಡಿಶೀಟರ್!

ಶಿವಮೊಗ್ಗ:‌ ಮಹಾಭಾರತ ಯುದ್ದದ ಕೊನೆಯ ದಿನ ಪಾಂಡವರಿಂದ ತಪ್ಪಿಸಿಕೊಳ್ಳಲು ದುರ್ಯೋಧನ ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಿದ್ದ ಕಥೆ ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಪೊಲೀಸರಿಂದ  ತಪ್ಪಿಸಿಕೊಳ್ಳಲು ರೌಡಿಶಿಟರ್‌ ಒಬ್ಬ ಕೊಳದ ನೀರಲ್ಲಿ ಅರ್ಧಗಂಟೆ ಮುಳುಗಿ ಕುಳಿತ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ರೌಡಿಶೀಟರ್‌ ದಿಲೀಪ್‌ ಅಲಿಯಾಸ್‌ ಕರಿಯಾ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳ್ಳದ ನೀರಿನಲ್ಲಿ ಅಡಗಿದ್ದ. ಈತನ ವಿರುದ್ಧ ಕಳ್ಳತನ, ಕೊಲೆ ಯತ್ನ ಸೇರಿ 16 ಪ್ರಕರಣಗಳಿವೆ. ಪ್ರಕರಣ ಒಂದರಲ್ಲಿ ಈತನ …

Read More »