ಬೆಳಗಾವಿ: ಬೆಳಗಾವಿ ಉಪ ತಹಶೀಲ್ದಾರ್ ವಿಜಯಶ್ರೀ ನಾಗನೂರೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಲೋಕಸಭಾ ಉಪಚುನಾವಣಾ ಫಲಿತಾಂಶದ ದಿನ ಎಲೆಕ್ಷನ್ ಕರ್ತವ್ಯ ನಿರ್ವಹಿಸಿದ್ದರು. ಬೆಳಗಾವಿಯ ಯಮುನಾಪುರದ ನಿವಾಸಿಯಾಗಿದ್ದ ವಿಜಯಶ್ರೀ (53) ಅವರಿಗೆ ಮೇ 3ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. 12 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಿಜಯಶ್ರೀ ನಗನೂರೆ ಅವರ ಕುಟುಂಬದ 10 ಸದಸ್ಯರಿಗೆ ಕೊರೊನಾ ಸೋಂಕು ತಗುಲಿದ್ದು ಎಲ್ಲರೂ …
Read More »ಮಂಗಳೂರು : ಎಂಜಿನ್ ಸಮಸ್ಯೆಯಿಂದ ಸಮುದ್ರದಲ್ಲಿ ಸಿಲುಕಿದ ಬೋಟ್; ಮೂವರು ಮೀನುಗಾರರ ರಕ್ಷಣೆ
ಮಂಗಳೂರು : ಎಂಜಿನ್ ಸಮಸ್ಯೆಯಿಂದ ಸಮುದ್ರದಲ್ಲಿ ಬೋಟ್ ವೊಂದು ಸಿಲುಕಿದ ಪರಿಣಾಮ ಅದರಲ್ಲಿದ್ದ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ. ಕಣ್ಣೂರಿನಿಂದ 10 ನಾಟಿಕಲ್ ಮೈಲಿ ದೂರದಲ್ಲಿ ದೋಣಿ ಕೆಟ್ಟು ನಿಂತಿತ್ತು. ಈ ಕುರಿತು ಕರಾವಳಿ ಕಾವಲು ಪಡೆ ಸಿಬ್ಬಂದಿ ಮಾಹಿತಿ ಪಡೆದು, ವಿಕ್ರಮ್ ಹಡಗಿನೊಂದಿಗೆ ಕಾರ್ಯಾಚರಣೆ ನಡೆಸಿ, ಮೂವರನ್ನು ರಕ್ಷಿಸಲಾಗಿದೆ, ರಕ್ಷಿಸಿದ ಮೀನುಗಾರರಿಗೆ ಆಹಾರ, ವೈದ್ಯಕೀಯ ನೆರವು ನೀಡಲಾಗಿದೆ. ‘ತೌಕ್ತೆ ಚಂಡಮಾರುತದಿಂದ ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ …
Read More »ಕೋವಿಡ್ ಸೋಂಕಿಗೆ ತಂದೆ – ತಾಯಿ ಬಲಿ : ಅನಾಥವಾದ 5 ದಿನದ ಮಗು.!
ಮಂಡ್ಯ: ಕೋವಿಡ್ ಸೋಂಕಿನಿದ ತಂದೆ-ತಾಯಿ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ 5 ದಿನದ ಮಗು ಅನಾಥವಾದ ಕರುಣಾಜನಕ ಘಟನೆ ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಂಜುಂಡೇಗೌಡ(45) ಹಾಗೂ ಪತ್ನಿ ಮಮತಾ(31) ಕೋವಿಡ್ ಸೋಂಕಿನಿಂದ ಮೃತಪಟ್ಟವರು. ನಂಜುಂಡೇಗೌಡ ಅವರಿಗೆ ಕೋವಿಡ್ ಸೋಂಕು ತಗುಲಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ 15 ದಿನಗಳ ಹಿಂದೆ ಏ.30 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ತುಂಬು ಗರ್ಭಿಣಿಯಾಗಿದ್ದ ಪತ್ನಿ ಮಮತಾಗೂ ಸೋಂಕು …
Read More »ರಕ್ಷಣೆ ಇಲ್ಲದೆ ಸೋಂಕಿತ ಶವ ಹಸ್ತಾಂತರ; ಆರೋಪ
ರಾಯಚೂರು: ಇಲ್ಲಿನ ಓಪೆಕ್ ಕೋವಿಡ್ ಆಸ್ಪತ್ರೆಯಲ್ಲಿ ಮೃತ ಸೊಂಕಿತರ ಶವಗಳಿಗೆ ಕವರ್ ಹಾಕದೆ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಸೋಂಕಿನಿಂದ ದಾಖಲಾದವರು ಮೃತಪಟ್ಟಲ್ಲಿ ಆಸ್ಪತ್ರೆ ಸಿಬ್ಬಂದಿಯೇ ಅಂತ್ಯಕ್ರಿಯೆ ನೆರವೇರಿಸುತ್ತಾರೆ. ಇಲ್ಲವೇ ಕುಟುಂಬಸ್ಥರು ಶವ ಕೇಳಿದರೆ, ಶವವನ್ನು ಸಂಪೂರ್ಣ ಕವರ್ ಮಾಡಿ ಕೊಡಬೇಕಿದೆ. ಈವರೆಗೂ ಹಾಗೆಯೇ ನೀಡಲಾಗುತ್ತಿದೆ. ಆದರೆ, ವೀಡಿಯೋ ಹರಿದಾಡುತ್ತಿದ್ದು ಅದರಲ್ಲಿ ಶವ ಹಸ್ತಾರಿಸುವಾಗ ಯಾವುದೇ ಕವರ್ ಹಾಕಿಲ್ಲ. ಪಿಪಿಇ ಕಿಟ್ ಸಹ ನೀಡದೆ ಸಂಬಂಧಿಕರೆ ಅಂತ್ಯ …
Read More »ಬಿಗ್ ಬಾಸ್ ಮನೆಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಶುಭಾ ಪೂಂಜಾ
ಬಿಗ್ಬಾಸ್ ಮನೆಯಿಂದ ಹೊರಬರುವ ವೇಳೆ ನಟಿ ಶುಭಾ ಪೂಂಜಾ ಕೊರೊನಾ ವಾರಿಯರ್ಸ್ ಆಗಿ ಸೇವೆ ಮಾಡೋಣ, ಜನರಿಗೆ ನೆರವಾಗೋಣ ಎಂದು ಮಾತು ಕೊಟ್ಟಿದ್ದರು. ಅದರಂತೆ ನಡೆದುಕೊಂಡು ಗಮನ ಸೆಳೆದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ 72 ದಿನಗಳ ಕಾಲ ಇದ್ದ ಶುಭಾ ಪೂಂಜಾ ಸೇರಿದಂತೆ 11 ಸ್ಪರ್ಧಿಗಳಿಗೆ ಕೊರೊನಾದಿಂದ ರಾಜ್ಯ ಎದುರಿಸುತ್ತಿರುವ ಭೀಕರತೆಯ ಮಾಹಿತಿ ನೀಡಿ ಹೊರಗೆ ಕರೆಸಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಪರ್ಧಿಗಳು ಆತಂಕಕ್ಕೀಡಾಗಿ ಕಣ್ಣೀರು ಹಾಕಿದ್ದರು. ಇಷ್ಟು ದಿನ …
Read More »ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಅಶಿಮ್ ಬ್ಯಾನರ್ಜಿ ಕೊರೊನಾಗೆ ಬಲಿ
ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಅಶಿಮ್ ಬ್ಯಾನರ್ಜಿ ಅವರು ಶನಿವಾರ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅಶಿಮ್ ಬ್ಯಾನರ್ಜಿ ಅವರು, ಕೋಲ್ಕತ್ತಾದ ಮೇದಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ಪಶ್ಚಿಮ ಬಂಗಾದಲ್ಲಿ ಶುಕ್ರವಾರ 20,846 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 10,94,802ಕ್ಕೆ ಏರಿಕೆಯಾಗಿದೆ. ಈ ನಡುವೆ …
Read More »19 ಮಹಿಳೆಯರ ಅತ್ಯಾಚಾರ ಮಾಡಿದ ಕಾಮುಕನ ಬಂಧನ
ಹೈದರಾಬಾದ್: ಹಣದ ಮೇಲಿನ ದುರಾಸೆಯಿಂದ ಕೆಲವರು ಕಳ್ಳತನಕ್ಕೆ ಇಳಿಯುವುದನ್ನು ನಾವು ನೋಡಿದ್ದೇವೆ. ಇನ್ನು ಕೆಲವರು ತಮ್ಮ ಅಗತ್ಯ ಪೂರೈಸಿಕೊಳ್ಳಲು ಕಳ್ಳತನ ಮಾಡುತ್ತಾರೆ. ಏನೇ ಆಗಲಿ ಕಳ್ಳತನ ಮಾಡುವುದು ಅಪರಾಧವೇ. ಆದರೆ, ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಇಲ್ಲೊಬ್ಬ ಖದೀಮ ತುಂಬಾ ಭಯಾನಕ. ಏಕೆಂದರೆ ಈತ ಹಣ, ಆಭರಣ ಕದ್ದಿದ್ದಲ್ಲದೆ, ಹೆಣ್ಣು ಮಕ್ಕಳ ಶೀಲವನ್ನು ದೋಚಿದ್ದಾನೆ. ಇನ್ನು ಪೊಲೀಸ್ ವಿಚಾರಣೆಯಲ್ಲಿ ಖದೀಮ ಆಘಾತಕಾರಿ ವಿಚಾರಗಳನ್ನು ಬಿಚ್ಚಿಟ್ಟಿದ್ದು, ಸ್ವತಃ ಪೊಲೀಸರೇ ಶಾಕ್ ಆಗಿದ್ದಾರೆ. ಅಂದಹಾಗೆ …
Read More »“ಕೊಟ್ಟ ಕುದುರೆ ಏರಲಾಗದವನು ಧೀರನೂ ಅಲ್ಲ- ಶೂರನೂ ಅಲ್ಲ, ಅಧಿಕಾರ ಬಿಟ್ಟು ತೊಲಗಿ”
ಬೆಂಗಳೂರು, -ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನಾವೇನ್ ನೋಟ್ ಪ್ರಿಂಟ್ ಮಾಡ್ತೀವಾ?, ಜಡ್ಜ್ಗಳು ಸರ್ವಜ್ಞರಲ್ಲ, ಕೊರೊನಾ ವೈರಸ್ಗಾಗಿ ಚೀನಾವನ್ನು ದೂಷಿಸಬೇಕು, ನೇಣು ಹಾಕಿಕೊಳ್ಳಲು ಆಗುತ್ತಾ?, ಕೋವಿಡ್ ಪ್ಯಾಕೇಜ್ ಕೊಡಲು ಆಗಲ್ಲ, ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ ಎಂದು ಹೇಳಿರುವುದು ಧರೆಗೆ ಸ್ವರ್ಗ ಇಳಿಸುವ …
Read More »ಸಾವಿನ ವಿಚಾರದಲ್ಲಿ ಸುಳ್ಳು ಹೇಳಿದ ಸಚಿವ ಸುಧಾಕರ್ ನನ್ನು ಸಂಪುಟದಿಂದ ವಜಾ ಮಾಡಿ: ಡಿಕೆಶಿ
ಬೆಂಗಳೂರು, ಮೇ 14-ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಘಟನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ನಿರ್ಲಕ್ಷ್ಯದ ಕಾರಣಕ್ಕೆ ಮುಖ್ಯಮಂತ್ರಿ ಸೇರಿದಂತೆ ಸಂಬಂಧಿಸಿದ ಎಲ್ಲರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ಆಡಳಿತ ವೈಪಲ್ಯಗಳನ್ನು ತರಾಟೆಗೆ …
Read More »ದುಬಾರಿ ಬೆಲೆಗೆ ರೆಮಿಡಿಸಿವಿರ್ ಮಾರುತ್ತಿದ್ದ ವೈದ್ಯ ಸೇರಿದಂತೆ ಇಬ್ಬರ ಬಂಧನ
ಬೆಂಗಳೂರು,ಮೇ.14-ಕೊರೊನಾ ಸೋಂಕಿತನಿಗೆ ಹಂಚಿಕೆಯಾಗಿದ್ದ ರೆಮಿಡಿಸಿವಿರ್ ಔಷಧಿಯನ್ನು ರೋಗಿಗೆ ನೀಡದೆ ಬೇರೆಯವರಿಗೆ ದುಬಾರಿ ಬೆಲೆಗೆ ಮಾರಾಟ ಮಾಡಿಕೊಂಡಿದ್ದ ವೈದ್ಯಾಧಿಕಾರಿ ಹಾಗೂ ಆಸ್ಪತ್ರೆಯ ಹೌಸ್ ಕೀಪಿಂಗ್ ಮ್ಯಾನೇಜರ್ನನ್ನು ಬಂಧಿಸಿರುವ ಸಂಜಯನಗರ ಪೊಲೀಸರು ಎರಡು ರೆಮಿಡಿಸಿವಿರ್ ಚುಚ್ಚುಮದ್ದುಗಳು, ಒಂದು ದ್ವಿಚಕ್ರ ವಾಹನ, ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಹೊಸೂರು ರಸ್ತೆಯಲ್ಲಿರುವ ಮಾತೃ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಬಿಟಿಎಂ ಬಡಾವಣೆಯ ವೈದ್ಯ ಡಾ.ಸಾಗರ್ ಹಾಗೂ ಹೌಸ್ ಕೀಪಿಂಗ್ ಮ್ಯಾನೇಜರ್ ಕಾಮಾಕ್ಷಿಪಾಳ್ಯದ ನಿವಾಸಿ ಕೃಷ್ಣ ಬಂಧಿತ …
Read More »