Breaking News

ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ ಶಂಕರಟ್ಟಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ

  ಅಥಣಿ :ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ  ಶಂಕರಟ್ಟಿ ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು. ಈ ವೇಳೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶುವೈದ್ಯ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು   ಈ  ಸಂದರ್ಭದಲ್ಲಿ ಬಸವರಾಜ ಖೇಮಲಾಪುರ ವಿಪತ್ತು ನಿರ್ವಾಹಕ ಘಟಕದ ಸಂಯೋಜಕರು ದರೂರ ಹಾಗೂ  ವಲಯ ಮೇಲ್ವಿಚಾರಕರು , ಸೇವಾಪ್ರತಿನಿಧಿಗಳು ಮತ್ತು ವೈದ್ದ್ಯಾದಿಕಾರಿಗಳು ಮತ್ತು ನರ್ಸ್ ಸ್ವಯಂ ಸೇವಕರು ಜಕ್ಕಪ್ಪ ತೀರ್ಥ, ವಿಠ್ಠಲ್ ಕುಂಬಾರ್, …

Read More »

ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ

ಚಲಿಸುವ ಗಡಿಯಾರ ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ ಹಗಲಲಿ ಕನಸ ನಕ್ಷತ್ರಗಳು ಮರೆಯಾಗುವಂತೆ ಮಾಯವಾಗುವ ನೆನಪೇ ಒಂದು ಚಲಿಸುವ ಗಡಿಯಾರ ಕತ್ತಲೆ ಬೆಳಕನಾವರಿಸುವಂತೆ ಮನವನಾವರಿಸುವ ನೆನಪೇ ಒಂದು ಚಲಿಸುವ ಗಡಿಯಾರ…. ನವಿರಾದ ಸುಖಗಳ ನಡುವೆ ಸಿಹಿಯಾದ ಅನುಭವ ಬೆರೆಸುವ ನೆನಪೇ ಒಂದು ಚಲಿಸುವ ಗಡಿಯಾರ ಭವಿಷ್ಯದ ಗರ್ಭದಲಿ ಗರಿಬಿಚ್ಚಿ ನಲಿವಂತೆ ಸಿಹಿನೆನಪಿನ ತರಂಗಗಳನ್ನು ಬಡಿದೆಬ್ಬಿಸುವ ನೆನಪೇ ಒಂದು ಚಲಿಸುವ ಗಡಿಯಾರ ಹೃದಯದ ಭಾವನೆಗಳನ್ನು …

Read More »

ತುಮಕೂರಲ್ಲಿ ಕಂಗನಾ ವಿರುದ್ಧ ಎಫ್‍ಐಆರ್

ತುಮಕೂರು: ಕೋರ್ಟ್ ಆದೇಶದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ. ಕಂಗನಾ ಅವರು ಟ್ವಿಟರ್ ನಲ್ಲಿ ರೈತರನ್ನ ಭಯೋತ್ಪಾದಕರು ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ವಕೀಲ ರಮೇಶ್ ನಾಯ್ಕ್, ಜೆಎಂಎಫ್‍ಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಕೋರ್ಟ್ ನಿರ್ದೇಶನ ಮೇರೆಗೆ ನಟಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕೇಂದ್ರ ಸರ್ಕಾರ ಜಾರಿ ತಂದಿದ್ದ ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು …

Read More »

ಕೊಪ್ಪಳ :  ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ  ಟಿ.ಶ್ರೀಧರ್

ಕೊಪ್ಪಳ :  ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ  ಟಿ.ಶ್ರೀಧರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. 2012ರ ಐಪಿಎಸ್ ಬ್ಯಾಚ್ ನಲ್ಲಿ ಇವರು, ಬೆಂಗಳೂರುನಲ್ಲಿ ಗುಪ್ತಚರ ವಿಭಾಗ ಸೇರಿ  ವಿವಿಧ ಮೂರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಪ್ಪಳಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.  ಬೀದರ್ ನಲ್ಲಿ ಎಸ್ಪಿಯಾಗಿ ಕಾರ್ಯನಿರ್ವವಹಿಸಿದ್ದಾರೆ. ಶಿಕ್ಷಣ: ಬಳ್ಳಾರಿ ಜಿಲ್ಲೆಯ ಶಿರಗುಪ್ಪ ತಾಲ್ಲೂಕಿನವರು. ಪ್ರಾಥಮಿಕ ಶಿಕ್ಷಣವನ್ನು ಶಿರಗುಪ್ಪ, ಸಿಂಧನೂರಿನಲ್ಲಿ, ಕಾಲೇಜ್  ಶಿಕ್ಷಣ ಧಾರವಾಡದಲ್ಲಿ ಪಡೆದಿದ್ದಾರೆ. …

Read More »

ವ್ಯಕ್ತಿಯೊಬ್ಬ  ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ

ಬೆಳಗಾವಿ:  50 ವರ್ಷದ ಅಪರಿಚಿತ  ವ್ಯಕ್ತಿಯೊಬ್ಬ  ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ   ತಾಲೂಕಿನ  ಸುಳೇಬಾವಿ ಗ್ರಾಮದ ಬಳಿ  ನಡೆದಿದೆ. ಫುಲ್ ಶರ್ಟ್,  ನೀಲಿ  ಜಾಕೆಟ್ ಧರಿಸಿರುವ ವ್ಯಕ್ತಿ ಸುಳೇಬಾವಿ ಮತ್ತು ಸಲದಾಳ ರೈಲು  ನಿಲ್ದಾಣದ ಮಧ್ಯೆ ರೈಲು ಹಳಿಗಳ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಕೆಂಪು  ಬಣ್ಣದ ಛತ್ರಿ, ನೀಲಿ ಚೀಲ  ದೊರೆತಿದೆ ಎಂದು ಬೆಳಗಾವಿ ನಗರದ ರೈಲ್ವೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

Read More »

ಅಕ್ಟೋಬರ್ ನಲ್ಲಿ ಜಲಪ್ರಳಯ ಬಂದಾಯ್ತು..! ನಿಜವಾಗ್ತಿವೆ ಕೋಡಿ ಶ್ರೀಗಳ ಭವಿಷ್ಯ..!

ಹಾಸನ : ರಾಜ್ಯದಲ್ಲಿ‌‌ ನಡೆಯುವ ಹಲವು ರಾಜಕೀಯ ಹಾಗೂ ಪ್ರಾಕೃತಿಕ ಸನ್ನಿವೇಶಗಳ‌‌ ಬಗ್ಗೆ ಭವಿಷ್ಯ‌ ನುಡಿಯುವ ಮೂಲಕ ಚಿರಪರಿಚಿತರಾಗಿರುವ ಕೋಡಿಮಠ ಶೀಗಳು ಎರಡು ತಿಂಗಳ ಹಿಂದಿನ ಭವಿಷ್ಯ ನಿಜವಾಗುತ್ತಿದ್ದು‌ ಆತಂಕ ಮೂಡಿಸಿದೆ. ಹೌದು…ಜಿಲ್ಲೆಯ ಅರಸೀಕೆರೆ ತಾಲೋಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಆಗಸ್ಟ್ 14 ರಂದು ನುಡಿದ ಭವಿಷ್ಯದಲ್ಲಿ “ಆಗಸ್ಟ್ ತಿಂಗಳಲ್ಲಿ ವಿಪರೀತ ಜಲ ಪ್ರಳಯವಾಗಲಿದೆ ಎಂದು ಹೇಳಿದ್ದರು ನಂತರ ಅಕ್ಟೋಬರ್ ತಿಂಗಳಲ್ಲಿ ಜಲ ಪ್ರಳಯ, ವಾಯು ಆಘಾತ …

Read More »

ನಟಿ ಪ್ರಣೀತಾ ಹೆಸರಿನಲ್ಲಿ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವ್ಯವಸ್ಥಾಪಕರಿಗೆ 13.50 ಲಕ್ಷ ರೂ. ವಂಚಿಸಿ ಪರಾರಿ

ಬೆಂಗಳೂರು, ಅ.13- ಚಲನಚಿತ್ರ ನಟಿ ಪ್ರಣೀತಾ ಹೆಸರಿನಲ್ಲಿ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವ್ಯವಸ್ಥಾಪಕರಿಗೆ 13.50 ಲಕ್ಷ ರೂ. ವಂಚಿಸಿ ಪರಾರಿಯಾಗಿರುವ ಆರೋಪಿಗಳಿಗಾಗಿ ಹೈಗ್ರೌಂಡ್ ಠಾಣೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ನಟಿ ಪ್ರಣೀತಾ ಅವರನ್ನು ತಮ್ಮ ಕಂಪನಿಯ ರಾಯಭಾರಿಯನ್ನಾಗಿ ಮಾಡಿಸುವುದಾಗಿ ಅಕ್ಟೋಬರ್ 6ರಂದು ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ಹೋಟೆಲ್‍ವೊಂದರಲ್ಲಿ ಎಸ್‍ವಿ ಗ್ರೂಪ್ ಅಂಡ್ ಡೆವಲಪರ್ಸ್ ಕಂಪನಿ ವ್ಯವಸ್ಥಾಪಕ ಅಮರನಾಥ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು. ವಂಚಕರ ಗುಂಪಿನಲ್ಲಿದ್ದ ವರ್ಷಾ …

Read More »

ಚೀನಾಗೆ ಮತ್ತೆ ಹೊಡೆತ – ಮಾರುಕಟ್ಟೆಗೆ ಬರಲಿದೆ 33 ಕೋಟಿ ಸ್ವದೇಶಿ ಹಣತೆ

ನವದೆಹಲಿ: ರಕ್ಷಾ ಬಂಧನದ ಸಮಯದಲ್ಲಿ ಚೀನಾಗೆ ತಿರುಗೇಟು ನೀಡಿದ್ದ ಭಾರತ ಈಗ ದೀಪಾವಳಿ ಸಮಯದಲ್ಲೂ ಆರ್ಥಿಕವಾಗಿ ಹೊಡೆತ ನೀಡಲು ಮುಂದಾಗುತ್ತಿದೆ. ಈ ವರ್ಷದ ದೀಪಾವಳಿಗೆ 33 ಕೋಟಿ ಪರಿಸರ ಸ್ನೇಹಿ ಹಣತೆ ಮಾರುಕಟ್ಟೆಗೆ ಬರಲಿದೆ. ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯ್ ಕಥಿರಿಯಾ ಈ ವಿಚಾರವನ್ನು ತಿಳಿಸಿದ್ದು, ಮುಂದಿನ ತಿಂಗಳು 33 ಕೋಟಿ ಪರಿಸರ ಸ್ನೇಹಿ ಹಣತೆಗಳು ಮಾರುಕಟ್ಟೆಗೆ ಬರಲಿದೆ ಎಂದು ತಿಳಿಸಿದ್ದಾರೆ. ವದೇಶಿ ಉತ್ಪನ್ನಗಳ ರಕ್ಷಣೆ ಮತ್ತು ಉತ್ತೇಜನಕ್ಕೆ …

Read More »

ಚಿರಂಜೀವಿ ಸರ್ಜಾ ಅಭಿನಯದ ಕಟ್ಟ ಕಡೆಯ ಚಿತ್ರ ‘ಶಿವಾರ್ಜುನ’ ರೀ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್

ದಿವಂಗತ ನಟ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಭಿನಯದ ಕಟ್ಟ ಕಡೆಯ ಚಿತ್ರ ‘ಶಿವಾರ್ಜುನ’ ರೀ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಚಿರಂಜೀವಿಯನ್ನು ಕಳೆದುಕೊಂಡು ದುಃಖದಲ್ಲಿದ್ದ ಅಭಿಮಾನಿ ಬಳಗಕ್ಕೆ ಈ ಸುದ್ದಿ ಕೇಳಿ ಮನದುಂಬಿ ಬಂದಿದೆ. ಮತ್ತೊಮೆ ಚಿರಂಜೀವಿ ಸರ್ಜಾರನ್ನ ಬೆಳ್ಳಿ ತೆರೆ ಮೇಲೆ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಶಿವಾರ್ಜುನ’ ಚಿತ್ರ ಮಾರ್ಚ್ 12ರಂದು ಸಂತೋಷ್ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿತ್ತು. ಮರು ದಿನವೇ ಸರ್ಕಾರ ಕೋವಿಡ್ 19 ಎಚ್ಚರಿಕೆಯ ಕ್ರಮವಾಗಿ ಚಿತ್ರಮಂದಿರವನ್ನು …

Read More »

ಮೇಕೆದಾಟು ಯೋಜನೆಯ‌ ಅನುಷ್ಠಾನಕ್ಕೆರಮೇಶ್ ಜಾರಕಿಹೊಳಿ‌ ಅವರು ನವದೆಹಲಿಗೆ ತೆರಳಲಿದ್ದಾರೆ.

ಬೆಂಗಳೂರು: ಮೇಕೆದಾಟು ಯೋಜನೆಯ‌ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ‌ ಮತ್ತು ಅರಣ್ಯ ‌ಇಲಾಖೆಯ  ಅನುಮತಿ ಪಡೆಯಲು ಒತ್ತಾಯಿಸಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ನವದೆಹಲಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ ತಿಳಿಸಿದರು. ಜಲಸಂಪನ್ಮೂಲ …

Read More »