Breaking News

ಜಿ.ಪಂ, ತಾ.ಪಂ ಕ್ಷೇತ್ರಗಳ ಮೀಸಲಾತಿಗಾಗಿ ಪ್ರತ್ಯೇಕ ಆಯೋಗ ರಚನೆ ಸಂವಿಧಾನ ಬಾಹೀರ : ಮಾಜಿ ಸಂಸದ ನಾರಾಯಣಸ್ವಾಮಿ

ಬಾಗಲಕೋಟೆ: ರಾಜ್ಯ ಸರ್ಕಾರ ಜಿ.ಪಂ, ತಾ.ಪಂ ಕ್ಷೇತ್ರಗಳ ಮೀಸಲಾತಿಗಾಗಿ ಪ್ರತ್ಯೇಕ ಆಯೋಗ ರಚನೆ ಮಾಡಲು ಮುಂದಾಗಿರುವುದು ಸಂವಿಧಾನ ಬಾಹೀರವಾಗಿದೆ. ಚುನಾವಣೆ ಆಯೋಗದ ಅಧಿಕಾರದ ವ್ಯಾಪ್ತಿ ಮೊಟಕುಗೊಳಿಸುವ ಉದ್ದೇಶದಿಂದ ಈ ಪ್ರಯತ್ನಕ್ಕೆ ಮುಂದಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಆಘಾತ ಎಂದು ಕಾಂಗ್ರೆಸ್ ಪಕ್ಷದ ರಾಜೀವಗಾಂಧಿ ಗ್ರಾಮೀಣ ಅಭಿವೃಧಿ ಹಾಗೂ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಾರಾಯಣಸ್ವಾಮಿ ಆರೋಪಿಸಿದರು. ಈ ವರೆಗೆ ಚುನಾವಣೆ ಆಯೋಗವು ಕ್ಷೇತ್ರಗಳ ಪುನರ್ ವಿಂಗಡಣೆ, …

Read More »

ಖಾನಾಪುರ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಎಸಿಬಿ ಬಲೆಗೆ

ಖಾನಾಪುರ – ಇಲ್ಲಿಯ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಒಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ. ತಾಲೂಕಿನ ಸುರಾಪುರದ ಶಶಿಕಾಂತ ತಳವಾರ ಎನ್ನುವವರಿಂದ 6 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಡಿಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಯಿತು. ಒಟ್ಟೂ 10 ಸಾವಿರ ರೂ. ಲಂಚ ಕೇಳಿದ್ದ ಸರ್ವೇಯರ್ ಶಶಿಕಾಂತ ಮದವಾಲ ಈ ಮೊದಲು 4 ಸಾವಿರ ರೂ. ಪಡೆದಿದ್ದ. ಇದೀಗ ಕಚೇರಿಯಲ್ಲೇ 6 ಸಾವಿರ ರೂ. ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ …

Read More »

ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್! ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ‌

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರದಿಂದ ಕಾಂಗ್ರೆಸ್ ಪಕ್ಷವನ್ನು ದೂರವಿಡಲು ಬಿಜೆಪಿ ನಿರ್ಧರಿಸಿದ್ದು, ಜೆಡಿಎಸ್ ಜತೆ ಮತ್ತೆ ದೋಸ್ತಿ ಮಾಡಿಕೊಳ್ಳಲು ಮುಂದಾಗಿದೆ. ಆರ್​ಟಿ‌ ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ವೇಳೆ ಔಪಚಾರಿಕವಾಗಿ ಚರ್ಚಿಸಿದ್ದು, ಒಂದಾಗಿ ಹೋಗುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದರು. ಉಭಯ ಪಕ್ಷಗಳು ಸ್ಥಳೀಯ ನಾಯಕರ ಜತೆಗೆ ಚರ್ಚಿಸಿದ ನಂತರ ಮುಂದಿನ ಹೆಜ್ಜೆ ಇರಿಸಲಿದ್ದು, …

Read More »

ಕಲಬುರ್ಗಿ ಪಾಲಿಕೆ ಮೇಲೆ ಬಿಜೆಪಿ ಕಣ್ಣು; ಜೆಡಿಎಸ್ ಜೊತೆ ಮೈತ್ರಿ ಬಹುತೇಕ ಫಿಕ್ಸ್

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಳಿಕ ಇದೀಗ ಬಿಜೆಪಿ ಕಲಬುರ್ಗಿ ಪಾಲಿಕೆ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಿದೆ. ಜೆಡಿಎಸ್ ಜೊತೆ ಸೇರಿ ಕಲಬುರ್ಗಿ ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳಲು ಮುಂದಾಗಿದ್ದ ಕಾಂಗ್ರೆಸ್ ಗೆ ತಿರುಮಂತ್ರ ಹಾಕಲು ಸಿದ್ಧತೆ ನಡೆಸಿರುವ ಬಿಜೆಪಿ ಇದೀಗ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದೆ. ಕಲಬುರ್ಗಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ.   …

Read More »

ಗಣೇಶೋತ್ಸವಕ್ಕೆ ಹೊಸ ಗೈಡ್ ಲೈನ್; 5 ದಿನದ ಬದಲು 3 ದಿನಕ್ಕೆ ಸೀಮಿತ; ಷರತ್ತಿನ ಮೇಲೆ ಷರತ್ತು ಹಾಕಿದ ಬಿಬಿಎಂಪಿ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ನಿಫಾ ವೈರಸ್ ಭೀತಿ ಕೂಡ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಬಿಬಿಎಂಪಿ ಷರತ್ತುಗಳ ಮೇಲೆ ಷರತ್ತು ವಿಧಿಸಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ 5 ದಿನಗಳ ಕಾಲ ಅವಕಾಶ ನೀಡಿತ್ತು. ಆದರೆ ಬಿಬಿಎಂಪಿ ಬೆಂಗಳೂರಿಗೆ ಪ್ರತ್ಯೇಕ ಗಣೇಶೋತ್ಸವ ಗೈಡ್ ಲೈನ್ ಪ್ರಕಟಿಸಿದ್ದು, 3 ದಿನಗಳು ಮಾತ್ರ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿದೆ. ಹೊಸ ಗೈಡ್ ಲೈನ್: ವಾರ್ಡ್ ಗೆ …

Read More »

ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ; ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಬಹುಕೋಟಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಸಚಿವರ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ. ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಎಫ್ ಕರ್ನಾಟಕ ಸಂಘಟನೆಯ ಕೃಷ್ಣಮೂರ್ತಿ ಎಂಬುವವರು ಎಸಿಬಿಗೆ ದೂರು ನೀಡಿದ್ದಾರೆ. ರೈತರಿಗೆ ನೀಡುವ ಕೃಷಿ ಯಂತ್ರಗಳ ಖರೀದಿ ವೇಳೆ ಬಾರಿ ಹಗರಣ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಸಚಿವ ಬಿ.ಸಿ.ಪಾಟೀಲ್ ಹಾಗೂ ಕೃಷಿ …

Read More »

ಬಿಜೆಪಿ ಬಹುಮತ ನೀಡುವುದರ ಮೂಲಕವಾಗಿ ಬೆಳಗಾವಿ ಜನ ಬುದ್ಧಿವಂತರು ಎನ್ನುವದನ್ನ ತೋರಿಸಿದ್ದಾರೆ : ಉಮೇಶ್ ಕತ್ತಿ

ಬೆಳಗಾವಿ: ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ನೀಡುವುದರ ಮೂಲಕವಾಗಿ ಬೆಳಗಾವಿ ಜನ ಬುದ್ಧಿವಂತರು ಎನ್ನುವದನ್ನ ತೋರಿಸಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಪಾಲಿಕೆಯ ಮೇಲೆ ಕನ್ನಡ ಧ್ವಜ ಹಾರಿಸಿದಂತಾಗಿದೆ. ಬೆಳಗಾವಿ ಜನ ಬುದ್ದಿವಂತರು ಎನ್ನುವುದನ್ನು ಈ ಗೆಲುವು ನೀಡುವ ಮೂಲಕ ತೋರಿಸಿದ್ದಾರೆ. …

Read More »

ತೆರಿಗೆ ವಸೂಲಿ ಮಾಡಲು ಸುಳ್ಳು ಲೆಕ್ಕ ಹೇಳಿ ದಾರಿ ತಪ್ಪಿಸ್ತಿದ್ದಾರೆ – ಸಾರ್ವಜನಿಕರ ಆಕ್ರೋಶ

ಚಿಕ್ಕೋಡಿ: ರಣ ಭೀಕರ ಪ್ರವಾಹ ಬಂದು ಎರಡು ತಿಂಗಳು ಕಳೆದರೂ ನದಿ ತೀರದ ಸಂತ್ರಸ್ತರ ಸಂಕಷ್ಟ ಮುಂದುವರೆದಿದೆ. ರೈತರು ನಾಶವಾದ ಬೆಳೆ ತೆಗೆದು ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ. ಭೀಕರ ಪ್ರವಾಹದಿಂದ ಕಷ್ಟ ಪಟ್ಟು ಬೆಳೆದ ಬೆಳೆಗಳು ಕೊಚ್ಚಿ ಹೋಗಿ ನದಿ ತೀರದ ರೈತರು ಕಂಗಾಲಾಗಿದ್ದಾರೆ. ಈ ಪ್ರವಾಹಕ್ಕೆ ಕಬ್ಬು, ಸೊಯಾಬೀನ್, ಗೋವಿನ ಜೋಳ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ, ಆದರೂ ಸಹ ಸರ್ಕಾರ ಮಾತ್ರ …

Read More »

ಗೌರಿ ಗಣೇಶ ಹಬ್ಬದ ನಿಮಿತ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ತೆರಳಲು ಹೆಚ್ಚುವರಿ ಬಸ್

ಬೆಂಗಳೂರು: ಗೌರಿ ಗಣೇಶ ಹಬ್ಬದ ನಿಮಿತ್ತ ಕೆ ಎಸ್ ಆರ್ ಟಿಸಿ ವತಿಯಿಂದ ಸೆಪ್ಟಂಬರ್ 8, 9ರಂದು ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ತೆರಳಲು ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ವಿವಿಧೆಡೆ ತೆರಳಲು ಪ್ರಯಾಣಿಕರ ಅನುಕೂಲಕ್ಕಾಗಿ 1,000 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸೆಪ್ಟಂಬರ್ 12ರಂದು ಬೆಂಗಳೂರಿಗೆ ಆಗಮಿಸುವವರಿಗೂ ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಬೆಳಗಾವಿ, ಬೀದರ್, ಕಲ್ಬುರ್ಗಿ, ರಾಯಚೂರು, …

Read More »

ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬುಧವಾರ ಬೆಳಗಾವಿಗೆ

ಬೆಳಗಾವಿ – ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಸಚಿವರಾದ ನಂತರ ಇದು ಬೆಳಗಾವಿಗೆ ಅವರ ಮೊದಲ ಭೇಟಿಯಾಗಿದೆ. ಕಂಗ್ರಾಳಿಯ ಕೆಎಸ್ ಆರ್ ಪಿ ತರಬೇತಿ ಶಾಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ನಡೆಯಲಿರುವ ಸಶಸ್ತ್ರ ಮೀಸಲು ಪೊಲೀಸ್ ಕಾನ್ ಸ್ಟೆಬಲ್  ಪ್ರಶಿಕ್ಷಣಾರ್ಥಿಗಳ ನಿರ್ಗಮ ಪಥ ಸಂಚಲನ ಕಾರ್ಯಕ್ರಮಕ್ಕೆ ಅರಗ ಜ್ಞಾನೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ …

Read More »