Breaking News

ಸ್ಟಾರ್​ಗಳ ಮಕ್ಕಳು ಮಾತ್ರ ಡ್ರಗ್ಸ್​ ಸೇವಿಸುವವರಲ್ಲ.. ನಶೆವ್ಯೂಹಕ್ಕೆ ಸಿಲುಕಿದ್ದಾರೆ ಲಕ್ಷಾಂತರ ಮಕ್ಕಳು

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು.. ಈ ಮಾತನ್ನ ಇತ್ತೀಚಿನ ಪೀಳಿಗೆಯ ಮಕ್ಕಳಿಗೆ ಒತ್ತಿ ಹೇಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಯಾಕೆ ಗೊತ್ತಾ ? ಹದಿಹರೆಯದ ವಯಸ್ಸಿನಲ್ಲಿ, ಮುಂದಿನ ಜವಾಬ್ದಾರಿಗಳನ್ನು ಮರೆತು, ನಶೆಯ ಜೀವನಕ್ಕೆ ಮಾರು ಹೋಗ್ತಾ ಇದ್ದಾರೆ ಯುವ ಚೇತನಗಳು. ಕಳೆದ ದಶಕವನ್ನು ಹೋಲಿಸಿ, ಮಾದಕ ಲೋಕದ ಜಾಲಕ್ಕೆ ಸಿಲುಕಿರುವ ಮಕ್ಕಳ ಬಗೆಗಿನ ಈ ಸಮೀಕ್ಷೆ ನೋಡಿದರೆ, ದೇಶದ ಮುಂದಿನ ಭವಿಷ್ಯದ ಬಗ್ಗೆ ಭಯ ಹುಟ್ಟುತ್ತದೆ. ಆ ಸರ್ವೆ ಕುರಿತ ರಿಪೋರ್ಟ್​ …

Read More »

ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ನೀಡಿ

ಬೆಳಗಾವಿ: ಅತಿಥಿ ಉಪನ್ಯಾಸಕರ ಸೇವಾಭದ್ರತೆಗೆ ಸಂಬಂಧಿಸಿದಂತೆ ಮಾನವೀಯತೆಯಆಧಾರದ ಮೇಲೆ ತ್ವರಿತವಾಗಿ ಸೂಕ್ತ ತೀರ್ಮಾನತೆಗೆದುಕೊಳ್ಳುವ ಮೂಲಕ ಅವರ ಕುಟುಂಬದ ಹಿತಕಾಯಬೇಕು ಎಂದು ಆಗ್ರಹಿಸಿ ರಾಜ್ಯ ಸರಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕ ರಹಿತ ರಕ್ಷಣಾ ಸಮಿತಿ ಜಿಲ್ಲಾ ಘಟಕದ ಸದಸ್ಯರು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಅವರಿಗೆ ಮನವಿ ಸಲ್ಲಿಸಿದರು. ಬೆಳಗಾವಿಯಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ಸದಸ್ಯರು, 2021-22ನೇ ಶೈಕ್ಷಣಿಕ ಸಾಲಿಗೆ ಹಾಲಿಕರ್ತವ್ಯನಿರ್ವಹಿಸುತ್ತಿರುವಅತಿಥಿಉಪನ್ಯಾಸಕರನ್ನುಸೇವೆಯಲ್ಲಿ ಮುಂದುವರೆಸಬೇಕು. ಮಾಸಿಕಸಂಚಿತ ಗೌರವಧನ ನಿಗದಿಪಡಿಸಬೇಕು …

Read More »

‘ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ’ ದಿನೇಶ್​ ಗುಂಡೂರಾವ್​ ಆಕ್ರೋಶ

ಬೆಂಗಳೂರು: ಆರೋಗ್ಯ ಸಿಬ್ಬಂದಿಯ ವೇದನೆ ಕೇಳದೆ ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ವೇತನ ಸಮಸ್ಯೆ ಕುರಿತಂತೆ ಟ್ವೀಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಅವರು ‘ಇಲಾಖೆಯ ಸಿಬ್ಬಂದಿಗೆ ಕಳೆದ 3 ತಿಂಗಳಿನಿಂದ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊರೋನಾ ಫ್ರಂಟ್‌ಲೈನ್ ವರ್ಕರ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಆದರೂ ಕೊರೊನಾ ಭತ್ಯೆ ಸಿಕ್ಕಿಲ್ಲ. ತಮ್ಮ ಇಲಾಖೆಯ ಸಿಬ್ಬಂದಿಗಳ …

Read More »

ಡಿಕೆಎಸ್ ಕಮೀಷನ್ ಗಿರಾಕಿ’ ಹೇಳಿಕೆ: ‘ಇದು ನಿಶ್ಚಿತವಾಗಿಯೂ ಷಡ್ಯಂತ್ರ’ ಎಂದ ಸೋಮಶೇಖರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸ್ವಪಕ್ಷಿಯರ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಎಸ್​​ಟಿ ಸೋಮಶೇಖರ್​ ಪ್ರತಿಕ್ರಿಯಿಸಿ.. ಇದು ನಿಶ್ಚಿತವಾಗಿಯೂ ಒಂದು ಷಡ್ಯಂತ್ರ. ಮೊದಲಿನಿಂದಲೂ ನಾನು ಈ ಬಗ್ಗೆ ಹೇಳುತ್ತಿದ್ದೇನೆ ಎಂದರು. ಕಾಂಗ್ರೆಸ್​​ನಲ್ಲಿ ಮೊದಲಿನಿಂದಲೂ ಡಿ.ಕೆ.ಶಿವಕುಮಾರ್ ವರ್ಸಸ್ ಸಿದ್ದರಾಮಯ್ಯ ನಡೆಯುತ್ತಿದೆ. ಅವರ ವಿರುದ್ಧ ಇವರು, ಇವರ ವಿರುದ್ಧ ಅವರು ಷಡ್ಯಂತರ ನಡೆಸುತ್ತಿದ್ದಾರೆ. ಇದು ಈಗ ಮುಂದುವರಿದಿದೆ. ನನಗೆ ಪರ್ಸೆಂಟೆಜ್ ವ್ಯವಹಾರದ ಬಗ್ಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿ ಬರೀ ಶಾಸಕನಾಗಿದ್ದೆ ಅಷ್ಟೇ …

Read More »

ತೈವಾನ್‍ನಲ್ಲಿ ಬೆಂಕಿ ಅವಗಡ, 14 ಮಂದಿ ಸಾವು..!

ಥೈಪೆ, ಅ.14- ತೈವಾನ್‍ನ ದಕ್ಷಿಣ ವಲಯದಲ್ಲಿ ನಡೆದಿರುವ ಬೆಂಕಿ ಅವಗಡದಿಂದ ಸುಮಾರು 14 ಮಂದಿ ಮೃತಪಟ್ಟು, 51ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಆದರೆ ತಳಮಹಡಿಯಿಂದ ಆರಂಭವಾದ ಬೆಂಕಿ ಇಡೀ ಕಟ್ಟಡವನ್ನು ಆಕ್ರಮಿಸಿದೆ. ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಕೆಲವರು ಸ್ಥಳದಲ್ಲೇ ಸಜೀವ ದಹನವಾದರೆ ಇನ್ನೂ ಕೆಲವರು …

Read More »

ಕೆಲವು ಗಣಿಗಳನ್ನು ಮುಚ್ಚುವುದು, ಮುಂಗಾರು ಮಳೆಯಿಂದಾಗಿ ಪ್ರವಾಹವು ಕಲ್ಲಿದ್ದಲು ಬಿಕ್ಕಟ್ಟಿಗೆ ಕಾರಣವಾಯಿತು: ಪ್ರಲ್ಹಾದ್ ಜೋಶಿ

(ಜಾರ್ಖಂಡ್): ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಗುರುವಾರ ಕೆಲವು ಗಣಿಗಳನ್ನು ಮುಚ್ಚಲಾಗಿದೆ ಮತ್ತು ಮುಂಗಾರು ಮಳೆಯಿಂದಾಗಿ ಇತರ ಕೆಲವು ಪ್ರವಾಹಗಳು ಬಿಕ್ಕಟ್ಟಿಗೆ ಕಾರಣವಾದವು ಆದರೆ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ಭಯಪಡುವ ಅಗತ್ಯವಿಲ್ಲ. ಜಾರ್ಖಂಡ್‌ನ ಚತ್ರ ಜಿಲ್ಲೆಯ ಪಿಪರ್‌ವಾರ್‌ನಲ್ಲಿರುವ ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಸಿಸಿಎಲ್) ಅಶೋಕ ಗಣಿಗೆ ಭೇಟಿ ನೀಡಿದ ಜೋಶಿ, ದೇಶದ ವಿದ್ಯುತ್ ಸ್ಥಾವರಗಳು ಅಗತ್ಯ ಪ್ರಮಾಣದ ಕಲ್ಲಿದ್ದಲನ್ನು ಪಡೆಯುವುದನ್ನು ಮುಂದುವರಿಸುತ್ತವೆ ಎಂದು ಹೇಳಿದರು.”ನಾವು ಈಗ ಸುಧಾರಣೆಯನ್ನು ನೋಡುತ್ತಿದ್ದೇವೆ” ಎಂದು ಅವರು …

Read More »

ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟಿತ ಆಗಿರುವ ಎಂ.ಎ. ಸಲೀಂ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ.

ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟಿತ ಆಗಿರುವ ಎಂ.ಎ. ಸಲೀಂ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಕುರಿತು ಲಘುವಾಗಿ ಮತ್ತ ಬೇಜವಾಬ್ದಾರಿಯಿಂದ ಮಾತನಾಡಿದ ಕಾರಣ ಸಲೀಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ. ರೆಹಮಾನ್ ಖಾನ್ ಬುಧವಾರ ಆದೇಶ ಹೊರಡಿಸಿದ್ದರು. ಎಂ.ಎ. ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು. “ಡಿ.ಕೆ. …

Read More »

ಬೊಮ್ಮಾಯಿ ತಾಲಿಬಾನ್ ನಾಯಕರಂತೆ ಮಾತಾಡಿದ್ದಾರೆ : ರಾಜ್ಯ ಕಾಂಗ್ರೆಸ್

ಬೆಂಗಳೂರು : ನೈತಿಕ ಪೊಲೀಸ್‍ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‍ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ. “ನೈತಿಕತೆಗೆ ಧಕ್ಕೆಯಾದಾಗ ಆಕ್ಷನ್, ರಿಯಾಕ್ಷನ್ ಆಗುತ್ತದೆ,” ಅಂತಾ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದಕ್ಕೆ ಆಕ್ರೋಶ ಹೊರಹಾಕಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ರಾಜ್ಯದಲ್ಲಿ ‘ಅನೈತಿಕ ಪೊಲೀಸ್‍ಗಿರಿ’ ಹೆಸರಲ್ಲಿ ನಡೆಯುತ್ತಿರುವ ಭಯೋತ್ಪಾದಕ …

Read More »

ನೈತಿಕ ಪೊಲೀಸ್‌ಗಿರಿ ಪರ ಸಿಎಂ ಹೇಳಿಕೆ: ಟ್ರೆಂಡ್ ಆದ ‘ರಿಸೈನ್ ಕರ್ನಾಟಕ ಸಿಎಂ’

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಭೇಟಿ ವೇಳೆ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ‘ರಿಸೈನ್ ಕರ್ನಾಟಕ ಸಿಎಂ’ (#ResignKarnatakaCM) , ‘ಸಿಎಂ ಸಪೋರ್ಟ್ ಮಾರಲ್ ಪೊಲೀಸಿಂಗ್’ (#CMSupportsMoralPolicing) ಹ್ಯಾಷ್‌ಟ್ಯಾಗ್‌ನಡಿ ನೀಡುತ್ತಿರುವ ಪ್ರತಿಕ್ರಿಯೆಗಳು ಟ್ರೆಂಡ್ ಆಗಿವೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿತ ಹಲವರು ಮುಖ್ಯಮಂತ್ರಿ ಹೇಳಿಕೆಯನ್ನು ಖಂಡಿಸಿದ್ದಾರೆ. ಅ.13ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಸವರಾಜ …

Read More »

100 ರೂ.ನಲ್ಲಿ ಬಸ್ ಪೂಜೆ ಮಾಡುವುದು ಹೇಗೆ ಸಾರಿಗೆ ಇಲಾಖೆ: ಸಿಬ್ಬಂದಿ ಆಕ್ರೋಶ

ಬೆಂಗಳೂರು, ಅಕ್ಟೋಬರ್ 14: ನಾಡಿನೆಲ್ಲಡೆ ಸಂಭ್ರಮದ ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಈ ಬಾರಿ ಕೊರೊನಾ ಸೋಂಕು ಪ್ರಕರಣಗಳು ತಗ್ಗಿದ್ದರಿಂದ ದಸರಾ ಆಚರಣೆ ತುಸು ಮೆರುಗನ್ನು ಪಡೆದುಕೊಂಡಿದೆ. ಇಂದು ರಾಜ್ಯಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿದೆ. ಕಚೇರಿಗಳಲ್ಲಿ, ಮನೆಗಳಲ್ಲಿ, ವಾಹನಗಳಿಗೆ ಆಯುಧ ಪೂಜಾ ಹಬ್ಬವನ್ನು ಬಂಧು ಬಳಗದ ಜೊತೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಆದರೆ ಸದಾ ಸುದ್ದಿಯಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ …

Read More »