ಬಾಗಲಕೋಟೆ: ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಕ್ಷಕರು ಮನೋವಿಜ್ಞಾನಿಯಾಗಿ, ತತ್ವಜ್ಞಾನಿಯಾಗಿ ಮಕ್ಕಳ ಮನಸ್ಥಿತಿ ಅರಿತು ಶಿಕ್ಷಣ ನೀಡುವಂತಾಗಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಕೇವಲ ಸಂಬಳಕ್ಕಾಗಿ ಕೆಲಸ ಮಾಡದೇ ಉತ್ತಮ ಭವಿಷ್ಯ ನಿರ್ಮಿಕಸುವ ಕಾರ್ಯವಾಗಬೇಕು. …
Read More »ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ,
ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ, ಗೋಕಾಕ ಶಹರ ಪೊಲೀಸ್ ಠಾಣೆ ಹಾಗೂ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಆಡಳಿತ ಮಂಡಳಿಯ ಅಧ್ಯಕ್ಷರ ಸಭೆ ಕರೆಯಲಾಗಿದ್ದು ಕಡ್ಡಾಯವಾಗಿ ಹಾಜರಾಗಲು ವಿನಂತಿ.ಈ ಸಭೆಯಲ್ಲಿ ಅಪೇಕ್ಷಿತರು ಶಾಂತಿ ಪಾಲನಾ ಸಮಿತಿ ಸದಸ್ಯರು,ಗೋಕಾಕ ಗ್ರಾಮ ದೇವತೆ ಜಾತ್ರಾ ಕಮಿಟಿ ಹಿರಿಯರು,ಗೋಕಾಕ ನಗರ ಸಭೆ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರಿಗೆ ಆಹ್ವಾನಿಸಲಾಗಿದ್ದು ಸರಿಯಾದ ಸಮಯಕ್ಕೆ ಬಂದು ಸಭೆ ಯಶಸ್ವಿಗಾಗಿ ಸಹಕರಿಸಲು ಗೋಕಾಕ …
Read More »ಸರ್ಕಾರದ ನಿರ್ಬಂಧವನ್ನು ಪಕ್ಕಕ್ಕಿಟ್ಟು ಗಣೇಶೋತ್ಸವಕ್ಕೆ ಸಿದ್ಧತೆ, 21 ದಿನ ಗಣಪತಿ ಇಟ್ಟು ಅದ್ಧೂರಿ ಗಣೇಶ ಉತ್ಸವ ಮಾಡುತ್ತೇವೆ ಎಂದ ಸಂಘ ಪರಿವಾರ
ರಾಜ್ಯ ಬಿಜೆಪಿ ಸರ್ಕಾರ ಗಣೇಶೋತ್ಸವಕ್ಕೆ ಕೆಲ ನಿರ್ಬಂಧಗಳನ್ನು ವಿಧಿಸಿದೆ. ಆದ್ರೆ, ಸರ್ಕಾರದ ಆದೇಶಕ್ಕೆ ಸಂಘ ಪರಿವಾರವೇ ಸೆಡ್ಡು ಹೊಡೆಯಲು ಅಣಿಯಾಗಿದೆ. ಈ ಮಾತಿಗೆ ಸಾಕ್ಷಿ ಎಂಬಂತೆ ಕೋಟೆನಾಡಿನಲ್ಲಿ ಅದ್ಧೂರಿ ಗಣೇಶೋತ್ಸವಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದೆ. ಚಿತ್ರದುರ್ಗ: ಪ್ರತಿ ವರ್ಷ ಕೋಟೆನಾಡಿನಲ್ಲಿ ಗಣೇಶೋತ್ಸವ ನಡೆಯುತ್ತಿತ್ತು. ಆದ್ರೆ ಈ ವರ್ಷ3ನೇ ಅಲೆ ಭೀತಿಯಿಂದ ಗಣೇಶೋತ್ಸವದ ಕೊರೊನಾ ಕರಿನೆರಳು ಬಿದ್ದಿದೆ. ಖಡಕ್ ರೂಲ್ಸ್ ಹೇರಿ ಅದ್ಧೂರಿ ಗಣೇಶೋತ್ಸವಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಹೀಗೆ ಸರ್ಕಾರದ ಟಫ್ …
Read More »ಅಧಿವೇಶನದ ಬಳಿಕ ದೇವಸ್ಥಾನಗಳಲ್ಲಿ ಭಕ್ತರಿಗೆ ಆಗುವ ಸಮಸ್ಯೆಗಳ ಕುರಿತು ಕ್ರಮ : ಶಶಿಕಲಾ ಜೊಲ್ಲೆ
ಬೆಂಗಳೂರು : ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಅಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಸಚಿವರು ಹಾಗೂ ರಾಜ್ಯ ದಾರ್ಮಿಕ ಪರಿಷತ್ತಿನ ಅಧ್ಯಕ್ಷರಾಗಿರುವ ಶಶಿಕಲಾ ಜೊಲ್ಲೆಯವರು …
Read More »ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ನೆರವು ನೀಡಲು ಸಂಪೂರ್ಣ ಸಹಕಾರ : ಬೊಮ್ಮಾಯಿ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಜಾರಿಗೊಳಿಸುತ್ತಿರುವ ಸಾಂದೀಪನಿ ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು 9,206 ವಿದ್ಯಾರ್ಥಿಗಳಿಗೆ ಮಂಡಳಿಯು 13.77 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗಿದೆ. ಬ್ರಾಹ್ಮಣ ಬುದ್ಧಿವಂತಿಕೆಯೊಂದಿಗೆ ಸ್ಥಿತ ಪ್ರಜ್ಞತೆಯನ್ನು ಹೊಂದಿದ್ದಾರೆ. ಇದರಿಂದ ದೇಶ, ಸಮಾಜಕ್ಕೆ ಅನುಕೂಲವಾಗಿದೆ ಎಂದು ಅಭಿಪ್ರಾಯ ಪಟ್ಟರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಕಾರ್ಯಾರಂಭ ಮಾಡಿದ …
Read More »ಕಾಂಗ್ರೆಸ್ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ : ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಂಗಳೂರು: ಮೂರು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಕಾಂಗ್ರೆಸ್ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಆವರು, ಬೆಳಗಾವಿಯಲ್ಲಿ ಬಿಜೆಪಿ ಬಹುಮತ ಗಳಿಸಿದ್ದರೆ, ಕಲಬುರಗಿಯಲ್ಲಿ ನಾವು ಬಹುಮತ ಪಡೆದಿದ್ದೇವೆ. ಇನ್ನುಳಿದ ಕಡೆ ಯಾವ ಪಕ್ಷವೂ ಸ್ಪಷ್ಟ ಬಹುಕತ ಪಡೆದಿಲ್ಲ ಹೀಗಾಗಿ ಇದು ಕಾಂಗ್ರೆಸ್ನ ಸೋಲಲ್ಲ ಎಂಬುದು ನನ್ನ ಭಾವನೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ, 58 ಸ್ಥಾನಗಳಲ್ಲಿ …
Read More »ಶಾಲೆಗೆ ಪುನರಾಗಮನ
ಬೆಂಗಳೂರು: ಉಡುಪಿ ಜಿಲ್ಲೆಯ ಸಹಿತ ರಾಜ್ಯಾದ್ಯಂತ ಸೋಮವಾರ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾರಂಭವಾಗಿದೆ. ಹಲವು ದಿನ ಗಳಿಂದ ಮನೆಯಲ್ಲೇ ಕಾಲಕಳೆದಿದ್ದ ಮಕ್ಕಳು ಉತ್ಸಾಹದಿಂದ ಪಾಠ ಆಲಿಸಿದರು. ಆದರೆ ಕೋವಿಡ್ ಸೋಂಕು ಹೆಚ್ಚಿರುವ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಇನ್ನೂ ಆರಂಭವಾಗಿಲ್ಲ. ಮೊದಲ ದಿನ ಭೌತಿಕ ಹಾಜರಾತಿ ಕಡಿಮೆಯಿತ್ತು. ಭೌತಿಕ ತರಗತಿಗೆ ಹಾಜರಾತಿ ಕಡ್ಡಾಯ ವಲ್ಲದ ಕಾರಣ ಅರ್ಧಕ್ಕಿಂತಲೂ ಕಡಿಮೆ ಹಾಜರಾತಿ ಇತ್ತು. …
Read More »200 ಕೋಟಿ ಸುಲಿಗೆ ಪ್ರಕರಣ: ‘ಮದ್ರಾಸ್ ಕೆಫೆ’ ನಟಿ ಬಂಧನ
ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ, ರೂಪದರ್ಶಿ ಲೀನಾ ಮರಿಯಾ ಪೌಲ್ ಅವರನ್ನು ದೆಹಲಿ ಪೊಲೀಸರು ಬಂಧಿಸಿರುವ ವಿಚಾರ ಹೊರಬಿದ್ದಿದೆ. ಉದ್ಯಮಿಯೊಬ್ಬರ ಪತ್ನಿಯಿಂದ 200 ಕೋಟಿ ಸುಲಿಗೆ ಮಾಡಲು ಯತ್ನಿಸಿರುವ ಕೇಸ್ನಲ್ಲಿ ತನ್ನ ಬಾಯ್ಫ್ರೆಂಡ್ಗೆ ಸಹಾಯ ಮಾಡಿರುವ ಆರೋಪದಲ್ಲಿ ನಟಿಯನ್ನು ಭಾನುವಾರ (ಸೆಪ್ಟೆಂಬರ್ 5) ಅರೆಸ್ಟ್ ಮಾಡಲಾಗಿದೆ ಎಂದು ತಿಳಿದಿದೆ. ಪಿಟಿಐನಲ್ಲಿ ವರದಿಯ ಪ್ರಕಾರ, ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಎಂಸಿಒಸಿಎ (Maharashtra Control of Organised Crime (MCOCA) ಕಾಯ್ದೆ ಜಾರಿ …
Read More »ವಿಜಯಪುರ ಜಿಲ್ಲೆಯಾದ್ಯಂತ ವರುಣನ ಆರ್ಭಟ
ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಭಾರೀ ಮಳೆ ಸುರಿಯತೊಡಗಿದೆ. ಸೋಮವಾರ ಮಧ್ಯಾಹ್ನ ಆರಂಭವಾದ ಮಳೆ ಎಡಬಿಡದೆ ಸುರಿಯತೊಡಗಿದ್ದು, ಇಡೀ ಜಿಲ್ಲೆ ಮಳೆನಾಡಿನಂತಾಗಿದೆ. ವಿಜಯಪುರ, ಬಸವನ ಬಾಗೇವಾಡಿ, ತಾಳಿಕೋಟೆ, ದೇವರ ಹಿಪ್ಪರಗಿ, ತಿಕೋಟಾ, ಬಬಲೇಶ್ವರ, ಹೊರ್ತಿ, ಕೊಲ್ಹಾರ, ಇಂಡಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗತೊಡಗಿದೆ. ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಜನ, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹೊಲಗಳಲ್ಲಿ ನೀರು ನಿಂತಿದ್ದು, ಬೆಳೆಗೆ ಸಮಸ್ಯೆಯಾಗುವ ಆತಂಕ ಎದುರಾಗಿದೆ. ಭಾರೀ ಮಳೆಯಿಂದ …
Read More »ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಗೊಂದಲ ಇರುವುದರಿಂದ ನಾಳೆ ಅಧಿಕೃತವಾಗಿ ಪ್ರಕಟಣೆ
ಬೆಳಗಾವಿ :ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಕುರಿತು ಗೊಂದಲ ಇರುವುದರಿಂದ ನಾಳೆ ಅಧಿಕೃತವಾಗಿ ಪ್ರಕಟಣೆ ನೀಡಲಾಗುವುದು ಎಂದು ವಾರ್ತಾ ಮತ್ತು ಪ್ರಚಾರ ಇಲಾಖೆ ತಿಳಿಸಿದೆ. ಕಳೆದ ಫೆಬ್ರವರಿಯಲ್ಲಿ ಪ್ರಕಟಿಸಲಾದ ಗೆಜೆಟ್ ಸ್ವಲ್ಪ ಹೊತ್ತಿನ ಮೊದಲು ಜಿಲ್ಲಾಧಿಕಾರಿಗಳ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಬೆಳಗಾವಿ ಮೇಯರ್ ಹುದ್ದೆ ಪರಿಶಿಷ್ಟ ಜಾತಿ ಮಹಿಳೆಗೆ ಹಾಗೂ ಉಪಮೇಯರ್ ಹುದ್ದೆ ಸಾಮಾನ್ಯ ಮಹಿಳೆಗೆ ಎಂದು ತಿಳಿಸಲಾಗಿತ್ತು. ಆದರೆ ಕಳೆದ ಫೆಬ್ರವರಿಯಲ್ಲಿ ಪ್ರಕಟಿಸಲಾದ …
Read More »
Laxmi News 24×7