ಬೆಂಗಳೂರು: ಬಿ ಎಸ್ ವೈ ಮಾರ್ಗದರ್ಶನದಲ್ಲಿ, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಟೀಲ್, ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ ಎಂಬುದು ಮತ್ತೊಮ್ಮೆ ಖಚಿತವಾಗಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಟೀಲ್, ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ ಎಂಬುದು ಮತ್ತೊಮ್ಮೆ ಖಚಿತವಾಗಿದೆ. ಕಾಂಗ್ರೆಸ್ ಒಳಜಗಳ ಸಾಬೀತಾಗಿದ್ದು, ಡಿ.ಕೆ.ಶಿವಕುಮಾರ್ ವಿಫಲ ಅಧ್ಯಕ್ಷ …
Read More »ಬೆಳಗಾವಿಯಲ್ಲಿ ಅನಿರಿಕ್ಷಿತ ಫಲಿತಾಂಶ; ಪಾಲಿಕೆ ರಿಸಲ್ಟ್ ಮುಂಬರುವ ಚುನಾವಣೆ ದಿಕ್ಸೂಚಿಯಲ್ಲ ಎಂದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ನಮಗಿಂತ ಹೆಚ್ಚಾಗಿ ಸಂಪನ್ಮೂಲಗಳೂ ಬಿಜೆಪಿಯವರಿಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬ ಮಾತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಬಂದಿಲ್ಲ. ಬೆಳಗಾವಿ ಪಾಲಿಕೆಯಲ್ಲಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಬೆಳಗಾವಿಯಲ್ಲಿ ಬಿಜೆಪಿ ಗೆಲ್ಲುತ್ತೆ ಎಂದುಕೊಂಡಿರಲಿಲ್ಲ. ಹುಬ್ಬಳ್ಳಿ-ಧಾರವಾಡದಲ್ಲಿ ಇನ್ನೂ ಅತಂತ್ರ ಸ್ಥಿತಿಯಿದೆ. …
Read More »ಕಲಬುರಗಿ ಪಾಲಿಕೆ ಚುನಾವಣೆ: ಯಾರಿಗೂ ಸ್ಪಷ್ಟ ಬಹುಮತ ಇಲ್ಲ; ಜೆಡಿಎಸ್ ಕಿಂಗ್ ಮೇಕರ್- ಗೆದ್ದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ
2021: ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಜೆಡಿಎಸ್ ಯಾರಿಗೆ ಜೈ ಅಂತಾರೋ ಅವರೇ ಪಾಲಿಕೆ ಮೇಯರ್ ಆಗಲಿದ್ದಾರೆ. ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ 27 ಸ್ಥಾನ, ಬಿಜೆಪಿ 23 ಸ್ಥಾನ, ಜೆಡಿಎಸ್ 4 ಸ್ಥಾನದಲ್ಲಿ ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ. ಕಲಬುರಗಿ: ಕಲಬುರಗಿ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಲಭಿಸಿಲ್ಲ. ಜೆಡಿಎಸ್ ಬೆಂಬಲಿಸಿದ ಪಕ್ಷಕ್ಕೆ ಮೇಯರ್ ಸ್ಥಾನ ಸಿಗಲಿದೆ. ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಪಕ್ಷ ಕಿಂಗ್ …
Read More »‘ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೆ ಮೇಯರ್, ಉಪಮೇಯರ್ ಚುನಾವಣೆ ಶೀಘ್ರದಲ್ಲಿ ನಡೆಸಬೇಕು’ : . ಉಗ್ರಪ್ಪ
ಹೊಸಪೇಟೆ (ವಿಜಯನಗರ): ‘ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೆ ಮೇಯರ್, ಉಪಮೇಯರ್ ಚುನಾವಣೆ ಶೀಘ್ರದಲ್ಲಿ ನಡೆಸಬೇಕು’ ಎಂದು ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಆಗ್ರಹಿಸಿದರು. ‘ಬಳ್ಳಾರಿ ಮಹಾನಗರ ಪಾಲಿಕೆಯ ಚುನಾವಣೆ ಮುಗಿದು ನಾಲ್ಕು ತಿಂಗಳಾಗಿದೆ. ಅಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬಂದಿದೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಇದುವರೆಗೆ ಅಲ್ಲಿ ಮೇಯರ್, ಉಪಮೇಯರ್ ಚುನಾವಣೆ ನಡೆಸಿಲ್ಲ. ಕೆಲ ದಿನಗಳ ಹಿಂದೆ ಮೈಸೂರು ಪಾಲಿಕೆಯ ಮೇಯರ್ ಚುನಾವಣೆ ನಡೆಸಿ, ಬಿಜೆಪಿ …
Read More »ಬೆಳಗಾವಿಯಲ್ಲಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್
ಬೆಳಗಾವಿ: ಕಳೆದ 36 ವರ್ಷದಿಂದ ಬೆಳಗಾವಿ ಮಹಾನಗರ ಪಾಲಿಕೆ ಆಳಿದ MESಗೆ ಭಾರೀ ಮುಖಭಂಗ ಎದುರಾಗುವ ಸಾಧ್ಯತೆಗಳಿದ್ದು, ಬಿಜೆಪಿ ಪಾಲಿಕೆ ಚುಕ್ಕಾಣಿ ಹಿಡಿಯುವುದು ಬಹುತೇಕ ಫಿಕ್ಸ್ ಆಗ್ತಿದೆ. ಜಿಲ್ಲೆಯಲ್ಲಿ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಬಿ.ಕೆ ಮಾಡೆಲ್ ಸ್ಕೂಲ್ನಲ್ಲಿ ಭರದಿಂದ ಸಾಗಿದೆ. ಈ ವೇಳೆ ತಮ್ಮ ಪಕ್ಷ ಮುನ್ನಡೆ ಪಡೆಯುತ್ತಿದಂತೆ ಕಾರ್ಯಕರ್ತರು ವಿಜಯೋತ್ಸವ ಆಚರಣೆಗೆ ಮುಂದಾಗಿದ್ದು, ಈ ವೇಳೆ ಪೊಲೀಸರು ಜನರನ್ನು ಚದುರಿಸಲು ಲಾಠಿಚಾರ್ಜ್ ಮಾಡಿದ್ದಾರೆ. …
Read More »ಪಾಲಿಕೆ ಚುನಾವಣಾ ಫಲಿತಾಂಶ- ಮತದಾರರಿಗೆ, ಪಕ್ಷದ ಹಿರಿಯ ನಾಯಕರಿಗೆ ಸಿಎಂ ಧನ್ಯವಾದ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಶೀರ್ವಾದಿಂದ ಮಾಹನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಚುನಾವಣಾ ಫಲಿತಾಂಶ ಹೊರಬರುತ್ತಿದ್ದಂತೆಯೇ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ. ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಸ್ಪಷ್ಟವಾದ ಬಹುಮತ ಪಡೆದುಕೊಳ್ಳುವಂತಹ ಎಲ್ಲಾ ಸಾಧ್ಯತೆಗಳಿವೆ. ಕಲಬುರಗಿಯಲ್ಲಿ ಕೂಡ ನಂಬರ್ ಒನ್ ಪಾರ್ಟಿ ಆಗುವ ಲಕ್ಷಣಗಳು ಕಾಣಿಸುತ್ತಿವೆ ಎಂದರು. ಎಲ್ಲಾ ಮಹಾನಗರ ಪಾಲಿಕೆಯ ಅಧ್ಯಕ್ಷರುಗಳಿಗೆ, …
Read More »ಪಾಲಿಕೆಗೆ ಗೆದ್ದವರ ಸಂಪೂರ್ಣ ವಿವರ ಇಲ್ಲಿದೆ.
ಪಾಲಿಕೆಗೆ ಗೆದ್ದವರ ಸಂಪೂರ್ಣ ವಿವರ ಇಲ್ಲಿದೆ. 1 ಇಕ್ರಾ ಮುಲ್ಲಾ – ಸ್ವತಂತ್ರ 2 ಮುಜಾಮಿಲ್ ಡೋನಿ -ಕಾಂಗ್ರೆಸ್ 3 ಜ್ಯೋತಿ ಕಡೋಲ್ಕರ್ -ಕಾಂಗ್ರೆಸ್ 4 ಜಯತೀರ್ಥ ಸೌದತ್ತಿ -ಬಿಜೆಪಿ 5 ಅಫ್ರಿಜಾ ಮುಲ್ಲಾ -ಕಾಂಗ್ರೆಸ್ 6 ಸಂತೋಷ್ ಪೆಡ್ನೇಕರ್ -ಬಿಜೆಪಿ 7 ಶಂಕರ್ ಪಾಟೀಲ್ -ಸ್ವತಂತ್ರ 8 ಸೊಹೈಲ್ ಸಂಗೋಲಿ -ಕಾಂಗ್ರೆಸ್ 9 ಪೂಜಾ ಪಾಟೀಲ್ -ಸ್ವತಂತ್ರ 10 ವೈಶಾಲಿ ಬಾತ್ಕಾಂಡೆ -ಸ್ವತಂತ್ರ 11 ಸಮಿಯುಲ್ಲಾ ಮಾಡಿವಾಲೆ -ಕಾಂಗ್ರೆಸ್ …
Read More »ಬೆಳಗಾವಿಯ ಅಭಿವೃದ್ಧಿ ಗಾಗಿ ಬಿಜೆಪಿಗೆ ಪ್ರಚಂಡ ಬೆಂಬಲ ವನ್ನು ನೀಡಿ ಆಶೀರ್ವದಿಸಿದ್ದಾರೆ:
ಬೆಳಗಾವಿ: ಜನರು ಪ್ರಧಾನಿ ಮೋದಿಯವರ ಕಾರ್ಯತತ್ಪರತೆಗೆ ಹಾಗೂ ಬೆಳಗಾವಿಯ ಅಭಿವೃದ್ಧಿ ಗಾಗಿ ಬಿಜೆಪಿಗೆ ಪ್ರಚಂಡ ಬೆಂಬಲ ವನ್ನು ನೀಡಿ ಆಶೀರ್ವದಿಸಿದ್ದಾರೆ ಎಂದು ಬೆಳಗಾವಿ ಮಹಾನಗರ ಚುನಾವಣಾ ಉಸ್ತುವಾರಿ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ನಾವು ಪ್ರಗತಿ ಬಗ್ಗೆ ಮಾತಾಡಿದೆವು. ಬೆಳಗಾವಿ ಮಹಾನಗರವನ್ನು ಸರ್ವಾಂಗ ಸುಂದರವಾಗಿ ರೂಪಿಸಲು ಜನರು ಆಶಿರ್ವದಿಸಿದ್ದಾರೆ. ನಾವು ಎಲ್ಲ ಸಮುದಾಯದವರನ್ನು ನಮ್ಮ ಜೊತೆಗೆ ಸೇರಿಸಿ ಅವರ ಹಿತದ ಬಗ್ಗೆ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದೇವೆ. ಕಾಂಗ್ರೆಸ್ ದಲಿತರನ್ನು …
Read More »20 ವರ್ಷಗಳಿಂದ ಒಂದೇ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂಜನಿಯರ್ ಕೊನೆಗೂ ಎತ್ತಂಗಡಿ
ಬೆಳಗಾವಿ: ಕಳೆದ ಹಲವು ವರ್ಷಗಳಿಂದ ಒಂದೇ ಜಾಗದಲ್ಲಿ ಜಾಂಡ ಹೂಡಿದ್ದ ಎಂಜನಿಯರ್ನನ್ನು 20 ವರ್ಷಗಳ ಬಳಿಕ ಕೊನೆಗೂ ಎತ್ತಂಗಡಿ ಮಾಡಲಾಗಿದೆ. ಎಸ್.ಆರ್ .ಚೌಗಲಾ ಎಂಬ ದಿನಗೂಲಿ ಎಂಜನಿಯರ್, 1995ರಲ್ಲಿ ದಿನಗೂಲಿ ಆಧಾರದ ಮೇಲೆ ಜ್ಯೂನಿಯರ್ ಇಂಜಿನಿಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಬಳಿಕ ಚೌಗಲಾ ತಮ್ಮ ಪ್ರಭಾವ ಬಳಸಿ ಇಪ್ಪತ್ತು ವರ್ಷಗಳಿಂದ ಬಹುತೇಕ ಕಾಲ ರಾಯಭಾಗ ತಾಲೂಕಿನಲ್ಲಿ ಕೆಲಸ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಕುಡಚಿ ಪುರಸಭೆ, ರಾಯಭಾಗ ಪಟ್ಟಣ ಪಂಚಾಯಿತಿ, ಮುಗಳಖೋಡ, …
Read More »ಬೆಳಗಾವಿಯಲ್ಲಿ ಬಿಜೆಪಿ, ಕಾಂಗ್ರೆಸ್ ಗೆ ಮೊದಲ ಗೆಲುವು
ಬೆಳಗಾವಿ – ಬೆಳಗಾವಿಯ 2 ವಾರ್ಡ್ ಗಳ ಫಲಿತಾಂಶ ಪ್ರಕಟವಾಗಿದೆ. ವಾರ್ಡ್ 15ರಲ್ಲಿ ಬಿಜೆಪಿಯ ನೇತ್ರಾವತಿ ಭಾಗ್ವತ್, ಮತ್ತು ವಾರ್ಡ್ 3ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜ್ಯೋತಿ ಕಡೋಲ್ಕರ್ ಗೆಲುವು ಸಾಧಿಸಿದ್ದಾರೆ. ವಾರ್ಡ್ 11ರಲ್ಲಿ ಸಹ ಕಾಂಗ್ರೆಸ್ ಮುನ್ನಡೆಯಲ್ಲಿದೆ. ನೇತ್ರಾವತಿ 40 ಮಗಳಿಂದ ಗೆಲುವು ಸಾಧಿಸಿದ್ದಾರೆ, ಜ್ಯೋತಿ ಹೆಚ್ಚಿನ ಅಂತರದಿಂದ ಗೆದ್ದಿದ್ದಾರೆ. ಬಹುತೇಕ ವಾರ್ಡ್ ಗಳಲ್ಲಿ ಪಕ್ಷೇತರರು ಮನ್ನಡೆಯಲ್ಲಿದ್ದಾರೆ.
Read More »
Laxmi News 24×7