ನವದೆಹಲಿ: ಅತ್ತ ಮೈದಾನದಲ್ಲಿ ದಾಖಲೆ ಮಾಡುವ ವಿರಾಟ್ ಕೊಹ್ಲಿ ಈಗ ಸೋಷಿಯಲ್ ಮೀಡಿಯಾದಲ್ಲೂ ಹೊಸ ದಾಖಲೆ ಮಾಡಿದ್ದಾರೆ. ಇನ್ ಸ್ಟಾಗ್ರಾಂ ಪುಟದಲ್ಲಿ ಸಕ್ರಿಯರಾಗಿರುವ ಕೊಹ್ಲಿ, 150 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ಕ್ರಿಕೆಟಿಗ ಎಂಬ ದಾಖಲೆ ಮಾಡಿದ್ದಾರೆ. ಕೊಹ್ಲಿ ಕೇವಲ ಫಾಲೋವರ್ ಗಳ ವಿಚಾರ ಮಾತ್ರವಲ್ಲ. ಗಳಿಕೆಯಲ್ಲೂ ಏಷ್ಯಾ ಸೆಲೆಬ್ರಿಟಿಗಳ ಪೈಕಿ ಮುಂದಿದ್ದಾರೆ. ಜಾಗತಿಕವಾಗಿಯೂ 150 ಮಿಲಿಯನ್ ಫಾಲೋವರ್ ಗಳನ್ನು ದಾಟಿದ ವಿಶ್ವದ ನಾಲ್ಕನೇ ಕ್ರೀಡಾಪಟು ಎಂಬ ಹೆಗ್ಗಳಿಕೆ ಕೊಹ್ಲಿಯದ್ದಾಗಿದೆ. …
Read More »ಕರೋಡ್ ಪತಿಯಲ್ಲಿ ಸೆಹ್ವಾಗ್-ಗಂಗೂಲಿ: ಕ್ರಿಕೆಟ್ ದಿಗ್ಗಜರು ಗೆದ್ದಿದ್ದೆಷ್ಟು?
ಕ್ರಿಕೆಟ್ ದಿಗ್ಗಜರಾದ ಸೌರವ್ ಗಂಗೂಲಿ ಮತ್ತು ವೀರೇಂದ್ರ ಸೆಹ್ವಾಗ್ ಇತ್ತೀಚಿಗಷ್ಟೆ ಕೌನ್ ಬನೇಗಾ ಕರೋಡ್ ಪತಿ ಸೀಸನ್ 13 ನಲ್ಲಿ ಭಾಗಿಯಾಗಿದ್ದರು. ವಾರದ ಮೊದಲೇ ಪ್ರೋಮೋ ಬಿಡುಗಡೆ ಮಾಡಿ ಕುತೂಹಲ ಮೂಡಿಸಿದ್ದ ಕೌನ್ ಬನೇಗಾ ಕರೊಡ್ ಪತಿ 13 ತಂಡ ಎಪಿಸೋಡ್ ನೋಡಲು ಕಾತರರಾಗಿದ್ದರು. ಇದೀಗ ಕಾರ್ಯಕ್ರಮ ಪ್ರಸಾರವಾಗಿದ್ದು ಇದೀಗ ವೈರಲ್ ಆಗುತ್ತಿದೆ. ಶಾಂದರ್ ಶುಕ್ರವಾರ್ ದ ಮೊದಲ ಸೆಲೆಬ್ರಿಟಿ ಅತಿಥಿಗಳಾಗಿ ಸೆಹ್ವಾಗ್ ಮತ್ತು ಗಂಗೂಲಿ ಭಾಗವಹಿಸಿದ್ದರು. ಇಬ್ಬರು ಸಖತ್ತಾಗಿ ಆಟವಾಡಿದ್ದಾರೆ. …
Read More »ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ಕುರಿತು ಚರ್ಚೆಗೆ ಎಡೆಮಾಡಿಕೊಟ್ಟ ಬಿಬಿಎಂಪಿ ಸೆರೋಸರ್ವೆ!
ಬೆಂಗಳೂರು: 1,800 ನಾಗರೀಕರ ಮೇಲೆ ಆರೋಗ್ಯ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗಷ್ಟೇ ನಡೆಸಿದ ಸೆರೋಸರ್ವೇಯೊಂದು ತಜ್ಞರಲ್ಲಿ ಚರ್ಚೆಗಳನ್ನು ಹುಟ್ಟುಹಾಕುವಂತೆ ಮಾಡಿದೆ. ವೈರಸ್ ವಿರುದ್ಧ ಹೋರಾಡಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಎರಡು ಡೋಸ್ ಲಸಿಕೆ ಪಡೆದುಕೊಂಡ ಬಳಿಕ ಬೂಸ್ಟರ್ ಡೋಸ್ ನೀಡಬೇಕೆಂದು ಕೆಲ ತಜ್ಞರು ಹೇಳುತ್ತಿದ್ದಾರೆ. ಆದರೆ, ಇನ್ನೂ ಕೆಲವರು, ಬೂಸ್ಟರ್ ಡೋಸ್ ಗಳ ಕುರಿತು ಸೂಕ್ತ ರೀತಿಯ ಅಧ್ಯಯನ ನಡೆಸದ ಹೊರತು ಅದನ್ನು ನೀಡಬಾರದು ಎಂದು …
Read More »ಮಾತೃವಂದನಾ: ಗರ್ಭಿಣಿ, ಬಾಣಂತಿಯರಿಗೆ ವರದಾನ
ವಿಜಯಪುರ: ಗರ್ಭಿಣಿ, ಬಾಣಂತಿಯರ ಆರೋಗ್ಯ ಕಾಪಾಡಲು ಹಾಗೂ ಅಪೌಷ್ಟಿಕತೆ, ರಕ್ತಹೀನತೆ, ಶಿಶುಮರಣ, ಬಾಣಂತಿ ಮರಣ ನಿಯಂತ್ರಿಸಲು ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯು ಮಹಿಳೆಯರಿಗೆ ವರದಾನವಾಗಿದೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಹೇಳಿದರು. ನಗರದ ಜಿಲ್ಲಾ ಸ್ತ್ರೀಶಕ್ತಿ ಭವನದಲ್ಲಿ ಏರ್ಪಡಿಸಿದ್ದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮಾತೃವಂದನ ಸಪ್ತಾಹ ಹಾಗೂ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಮಾತೃ …
Read More »E- KYC: ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರ ‘ರೇಷನ್’ಗೆ ಕಿರಿಕಿರಿ!
ಕಾರವಾರ, ಸೆಪ್ಟೆಂಬರ್ 4: ಪಡಿತರ ಪಡೆದುಕೊಳ್ಳಲು ರೇಷನ್ ಕಾರ್ಡ್ನಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ- ಕೆವೈಸಿ ಮಾಡಿಸಬೇಕೆಂದು ರಾಜ್ಯ ಸರಕಾರದ ಆಹಾರ ಇಲಾಖೆ ಆದೇಶಿಸಿದೆ. ಅದರಂತೆ ಬಹುತೇಕ ತಾಲೂಕುಗಳ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಕಾರ್ಯಾರಂಭಗೊಂಡು ಒಂದು ವಾರ ಕಳೆದಿದೆ. ಆದರೆ ಹಲವೆಡೆ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿದಾರರು ಇ- ಕೆವೈಸಿಗೆ ಪರದಾಡುವಂತಾಗಿದೆ. ದಿನಗಟ್ಟಲೆ ಕಾದರೂ ನೋಂದಣಿ ಕಷ್ಟ- ಸಾಧ್ಯವಾಗಿದೆ. ಇ- ಕೆವೈಸಿ ಮಾಡಲು ಬಯೋಮೆಟ್ರಿಕ್ ನೀಡಬೇಕಿದೆ. ಸರ್ವರ್ ಸಮಸ್ಯೆಯಿಂದ …
Read More »ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ; ಕಾರ್ಯಕರ್ತರ ಜೊತೆ ಸಭೆ, ಪ್ರತಿಭಟನೆ ನಡೆಸುತ್ತೇವೆ: ಡಿ ಕೆ ಶಿವಕುಮಾರ್
ಕಾಂಗ್ರೆಸ್ಗೆ ಪದಾಧಿಕಾರಿಗಳ ನೇಮಕದ ಬಗ್ಗೆ ಸೂಚಿಸಿದ್ದೇನೆ. ಮಾಸಾಂತ್ಯದಲ್ಲಿ ಎಲ್ಲಾ ಘಟಕಗಳಿಗೆ ನೇಮಕಾತಿ ಮಾಡುತ್ತೇವೆ. ಕಾಂಗ್ರೆಸ್ನಿಂದ ಸಾಂಸ್ಕೃತಿಕ, ಸಾರಿಗೆ ವಿಭಾಗ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ನಾವು ಸಿದ್ಧತೆ ನಡೆಸುತ್ತಿದ್ದೇವೆ. ಜಿಲ್ಲಾ ಕಾಂಗ್ರೆಸ್ ನಾಯಕರ ಅಭಿಪ್ರಾಯವನ್ನು ಕೇಳಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಶನಿವಾರ (ಸಪ್ಟೆಂಬರ್ 4) ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ …
Read More »ಹೆಂಡತಿಯ ಮೇಲಿನ ಸಿಟ್ಟಿಗೆ ತನ್ನ ಎರಡು ವರ್ಷದ ಮಗಳ ಮೇಲೆಯೇ ಅತ್ಯಾಚಾರ ಮಾಡಿದ ಕ್ರೂರ ಅಪ್ಪ
ಹರಿಯಾಣ : ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಹರಿಯಾಣದ ಗುರುಗ್ರಾಮದಲ್ಲಿ ಕೇಳಿಬಂದಿದೆ. ಗುರುಗ್ರಾಮದ ಪಟೌಡಿ ಏರಿಯಾದಲ್ಲಿ ಅಪ್ಪನೇ ಮಗಳ ಮೇಲೆ ಈ ಕೃತ್ಯವನ್ನು ಮಾಡಿದ್ದಾನೆ ಎನ್ನಲಾಗಿದೆ. ಘಟನೆ ಆಗಸ್ಟ್ 28ರಂದು ನಡೆದಿದ್ದು, ಸೆಪ್ಟೆಂಬರ್ ಎರಡಕ್ಕೆ ಬೆಳಕಿಗೆ ಬಂದಿದೆ. ಈಗಾಗಲೇ ಪೊಲೀಸರು ಆರೋಪಿ ಅಪ್ಪನ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಗಂಡ – ಹೆಂಡತಿ ಹಸುಗೂಸನ್ನು ಕರೆದುಕೊಂಡು ಬಿಹಾರದಿಂದ …
Read More »ಮಕ್ಕಳಿಂದಲೇ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ.. ಹೆತ್ತ ತಪ್ಪಿಗೆ ಕಣ್ಣೀರಿಟ್ಟ ಅಪ್ಪ
ಹಾವೇರಿ: ವೃದ್ಧ ತಂದೆಯನ್ನ ನಡು ಬೀದಿಯಲ್ಲಿ ಎಳೆದಾಡಿ ಮಕ್ಕಳಿಬ್ಬರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ವಡ್ಡರ ಎಂಬ 70 ವರ್ಷದ ವೃದ್ಧನ ಮೇಲೆ ಮಕ್ಕಳು ಹಲ್ಲೆ ನಡೆಸಿದ್ದಾರೆ. ಮಕ್ಕಳಾದ ಆನಂದ, ಜಗದೀಶ ಎಂಬುವರಿಂದ ಮನಬಂದಂತೆ ಹಲ್ಲೆ ನಡೆದಿದ್ದು.. ಒಬ್ಬರಾದ ಮೇಲೆ ಒಬ್ಬರು ಬಂದು ಕಾಲಲ್ಲಿ ಒದ್ದಿದ್ದಾರೆ. ಹಡೆದ ತಪ್ಪಿಗಾಗಿ ತಂದೆ ರಸ್ತೆಯಲ್ಲಿ ಕಣ್ಣೀರು ಹಾಕಿದ್ದಾರೆ. ನಂತರ ಪ್ರಜ್ಞಾಹೀನನಾಗಿ ನರಳುತ್ತಾ ದಾರಿಯಲ್ಲಿ …
Read More »ಕೊಪ್ಪಳದಲ್ಲೂ ಮಕ್ಕಳಲ್ಲಿ ಕಾಣಿಸಿಕೊಂಡ ವೈರಲ್ ಫೀವರ್.. ಆಸ್ಪತ್ರೆಗಳ ಮುಂದೆ ಕ್ಯೂ ನಿಂತ ಪೋಷಕರು
ಕೊಪ್ಪಳ: ಜಿಲ್ಲೆಯಲ್ಲಿ ಪುಟ್ಟ ಪುಟ್ಟ ಮಕ್ಕಳಿಗೆ ವೈರಲ್ ಇನ್ಫೆಕ್ಷನ್ ಸಮಸ್ಯೆ ಕಾಡುತ್ತಿದ್ದು ಕೆಮ್ಮು, ಕಫಾ, ಜ್ವರದಿಂದ ಮಕ್ಕಳು ನಿತ್ರಾಣರಾಗಿದ್ದಾರೆ. ಅದ್ರಲ್ಲೂ ಗ್ರಾಮೀಣ ಭಾಗದ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಕಾಡುತ್ತಿದ್ದು ಪೋಷಕರು ಆತಂಕಗೊಂಡಿದ್ದಾರೆ. ಆಸ್ಪತ್ರೆಗಳು ಫುಲ್ ಆಗಿದ್ದು ಮಕ್ಕಳಿಗೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಮುಂದೆ ಪೋಷಕರು ಕ್ಯೂ ನಿಂತ ದೃಶ್ಯಗಳು ಕಂಡುಬಂದಿವೆ. ದೂರದ ಊರುಗಳಿಂದ ಆಸ್ಪತ್ರೆಗಳ ಬಳಿಗೆ ಪೋಷಕರು ಮಕ್ಕಳನ್ನು ಚಿಕಿತ್ಸೆಗಾಗಿ ಕರೆತಂದಿದ್ದಾರೆ. ಇನ್ನು ಇತ್ತೀಚೆಗೆ ಬಳ್ಳಾರಿ ಮತ್ತು ಗದಗ ಜಿಲ್ಲೆಗಳಲ್ಲೂ …
Read More »ಮನುಷ್ಯನ ಮಾತುಗಳೇ ಆತನ ಸಂಸ್ಕೃತಿಯನ್ನು ತೋರಿಸುತ್ತದೆ : ಶಾಸಕ ಪರಣ್ಣ ಮುನವಳ್ಳಿ
ಗಂಗಾವತಿ : ಪ್ರತಿಯೊಬ್ಬ ಮನುಷ್ಯನ ಮಾತುಗಳು ಆತನ ನಡೆ ನುಡಿ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ಜೂನಿಯರ್ ಕಾಲೇಜಿನ ನೂತನ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ವ್ಯಕ್ತಿ ಇದೀಗ ಎಚ್ಚರಗೊಂಡು ತಮ್ಮ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಪತ್ರಕರ್ತರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆ ಇನ್ನೂ 20 ತಿಂಗಳಿದೆ. ಕ್ಷೇತ್ರದ ಜನರು ಯಾರಿಗೆ ಬುದ್ಧಿ …
Read More »
Laxmi News 24×7