Breaking News

ಸಿಎಂಗೂ ಮೊದಲೇ ದೆಹಲಿ ಸೇರಿರುವ ಸಚಿವಾಕಾಂಕ್ಷಿಗಳು; ಮಂತ್ರಿ ಸ್ಥಾನಕ್ಕಾಗಿ ಎಂ.ಪಿ.ಕುಮಾರಸ್ವಾಮಿ ನೇರ ಲಾಬಿ

ನವದೆಹಲಿ: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಸಿಎಂ ದೆಹಲಿ ಭೇಟಿಗೂ ಮೊದಲೇ ಸಚಿವಾಕಾಂಕ್ಷಿಗಳು ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಮಂತ್ರಿ ಸ್ಥಾನಕ್ಕಾಗಿ ನೇರವಾಗಿ ವರಿಷ್ಠರ ಬಳಿ ಲಾಬಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕುಮಾರಸ್ವಾಮಿ, ಈ ಹಿಂದೆ 17 ಶಾಸಕರಿಗೆ ಮಂತ್ರಿ ಸ್ಥಾನ ನೀಡಲೇಬೇಕು ಎಂಬ ಅನಿವಾರ್ಯ ಇತ್ತು ಹಾಗಾಗಿ ನಾವೆಲ್ಲ ತಾಳ್ಮೆಯಿಂದ ಇದ್ದೆವು. …

Read More »

ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ | ಬೇಕಿತ್ತಾ ಈ ಸರ್ಕಾರ..?

ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ.. ನೆರೆಗೆ ಉತ್ತರ ತತ್ತರಿಸುತ್ತಿದ್ದರೂ ಯಾಕೀ ವಿಳಂಬ..? ಸುಮ್ನೆ ಟೈಂ ಪಾಸ್ ಗೆ ಸಿಎಂ ಆದ್ರಾ ಬಾಮ್ಮಾಯಿ ಸಾಹೇಬ್ರೆ..? ರಾಮೇಶ್ವರಕ್ಕೆ ಹೋದ್ರು ಶನೇಶ್ವರನ ಕಾಟ ತಪ್ಪಲಿಲ್ಲ ಎಂಬಂತೆ ಮುಖ್ಯಮಂತ್ರಿ ಬದಲಾದರೂ ರಾಜ್ಯದ ಜನರ ಹಣೆಬರಹ ಬದಲಾಗೋ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ಕಡೆ ಕೊರೊನಾ ಮೂರನೇ ಅಲೆಯ ಎಚ್ಚರಿಕೆಯ ಗಂಟೆ ಬಾರಿಸುತ್ತಿದೆ. ಇನ್ನೊಂದೆಡೆ ಜಲಾಸುರ ಉತ್ತರ ಕರ್ನಾಟಕವನ್ನು ನುಂಗುತ್ತಾ ಬರುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಹಿತ ಕಾಯಬೇಕಿದ್ದ …

Read More »

`ತೆನೆ’ ಇಳಿಸಿ `ಕೈ’ ಹಿಡಿದ ಮಧು ಬಂಗಾರಪ್ಪ..

ಹುಬ್ಬಳ್ಳಿ : ಮಾಜಿ ಸಿಎಂ ಎಸ್ ಬಂಗಾರಪ್ಪ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಕರ್ನಾಟಕ ಕಾಂಗ್ರೆಸ್ ವಿಭಾಗ ಮಟ್ಟದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಬಾವುಟ ಹಿಡಿದರು. ಅಲ್ಲದೆ ಇದೇ ಸಭೆಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಗರ ಜೊತೆ …

Read More »

ವಲಸಿಗರ ಕೈ ಬಿಟ್ರಾ ಬಿ.ಎಸ್.ಯಡಿಯೂರಪ್ಪ..?

ಚಾಮರಾಜನಗರ : ಕೇವಲ ಬಿ.ಎಸ್.ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿಗೆ ಬಂದು ಸಚಿವರಾಗಿದ್ದ 17 ಮಂದಿ ಶಾಸಕರಿಗೆ ಬಿಎಸ್ ವೈ ಶಾಕ್ ನೀಡಿದ್ದಾರೆ. ಅವರಿಗೆ ಮತ್ತೆ ಮಂತ್ರಿ ಸ್ಥಾನ ಕೊಡೋದು ಬಿಡೋದು ಸಿಎಂ ಬೊಮ್ಮಾಯಿ ಅವರಿಗೆ ಬಿಟ್ಟಿದ್ದು ಎಂದು ಹೇಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ವೇಳೆ ಕಾಂಗ್ರೆಸ್ – ಜೆಡಿಎಸ್ ನಲ್ಲಿದ್ದ ಶಾಸಕರನ್ನು ಬಿಜೆಪಿಗೆ ಸೆಳೆದು ಸರ್ಕಾರ ರಚಿಸಿದ್ದ ಬಿಎಸ್ ವೈ ಕೊಟ್ಟ ಮಾತಿನಂತೆ ಅವರಿಗೆ ಸಚಿವ …

Read More »

ಸಂಪುಟ ರಚನೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ, ಸಲಹೆಯನ್ನು ನೀಡಲ್ಲ -ಬಿಎಸ್​ವೈ

ಚಾಮರಾಜನಗರ: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ತಮ್ಮ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಅಭಿಮಾನಿ ರವಿ ಮನೆಗೆ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆಯ ತಾಲೂಕಿನ ಬೊಮ್ಮಲಾಪುರಕ್ಕೆ ಭೇಟಿ ನೀಡಿದ ಬಿಎಸ್​​​ವೈ ಅವರು ಮೃತ ಅಭಿಮಾನಿಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಗಣೇಶ ಚತುರ್ಥಿಯ ನಂತರ ರಾಜ್ಯದ ತುಂಬ ಪ್ರವಾಸ ಮಾಡಲಿದ್ದೇನೆ ಎಂದಿದ್ದಾರೆ. ಪಕ್ಷವನ್ನು ಬಲ …

Read More »

ಕುದರೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ನೆಟ್‌ವರ್ಕ್ ಸೌಲಭ್ಯ ಕಲ್ಪಿಸುವಂತೆ ಆಗ್ರಹ

ಸಾಗರ: ತಾಲ್ಲೂಕಿನ ಕುದರೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಮೊಬೈಲ್ ನೆಟ್‌ವರ್ಕ್ ಸೌಲಭ್ಯ ಕಲ್ಪಿಸಲು ಅಗತ್ಯವಿರುವ ವ್ಯವಸ್ಥೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಡಾ.ರಾಜನಂದಿನಿ ಕಾಗೋಡು ಒತ್ತಾಯಿಸಿದ್ದಾರೆ. ತಾಲ್ಲೂಕಿನ ಕುದರೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇರುವ ಕಾರಣ ಬುಧವಾರ ಜಿಯೋ ಕಂಪೆನಿ ಪ್ರತಿನಿಧಿಗಳೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾತನಾಡಿದರು. ನಾಡಿಗೆ ಬೆಳಕು ನೀಡಲು ಜಲ ವಿದ್ಯುತ್ …

Read More »

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ಬೆಂಗಳೂರು: ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲ ಬಾರಿ ದೆಹಲಿ ವಿಮಾನ ಏರಿದ್ದಾರೆ. ಸಿಎಂ ದೆಹಲಿ ಭೇಟಿ ರಾಜ್ಯದ ಸಚಿವ ಸ್ಥಾನಾಕಾಂಕ್ಷಿಗಳ ನೀರಿಕ್ಷೆ ಹೆಚ್ಚಿಸುವಂತೆ ಮಾಡಿದೆ. ಸಿಎಂ ಬೊಮ್ಮಾಯಿ ಇಂದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ತನ್ನನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಲು ತಾನು ದೆಹಲಿಗೆ ಹೋಗುತ್ತಿರುವುದಾಗಿ ಬೊಮ್ಮಾಯಿ ಹೇಳಿಕೆ …

Read More »

133 ವರ್ಷ ಹಳೆಯ ಕನ್ನಡ ಶಾಲೆಯನ್ನ ದತ್ತು ಪಡೆದ ಕಿಚ್ಚಸುದೀಪ್​ ತಂಡ

ಶಿವಮೊಗ್ಗ: ಜಿಲ್ಲೆಯ ಸುಮಾರು 133 ವರ್ಷ ಹಳೆಯ ಕನ್ನಡ ಶಾಲೆಯನ್ನ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ದತ್ತು ಪಡೆದಿದೆ. ಈ ಬಗ್ಗೆ ಶಿವಮೊಗ್ಗ ಕ್ಷೇತ್ರಶಿಕ್ಷಣಾಧಿಕಾರಿಗಳು ಅನುಮೋದನೆ ನೀಡಿದ್ದಾರೆ. ನಗರದ ಬಿಹೆಚ್​ ರಸ್ತೆಯಲ್ಲಿರುವ ಸರ್ಕಾರಿ ಶಾಲೆಯನ್ನ ಕಿಚ್ಚಸುದೀಪ್​ ತಂಡ ದತ್ತು ಪಡೆದಿದ್ದು, ಶಾಲೆಯನ್ನ ಅಭಿವೃದ್ಧಿ ಪಡಿಸಲು ಪಣ ತೊಟ್ಟಿದೆ. ಈಗಾಗಲೇ ನೂರಾರು ಶಾಲೆಗಳನ್ನ ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವ ಕೆಲಸವನ್ನ ಈ ಕಿಚ್ಚ ಸುದೀಪ್​ ಚಾರಿಟಬಲ್​ಟ್ರಸ್ಟ್​ ಮಾಡುತ್ತಿದ್ದು, ಈ ಕಾರ್ಯಕ್ಕೆ ಅಪಾರ …

Read More »

ಗದಗ ಜಿಲ್ಲೆಯಲ್ಲಿ ‘ಸಲ್ಮಾನ್ ಖಾನ್’ಗ್ರಾಮ ಕೇಳಿದ್ದೀರಾ? ಇಲ್ಲಿ ಮದುವೆಯಾಗಲು ಕ್ಯೂನಲ್ಲಿ ನಿಂತಿದ್ದಾರೆ ಯುವಕರು!

ಗದಗ:ಜಿಲ್ಲೆಯ ರೋಣ ತಾಲ್ಲೂಕಿನ ಸಣ್ಣ ಹಳ್ಳಿಯಿದು, ಈ ಹಳ್ಳಿ ಗದಗ ಪಟ್ಟಣದಿಂದ 59 ಕಿಲೋ ಮೀಟರ್ ದೂರದಲ್ಲಿದೆ. ಸಲ್ಮಾನ್ ಖಾನ್ ಗ್ರಾಮ ಎಂಬ ಹೆಸರು ಈ ಗ್ರಾಮಕ್ಕೆ ಬಂದಿದೆ, ಅರೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೂ ಈ ಗ್ರಾಮಕ್ಕೂ ಏನು ಸಂಬಂಧ ಎಂದುಕೊಂಡಿರಾ? ಈ ಗ್ರಾಮದಲ್ಲಿ ಯಾರೂ ನಟರಿಲ್ಲ, ಬದಲಿಗೆ ಹಲವು ಯುವಕರು, ಪುರುಷರು ಮದುವೆಯಾಗಲು ಸೂಕ್ತ ಹೆಣ್ಣು ಸಿಗದೆ ಬ್ರಹ್ಮಚಾರಿಗಳಾಗಿಯೇ ಉಳಿದಿದ್ದಾರೆ. ಕಳೆದ 10 ವರ್ಷಗಳಿಂದ ಗ್ರಾಮದಲ್ಲಿ …

Read More »

ಮೇರಿ ಕೋಮ್ ಎಂಬ ‘ಫೈಟಿಂಗ್ ಸ್ಪಿರಿಟ್’ಗೆ ವಿದಾಯ

ಇಂದು ನೂರಾರು ರಾಜಕೀಯ ಸುದ್ದಿಗಳ ನಡುವೆ ಇದೊಂದು ಸುದ್ದಿ ಪ್ರಾಮುಖ್ಯತೆ ಪಡೆಯಲೇ ಇಲ್ಲ! ಬಾಕ್ಸಿಂಗ್ ಲೆಜೆಂಡ್ ಮೇರಿ ಕೋಮ್ ಒಲಿಂಪಿಕ್ಸ್ ಕೂಟದ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇಂದು ಕೊಲಂಬಿಯಾದ ವೇಲೆಂಶಿಯ ಎಂಬ ಬಾಕ್ಸರ್ ಗೆ ಭಾರೀ ಫೈಟ್ ಕೊಟ್ಟು 3-2 ಅಂಕಗಳಿಂದ ಸೋತು ರಿಂಗ್ಸ್ ನಿಂದ ನಿರ್ಗಮಿಸುವಾಗ ಆಕೆಯ ಕಣ್ಣಂಚಿನಲ್ಲಿ ಜಿನುಗಿದ ಕಣ್ಣೀರು ಯಾವುದೇ ಮಾಧ್ಯಮಕ್ಕೆ ಕೂಡ TRP ಕಂಟೆಂಟ್ ಆಗಿಲ್ಲ. ಇನ್ನು ಮುಂದೆ ಮೇರಿ ಕೋಮ್ ಬಾಕ್ಸಿಂಗ್ …

Read More »