Breaking News

ಸಾಲದ ಮೊರೆ ಹೋದ ಬಿ ಎಸ್ ವೈ ಸರ್ಕಾರ

ಬೆಂಗಳೂರು – ರಾಜ್ಯದಲ್ಲಿ ಲಾಕ್‍ಡೌನ್ ಘೋಷಣೆಯಾದ ಬಳಿಕ ಕಳೆದ ಆರು ತಿಂಗಳಿನಿಂದ ಬಹುತೇಕ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡ ಪರಿಣಾಮ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದು, ಸಾಲದ ಮೊರೆ ಹೋಗಲು ನಿರ್ಧರಿಸಿದೆ. ಸರ್ಕಾರದ ಬೊಕ್ಕಸಕ್ಕೆ ಆದಾಯ ತರುತ್ತಿದ್ದ ಮೂಲಗಳಿಂದ ನಿರೀಕ್ಷಿತ ಪ್ರಮಾಣದ ಪರಿಣಾಮ ವರಮಾನ ಬಾರದಿರುವುದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ತಲೆಬಿಸಿ ತಂದಿದೆ. ಆದಾಯದ ಮೂಲಗಳೆಲ್ಲ ಬರಿದಾಗಿದ್ದು, ಬೊಕ್ಕಸ ಖಾಲಿ ಖಾಲಿಯಾಗಿದೆ. ಅನಿವಾರ್ಯ ಸ್ಥಿತಿಯಲ್ಲಿರುವ ಸರ್ಕಾರ …

Read More »

ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ

ಬೆಂಗಳೂರು : ರಾಜ್ಯ ಸರ್ಕಾರ, ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬ ರೀತಿಯಲ್ಲಿ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲಿಯೂ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು, ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ …

Read More »

ಚಾಲಕ ಉದ್ಧಟತನ ಪ್ರದರ್ಶಿಸಿರುವ ಘಟನೆ

ಧಾರವಾಡ: ತುಂಬಿ ಹರಿಯುತ್ತಿರುವ ಸೇತುವೆ ಮೇಲೆಯೇ ಬಸ್​ ಚಲಾಯಿಸಿ ಚಾಲಕ ಉದ್ಧಟತನ ಪ್ರದರ್ಶಿಸಿರುವ ಘಟನೆ ಇನಾಮಹೊಂಗಲ ಮತ್ತು ಹಾರೊಬೆಳವಡಿ ಗ್ರಾಮದ ಮಧ್ಯ ಇರುವ ತಾತ್ಕಾಲಿಕ ಸೇತುವೆ ಬಳಿ ನಡೆದಿದೆ. ನಿನ್ನೆ ರಾತ್ರಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಮಳೆಯಾದ ಹಿನ್ನೆಲೆ ನದಿ- ಹಳ್ಳಕೊಳ್ಳಗಳು ತುಂಬಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಇಂದು ಬೆಳಗ್ಗೆ ಸವದತ್ತಿಯಿಂದ ಧಾರವಾಡಕ್ಕೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಚಾಲಕ ನೀರು ಹರಿಯುತ್ತಿರುವ ಸೇತುವೆ ಮೇಲೆಯೇ ಬಸ್​ ಚಲಾಯಿಸಿದ್ದಾನೆ. ಸೇತುವೆಯ …

Read More »

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲಾದವರಿಗೂ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಲು ತಿಳಿಸಲಾಗಿದೆ. ಅಕ್ಟೋಬರ್ 20ರ ಒಳಗೆ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಉತ್ತಿರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಸೂಚನೆ ನೀಡಲಾಗಿದೆ. 2020 ರ ಫೆಬ್ರವರಿಯಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ಗೈರು ಹಾಜರಾದ ಮತ್ತು ಜುಲೈ 13 …

Read More »

ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮಧ್ಯಂತರ ರಜೆಯನ್ನು ಘೋಷಿಸಿದ ಬಿಎಸ್‌ವೈ

ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಅ.12ರಿಂದ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಬಿಎಸ್‌ವೈ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.   ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ …

Read More »

ಈ ಘಟನೆ ಭಾರತದಲ್ಲಿ ನಡೆದಿದೆ ಎಂಬುದು ಕೆಲವರ ವಾದ. ಆದರೆ, ಘಟನೆಯ ನಿಜಾಂಶ ಫ್ಯಾಕ್ಟ್​ಚೆಕ್​ನಿಂದ ಬಯಲಾಗಿದೆ.

ನವದೆಹಲಿ: ಬಡ ವ್ಯಕ್ತಿಯೊಬ್ಬನ ರಿಕ್ಷಾವನ್ನು ಅಧಿಕಾರಿಗಳು ವಶಕ್ಕೆ ಪಡೆಯುತ್ತಿರುವ ಮನಕಲಕುವ ವಿಡಿಯೋವೊಂದು ಕೆಲದಿನಗಳಿಂದ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಘಟನೆ ಭಾರತದಲ್ಲಿ ನಡೆದಿದೆ ಎಂಬುದು ಕೆಲವರ ವಾದ. ಆದರೆ, ಘಟನೆಯ ನಿಜಾಂಶ ಫ್ಯಾಕ್ಟ್​ಚೆಕ್​ನಿಂದ ಬಯಲಾಗಿದೆ. ದೇಶದ ಅನೇಕ ಜಾಲತಾಣಿಗರು ಈ ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದು, ಈ ದೇಶದ ಕಾನೂನು ಕೇವಲ ಬಡವರಿಗೆ ಮಾತ್ರ ಎಂದು ಅಡಿಬರಹ ಬರೆದು, ಭಾರತ, ನರೇಂದ್ರಮೋದಿ, ಬಿಜೆಪಿ ಮತ್ತು ಅರವಿಂದ್​ಕೇಜ್ರಿವಾಲ್​ ಎಂಬ ಹ್ಯಾಷ್​ಟ್ಯಾಗ್​ನಿಂದವಿಡಿಯೋ ವೈರಲ್​ ಮಾಡಿದ್ದಾರೆ. ರಿಕ್ಷಾ ವಶಕ್ಕೆ …

Read More »

ಲೋಕಸಭಾ ಉಪಚುನಾವಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಎಂಟ್ರಿ ಕೊಡ್ತಾರಾ!

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕ ನಿಗದಿ ಆಗದಿದ್ದರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ. ಬಿಜೆಪಿಯಲ್ಲಿ ಆಕಾಂಕ್ಷೆಗಳ ದಂಡೆ ಇದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆದಂತ ಪ್ರತಿಷ್ಠೆ ಹೊಂದಿರುವ ಕುಟುಂಬದವೆಂದರೆ ಅದು ಜಾರಕಿಹೊಳಿ ಕುಟುಂಬ.ಜಾರಕಿಹೊಳಿ ಕುಟುಂಬದವರ ತಾವು ಹಿಡಿದ ಹಠವನ್ನು ಸಾಧಿಸದೆ ಬಿಡದ ಕುಟುಂಬ ಎಂದು ಹೆಸರುವಾಸಿಯಾಗಿದೆ. ಕರ್ನಾಟಕದಲ್ಲಿ ರಾಜಕಾರಣದಲ್ಲಿ ಹಠವಾದಿ ಎಂದೇ ಖಾತ್ಯಿಯಾಗಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ. …

Read More »

ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಸಿನಿ ಚಿತ್ತಾರ

ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರವಿದೆ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ‌ಬಿರುಸಿನಿಂದ ಸಾಗಿದೆ.‌ ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಹಾರಾರ್ ಥ್ರಿಲ್ಲರ್ …

Read More »

ರಾಜ್ಯಾದ್ಯಂತ ಶಾಲೆಗಳಿಗೆ ಮೂರು ವಾರಗಳ ಕಾಲ ರಜೆ ಘೋಷಣೆ ಮಾಡಿದೆ.

ಬೆಂಗಳೂರು, – ವಿದ್ಯಾಗಮ ಯೋಜನೆಯಡಿ ಶಿಕ್ಷಕರಿಗೂ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ರಾಜ್ಯಾದ್ಯಂತ ಶಾಲೆಗಳಿಗೆ ಮೂರು ವಾರಗಳ ಕಾಲ ರಜೆ ಘೋಷಣೆ ಮಾಡಿದೆ. ವಿಶೇಷವೆಂದರೆ ನಿನ್ನೆಯಷ್ಟೆ ವಿದ್ಯಾಗಮ ಯೋಜನೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿತ್ತು. ಮಕ್ಕಳಿಗೂ ಸೋಂಕು ಹರಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ರಾಜ್ಯದ ಹಲವೆಡೆ ಶಿಕ್ಷಕರಿಗೂ ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಇದೇ ತಿಂಗಳ 30ರ ವರೆಗೆ …

Read More »

ಆ ಜೋಡೆತ್ತುಗಳನ್ನು 8 ಲಕ್ಷಕ್ಕೆ ಮಾರಿದ್ದರು, ಮತ್ತೆ 17 ಲಕ್ಷ ಕೊಟ್ಟು ಖರೀದಿಸಿದರು! ಏನಿದರ ವಿಶೇಷ?

ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ‍ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ. ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು.‌ ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ …

Read More »