Breaking News

ದೇಶ ಬಿಡಲು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮದುವೆಯಾಗ್ತಿರುವ ಹುಡುಗಿಯರು.!

ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ನಂತ್ರ ಜನರು ದೇಶ ಬಿಡ್ತಿದ್ದಾರೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜನ ಸಂದಣಿಯಿದೆ. ಆದ್ರೆ ಮಹಿಳೆಯರಿಗೆ ದೇಶ ಬಿಡುವುದು ಕಷ್ಟವಾಗಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಒಂಟಿ ಮಹಿಳೆ ಹಾಗೂ ಹುಡುಗಿಯರಿಗೆ ಪ್ರವೇಶ ಸಿಗ್ತಿಲ್ಲ. ಇದ್ರಿಂದ ತಪ್ಪಿಸಿಕೊಳ್ಳಲು ಕೆಲ ಹುಡುಗಿಯರನ್ನು ಒತ್ತಾಯ ಪೂರ್ವಕವಾಗಿ ಅಲ್ಲಿರುವ ಯಾವುದೋ ವ್ಯಕ್ತಿಗೆ ಮದುವೆ ಮಾಡಲಾಗ್ತಿದೆ. ಕೆಲ ಹುಡುಗಿಯರು, ಅಪರಿಚಿತನ ಪತ್ನಿಯೆಂದು ಸುಳ್ಳು ಹೇಳಿ ವಿಮಾನ ಏರುತ್ತಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದ ಕುಟುಂಬಸ್ಥರು, ಮಗಳನ್ನು …

Read More »

ಜನವರಿ 21 ನ್ನು ”ದಾಸೋಹ ದಿನ” ವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ತ್ರಿವಿದ ದಾಸೋಹಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ”ದಾಸೋಹ ದಿನ” ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತ ಆದೇಶವನ್ನು ಹೊರಡಿಸಲಾಗಿದೆ. ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಲಿಂಗೈಕ್ಯರಾದ ಶಿವಕುಮಾರ ಸ್ವಾಮೀಜಿ ಅವರ ಅಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ ಜನವರಿ 21 ರಂದು ಸರ್ಕಾರದ ವತಿಯಿಂದ ದಾಸೋಹ ದಿನವೆಂದು ಆಚರಿಸಲು ನಿರ್ಧರಿಸಲಾಗಿದೆ. ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ರೂಪುರೇಷೆ ತಯಾರಿಸಿ …

Read More »

ರಸ್ತೆ ಅಪಘಾತ ಸ್ಥಳದಲ್ಲೇ “ವಿದ್ಯಾಗಿರಿ ಠಾಣೆಯ ಕಾನ್ಸ್ಟೇಬಲ್” ಸಾವು.

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಊಟ ಕೊಡಲು ಹೊರಟಿದ್ದ ಪೊಲೀಸ್ ಪೇದೆಯೊಬ್ಬರು ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಂಗಪ್ಪ ಬುಸಣ್ಣವರ ಎಂಬ ಪೊಲೀಸ್ ಪೇದೆಯೇ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಊಟ ಕೊಡಲು ಹೋದಾಗ ನವಲೂರು ಬಳಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೈಕ್ ಹಾಗೂ ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಲಾರಿ …

Read More »

ಈ ಬಾರಿ ಸರಳ ಮೈಸೂರು ದಸರಾ ಆಚರಣೆ

ಮೈಸೂರು ದಸರಾ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ, ಇದೊಂದು ಜಗತ್ ಪ್ರಸಿದ್ಧ ಆಚರಣೆಯಾಗಿದ್ದು, ಪ್ರತಿ ವರ್ಷ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಾ ಬರುತ್ತಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಕಳೆದ ಬಾರಿಗಿಂತ ವಿಶೇಷವಾಗಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಮೈಸೂರು ದಸರಾವನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಹೇಳಿದರು.   ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಾಡ ಹಬ್ಬ ಮೈಸೂರು ದಸರಾ -2021ರ ಆಚರಣೆ ಕುರಿತಂತೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ …

Read More »

ನಾಳೆ ವೀಕೆಂಡ್ ಕರ್ಫ್ಯೂ ಇರುವುದಿಲ್ಲ, ತಮ್ಮ ಗಮನಕ್ಕೆ…

ಗೋಕಾಕ ಕೋವಿಡ್ ಮಹಾಮಾರಿ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದ ಮಾರ್ಗ ಸೂಚಿಯಂತೆ ಗಡಿ ಜಿಲ್ಲೆ ಬೆಳಗಾವಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿತ್ತು. ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖ ಹಿನ್ನೆಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂ ಹಿಂಪಡೆದು ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ.ಗೋಕಾಕ ತಹಸೀಲ್ದಾರ್ ಪ್ರಕಾಶ್ ಹೊಳೆಪ್ಪಗೋಳ ಪ್ರತಿಕಾಗೋಷ್ಠಿ ತಿಳಿಸಿದ್ದಾರೆ.

Read More »

ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ: ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎಲ್ಲ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್ ಟಿಸಿ) 60ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ನಾಲ್ಕು ಸಾರಿಗೆ ನಿಗಮಗಳ 60 ಚಾಲಕರಿಗೆ ಅಪಘಾತ ರಹಿತ ಚಾಲನೆಗಾಗಿ ಮುಖ್ಯಮಂತ್ರಿಯವರ ಚಿನ್ನದ ಪದಕ ಪ್ರದಾನ ಮಾಡಿ ಅವರು ಮಾತನಾಡಿದರು. ಸಾರಿಗೆ ನಿಗಮಗಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿಗೆ ಐದು …

Read More »

ತಾಲಿಬಾನ್ ಸಮಸ್ಯೆಯಿಂದ ಅನಿಲ ಬೆಲೆ ಏರಿಕೆಯಾಗಿದೆ :ಅರವಿಂದ್ ಬೆಲ್ಲದ್

ಧಾರವಾಡ: ತಾಲಿಬಾನ್ ಸಮಸ್ಯೆಯಿಂದ ಅನಿಲ ಬೆಲೆ ಏರಿಕೆಯಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ.  ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಲಿಬಾನ್ ಸಮಸ್ಯೆಯಿಂದಾಗಿ ಬೆಲೆ ಏರಿಕೆಯಾಗಿವೆ. ಅಲ್ಲದೇ ಕಚ್ಚಾ ತೈಲ ಬರುತ್ತಿಲ್ಲ. ಹೀಗಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯಾಗಿದೆ ಮತ್ತು ಗ್ಯಾಸ್ ದರ ಹೆಚ್ಚಳ ಯಾಕೆ ಆಗಿದೆ ಎಂದು ಮತದಾರರೇ ವಿಚಾರ ಮಾಡಿ ಮತ ಹಾಕುತ್ತಾರೆ ಎಂದು ನುಡಿದಿದ್ದಾರೆ.  ಇದೇ ವೇಳೆ ಹುಬ್ಬಳ್ಳಿ ಧಾರವಾಡ ಪಾಲಿಕೆ …

Read More »

ಬಟ್ಟೆ ಬ್ಯಾಗ್ ಖರೀದಿಯಲ್ಲಿ ರೋಹಿಣಿ ಅಕ್ರಮ: ಸಾ.ರಾ. ಮಹೇಶ್ ಆರೋಪ

ಮೈಸೂರು: ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಗೆ ಜಿಎಸ್‌ಟಿ ಸೇರಿ ₹ 9 ಆಗುತ್ತದೆ. ಆದರೆ, ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಕೈಮಗ್ಗ ಇಲಾಖೆಯವರಿಂದ ಖರೀದಿಸದೆ, ಖಾಸಗಿಯವರಿಂದ ಬ್ಯಾಗ್ ಖರೀದಿಸಿದ್ದಾರೆ. ಈ ಒಂದು ಬ್ಯಾಗ್ ಬೆಲೆ ₹ 52 ಇದೆ ಎಂದು ದಾಖಲೆ …

Read More »

ಕೃಷ್ಣಾ ನದಿ ನೀರಿನಲ್ಲಿ ಇಳಿಕೆ ಕಂಡ ಹಿನ್ನೆಲೆಯಲ್ಲಿ12 ಕೆ.ಜಿ. ತೂಕದ ಬೃಹತ್ ಗಾತ್ರದ ಮೀನು ಸಿಕ್ಕಿದೆ.

ಬೆಳಗಾವಿ: ಕೃಷ್ಣಾ ನದಿ ನೀರಿನಲ್ಲಿ ಇಳಿಕೆ ಕಂಡ ಹಿನ್ನೆಲೆಯಲ್ಲಿ ಜನ ಮೀಗಾರಿಕೆ ಆರಂಭಿಸಿದ್ದು, ಇದೇ ವೇಳೆ 12 ಕೆ.ಜಿ. ತೂಕದ ಬೃಹತ್ ಗಾತ್ರದ ಮೀನು ಸಿಕ್ಕಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು – ಕಲ್ಲೋಳ ಸೇತುವೆ ಬಳಿ 12 ಕೆ.ಜಿ. ತೂಕದ ಮೀನು ಬಲೆಗೆ ಬಿದ್ದಿದೆ. ಬೋರಗಾಂವ ಪಟ್ಟಣದ ಹೈದರ ಅವರಿಗೆ ಮೀನು ಸಿಕ್ಕಿದೆ. ಇಷ್ಟೊಂದು ದೊಡ್ಡ ಗಾತ್ರದ ಮೀನು ಸಿಕ್ಕಿರುವುದಕ್ಕೆ ಹವ್ಯಾಸಿ ಮೀನಗಾರ ಹೈದರ ಸಂತಸ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು …

Read More »

ನಾವು ಗೆದ್ದೇ ಗೆಲ್ತೇವೆ ಮತ್ತೇ ಮೆಜಾರಿಟಿ ತಂದೇ ತರ್ತೇವೆ: ಫಿರೋಜ್ ಸೇಠ್ ವಿಶ್ವಾಸ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲುತ್ತೇವೆ ಮತ್ತು ಮೆಜಾರಿಟಿ ಪಡೆದು ಪಾಲಿಕೆ ಚುಕ್ಕಾಣಿ ಹಿಯುತ್ತೇವೆ ಎಂದು ಫಿರೋಜ್ ಸೇಠ್ ಹೇಳಿದ್ದಾರೆ. ನಾವು ಜನರಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವರಿಕೆ ಮಾಡುತ್ತೇವೆ. ಈ ಹಿಂದೆ ನಮ್ಮ 10 ವರ್ಷಗಳ ಅಧಿಕಾರಾವಧಿಯಲ್ಲಿ ಮಾಡಿದಂತೆ ಈ ಬಾರಿಯೂ ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದಿದ್ದಾರೆ. ಎಂಐಎಂ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ಇದು ಪಶ್ಚಿಮ ಬಂಗಾಳದಲ್ಲಿ …

Read More »