Breaking News

ಪೇಟ ತೊಟ್ಟು ಕತ್ತೆ ಮೇಲೆ ಬಂದ ವಾಟಾಳ್

ಬೆಂಗಳೂರು: ರೈತ ವಿರೋಧಿ ಮಸೂದೆಗಳ ವಿರುದ್ಧ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತ ಮೆಜೆಸ್ಟಿಕ್‍ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದ ಪ್ರತಿಭಟನೆ ಮಾಡಲಾಗಿದೆ. ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದಾರೆ. ಮೆಜೆಸ್ಟಿಕ್ ಮುಂಭಾಗ ಪೇಟ ತೊಟ್ಟು ಕತ್ತೆಯ ಮೇಲೆ ಮೆರವಣಿಗೆ ಬರುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ. ಅಲ್ಲದೇ ವಾಟಾಳ್ ಮಂಗಳವಾದ್ಯಗಳ ದೊಡ್ಡ ತಂಡದೊಂದಿಗೆ ಆಗಮಿಸಿದ್ದರು. ಇವರ ಜೊತೆಗೆ ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ದರು. ಮಂಗಳವಾದ್ಯಗಳ ಮಧ್ಯೆ …

Read More »

ನಾಲ್ಕನೇ ಮದುವೆಗೆ ಅಡ್ಡಿಯಾಗುತ್ತಾನೆ ಎಂದು ಮಗನನ್ನೇ ಕೊಂದ ತಾಯಿ

ಪಾಟ್ನಾ: ಕೆಟ್ಟ ಮಕ್ಕಳು ಇರುತ್ತಾರೆ, ಆದರೆ ಕೆಟ್ಟ ಅಮ್ಮ ಇರುವುದಿಲ್ಲ ಎನ್ನುವುದು ತೀರಾ ಹಿಂದಿನಿಂದಲೂ ಚಾಲ್ತಿಯಲ್ಲಿ ಬಂದಿರುವ ನಾಣ್ಣುಡಿ, ಆದರೆ ಇತ್ತೀಚಿನ ದಿನಗಳಲ್ಲಿ ತನ್ನ ಕರುಳಕುಡಿಯನ್ನೇ ಸಾಯಿಸುವುದು, ಮಾರಾಟ ಮಾಡುವುದು ಇತ್ಯಾದಿ ಸುದ್ದಿಗಳು ವರದಿಯಾಗುತ್ತಲೇ ಇವೆ. ಅಂಥದ್ದೇ ಒಂದು ಭಯಾನಕ ಘಟನೆ ಪಾಟ್ನಾದ ಹಸನ್‍ಪುರ್ ಖಂಡಾ ಪ್ರದೇಶದಲ್ಲಿ ನಡೆದಿದೆ. 23 ವರ್ಷದ ಧರ್ಮಶೀಲಾ ದೇವಿ ಇದಾಗಲೇ ಮೂರು ಮದುವೆಯಾಗಿದ್ದಾಳೆ. ನಾಲ್ಕು ವರ್ಷದಲ್ಲಿ ಮೂರು ಮದುವೆಯಾಗಿ ನಾಲ್ಕನೇ ಮದುವೆಯಾಗಲು ಹೊರಟಿದ್ದಳು. ಆದರೆ ಆಕೆಯ …

Read More »

ದೆಹಲಿಯ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರು ಇಂಡಿಯಾ ಗೇಟ್​​ ಬಳಿ ನಡು ರಸ್ತೆಯಲ್ಲೇ ಟ್ರಾಕ್ಟರ್​ಗೆ ಬೆಂಕಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರು ಇಂಡಿಯಾ ಗೇಟ್​​ ಬಳಿ ನಡು ರಸ್ತೆಯಲ್ಲೇ ಟ್ರಾಕ್ಟರ್​ಗೆ ಬೆಂಕಿ ಹಚ್ಚಿದ್ದಾರೆ.ಈ ಬಗ್ಗೆ ದೆಹಲಿಯ ಡಿಸಿಪಿ ಮಾಹಿತಿ ನೀಡಿದ್ದು, ಸುಮಾರು 15 ರಿಂದ 20 ಜನ ಗುಂಪಾಗಿ ಬಂದು ಟ್ರಾಕ್ಟ್​​​ರ್​ಗೆ ಬೆಂಕಿಯಿಟ್ಟಿದ್ದಾರೆ. ಸದ್ಯ ಹೊತ್ತಿಯುರಿಯುತ್ತಿದ್ದ ಬೆಂಕಿಯನ್ನು ಆರಿಸಲಾಗಿದ್ದು, ನಡುರಸ್ತೆಯಿಂದ ಟ್ರ್ಯಾಕ್ಟರ್​ ತೆಗೆಯಲಾಗಿದೆ.ಈ ಬಗ್ಗೆ ದೆಹಲಿಯ ಡಿಸಿಪಿ ಮಾಹಿತಿ ನೀಡಿದ್ದು, ಸುಮಾರು 15 ರಿಂದ 20 ಜನ …

Read More »

ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಸಬ್​ಇನ್​ಸ್ಪೆಕ್ಟರ್ ಒಬ್ಬ ಆಕೆಯ ಮೇಲೆ ಗುಂಡುಹಾರಿಸಿ ಕಾರಿನಿಂದ ತಳ್ಳಿರುವ ಭಯಾನಕ ಘಟನೆ

ನವದೆಹಲಿ: ಮದುವೆಯಾದರೂ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಸಬ್​ಇನ್​ಸ್ಪೆಕ್ಟರ್ ಒಬ್ಬ ಆಕೆಯ ಮೇಲೆ ಗುಂಡುಹಾರಿಸಿ ಕಾರಿನಿಂದ ತಳ್ಳಿರುವ ಭಯಾನಕ ಘಟನೆ ದೆಹಲಿಯಲ್ಲಿ ನಡೆದಿದೆ. ಅದೇ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿರುವ ಇನ್ನೊಬ್ಬ ಪೊಲೀಸ್ ಅಧಿಕಾರಿ ಆ ಮಹಿಳೆಯ ಜೀವ ಉಳಿಸಿದ್ದಾರೆ. ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಮಹಿಳೆಯನ್ನು ಆ ಪೊಲೀಸ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಇಂಥ ಕುಕೃತ್ಯ ಎಸಗಿದ ಸಬ್​ಇನ್​ಸ್ಪೆಕ್ಟರ್ ಹೆಸರು ಸಂದೀಪ್ ದಹಿಯ. ನವದೆಹಲಿಯ ಅಲೀಪುರದ ನಿವಾಸಿಯಾಗಿರುವ ಈತ ವಿವಾಹಿತ. ಈತ ಹಾಗೂ …

Read More »

ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿ ಹತ್ಯೆ

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಮೂರು ವರ್ಷದ ಬಾಲಕಿಯನ್ನು ಪೂಜಾರಿ ಕೋಲಿನಿಂದ ಹೊಡೆದು ಸಾಯಿಸಿದ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ ಭಾನುವಾರ ನಡೆದಿದೆ. ಪ್ರವೀಣ್‌ ಹಾಗೂ ಶಾಮಲಾ ದಂಪತಿಯ ಪುತ್ರಿ ಪೂರ್ವಿಕಾ ಮೃತ ಬಾಲಕಿ. ಚೌಡಮ್ಮನ ದೇಗುಲದ ಪೂಜಾರಿ ರಾಕೇಶ್‌ (19) ಎಂಬಾತನನ್ನು ಚಿಕ್ಕಜಾಜೂರು ಪೊಲೀಸರು ಬಂಧಿಸಿದ್ದಾರೆ. ಮೌಢ್ಯ ನಿಷೇದ ಕಾಯ್ದೆ-2017ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ‘ಪೂರ್ವಿಕಾ ಮೂರು ದಿನಗಳಿಂದ ಸರಿಯಾಗಿ ಊಟ ಮಾಡುತ್ತಿರಲಿಲ್ಲ. ಬಾಲಕಿಗೆ ದೆವ್ವ ಹಿಡಿದಿದೆ ಎಂದಿದ್ದ …

Read More »

ಖಾಸಗಿ ಬಸ್ ಗಳ ಆರ್ಥಿಕ ಸಂಕಷ್ಟ

ಶಿವಮೊಗ್ಗ: ಲಾಕ್‌ಡೌನ್ ತೆರವು ಬಳಿಕ ಸರ್ಕಾರಿ ಕಚೇರಿ ಆರಂಭಗೊಂಡಿರುವುದರ ಜೊತೆಗೆ ಎಲ್ಲ ರೀತಿಯ ವ್ಯಾಪಾರ-ವಹಿವಾಟುಗಳು ನಡೆಯುತ್ತಿವೆ. ಮಾರುಕಟ್ಟೆ, ಮದುವೆ ಸಮಾರಂಭಗಳಲ್ಲೂ ಜನಸಂದಣಿ ಕಾಣುತ್ತಿದ್ದೇವೆ. ಆದರೆ, ಬಸ್‌ಗಳು ಮಾತ್ರ ‘ಪ್ರಯಾಣಿಕರ ಬರ’ ಎದುರಿಸುತ್ತಿವೆ. ಅದರಲ್ಲೂ ಖಾಸಗಿ ಬಸ್‌ಗಳತ್ತ ಜನ ಸುಳಿಯುತ್ತಿಲ್ಲ. ನಗರ ಪ್ರದೇಶಗಳನ್ನು ಹೊರತುಪಡಿಸಿದರೆ ಜಿಲ್ಲೆಯ ಬಹುತೇಕ ಗ್ರಾಮೀಣ ಜನರ ಸಂಚಾರಕ್ಕೆ ಖಾಸಗಿ ಬಸ್‌ಗಳೇ ಆಧಾರ. ಕೊರೊನಾ ಲಾಕ್‌ಡೌನ್‌ನಿಂದ ಸಂಚಾರ ಸ್ಥಗಿತಗೊಳಿಸಿದ್ದ ಖಾಸಗಿ ಬಸ್‌ ಉದ್ಯಮ ಇಂದಿಗೂ ಚೇತರಿಕೆ ಕಂಡಿಲ್ಲ. ನಷ್ಟದಲ್ಲೇ ತೆವಳುತ್ತಿದೆ. …

Read More »

ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಹೆಚ್.ಕೆ. ಪಾಟೀಲ್, ನಾನು ಕೊರೊನಾ ತಪಾಸಣೆಗೆ ಒಳಗಾಗಿದ್ದು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲ ತಾವು ಮನೆಯಲ್ಲೇ ಕ್ವಾರಂಟೈನ್ ಆಗುವುದಾಗಿ ತಿಳಿಸಿದ್ದಾರೆ.ರೋಗದ ಯಾವುದೇ …

Read More »

ಬೆಳಗಾವಿ : ಬಂದ್ ಗೆ ಹಲವು ಸಂಘಟನೆಗಳು ಬೆಂಬಲ

ಬೆಳಗಾವಿ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಹಾಗೂ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ’ ಎಂದು ಆರೋಪಿಸಿ ರೈತ, ದಲಿತ ಮತ್ತು ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಸೆ. 28ರ ರಾಜ್ಯ ಬಂದ್‌ಗೆ ಇಲ್ಲಿನ ಕನ್ನಡ, ದಲಿತ ಮತ್ತು ರೈತ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಪದಾಧಿಕಾರಿಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಭಾಗವಹಿಸುವುದಾಗಿ ತಿಳಿಸಿದರು. …

Read More »

ವಿರೋಧ ಪಕ್ಷಗಳ ಕುತಂತ್ರಕ್ಕೆ ಬಲಿಯಾಗಬಾರದು ರೈತ ಪರ ಯೋಜನೆಗಳ ಅನುಷ್ಠಾನಕ್ಕೆ ಸಹಕಾರ ನೀಡಬೇಕು: ಈರಣ್ಣ ಕಡಾಡಿ

ಬೆಳಗಾವಿ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ಕೃಷಿಗೆ ಸಂಬಂಧಿಸಿದ ನೀತಿಗಳು ಕೃಷಿಕರ ಪರವಾಗಿವೆ. ಆದರೆ, ವಿರೋಧ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ರೈತರನ್ನು ಎತ್ತಿ ಕಟ್ಟುತ್ತಿವೆ’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು. ಇಲ್ಲಿನ ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ವಿರೋಧ ಪಕ್ಷಗಳ ಕುತಂತ್ರಕ್ಕೆ ಬಲಿಯಾಗಬಾರದು. ರೈತ ಪರ …

Read More »

ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ

ಬೆಳಗಾವಿ: ರೈತಪರ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿರೋ ಹಿನ್ನೆಲೆಯಲ್ಲಿ ಕೆಲವೆಡೆ ಬಸ್, ಆಟೋ ಸಂಚಾರವಿಲ್ಲದೇ ಜನರು ಪರದಾಡುತ್ತಿದ್ದಾರೆ. ಅದರಂತೆ ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಗೊಂಡವಾಡ ಗ್ರಾಮದ ಶೋಭಾ(37) ಸಾರಿಗೆ ವ್ಯವಸ್ಥೆ ಇಲ್ಲದೇ ಪೇಚಿಗೆ ಸಿಲುಕಿದ್ದರು.

Read More »