Breaking News

ಅ.1ರಿಂದ ಚಿತ್ರಮಂದಿರ ತೆರೆಯುವ ಸಾಧ್ಯತೆ

ಬೆಂಗಳೂರು,- ಅಕ್ಟೋಬರ್ 1ರಿಂದ ಚಲನಚಿತ್ರ ಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ತಿಳಿಸಿದ್ದಾರೆ. ದಕ್ಷಿಣ ಮತ್ತು ಉತ್ತರ ಭಾರತದ ವಾಣಿಜ್ಯ ಮಂಡಳಿಗಳು ಕೇಂದ್ರ ಸರ್ಕಾರಕ್ಕೆ ಚಿತ್ರಮಂದಿರಗಳನ್ನು ತೆರೆಯುವ ಸಂಬಂಧ ಮನವಿ ಸಲ್ಲಿಸಿದ್ದು, ಇದಕ್ಕೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಚಿತ್ರೋದ್ಯಮದ ಯಾವುದೇ ಚಟುವಟಿಕೆಗಳು ನಡೆಯದೇ ಸಂಪೂರ್ಣ ಸ್ಥಗಿತವಾಗಿದೆ. …

Read More »

‘ಗ್ರಾಮಪಂಚಾಯ್ತಿ ಡಾಟಾ ಎಂಟ್ರಿ ಆಪರೇಟರ್’ಗಳೇ ಗಮನಿಸಿ : ರಾಜ್ಯ ಸರ್ಕಾರದಿಂದ 1 ಗಂಟೆ ಕೋವಿಡ್ ಕೆಲಸ ಮಾಡುವಂತೆ ಆದೇಶ

ಬೆಂಗಳೂರು : ರಾಜ್ಯದ ವಿವಿಧ ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ ಗಳನ್ನು, ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ದಿನ ಒಂದು ಗಂಟೆ ಕೆಲಸ ನಿರ್ವಹಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ರಾಜ್ಯದ …

Read More »

ಈ ವರ್ಷ ‘ಬೆಂಗಳೂರಿಗೆ ಪ್ರತ್ಯೇಕ ಕಾನೂನು’ ಜಾರಿ – ಡಿಸಿಎಂ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು : ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಮತ್ತಿತರೆ ಮೂಲಭೂತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕಾಯ್ದೆಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಸರಕಾರ ಹೆಜ್ಜೆಗಳನ್ನಿಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲರಿಗೂ ಗೊತ್ತಿರುವಂತೆ ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರ. ಇದು ಇತರೆ ನಗರಗಳಂತೆ ಅಲ್ಲ. ದಿನೇದಿನೆ ರಾಜ್ಯದ ಮೂಲೆಮೂಲೆಗಳಿಂದ, ಇತರೆ ರಾಜ್ಯಗಳಿಂದ …

Read More »

500 ಕನ್ನಡ ಪುಸ್ತಕ ಸಗಟು ಖರೀದಿಗೆ ಕ್ರಮ – ಸಚಿವ ಎಸ್ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯ ಗ್ರಂಥಾಲಯ ಇಲಾಖೆಯಿಂದ ವಾರ್ಷಿಕ ಸಗಟು ಖರೀದಿ ಯೋಜನೆಯಡಿ ಇನ್ನು ಮುಂದೆ ಕನ್ನಡ ಪುಸ್ತಕಗಳ 500 ಪ್ರತಿಗಳನ್ನು ಖರೀದಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬುಧವಾರ ರಾಜ್ಯ ಸಾರ್ವಜನಿಕ ಗ್ರಂಥಾಲಯ ನಿರ್ದೇಶನಾಲಯದಲ್ಲಿ ನೂತನ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರಹಗಾರರ ಮತ್ತು ಪ್ರಕಾಶಕರ ಸಂಘದ ಕೋರಿಕೆಯಂತೆ ಬಹುದಿನಗಳ ನಿರೀಕ್ಷೆಯಾಗಿದ್ದ …

Read More »

ಎಬಿವಿಪಿಯಿಂದ ಸಹಿ ಸಂಗ್ರಹ ಅಭಿಯಾನ ಆರಂಭ

ಬೆಳಗಾವಿ: ‘ಡ್ರಗ್ಸ್ ಜಾಲದಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸಿ, ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಹಾನಗರ ಘಟಕದ ಕಾರ್ಯಕರ್ತರು ಬುಧವಾರ ಸಹಿ ಸಂಗ್ರಹ ಅಭಿಯಾನ ಆರಂಭಿಸಿದರು. ಇಲ್ಲಿನ ಹುತಾತ್ಮ ಚೌಕದಲ್ಲಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು. ಎಬಿವಿಪಿ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ್ ಮಾತನಾಡಿ, ‘ಶಾಲಾ-ಕಾಲೇಜು ಅಂಗಳಕ್ಕೂ ಡ್ರಗ್ಸ್ ಜಾಲ ಕಾಲಿಟ್ಟಿದೆ. ಗುಣಾತ್ಮಕ ಶಿಕ್ಷಣ ಪಡೆದು ಭವಿಷ್ಯ ಕಟ್ಟಿಕೊಳ್ಳಬೇಕಿದ್ದ …

Read More »

ಬಿಟ್ಟು ಬ್ಯಾಸರಲೇ ಕೇಂದ್ರ ತಂಡದ ಅಧ್ಯಯನ : ವರದಿಯಿಂದ ರೈತರ ಕಣ್ಣೀರು ಒರಸತ್ತಾ ಮೂಲೆಗೆ ಸೇರುತ್ತಾ?

ಹುಬ್ಬಳ್ಳಿ; ಆಗಸ್ಟ್​ನಿಂದ ಈವರೆಗೆ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಉಂಟಾಗಿ ಹಾನಿಗೀಡಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ನಿನ್ನೆ ಭೇಟಿ ನೀಡಿ ಪರಿಶೀಲಿಸಿತು. ತಾಲೂಕಿನ 2 ಹಳ್ಳಿಗೆ ಭೇಟಿ ನೀಡಿದ ತಂಡದ ಅಧಿಕಾರಿಗಳು, ಹಾನಿ ಪಟ್ಟಿಯಲ್ಲಿದ್ದ ರೈತರ ಜಮೀನಿಗೆ ಭೇಟಿ ನೀಡದೆ ರೈತನೊಬ್ಬನನ್ನು ತಾವಿದ್ದಲ್ಲೇ ಕರೆಸಿಕೊಂಡರು. ಕಾಲು ದಾರಿಯಲ್ಲಿ ನೀರಿದೆ ಎಂದು ರೈತ ಮಹಿಳೆಯನ್ನು ತಮ್ಮ ಹತ್ತಿರ ಕರೆಸಿಕೊಂಡಿದ್ದು ಕಾಟಾಚಾರದ ಅಧ್ಯಯನಕ್ಕೆ ಹಿಡಿದ …

Read More »

ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರ ಮಣಿಕರ್ಣಿಕಾ ಕಚೇರಿಯ ಡೆಮಾಲಿಷನ್ ಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.

ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರ ಮಣಿಕರ್ಣಿಕಾ ಕಚೇರಿಯ ಡೆಮಾಲಿಷನ್ ಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಕಂಗನಾ ರಾಣಾವತ್ ಅವರು, ಅನಧಿಕೃತವಾಗಿ ಕಚೇರಿ ನಿರ್ಮಿಸಿದ್ದಾರೆ ಎಂದು ಬೃಹತ್ ಮುಂಬೈ ಕಾರ್ಪೊರೇಷನ್ ನೋಟಿಸ್ ನೀಡಿತ್ತು. ಆ ಬೆನ್ನಲ್ಲೇ ಇಂದು ಕಚೇರಿ  ನೆಲಸಮಗೊಳಿಸಲು ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಸದ್ಯ ಈ ಕಾರ್ಯಕ್ಕೆ ನ್ಯಾಯಾಲಯ ತಡೆ ನೀಡಿದ್ದು, ಕಂಗನಾ ಸಲ್ಲಿಸಿರುವ ಅರ್ಜಿಗೆ ಉತ್ತರಿಸುವಂತೆ ಬಿಎಂಸಿಗೆ ಹೇಳಿದೆ. ಈ ಜಾಗದಲ್ಲಿ ಅನಧಿಕೃತವಾಗಿ ಕಚೇರಿ ನಿರ್ಮಿಸಲಾಗಿದೆ ಎಂದು …

Read More »

ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ಗೋಕಾಕ್ : ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮಹತ್ವದ ಯೋಜನೆ ರೂಪಿಸಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ‘ಆರೋಗ್ಯ ಹಸ್ತ’ಕ್ಕೆ ಚಾಲನೆ ನೀಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ‘ಜನರ ಆರೋಗ್ಯ ಹಾಗೂ ದೂರದೃಷ್ಟಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಹೊಸ ಯೋಜನೆ ರೂಪಿಸಿದೆ. ಪ್ರತಿಯೊಬ್ಬರಿಗೆ ಕೋವಿಡ್ ಬಗ್ಗೆ ಇರುವ ಭಯವನ್ನು ದೂರ ಮಾಡುವುದರ ಜತೆಗೆ ಜಾಗೃತಿ …

Read More »

ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ

ಚಿಕ್ಕೋಡಿ ಉಪವಿಭಾಗವೂ ಸೇರಿ ಹಲವೆಡೆ ಬೈಕ್ ಕಳ್ಳತನ ಮಾಡಿದ ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 5 ಬೈಕ್ ವಶಪಡಿಸಿಕೊಂಡಿದ್ದಾರೆ. ಚಿಕ್ಕೋಡಿ, ಮಹಾಲಿಂಗಪುರ, ಉಳ್ಳಾಗಡ್ಡಿ ಖಾನಾಪುರ, ಅಂಕಲಗಿ, ಹುಕ್ಕೇರಿ ಕಡೆ ಬೈಕ್ ಕಳ್ಳತನ ಮಾಡಿದ ಆರೋಪದ ಮೇಲೆ ಚಿಕ್ಕೋಡಿ ತಾಲೂಕು ಜಾಗನೂರು ಗ್ರಾಮದ ರವಿ ಮಾರುತಿ ಗಣಾಚಾರ ಎಂಬ ಯುವಕನನ್ನು ಚಿಕ್ಕೋಡಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತನಿಂದ 1.15 ಲಕ್ಷ ರೂ ಮೌಲ್ಯದ 5 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಪಿಎಸ್‍ಐ …

Read More »

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ಧಾರೂಢರ ಹೆಸರು ನಾಮಕರಣ

ಹುಬ್ಬಳ್ಳಿ: ನಗರದ ರೈಲು ನಿಲ್ದಾಣಕ್ಕೆ ಈ ಭಾಗದ ಜನರ ಆರಾಧ್ಯ ದೈವ ಸಿದ್ಧಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಬೇಕು ಎನ್ನುವ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಈ ಕುರಿತು ಟ್ವಿಟ್ ಮಾಡಿದ್ದು, ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ‌ ಎಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಗೃಹ ಸಚಿವ ಅಮಿತ್ ಶಾ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ …

Read More »