Breaking News

ಸುವರ್ಣಸೌಧ ಮುಂದೆ ರಾಯಣ್ಣ, ಚೆನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ಆಗ್ರಹಿಸಿ ಸಂಕಲ್ಪ ಯಾತ್ರೆ

ಬೆಳಗಾವಿ : ಸುವರ್ಣ ಸೌಧದ ಮುಂದೆ ರಾಯಣ್ಣ ಪ್ರತಿಷ್ಠಾಪನೆ ವಿಚಾರವಾಗಿ ಬೆಳಗಾವಿಯಲ್ಲಿ ಮೂಡಲಗಿಯ ಶ್ರೀಮಂತ ಶಿವಯೋಗಿ ನೇತೃತ್ವದಲ್ಲಿ ಗೋಕಾಕ್​ ತಾಲೂಕು ಮೂಡಲಗಿಯಿಂದ ನಂದಗಡದ ರಾಯಣ್ಣ ಸಮಾಧಿವರೆಗೆ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ಸುವರ್ಣಸೌಧದ ಮುಂಭಾಗ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡುವಂತೆ ಸಂಕಲ್ಪ ಯಾತ್ರೆಯಲ್ಲಿ ಯಾತ್ರಾರ್ಥಿಗಳು ಆಗ್ರಹ ಮಾಡಿದ್ದಾರೆ. ಯಾತ್ರೆಯ ವೇಳೆ ಬೆಳಗಾವಿಯ ಚೆನ್ನಮ್ಮ ಪುತ್ಥಳಿ ಹಾಗೂ ಪೀರನವಾಡಿಯ ಸಂಗೊಳ್ಳಿರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.

Read More »

ಮರು ಮೌಲ್ಯಮಾಪನ ಮಾಡ್ಸಿ ರಾಜ್ಯಕ್ಕೆ ಸೆಕೆಂಡ್ ಬಂದ SSLC ವಿದ್ಯಾರ್ಥಿನಿ: ಇದು ಕಾನ್ಫಿಡೆಂಟ್ ಅಂದ್ರೆ

ಶಿವಮೊಗ್ಗ(ಸೆ: ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನದಲ್ಲಿ ಬಂದ ಅಂಕಗಳಿಂದ ಶಿವಮೊಗ್ಗದ ವಿದ್ಯಾರ್ಥಿನಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಶಿವಮೊಗ್ಗ ನಗರದ ಕಲ್ಲಹಳ್ಳಿ ಬಡಾವಣೆಯ ಪ್ರಿಯದರ್ಶಿನಿ ಶಾಲೆಯ ಕಾವ್ಯ ಆರ್. ಮರು ಮೌಲ್ಯಮಾಪನದಿಂದ ರಾಜ್ಯಕ್ಕೆ ಸೆಕೆಂಡ್ ಬಂದ ವಿದ್ಯಾರ್ಥಿನಿ. ಇತ್ತೀಚೆಗೆ ಪ್ರಕಟಗೊಂಡಿದ್ದ ಎಸ್​​ಎಸ್‌ಎಲ್​​ಸಿ ಫಲಿತಾಂಶದಲ್ಲಿ ಈಕೆಗೆ 625ಕ್ಕೆ 620 ಅಂಕಗಳು ಬಂದಿದ್ದವು. ಇಷ್ಟು ಬಂದಿದ್ದರೂ ಕಾವ್ಯಗೆ ಸಮಾಧಾನ ಆಗಿರಲಿಲ್ಲ. ಇನ್ನೂ ಅಂಕಗಳು ಬರಬೇಕೆಂಬ ಲೆಕ್ಕಾಚಾರ ಹಾಕಿ ಕೊನೆಗೆ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದಳು. …

Read More »

ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಸ್ಫೂರ್ತಿಯಾಗಿವೆ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

ಮಂಗಳೂರು: ಸಮಾಜದಲ್ಲಿರುವ ಅಸಮಾನತೆಯ ವಿರುದ್ಧ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಸ್ಫೂರ್ತಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಅಂದು ಸಮಾಜದಲ್ಲಿ ಬೇರೂರಿದ ಜಾತಿಬೇಧ ಎನ್ನುವ ಕೆಟ್ಟ ವ್ಯವಸ್ಥೆ, ಅಸಮತೋಲನ, ಶೋಷಣೆಯ ವಿರುದ್ಧ ಧ್ವನಿ ಎತ್ತಿ ಸಾಮಾಜಿಕ ಸಮಾನತೆಯನ್ನು ಮೂಡಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ, ಚಿಂತನೆಗಳು ಇಂದಿಗೂ …

Read More »

ಮಾಜಿ ಶಾಸಕರ ಪುತ್ರ ಕೊರೋನಾ ಸೋಂಕಿಗೆ ಬಲಿ

ಬೀದರ್ : ಔರಾದ ತಾಲೂಕಿನ ಸಂತಪೂರ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಮಾಜಿ ಶಾಸಕ ಗುಂಡಪ್ಪ ವಕೀಲ ಅವರ ಪುತ್ರ ಅನೀಲ್ ಗುಂಡಪ್ಪ ಬಿರಾದಾರ (47) ಹೆಮ್ಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಹೈದ್ರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನೀಲ್ ಇಂದು (ಭಾನುವಾರ) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೋವಿಡ್ ಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ ಬೀದರಿನಲ್ಲಿ ಆರಂಭಿಕ ಚಿಕಿತ್ಸೆ ಪಡೆದು, ನಂತರ ಕಳೆದ 10 ದಿನಗಳಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ …

Read More »

ವಾಯು ಮಾಲಿನ್ಯದಿಂದ ಕೊರೋನ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಳ; ಸಮೀಕ್ಷೆ ವರದಿ

ಬೆಂಗಳೂರು,  : ರಾಜಧಾನಿಯಲ್ಲಿ ಕೊರೋನ ಸೋಂಕಿನಿಂದ ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚಳಕ್ಕೆ ವಾಯುಮಾಲಿನ್ಯವು ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುವುದೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಫಿಟ್ ಇಂಡಿಯಾದ 2020ರ ಸಮೀಕ್ಷೆ ಪ್ರಕಾರ ಶೇ.20.8 ಜನರು ತಮ್ಮಲ್ಲಿನ ಕಡಿಮೆ ರೋಗ ನಿರೋಧಕ ಶಕ್ತಿಯ ಕಾರಣಕ್ಕಾಗಿ ರಾಜಧಾನಿಯಲ್ಲಿ ಶೇ.22ರಷ್ಟ್ಟು ಜನರು ವರ್ಷವೊಂದಕ್ಕೆ 3 ಬಾರಿಯಂತೆ ವಿವಿಧ ರೋಗಗಳಿಗೆ ಒಳಗಾಗುತ್ತಿದ್ದಾರೆ. ನಗರವಾರು ಹೋಲಿಸಿದಾಗ ಹೆಚ್ಚು ವಾಯುಮಾಲಿನ್ಯಕ್ಕೆ ಒಳಗಾದ ನಗರಗಳ ಜನರು ಅತ್ಯಂತ ಕಡಿಮೆ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದು …

Read More »

ಐಪಿಎಲ್ 2020 ಶೆಡ್ಯೂಲ್ ಬಿಡುಗಡೆಯಾಗಿದೆ, ವೇಳಾಪಟ್ಟಿಯನ್ನು ಇಲ್ಲಿ ಡೌನ್‌ಲೋಡ್ ಮಾಡಿ

ಐಪಿಎಲ್ 2020: ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳ ಬಹುನಿರೀಕ್ಷೆಯ ನಂತರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2020) ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ಹಲವಾರು ದಿನಗಳಿಂದ ಫ್ರ್ಯಾಂಚೈಸ್ ತಂಡಗಳು ಒತ್ತಡಕ್ಕೆ ಒಳಗಾಗಿದ್ದರಿಂದ, ಕ್ರಿಕೆಟ್ ಅಭಿಮಾನಿಗಳು ಹೆಚ್ಚು ಕಾಯಬೇಕಾಯಿತು, ಮಾಧ್ಯಮಗಳು ಸಹ ಪಂದ್ಯಾವಳಿಯ ಶೆಡ್ಯೂಲ್ ಬಗ್ಗೆ ಪ್ರಶ್ನೆಗಳನ್ನು ಕೇಳಲು ಪ್ರಾರಂಭಿಸಿದವು. ಸದ್ಯ ಕೊನೆಗೂ ಐಪಿಎಲ್ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಮೊದಲ ಪಂದ್ಯ ಸೆಪ್ಟೆಂಬರ್ …

Read More »

ಸೆಪ್ಟೆಂಬರ್ 21 ರಂದು ಆರ್‌ಸಿಬಿ ಮೊದಲ ಪಂದ್ಯ, ಎದುರಾಳಿ ಯಾರು ಗೊತ್ತಾ..?

ಬೆಂಗಳೂರು: ಅಂತು ಇಂತು 13ನೇ ಐಪಿಎಲ್ ವೇಳಾಪಟ್ಟಿ ಪ್ರಕಟಗೊಂಡಿದೆ. ಕಳೆದ ಒಂದು ವಾರಗಳ ಊಹಾಪೋಹಗಳಿಗೆ ಬಿಸಿಸಿಐ ತೆರೆ ಎಳೆದಿದೆ. ಲೀಗ್ ಹಂತದ 56 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪ್ಲೇ-ಆಫ್ ಹಂತದ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಸೆಪ್ಟೆಂಬರ್ 21 ರಂದು ಮಾಜಿ ಚಾಂಪಿಯನ್ ಸನ್‌ರೈಸರ್ಸ್‌ ಹೈದರಾಬಾದ್ ತಂಡವನ್ನು ದುಬೈನಲ್ಲಿ ಎದುರಿಸಲಿದೆ. ಆರ್‌ಸಿಬಿ ತಂಡ 3 ಪಂದ್ಯಗಳನ್ನು ಮಧ್ಯಾಹ್ನದ ವೇಳೆ ಆಡಲಿದೆ. ಭಾರತದಲ್ಲಿ ನಡೆಯುವಂತೆ ಯುಎಇಯಲ್ಲೂ ತವರು ಹಾಗೂ …

Read More »

ಕರಾವಳಿ ಭಾಗದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಹಳದಿ ಆಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲೂ ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಾಗಿ ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಬೆಳಗಾವಿ, ಧಾರಾವಾಡ, ಗದಗ ಪ್ರದೇಶಗಳಲ್ಲಿ ಇಂದು ಮತ್ತು …

Read More »

ರಾಜ್ಯದಲ್ಲಿ ಇಂದು ಕೊರೋನಾಗೆ 95 ಬಲಿ, ಬೆಂಗಳೂರಿನಲ್ಲಿ 2,824 ಸೇರಿ 9,319 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 9,319 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,98,551ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇಂದು 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,393ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 38 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 95 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ …

Read More »

ಮೀನುಗಾರರ ಬಲೆಗೆ ಸಿಕ್ಕಿ ಬಿದ್ದ ಮೊಸಳೆ ಮರಿ; ಅರಣ್ಯಾಧಿಕಾರಿಗಳಿಗೆ ಹಸ್ತಾಂತರ

ಚಿಕ್ಕೋಡಿ: ಮೀನುಗಾರರರು ಹಾಕಿದ್ದ ಬಲೆಗೆ ಸಿಕ್ಕಿದ್ದ ಮೋಸಳೆಮರಿಯನ್ನು ರಕ್ಷಿಸಿದ ಮೀನುಗಾರರು ಅದನ್ನು ಇಲಾಖಾ ಅಧಿಕಾರಿಗಳಿಗೆ ಹಸ್ತಾಂತರ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದಿದೆ. ಮೀನು ಹಿಡಿಯುವ ಸಲುವಾಗಿ ಮೀನುಗಾರರು ನಿನ್ನೆ ಸಂಜೆ ದೂಧಗಂಗಾ ನದಿಗೆ ಬಲೆ ಹಾಕಿಬಂದಿದ್ದರು. ಇಂದು ಬೆಳಗ್ಗೆ ಹೋಗಿ ನೋಡಿದರೆ ಬಲೆಯಲ್ಲಿ ಮೊಸಳೆ ಸಿಕ್ಕಿಹಾಕಿಕೊಂಡಿದೆ. ಇದನ್ನು ಕಂಡ ಮೀನುಗಾರರಿಗೆ ಅಚ್ಚರಿ, ಭಯ ಎರಡೂ ಆಗಿದೆ, ಅದ್ಯ ಆ ಮೊಸಳೆ ಮರಿಯನ್ನು ಅರಣ್ಯ …

Read More »