Breaking News

ವಾಯು ಮಾಲಿನ್ಯದಿಂದ ಕೊರೋನ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಳ; ಸಮೀಕ್ಷೆ ವರದಿ

ಬೆಂಗಳೂರು,  : ರಾಜಧಾನಿಯಲ್ಲಿ ಕೊರೋನ ಸೋಂಕಿನಿಂದ ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚಳಕ್ಕೆ ವಾಯುಮಾಲಿನ್ಯವು ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುವುದೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಫಿಟ್ ಇಂಡಿಯಾದ 2020ರ ಸಮೀಕ್ಷೆ ಪ್ರಕಾರ ಶೇ.20.8 ಜನರು ತಮ್ಮಲ್ಲಿನ ಕಡಿಮೆ ರೋಗ ನಿರೋಧಕ ಶಕ್ತಿಯ ಕಾರಣಕ್ಕಾಗಿ ರಾಜಧಾನಿಯಲ್ಲಿ ಶೇ.22ರಷ್ಟ್ಟು ಜನರು ವರ್ಷವೊಂದಕ್ಕೆ 3 ಬಾರಿಯಂತೆ ವಿವಿಧ ರೋಗಗಳಿಗೆ ಒಳಗಾಗುತ್ತಿದ್ದಾರೆ. ನಗರವಾರು ಹೋಲಿಸಿದಾಗ ಹೆಚ್ಚು ವಾಯುಮಾಲಿನ್ಯಕ್ಕೆ ಒಳಗಾದ ನಗರಗಳ ಜನರು ಅತ್ಯಂತ ಕಡಿಮೆ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದು …

Read More »

ಐಪಿಎಲ್ 2020 ಶೆಡ್ಯೂಲ್ ಬಿಡುಗಡೆಯಾಗಿದೆ, ವೇಳಾಪಟ್ಟಿಯನ್ನು ಇಲ್ಲಿ ಡೌನ್‌ಲೋಡ್ ಮಾಡಿ

ಐಪಿಎಲ್ 2020: ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳ ಬಹುನಿರೀಕ್ಷೆಯ ನಂತರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2020) ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ಹಲವಾರು ದಿನಗಳಿಂದ ಫ್ರ್ಯಾಂಚೈಸ್ ತಂಡಗಳು ಒತ್ತಡಕ್ಕೆ ಒಳಗಾಗಿದ್ದರಿಂದ, ಕ್ರಿಕೆಟ್ ಅಭಿಮಾನಿಗಳು ಹೆಚ್ಚು ಕಾಯಬೇಕಾಯಿತು, ಮಾಧ್ಯಮಗಳು ಸಹ ಪಂದ್ಯಾವಳಿಯ ಶೆಡ್ಯೂಲ್ ಬಗ್ಗೆ ಪ್ರಶ್ನೆಗಳನ್ನು ಕೇಳಲು ಪ್ರಾರಂಭಿಸಿದವು. ಸದ್ಯ ಕೊನೆಗೂ ಐಪಿಎಲ್ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಮೊದಲ ಪಂದ್ಯ ಸೆಪ್ಟೆಂಬರ್ …

Read More »

ಸೆಪ್ಟೆಂಬರ್ 21 ರಂದು ಆರ್‌ಸಿಬಿ ಮೊದಲ ಪಂದ್ಯ, ಎದುರಾಳಿ ಯಾರು ಗೊತ್ತಾ..?

ಬೆಂಗಳೂರು: ಅಂತು ಇಂತು 13ನೇ ಐಪಿಎಲ್ ವೇಳಾಪಟ್ಟಿ ಪ್ರಕಟಗೊಂಡಿದೆ. ಕಳೆದ ಒಂದು ವಾರಗಳ ಊಹಾಪೋಹಗಳಿಗೆ ಬಿಸಿಸಿಐ ತೆರೆ ಎಳೆದಿದೆ. ಲೀಗ್ ಹಂತದ 56 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪ್ಲೇ-ಆಫ್ ಹಂತದ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಸೆಪ್ಟೆಂಬರ್ 21 ರಂದು ಮಾಜಿ ಚಾಂಪಿಯನ್ ಸನ್‌ರೈಸರ್ಸ್‌ ಹೈದರಾಬಾದ್ ತಂಡವನ್ನು ದುಬೈನಲ್ಲಿ ಎದುರಿಸಲಿದೆ. ಆರ್‌ಸಿಬಿ ತಂಡ 3 ಪಂದ್ಯಗಳನ್ನು ಮಧ್ಯಾಹ್ನದ ವೇಳೆ ಆಡಲಿದೆ. ಭಾರತದಲ್ಲಿ ನಡೆಯುವಂತೆ ಯುಎಇಯಲ್ಲೂ ತವರು ಹಾಗೂ …

Read More »

ಕರಾವಳಿ ಭಾಗದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಹಳದಿ ಆಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲೂ ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಾಗಿ ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಬೆಳಗಾವಿ, ಧಾರಾವಾಡ, ಗದಗ ಪ್ರದೇಶಗಳಲ್ಲಿ ಇಂದು ಮತ್ತು …

Read More »

ರಾಜ್ಯದಲ್ಲಿ ಇಂದು ಕೊರೋನಾಗೆ 95 ಬಲಿ, ಬೆಂಗಳೂರಿನಲ್ಲಿ 2,824 ಸೇರಿ 9,319 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 9,319 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,98,551ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇಂದು 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,393ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 38 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 95 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ …

Read More »

ಮೀನುಗಾರರ ಬಲೆಗೆ ಸಿಕ್ಕಿ ಬಿದ್ದ ಮೊಸಳೆ ಮರಿ; ಅರಣ್ಯಾಧಿಕಾರಿಗಳಿಗೆ ಹಸ್ತಾಂತರ

ಚಿಕ್ಕೋಡಿ: ಮೀನುಗಾರರರು ಹಾಕಿದ್ದ ಬಲೆಗೆ ಸಿಕ್ಕಿದ್ದ ಮೋಸಳೆಮರಿಯನ್ನು ರಕ್ಷಿಸಿದ ಮೀನುಗಾರರು ಅದನ್ನು ಇಲಾಖಾ ಅಧಿಕಾರಿಗಳಿಗೆ ಹಸ್ತಾಂತರ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದಿದೆ. ಮೀನು ಹಿಡಿಯುವ ಸಲುವಾಗಿ ಮೀನುಗಾರರು ನಿನ್ನೆ ಸಂಜೆ ದೂಧಗಂಗಾ ನದಿಗೆ ಬಲೆ ಹಾಕಿಬಂದಿದ್ದರು. ಇಂದು ಬೆಳಗ್ಗೆ ಹೋಗಿ ನೋಡಿದರೆ ಬಲೆಯಲ್ಲಿ ಮೊಸಳೆ ಸಿಕ್ಕಿಹಾಕಿಕೊಂಡಿದೆ. ಇದನ್ನು ಕಂಡ ಮೀನುಗಾರರಿಗೆ ಅಚ್ಚರಿ, ಭಯ ಎರಡೂ ಆಗಿದೆ, ಅದ್ಯ ಆ ಮೊಸಳೆ ಮರಿಯನ್ನು ಅರಣ್ಯ …

Read More »

ವಿವಿಗಳ ಘಟಕ ಕಾಲೇಜುಗಳಾಗಿ 3 ಕಾಲೇಜು ಅಭಿವೃದ್ಧಿ:ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು : ವಿದ್ಯಾರ್ಥಿಗಳ ಹಾಜರಾತಿಯ ಕೊರತೆ ಎದುರಿಸುತ್ತಿರುವ ಮೂರು ಪ್ರಥಮ ದರ್ಜೆ ಕಾಲೇಜುಗಳ ಕಟ್ಟಡಗಳನ್ನು ಹತ್ತಿರದ ವಿಶ್ವವಿದ್ಯಾಲಯಗಳಿಗೆ ಹಸ್ತಾಂತರಿಸಿದ್ದು, ಅಲ್ಲಿ ವಿಶ್ವವಿದ್ಯಾಲಯಗಳೇ ಕಾಲೇಜುಗಳನ್ನು ತೆರೆಯಲಿವೆ ಎಂದು ಡಿಸಿಎಂ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ತಿಳಿಸಿದರು. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಮೈಸೂರು ವಿಶ್ವವಿದ್ಯಾಲಯಕ್ಕೆ ಹಾಗೂ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜನ್ನು ದಾವಣಗೆರೆ …

Read More »

ವಚನ ಪುಸ್ತಕ ಮಳಿಗೆ ಉದ್ಘಾಟನೆ

ಬೆಳಗಾವಿ: ಇಲ್ಲಿನ ಶಿವಬಸವ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಕಾಲೇಜಿನ ಗೇಟ್‌ ನಂ.3ರ ಬಳಿಯ ವಚನ ಅಧ್ಯಯನ ಕೇಂದ್ರದಲ್ಲಿ ಆರಂಭಿಸಿರುವ ಪುಸ್ತಕ ಮಾರಾಟ ಮಳಿಗೆಯನ್ನು ಭಾನುವಾರ ಉದ್ಘಾಟಿಸಲಾಯಿತು. ಡಂಬಳ-ಗದಗ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಟೇಪ್‌ ಕತ್ತರಿಸಿದರು. ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಸ್‌ಜಿಬಿಐಟಿ ಪ್ರಾಂಶುಪಾಲ ಪ್ರೊ.ಸಿದ್ರಾಮಪ್ಪ ವಿ.ಇಟ್ಟಿ ಇದ್ದರು. ‘ಮಳಿಗೆಯಲ್ಲಿ ವಚನ ಸಾಹಿತ್ಯ, ಧರ್ಮ, ತತ್ತ್ವಶಾಸ್ತ್ರ, ಅಧ್ಯಾತ್ಮ ಮೊದಲಾದ ವಿಷಯಗಳಿಗೆ ಸಂಬಂಧಿಸಿದ ಮೌಲಿಕ ಗ್ರಂಥಗಳು, ಪೂಜಾ …

Read More »

ಈ ಗ್ರಾಮಸ್ಥರಿಗೆ ಪ್ರತಿದಿನ ಶಿಕ್ಷಕರ ದಿನ:ಬೆಳಗಾವಿ ಜಿಲ್ಲೆಯ ಇಂಚಲ್ ಗ್ರಾಮದಲ್ಲಿ ಬಹುತೇಕರು ಶಿಕ್ಷಕರು!

ಬೆಳಗಾವಿ:ಈ ಗ್ರಾಮ ಪ್ರತಿದಿನ ಶಿಕ್ಷಕರ ದಿನವನ್ನು ಆಚರಿಸುತ್ತದೆ. ಇದು ಬೆಳಗಾವಿ ಜಿಲ್ಲೆಯ ಇಂಚಲ್ ಗ್ರಾಮ, ಶಿಕ್ಷಕರ ಗ್ರಾಮವೆಂದೇ ಕರೆಯಬಹುದು. ಈ ಗ್ರಾಮದ ಪ್ರತಿಯೊಂದು ಮನೆಯಲ್ಲಿಯೂ ಕನಿಷ್ಠ ಒಬ್ಬರು ಶಿಕ್ಷಕರಿದ್ದಾರೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ ತಾಲ್ಲೂಕಿನ ಇಂಚಲ್ ಗ್ರಾಮದಲ್ಲಿ ಸುಮಾರು 10 ಸಾವಿರ ಮಂದಿ ಇದ್ದಾರೆ, ಅವರಲ್ಲಿ ಸುಮಾರು 900 ಮಂದಿ ಶಿಕ್ಷಕರೇ. ಸರ್ಕಾರ ಮತ್ತು ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಾರೆ. ನೂರಾರು …

Read More »

ಕಿಶೋರಿಯರನ್ನು ಅಪೌಷ್ಟಿಕತೆಯಿಂದ ಹೊರತರಬೇಕು: ವೈದ್ಯಾಧಿಕಾರಿ ಡಾ.ಕೀರ್ತಿ

ಬೆಳಗಾವಿ: ‘ಕಿಶೋರಿಯರಲ್ಲಿ ಹೆಚ್ಚಿನವರು ಕುಪೋಷಣೆಗೆ ಒಳಗಾಗಿದ್ದಾರೆ. ಆಟ-ಪಾಠದೊಂದಿಗೆ ಬೆಳೆಯಬೇಕಾದ ಮಕ್ಕಳು ಹಾಸಿಗೆ ಹಿಡಿಯುತ್ತಿದ್ದಾರೆ ಎಂದರೆ ಅದಕ್ಕೆ ಅವರಲ್ಲಿರುವ ಅಪೌಷ್ಟಿಕತೆಯೇ ಕಾರಣ’ ಎಂದು ವೈದ್ಯಾಧಿಕಾರಿ ಡಾ.ಕೀರ್ತಿ ಹೇಳಿದರು. ಇಲ್ಲಿನ ಮಹಿಳಾ ಕಲ್ಯಾಣ ಸಂಸ್ಥೆಯು ಹುಕ್ಕೇರಿ ತಾಲ್ಲೂಕಿನ ಯರಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಯರನಾಳ, ಹೊಸೂರ, ನಿರ್ವಾಣಹಟ್ಟಿ, ಬಡಕುಂದ್ರಿ ಗ್ರಾಮದ ಕಿಶೋರಿಯರಿಗಾಗಿ ಆಯೋಜಿಸಿದ್ದ ‘ಪೌಷ್ಟಿಕಾಂಶ ಅಭಿಯಾನ’ದ ಅಂಗವಾಗಿ ನಡೆದ ಆರೋಗ್ಯ ತಪಾಸಣೆ ಮತ್ತು ಪೌಷ್ಟಿಕ ಆಹಾರ ತಯಾರಿಕೆ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಯಾಗಿ ಅವರು …

Read More »