Breaking News

  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್: ರಮೇಶ ಜಾರಕಿಹೊಳಿ

ಬೆಳಗಾವಿ:  ಕೊಲೆ, ದರೋಡೆಗೆ ಇಳಿದಿದ್ದ ಗೋಕಾಕ ನಗರದ ಟೈಗರ್  ಗ್ಯಾಂಗ್ ಪೊಲೀಸರು ಬಂಧಿಸಿದ್ದು, ಈ ವಿಚಾರವಾಗಿ  ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.  ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದಲ್ಲಿ ಅಕ್ರಮ ಚಟುವಟಿಕೆಯಲ್ಲಿ  ತೊಡಗಿದ್ದ ಗ್ಯಾಂಗ್ ನ್ನು ಪೊಲೀಸರು ಮಟ್ಟಹಾಕಿದ್ದಾರೆ.  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್ ಅಂತಾ ಸಚಿವ ರಮೇಶ ಜಾರಕಿಹೊಳಿ  ಲೇವಡಿ ಮಾಡಿದ್ದಾರೆ. ಡ್ರಗ್ಸ್ ವಿಚಾರವಾಗಿ ಪ್ರತಿಕ್ರಿಯಿಸಿ,   ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದವರ ಮೇಲೆ ಮುಲಾಜಿಲ್ಲದೇ   …

Read More »

ಐಪಿಎಲ್ ವೇಳಾಪಟ್ಟಿ ಶನಿವಾರ ಪ್ರಕಟ: ಮೊದಲ ಪಂದ್ಯ ಯಾರ ನಡುವೆ ಗೊತ್ತಾ?

ದುಬೈ: ಐಪಿಎಲ್ 13 ರ ವೇಳಾಪಟ್ಟಿ ಶನಿವಾರ ಪ್ರಕಟಗೊಳ್ಳುವ ಸಾಧ‍್ಯತೆಯಿದ್ದು, ಈ ಹಿಂದೆ ನಿಗದಿಯಾದಂತೆ ಮೊದಲ ಪಂದ್ಯ ಚೆನ್ನೈ ಮತ್ತು ಮುಂಬೈ ನಡುವೆಯೇ ನಡೆಯುವ ಸಾಧ‍್ಯತೆಯಿದೆ. ಚೆನ್ನೈ ತಂಡದಲ್ಲಿ ಕೊರೋನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜತೆ ಸಿಎಸ್ ಕೆ ಆಡುವುದು ಅನುಮಾನ ಎಂಬ ಸುದ್ದಿ ಹಬ್ಬಿತ್ತು. ಆದರೆ ಮೂಲಗಳ ಪ್ರಕಾರ ಈ ಹಿಂದೆ ನಿಗದಿಯಾದಂತೇ ಪಂದ್ಯಗಳು ನಡೆಯಲಿವೆ. ಹೊಸದಾಗಿ ಕೊರೋನಾ ಪ್ರಕರಣ ಕಂಡುಬರದ ಹಿನ್ನಲೆಯಲ್ಲಿ …

Read More »

ರಾಜ್ಯದಲ್ಲಿ 6 ಸಾವಿರ ದಾಟಿದ ಸಾವಿನ ಸಂಖ್ಯೆ : ಉಚಿತ ಔಷಧ ನೀಡಲು ನಿರ್ಧಾರ

ಬೆಂಗಳೂರು  : ರಾಜ್ಯದಲ್ಲಿ ಕೋವಿಡ್‌-19 ರ ಕಾರಣದಿಂದ ಗುರುವಾರ 104 ಮಂದಿ ಸತ್ತಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್‌ ನಿಂದ ಮೃತರಾದವರ ಒಟ್ಟು ಸಂಖ್ಯೆ 6 ಸಾವಿರದ ಗಡಿ ದಾಟಿದೆ. ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬಿರುವ ಕೊರೋನಾ ವೈರಸ್‌ ಗೆ 6054 ಮಂದಿ ಪ್ರಾಣ ಕಳೆದುಕೊಂಡಂತೆ ಆಗಿದೆ. ರಾಜ್ಯದಲ್ಲಿ ಗುರುವಾರ 8,865 ಮಂದಿ ಹೊಸದಾಗಿ ಕೊರೋನಾ ಸೋಂಕು ಉಂಟಾಗಿದೆ. ಇದರೊಂದಿಗೆ ರಾಜ್ಯದಲ್ಲಿನ ಸಕ್ರೀಯ ಕೊರೋನಾ ಪ್ರಕರಣಗಳ ಸಂಖ್ಯೆ 96,099ಕ್ಕೆ ಏರಿಕೆಯಾಗಿದೆ. …

Read More »

ಡ್ರಗ್ಸ್‌ ದಂಧೆಗೆ ಕಡಿವಾಣ: ಆಗ್ರಹ

ಬೆಳಗಾವಿ: ‘ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್‌ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ‘ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದ್ದು, ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. …

Read More »

ಸಾಲ ಮರುಪಾವತಿಗೆ ಪೀಡಿಸಿದರೆ ಕೇಸ್: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ

ಬೆಳಗಾವಿ: ‘ಸಾಲಗಾರರಿಗೆ ಕಿರುಕುಳ ನೀಡುವ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಗುರುವಾರ ನಡೆದ ಹಣಕಾಸು ಸಂಸ್ಥೆಗಳು, ಬ್ಯಾಂಕ್ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೆಲ ಖಾಸಗಿ ಹಣಕಾಸು ಸಂಸ್ಥೆಗಳು ಮರ್ಧ್ಯವತಿಗಳನ್ನು ಬಳಸಿಕೊಂಡು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡುತ್ತಿರುವ ಮಾಹಿತಿ ಇದೆ. ಇದು ಮುಂದುವರಿಯಬಾರದು. ಒತ್ತಾಯದಿಂದ ಸಾಲ ಮರುಪಾವತಿ ಸೇರಿದಂತೆ ಇತರ ತೊಂದರೆ …

Read More »

ವ್ಯಕ್ತಿ ಬಂಧನ: 15 ದ್ವಿಚಕ್ರವಾಹನ ವಶಕ್ಕೆ

ಅಥಣಿ: ದ್ವಿಚಕ್ರ ವಾಹನಗಳ ಕಳವು ಆರೋಪದ ಮೇಲೆ ಇಲ್ಲಿನ ಪೊಲೀಸರು ವ್ಯಕ್ತಿಯೊಬ್ಬರನ್ನು ಗುರುವಾರ ಬಂಧಿಸಿದ್ದಾರೆ. ತಾಲ್ಲೂಕಿನ ಶಿರಹಟ್ಟಿಯ ರಮಜಾನ ಹುಸೇನಸಾಬ ಐನಾಪುರ (27) ಬಂಧಿತ. ‘ಜಿಲ್ಲೆ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವಾದ ₹ 5 ಲಕ್ಷ ಮೌಲ್ಯದ 15 ದ್ವಿಚಕ್ರವಾಹನಗಳನ್ನು ಆರೋಪಿಯಿಂದ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ದ್ವಿಚಕ್ರವಾಹನಗಳ ಕಳವು ಪ್ರಕರಣ ಹೆಚ್ಚುತ್ತಿದ್ದುದ್ದರಿಂದ ಡಿಎಸ್‌ಪಿ ಎಸ್.ವಿ. …

Read More »

ದಿನ ಭವಿಷ್ಯ: ಈ ರಾಶಿಯವರಿಗೆ ಕೆಲಸದಲ್ಲಿ ಕೊಂಚ ಹಿನ್ನಡೆ, ಈಶ್ವರ ಪ್ರಾರ್ಥನೆ ಮಾಡಿ

ಮೇಷ: ಶುಭಾಶುಭ ಮಿಶ್ರಫಲವಿದೆ, ಮಾತಿನ ವಿಚಾರದಲ್ಲಿ ಎಚ್ಚರವಾಗಿರಿ, ಪತ್ರಿಕೆಗಳಲ್ಲಿರುವವರಿಗೆ ಕೊಂಚ ಅಸಮಧಾನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ ವೃಷಭ: ಆರೋಗ್ಯದಲ್ಲಿ ವ್ಯತ್ಯಾಸ, ಧನ ಸಮೃದ್ಧಿ, ಬೇಡದ ಆಲೋಚನೆಗಳು, ಕೃಷಿಕರಿಗೆ ಉತ್ತಮ ದಿನ, ಕೃಷ್ಣ ಪ್ರಾರ್ಥನೆ ಮಾಡಿ ಮಿಥುನ: ಶುಭಯೋಗವಿದೆ, ಸ್ತ್ರೀಯರಿಗೆ ಪ್ರಮುಖದಿನ, ದುರ್ಜನರ ಸಹವಾಸ ಬೇಡ, ಅಮ್ಮನವರ ಪ್ರಾರ್ಥನೆ ಮಾಡಿ ಕಟಕ: ಕುಟುಂಬ ಪೋಷಣೆ, ದ್ರವ ವ್ಯಾಪಾರಿಗಳಿಗೆ ಲಾಭ, ಕೃಷಿಕರಿಗೆ ಶುಭದಿನ, ಮನೆ ದೇವರ ಪ್ರಾರ್ಥನೆ ಮಾಡಿ ಸಿಂಹ: ಹಣನಷ್ಟ, ಆರೋಗ್ಯದಲ್ಲಿ ಏರುಪೇರು, ಮೃತ್ಯುಂಜಯ ಮಂತ್ರ ಪಠಿಸಿ, ಆದಿತ್ಯ …

Read More »

ದೇಶದಲ್ಲಿ ಗುರುವಾರ ದಾಖಲೆಯ 85982 ಕೊರೋನಾ ಕೇಸ್ ಪತ್ತೆ..!

ನವದೆಹಲಿ : ದೇಶದಲ್ಲಿ ಕೊರೋನಾ ವೈರಸ್‌ ಪ್ರಕರಣಗಳು ಮತ್ತೊಮ್ಮೆ ದಾಖಲೆಯ ಏರಿಕೆ ಕಂಡಿವೆ. ಗುರುವಾರ ದಾಖಲೆಯ 85,982 ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 39.23 ಲಕ್ಷಕ್ಕೆ ಹೆಚ್ಚಳಗೊಂಡಿದೆ. ಈ ಮೂಲಕ ಭಾರತ ಅತಿ ಹೆಚ್ಚು ಕೊರೋನಾ ವೈರಸ್‌ ಪ್ರಕರಣ ದಾಖಲಾದ ದೇಶಗಳ ಪೈಕಿ 2ನೇ ಸ್ಥಾನದಲ್ಲಿರುವ ಬ್ರೆಜಿಲ್‌ (40.01 ಲಕ್ಷ ಕೇಸ್‌) ಅನ್ನು ಹಿಂದಿಕ್ಕುವ ಸನಿಹದಲ್ಲಿದೆ. 62.90 ಲಕ್ಷ ಸೋಂಕಿತರೊಂದಿಗೆ ಅಮೆರಿಕ ಮೊದಲ ಸ್ಥಾನದಲ್ಲಿದೆ. ಇದೇ …

Read More »

ಡ್ರಗ್ಸ್‌ ದೊರೆತರೆ ಅಧಿಕಾರಿಗಳೇ ಹೊಣೆ: ರವಿ ಡಿ ಚನ್ನಣ್ಣನವರ್‌

ಆನೇಕಲ್‌ : ತಾಲೂಕಿನ 3 ಠಾಣಾ ವ್ಯಾಪ್ತಿಗಳು ಗಡಿ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಹೊರ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವ ಪ್ರತಿಯೊಬ್ಬರ ಮೇಲೂ ಹದ್ದಿನ ಕಣ್ಣಿರಿಸಬೇಕು. ಸಣ್ಣ ಪ್ರಮಾಣದ ಸರಕು ದೊರೆತರೂ ಆಯಾ ಠಾಣಾ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್‌ ಎಚ್ಚರಿಕೆ ನೀಡಿದ್ದಾರೆ. ಹೆಬ್ಬಗೋಡಿ ಡಿವೈಎಸ್ಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳ ಉದ್ದೇಶಿಸಿ ಮಾತನಾಡಿದ ಅವರು, ಅತ್ತಿಬೆಲೆ, ಸರ್ಜಾಪುರ ಹಾಗೂ ಆನೇಕಲ್‌ ಠಾಣಾ ವ್ಯಾಪ್ತಿಯ ಮೂಲಕ …

Read More »

ನೇಮಕಾತಿಯಲ್ಲಿ ಅಕ್ರಮ ಆರೋಪ: ಸಿಎಂ ಕಚೇರಿ ಎದುರು ಸ್ಟಾಫ್‌ ನರ್ಸ್‌ಗಳ ಕಣ್ಣೀರು

ಬೆಂಗಳೂರು: ಸ್ಟಾಫ್‌ ನರ್ಸ್‌ ನೇಮಕಾತಿಯಲ್ಲಿ ಅಕ್ರಮವಾಗಿ ನಡೆದಿದೆ ಎಂದು ಆರೋಪಿಸಿ ಗುತ್ತಿಗೆ ಆಧಾರಿತ ಸ್ಟಾಫ್‌ ನರ್ಸ್‌ಗಳು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಎದುರು ಕಣ್ಣೀರಿಟ್ಟ ಘಟನೆ ಗುರುವಾರ ಜರುಗಿದೆ. ಸುಮಾರು 20 ಮಂದಿ ಸ್ಟಾಫ್ಟ್‌ ನರ್ಸ್‌ಗಳು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಭೇಟಿಗಾಗಿ ಗೃಹ ಕಚೇರಿ ಬಳಿ ಬಂದಿದ್ದರು. ಈ ವೇಳೆ ಅವರನ್ನು ಗೇಟ್‌ ಬಳಿಯ ತಡೆದ ಪೊಲೀಸರು ಮುಖ್ಯಮಂತ್ರಿ ಭೇಟಿಗೆ ಅವಕಾಶ ನಿರಾಕರಿಸಿದರು. ಇದರಿಂದ ಭಾವುಕಾರದ ಸ್ಟಾಫ್‌ ನರ್ಸ್‌ಗಳು, ಕೋವಿಡ್‌ …

Read More »