Breaking News

ಐಪಿಎಲ್ 2020: ಮುಂಬೈ ಇಂಡಿಯನ್ಸ್ ಟೀಂ ನಲ್ಲಿ ಲಸಿತ್ ಮಲಿಂಗ ಆಡುವುದಿಲ್ಲ, ಇವರ ರೀಪ್ಲೇಸ್ಮೆಂಟ್ ಯಾರು?

ಐಪಿಎಲ್‌ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮುಂಬೈ ಇಂಡಿಯನ್ಸ್ ವೇಗದ ಬೌಲರ್ ಲಸಿತ್ ಮಾಲಿಂಗ ವೈಯಕ್ತಿಕ ಕಾರಣಗಳಿಂದಾಗಿ ಐಪಿಎಲ್ 2020 ರ ಸೀಸನ್ ನಿಂದ ಹೊರಬಂದಿದ್ದಾರೆ. ಐಪಿಎಲ್ ಪಂದ್ಯವನ್ನು ಇನ್ನೂ ಆಡದಿರುವ ಆಸ್ಟ್ರೇಲಿಯಾದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ಅವರ ಸ್ಥಾನಕ್ಕೆ ರೀಪ್ಲೇಸ್ಮೆಂಟ್ ಆಗಿದ್ದಾರೆ. ಮಲಿಂಗ ಅವರ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ತಿಳಿದುಬಂದಿದೆ.  ಮಲಿಂಗ ತನ್ನ ತಂದೆಯೊಂದಿಗೆ ಶ್ರೀಲಂಕಾದ ಮನೆಯಲ್ಲಿ ಇರಬೇಕೆಂದು …

Read More »

ಸಿಎಂ ಅಧ್ಯಕ್ಷತೆಯಲ್ಲಿಂದು ಸಂಪುಟ ಸಭೆ: ಮಹತ್ವದ ಎರಡು ತೀರ್ಮಾನಗಳ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ಕೃಷಿ ಬೆಲೆ ಆಯೋಗವನ್ನು 2020-23ರವರೆಗೆ ಮುಂದುವರಿಕೆ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ-2020ಕ್ಕೆ ಅನುಮೋದನೆ ಪಡೆಯುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಗುರುವಾರ ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಈ ಸಭೆಯಲ್ಲಿ ಖಾಸಗಿ ವೈದ್ಯಕಿಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ಮಂಡನೆಗೆ ನಿರ್ಧರಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ …

Read More »

ಕುಷ್ಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಕೋವಿಡ್ ಹೆಲ್ತ್ ಕೇರ್ ಸೆಂಟರ್​ನಲ್ಲಿ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ನಿರಾಕರಿಸಿ ಮನೆಗೆ ತೆರಳಿರುವ ಘಟನೆ ನಡೆದಿದೆ.

ಕೊಪ್ಪಳ : ಕುಷ್ಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಕೋವಿಡ್ ಹೆಲ್ತ್ ಕೇರ್ ಸೆಂಟರ್​ನಲ್ಲಿ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ನಿರಾಕರಿಸಿ ಮನೆಗೆ ತೆರಳಿರುವ ಘಟನೆ ನಡೆದಿದೆ. ಕುಷ್ಟಗಿ ತಾಲೂಕಿನ ಮೀಯಾಪೂರ ಗ್ರಾಮದ ವೃದ್ಧೆಯೋರ್ವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಕಳೆದ 3 ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಇಷ್ಟವಿಲ್ಲದ ಅವರಿಗೆ, ವೈದ್ಯರು ಕುಟುಂಬದವರಿಗೆ ಇನ್ನೂ ಕೆಲವು ದಿನ ಈ ಆಸ್ಪತ್ರೆಯಲ್ಲಿರಲು ಎಷ್ಟೇ ಮನವೊಲಿಸಿದರೂ ಪ್ರಯೋಜನವಾಗಲಿಲ್ಲ. ವೈದ್ಯರೊಂದಿಗೆ ವಾಗ್ವಾದಕ್ಕೆ …

Read More »

ಜಿಎಸ್‌ಟಿ ನಷ್ಟ ಭರ್ತಿಗೆ 11324 ಕೋಟಿ ರೂ ಸಾಲ.: ಕೇಂದ್ರದ ಒಂದನೇ ಆಯ್ಕೆ ಒಪ್ಪಿದ ರಾಜ್ಯ!

ಬೆಂಗ: ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ) ಪರಿಹಾರದ ಕುರಿತು ಕೇಂದ್ರ ಸರ್ಕಾರ ನೀಡಿದ ಎರಡು ಆಯ್ಕೆಗಳ ಪೈಕಿ ರಾಜ್ಯಕ್ಕೆ ಹೆಚ್ಚು ಅನುಕೂಲವಾಗುವ ಮೊದಲನೇ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಪ್ರಕಾರ, 18,289 ಕೋಟಿ ಪರಿಹಾರ ಪಡೆಯಲು ತೀರ್ಮಾನಿಸಿದೆ. 18,289 ಕೋಟಿ ರು,ಅಥವಾ 25,508 ಕೋಟಿ ರು. ಪರಿಹಾರದ 2 ಆಯ್ಕೆಗಳನ್ನು ಕೇಂದ್ರ ಸರ್ಕಾರ ನೀಡಿತ್ತು. ಈ ಕುರಿತ ಮೌಲ್ಯಮಾಪನ ಮಾಡಿದ ಬಳಿಕ ರಾಜ್ಯದ ಹಣಕಾಸುಗಳಿಗೆ ಅನುಕೂಲವಾಗುವ ಒಟ್ಟು …

Read More »

GST: ಸಾಲದ ‘ಆಯ್ಕೆ’: ಹೆಚ್ಚು ಸಾಲ ಪಡೆಯಲು ಆಯ್ಕೆ-1 ಆರಿಸಿದ ರಾಜ್ಯ ಸರಕಾರ

ಬೆಂಗಳೂರು: ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರಕಾರ ನೀಡಿದ್ದ ಎರಡು ಆಯ್ಕೆಗಳ ಪೈಕಿ, ರಾಜ್ಯ ಸರಕಾರ ಮೊದಲನೆಯದನ್ನು ಆರಿಸಿಕೊಂಡಿದೆ. ಅಂದರೆ ಜಿಎಸ್‌ಟಿ ಜಾರಿಯಿಂದಾದ ಕೊರತೆಗಷ್ಟೇ ಪರಿಹಾರ ಪಡೆಯಲು ನಿರ್ಧರಿಸುವ ಮೂಲಕ ಸದ್ಯದ ಪರಿಸ್ಥಿತಿಯಲ್ಲಿ ಅತಿ ಹೆಚ್ಚು ಸಾಲ ಪಡೆಯಲು ನೆರವಾಗುವ ಆಯ್ಕೆ-1ರ ಮೊರೆ ಹೋಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಐದು ತಿಂಗಳ ಜಿಎಸ್‌ಟಿ ಪರಿಹಾರವಾಗಿ 18,289 ಕೋಟಿ ರೂ. ಪಡೆಯಲು ರಾಜ್ಯ ಸರಕಾರ ಅರ್ಹವಾಗಿದೆ. ಇದರಲ್ಲಿ 6,965 ಕೋಟಿ ರೂ. ಉಪಕರದಿಂದ …

Read More »

ಗ್ರೇಡ್ 2 ಶಿಕ್ಷಕರ ಬಡ್ತಿ, ವಿವಿಧ ಬೇಡಿಕೆಗೆ ಸಚಿವ ಸುರೇಶ್ ಕುಮಾರ್ ಭರವಸೆ; ಧರಣಿ ಕೈಬಿಟ್ಟ ಪರಿಷತ್ ಸದಸ್ಯರು

ಬೆಂಗಳೂರು : ಮೈಸೂರು ವಿಭಾಗದಲ್ಲಿ ಪ್ರೌಢ ಶಾಲಾ ಗ್ರೇಡ್-2 ಸಹ ಶಿಕ್ಷಕರಿಂದ ಮುಖ್ಯೋಪಾಧ್ಯಾಯ ಹುದ್ದೆಗೆ ಬಡ್ತಿ ನೀಡುವುದು ಸೇರಿದಂತೆ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಣ ಸಚಿವರ ಕಚೇರಿ ಎದುರು ನಡೆಸಲು ಉದ್ದೇಶಿಸಿದ್ದ ಧರಣಿಯನ್ನು ವಿಧಾನಪರಿಷತ್ ಸದಸ್ಯರು ವಾಪಸು ಪಡೆದಿದ್ದಾರೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವಾರು ಬೇಡಿಕೆಗಳ ಕುರಿತಂತೆ ಬುಧವಾರ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಸ್. ಎಲ್. ಭೋಜೆಗೌಡ ಮತ್ತು ರಮೇಶ್ ಗೌಡ ಜೊತೆ ಸಭೆ …

Read More »

ಕೃಷಿ ಮಾರಾಟ ಮಂಡಳಿ 50 ಕೋಟಿ ವಂಚನೆ ಕೇಸ್‌: ಕಿಂಗ್‌ಪಿನ್‌ ಬಂಧನ

ಬೆಂಗಳೂರು : 2019ರಲ್ಲಿ ನಡೆದಿದ್ದ ರಾಜ್ಯ ಕೃಷಿ ಮಾರಾಟ ಮಂಡಳಿಯ (ಕೆಎಸ್‌ಎಎಂಬಿ) 50 ಕೋಟಿ ಹಣ ದುರುಪಯೋಗ ಪ್ರಕರಣದ ಕಿಂಗ್‌ಪಿನ್‌ ವಿಜಯ್‌ ಆಕಾಶ್‌, ಆತನ ಪುತ್ರ ಹಾಗೂ ಅಳಿಯ ಕೊನೆಗೂ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಚೆನ್ನೈ ಮೂಲದ ವಿಜಯ್‌ ಆಕಾಶ್‌, ಆತನ ಪುತ್ರ ಪ್ರೇಮರಾಜ್‌ ಹಾಗೂ ದಿನೇಶ್‌ ಬಾಬು ಬಂಧಿತರಾಗಿದ್ದು, ಕೃತ್ಯ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಚೆನ್ನೈನಲ್ಲಿ ಬಂಧಿಸಿ ನಗರಕ್ಕೆ ಸಿಸಿಬಿ ತಂಡ ಕರೆ ತಂದಿದೆ. ಈಗಾಗಲೇ …

Read More »

ಅಲ್ಪಸಂಖ್ಯಾತ ವಸತಿ ಶಾಲೆಗಳಲ್ಲಿ ದಾಖಲಾತಿ ಇಳಿಕೆಯಾದಲ್ಲಿ ಕಠಿಣ ಕ್ರಮ; ಸಚಿವ ಶ್ರೀಮಂತ ಪಾಟೀಲ್ ಎಚ್ಚರಿಕೆ

ಕೋಲಾರ : ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಅವರು, ಬುಧವಾರ ಇಲಾಖೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು, ಸಭೆಯಲ್ಲಿ ಉಸ್ತುವಾರಿ ಸಚಿವ ಎಚ್ ನಾಗೇಶ್, ಶಾಸಕಿ ರೂಪಕಲಾ, ಪರಿಷತ್ ಶಾಸಕ ಗೋವಿಂದರಾಜು, ಡಿಸಿ ಸಿ ಸತ್ಯಭಾಮ ಭಾಗಿಯಾಗಿದ್ದರು, ಸಭೆಯಲ್ಲಿ ನೇಕಾರರ ಜೊತೆಗೆ ಚರ್ಚಿಸಿದ ಸಚಿವರು ಸಮಸ್ಯೆಗಳು ಇದ್ದಲ್ಲಿ ಇಲಾಖೆ ಅಧಿಕಾರಿಗಳ ಸಹಾಯ ಪಡೆಯಿರಿ …

Read More »

ಶಿರಾ ಉಪಚುನಾವಣೆ: ಜೆಡಿಎಸ್​ನಿಂದ ಯಾರಾಗ್ತಾರೆ ಅಭ್ಯರ್ಥಿ?

ತುಮಕೂರು: ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ . ಜೆಡಿಎಸ್​ನಿಂದ ಶಾಸಕರಾಗಿದ್ದ ಬಿ. ಸತ್ಯನಾರಾಯಣ್ ಅವರು ಆಗಸ್ಟ್ 4 ರಂದು ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಥಾನ ತೆರವಾಗಿದ್ದು, ಖಾಲಿ ಇರುವ ಶಾಸಕ ಸ್ಥಾನ ತುಂಬಲು ಜೆಡಿಎಸ್ ಪಕ್ಷದಲ್ಲಿ ಪೈಪೋಟಿ ಜೋರಾಗಿದೆ. ಸದ್ಯದ ಮಟ್ಟಿಗೆ ಶಿರಾ ಕ್ಷೇತ್ರದಲ್ಲಿ ಜೆಡಿಎಸ್​ಗೆ ಉತ್ತಮವಾದ ವಾತಾವರಣ ಇದೆ. 2018 ರಲ್ಲಿ ನಡೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರವಾದ ಇಲ್ಲಿಂದ ಜೆಡಿಎಸ್ …

Read More »

ಗದಗ ಜಿಲ್ಲೆಯಲ್ಲಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಗದಗ : ಮದ್ಯ ಪ್ರಿಯರೇ ಎಚ್ಚರ.. ಎಚ್ಚರ.. ಇನ್ಮುಂದೆ ಮದ್ಯ ಸೇವನೆ ಮಾಡಬೇಕಾದ್ರೆ, ಹತ್ತು ಸಾರಿ ವಿಚಾರ ಮಾಡಿ. ಇಲ್ಲವಾದ್ರೆ, ನೀವು ನಕಲಿ ಮದ್ಯ ಸೇವನೆ ಮಾಡಿ ಯಮರಾಯನ ಪಾದ ಸೇರೋದು ಗ್ಯಾರಂಟಿ. ಗದಗ ಜಿಲ್ಲೆಯಲ್ಲಿ ನಕಲಿ ಮದ್ಯವನ್ನು ರಾಜರೋಷವಾಗಿ ಮಾರಾಟ ಮಾಡಲಾಗುತ್ತಿದೆ. ಸ್ವಲ್ಪವೂ ಅನುಮಾನ ಬಾರದ ಹಾಗೆ ಒರಿಜನಲ್ ಬಾಟಲ್ ಹಾಗೇ ಪ್ಯಾಕ್ ಮಾಡಿ ನಕಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದು ನಕಲಿ ಮದ್ಯದ ಅಸಲಿ ಕಥೆ. ನಕಲಿ …

Read More »