Breaking News

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಪ್ರವಾಹ ಬಾಧಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಸಾರ್ವಜನಿಕ ದೂರುಗಳು ಬರದ ರೀತಿಯಲ್ಲಿ …

Read More »

ಟೀ ಶರ್ಟ್, ಬರ್ಮುಡಾ ಧರಿಸಿ ಮಧ್ಯರಾತ್ರಿ ಠಾಣೆಗೆ ಬಂದ ಪೊಲೀಸ್ ವರಿಷ್ಠಾಧಿಕಾರಿ; ಗುರುತು ತಿಳಿಯದೇ ಸಿಬ್ಬಂದಿ ತಬ್ಬಿಬ್ಬು

ತುಮಕೂರು: ಟೀ ಶರ್ಟ್, ಬರ್ಮುಡಾ ಧರಿಸಿ ಅಪರಿಚಿತ ದೂರುದಾರರಂತೆ ಪೊಲೀಸ್ ಠಾಣೆಗೆ ತೆರಳಿದ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್, (Tumkur SP) ಠಾಣೆಯ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಹೊರವಲಯದ ಮಹಿಳಾ ಠಾಣೆ ಪರಿಶೀಲನೆ ನಡೆಸಿದ ಅವರ ವೇಶ ಭೂಷಣ ಗಮನಿಸಿ ದೂರುದಾರ ಎಂದೇ ಠಾಣೆಯ ಸಿಬ್ಬಂದಿ ಭಾವಿಸಿದ್ದರು. ಆದರೆ ಕೆಲಹೊತ್ತಿನ ಬಳಿಕ ಟೀ ಶರ್ಟ್ ಮತ್ತು ಬರ್ಮುಡಾ ಧರಿಸಿ ಬಂದವರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಎಂದು ತಿಳಿದ ಪೊಲೀಸ್ …

Read More »

ಪತ್ನಿಗೆ ಗೌರವ ನೀಡದಿದ್ದಲ್ಲಿ ಜೈಲು – ಪತಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ದಂಪತಿ ಕಲಹ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಪತಿಗೆ ಛೀಮಾರಿ ಹಾಕಿ, ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದೆ. ಪತ್ನಿಗೆ ಗೌರವ ಕೊಡದೆ ಹೋದಲ್ಲಿ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದೆ. ಪತಿ ವರ್ತನೆ ಮೇಲೆ ನಿಗಾ ಇಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪೀಠವು ಬಿಹಾರದ ರಾಜಧಾನಿ ಪಾಟ್ನಾದ ವ್ಯಕ್ತಿಯೊಬ್ಬನ ಅರ್ಜಿ ವಿಚಾರಣೆ ಮಾಡಿದೆ. ಈ ವೇಳೆ …

Read More »

ದಿನಗೂಲಿ ಕಾರ್ಮಿಕರೂ ತೆರಿಗೆ ಕಟ್ಟುತ್ತಾರೆ’; ಐಷಾರಾಮಿ ರೋಲ್ಸ್​ ರಾಯ್ಸ್​ ಕಾರಿಗೆ ತೆರಿಗೆ​ ತುಂಬದ ಧನುಷ್​ಗೆ ಕೋರ್ಟ್​​ ಛೀಮಾರಿ

ತೆರಿಗೆ ತುಂಬದೇ ಐಷಾರಾಮಿ ಕಾರನ್ನು ಓಡಿಸಿದ ತಮಿಳು ನಟ ದಳಪತಿ ವಿಜಯ್​ಗೆ ಕೋರ್ಟ್​ ಛೀಮಾರಿ ಹಾಕಿತ್ತು. ಈಗ ನಟ ಧನುಷ್​ ಸರದಿ. ಅವರು ಆಮದು ಮಾಡಿಕೊಂಡ ಐಷಾರಾಮಿ ರೋಲ್ಸ್​ ರಾಯ್ಸ್​ ಕಾರಿಗೆ ತೆರಿಗೆ ವಿನಾಯಿತಿ ನೀಡುವಂತೆ 2015ರಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ಹಿಂಪಡೆಯಲು ಕೋರ್ಟ್​ ನಿರಾಕರಿಸಿದೆ. ಅಲ್ಲದೆ, ಧನುಷ್​ಗೆ ಈ ವಿಚಾರದಲ್ಲಿ ಕಿವಿ ಮಾತು ಕೂಡ ಹೇಳಿದೆ. 2015ರಲ್ಲಿ ಧನುಷ್​ ರೋಲ್ಸ್​ ರಾಯ್ಸ್​ ಕಾರನ್ನು ವಿದೇಶದಿಂದ ಆಮದು …

Read More »

ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು ಒಂಬತ್ತು ಗಂಟೆಯಿಂದ ನಿರಂತರವಾಗಿ ಶೋಧ ಮುಂದುವರಿದಿದೆ. ಕಾರ್ಯಕರ್ತರು ಶಾಸಕರ ಮನೆ ಮುಂದೆ ಜಮಾಯಿಸಿ, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಕಾಂಗ್ರೆಸ್ನವರ ಮೇಲೆ ಮಾತ್ರ ದಾಳಿ ಆಗುತ್ತಿದೆ. ಬಿಜೆಪಿ ಅವರ ಮೇಲೆ ಯಾಕೆ ಇಡಿ ದಾಳಿ ಆಗಲ್ಲ ಅಂತ ಮಹಿಳಾ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. …

Read More »

‘ನನಗೂ ಒಳ್ಳೆಯ ಕಾಲ ಬರಲಿದೆ. ನಮ್ಮ ಅಧ್ಯಕ್ಷರನ್ನ ಭೇಟಿಯಾಗಲು ಬಂದಿದ್ದೆ.:ರಮೇಶ್​ ಜಾರಕಿಹೊಳಿ

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಜೆಡಿಎಸ್​ ಮತ್ತು ಕಾಂಗ್ರೆಸ್​ ಸಮ್ಮಿಶ್ರ ಸರ್ಕಾರವನ್ನು ಕೆಳಗಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದ ರಮೇಶ್​ ಜಾರಕಿಹೊಳಿ ಇದೀಗ, ನನಗೂ ಒಳ್ಳೆಯ ಕಾಲ ಬರಲಿದೆ. ನಾನೀಗ ಪ್ರತಿ ದಿನ ಬ್ಯಾಡ್ಮಿಂಟನ್ ಆಡುತ್ತಿದ್ದೇನೆ… ಎಂದಿದ್ದಾರೆ. ಬಿಎಸ್​ವೈ ಸಂಪುಟದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್​ ಜಾರಕಿಹೊಳಿ, ಸಚಿವ ಸ್ಥಾನ ಕಳೆದುಕೊಂಡರು. ಇದೀಗ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲೂ ಇವರಿಗೆ ಸ್ಥಾನ ಸಿಕ್ಕಿಲ್ಲ. ಇವರ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಅವಕಾಶ …

Read More »

ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್; ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆ ದಾಟು ಯೋಜನೆಯನ್ನು ಕರ್ನಾಟಕ ಅರ್ಹವಾಗಿ ರೂಪಿಸಿಕೊಂಡಿದೆ. ಈ ಬಗ್ಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಯೋಜನೆ ವಿರೋಧಿಸಿ ಧರಣಿ ನಡೆಸುತ್ತಿರುವ ಕರ್ನಾಟಕ ಕೇಡರ್​ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಗ್ಗೆ ಪ್ರತ್ರಿಕ್ರಿಯೆ ನೀಡಿದ್ದಾರೆ. ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್. ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ. ಮೇಕೆದಾಟು ಯೋಜನೆ ವಿರೋಧಿಸಿ …

Read More »

ಟೀ ಶರ್ಟ್, ಬರ್ಮುಡಾ ಧರಿಸಿ ಮಧ್ಯರಾತ್ರಿ ಠಾಣೆಗೆ ಬಂದ ಪೊಲೀಸ್ ವರಿಷ್ಠಾಧಿಕಾರಿ; ಗುರುತು ತಿಳಿಯದೇ ಸಿಬ್ಬಂದಿ ತಬ್ಬಿಬ್ಬು

ತುಮಕೂರು: ಟೀ ಶರ್ಟ್, ಬರ್ಮುಡಾ ಧರಿಸಿ ಅಪರಿಚಿತ ದೂರುದಾರರಂತೆ ಪೊಲೀಸ್ ಠಾಣೆಗೆ ತೆರಳಿದ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್, (Tumkur SP) ಠಾಣೆಯ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಹೊರವಲಯದ ಮಹಿಳಾ ಠಾಣೆ ಪರಿಶೀಲನೆ ನಡೆಸಿದ ಅವರ ವೇಶ ಭೂಷಣ ಗಮನಿಸಿ ದೂರುದಾರ ಎಂದೇ ಠಾಣೆಯ ಸಿಬ್ಬಂದಿ ಭಾವಿಸಿದ್ದರು. ಆದರೆ ಕೆಲಹೊತ್ತಿನ ಬಳಿಕ ಟೀ ಶರ್ಟ್ ಮತ್ತು ಬರ್ಮುಡಾ ಧರಿಸಿ ಬಂದವರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಎಂದು ತಿಳಿದ ಪೊಲೀಸ್ …

Read More »

ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಬಂಗಲೆ! ಅರೇಬಿಯನ್‌ ಶೈಲಿಯ ಅರಮನೆಗೆ ಚಿನ್ನದ ಲೇಪನ.

ಬೆಂಗಳೂರು: ನೋಡುಗರ ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಅಹ್ಮದ್​ರ ಭವ್ಯ ಬಂಗಲೆ! ಇಂದು ಬೆಳ್ಳಂಬೆಳಗ್ಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಕಚೇರಿ, ಪ್ಲ್ಯಾಟ್​ಗಳು, ನಿವಾಸ ಸೇರಿ ಇತ್ತೀಚಿಗೆ ನಿರ್ಮಿಸಿದ್ದ ಐಷಾರಾಮಿ ಬಂಗಲೆ ಮೇಲೂ ಇಡಿ(ಜಾರಿ ನಿರ್ದೇಶನಾಲಯ) ದಾಳಿ ಮಾಡಿದೆ. ಈ ವೇಳೆ ಅವರ ಭವ್ಯ ಬಂಗಲೆಯ ಪೋಟೋಗಳು ವೈರಲ್​ ಆಗಿವೆ. ಕಂಟೊನ್ಮೆಂಟ್ ರೈಲ್ವೇ ಸ್ಟೇಷನ್ ಬಳಿ ಇರುವ ಈ ಮನೆಯನ್ನು ಅರೇಬಿಯನ್‌ ಶೈಲಿಯಲ್ಲಿ ನಿರ್ಮಿಸಲಾಗಿದ್ದು, ಚಿನ್ನದ ಬಣ್ಣ …

Read More »

ಬಿಜೆಪಿಗೆ ಸೇರ್ಪಡೆಯಾದ ಬಿಎಸ್ ಪಿ ಶಾಸಕ ಎನ್.ಮಹೇಶ್: ಸಚಿವ ಸ್ಥಾನದ ಸುಳಿವು ನೀಡಿದ ಬಿಎಸ್ ವೈ

ಬೆಂಗಳೂರು: ಬಿಎಸ್ ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಹೇಶ್ ಚಳುವಳಿಯ ಹಿನ್ನೆಲೆಯಿಂದ ಬಂದವರು. ಅವರ ಸಂಘಟನಾ ಶಕ್ತಿ ಬಹು ದೊಡ್ಡದು. ಅವರು ಶಾಸಕರಾಗುವ ಮುನ್ನವೇ ದಲಿತರ ಹೃದಯ ಗೆದ್ದವರು. ಕೊಳ್ಳೆಗಾಲದ ಎಲ್ಲ ಜನಾಂಗ …

Read More »