Breaking News

ಪ್ರೀತಿಸಿದ ಹುಡುಗಿಗೆ ಯುವಕನ್ನು ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಘಟನೆ:ಗ್ರಾಮಸ್ಥರಿಗೆ ಸಂಕಟ

ದಾವಣಗೆರೆ: ಪ್ರೀತಿಸಿದ ಹುಡುಗಿಗೆ ಯುವಕನೊಬ್ಬ ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಸ್ವಾರಸ್ಯಕರ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೇಮಂತ್ ಎಂಬ ಯುವಕ ತಾನು ಪ್ರೀತಿಸಿದ ಯುವತಿಗೆ ನಡು ರಸ್ತೆಯಲ್ಲೇ ತಾಳಿಕಟ್ಟಿದ್ದಾನೆ. ಹೇಮಂತ್​ ಕಳೆದ 4 ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಆದರೆ, ಇವರ ಪ್ರೀತಿಗೆ ಜಾತಿ ಅಡ್ಡಬಂದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಇದಕ್ಕೆ ಒಪ್ಪದೆ ಹೇಮಂತ್​ನಿಗೆ ತಮ್ಮ ಜಾತಿಯ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ. …

Read More »

ಡಾ. ಪಂ. ಪುಟ್ಟರಾಜ ಗವಾಯಿಗಳವರ ಬಸ್ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಪ್ರತಿಭಟನೆ : ಪೂಜಾ ಕಾರ್ಯ ಮುಂದಕ್ಕೆ

ಗದಗ :  ನಗರದ ನವೀಕರಣಗೊಂಡ ಹಳೆ ಬಸ್ ನಿಲ್ದಾಣಕ್ಕೆ ಪಂ.ಪುಟ್ಟರಾಜ ಗವಾಯಿಗಳ ಹೆಸರನ್ನು ನಾಮಕರಣ ಮಾಡುವಂತೆ ಆಗ್ರಹಿಸಿ ಹೋರಾಟ ಮುಂದುವರೆಸಿದ್ದರಿAದ  ಶಾಸಕ ಎಚ್.ಕೆ.ಪಾಟೀಲ ಅವರು ಭರವಸೆ ನೀಡಿದ್ದರಿಂದ ಸಾರಿಗೆ ಅಧಿಕಾರಿಗಳು ಭಾನುವಾರ ಬಸ್ ನಿಲ್ದಾಣಕ್ಕೆ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮವನ್ನು ಮುಂದೂಡಿದ್ದಾರೆ. ನಗರದಲ್ಲಿ ನವೀಕರಣವಾಗುತ್ತಿರುವ ಹಳೆ ಬಸ್ ನಿಲ್ದಾಣಕ್ಕೆ  ಡಾ. ಪಂ. ಪುಟ್ಟರಾಜ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಆಗ್ರಹಿಸಿ ಸ್ನೇಹ ಬಳಗ, ಕ್ರಾಂತಿ ಸೇನಾ ಹಾಗೂ ವಿವಿಧ …

Read More »

ಕೊರೋನಾ ಸೋಂಕಿತೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದ ಆಯಂಬುಲೆನ್ಸ್ ಚಾಲಕನೋರ್ವ ಆಕೆಯ ಮೇಲೆ ಅತ್ಯಾಚಾರ

ತಿರುವನಂತಪುರ: ಕೊರೋನಾ ಸೋಂಕಿತೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದ ಆಯಂಬುಲೆನ್ಸ್ ಚಾಲಕನೋರ್ವ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಪಥನಂತ್ತಟ್ಟದ ಅರಣ್ಮುಲಾದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, 19 ವರ್ಷದ ಕೊರೊನಾ ಸೋಂಕಿತೆಯನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ, ಆಕೆಯ ಮೇಲೆ ಅಂಬ್ಯುಲೆನ್ಸ್‌ ಚಾಲಕ ಕಾಯಂಕುಲಂ ಮೂಲದ 28 ವರ್ಷ ನೌಫಲ್‌ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆಯಂಬುಲೆನ್ಸ್ ಚಾಲಕ ನೌಫಲ್‌ ಇಬ್ಬರು ಯುವತಿಯನ್ನು ಅಂಬ್ಯುಲೆನ್ಸ್‌ನಲ್ಲಿ …

Read More »

ಕೊರೊನಾ ವೈರಸ್​ ಭಾದಿತ ಕಾರ್ಮಿಕರಿಗೆ 28 ದಿನಗಳ ವೇತನ ಸಹಿತ ರಜೆ

ಬೆಂಗಳೂರು: ಕೊರೊನಾ ವೈರಸ್​ ಭಾದಿತ ಕಾರ್ಮಿಕರಿಗೆ ವೇತನ ಸಹಿತ 28 ದಿನಗಳ ಕಾಲ ರಜೆ ನೀಡಬೇಕೆಂದು ರಾಜ್ಯ ಸರ್ಕಾರ ಆದೇಶಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೊರೊನಾ ವೈರಸ್​ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯು ಸೂಕ್ತ ಕ್ರಮವಹಿಸುವ ಅಗತ್ಯಯಿದೆ. ಹೀಗಾಗಿ ಕೊರೊನಾ ವೈರಸ್​​ ಭಾದಿತ ಕಾರ್ಮಿಕರು ತಮ್ಮ ಹತ್ತಿರದ ಇಎಸ್​ಐ ಆಸ್ಪತ್ರೆಗಳಿಗೆ ತೆರಳಿ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಬೇಕು. ಈ ರೀತಿ ಪ್ರಮಾಣ ಪತ್ರ …

Read More »

ರಸ್ತೆ ಒತ್ತುವರಿ ತೆರವುಗೊಳಿಸಲು ಶಾಸಕರಿಗೆ ಮನವಿ

ಕೋಲಾರ,  (ಹಿ.ಸ): ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಹೋಬಳಿಯ ಎತೂರು ಗ್ರಾಮದಿಂದ ನಕ್ಕನಹಳ್ಳಿ ಗಡಿಗೆ ಹೋಗುವ ಬಂಡಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ದಲಿತ ಜನ ಸೇನೆಯ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಶಾಸಕಿ ರೂಪಕಲಾ ಶಶಿಧರ್‍ರವರಿಗೆ ಮನವಿ ಸಲ್ಲಿಸಿದರು.   ಎತೂರುನಿಂದ ನಕ್ಕನಹಳ್ಳಿ ಗಡಿಗೆ ಹೋಗುವ ಬಂಡಿ ರಸ್ತೆ ಸರ್ವೇ ನೋ 52, 63/1, 62 ಹಾದು ಹೋಗುವ ರಸ್ತೆ ಈಗಲೇ ಸರ್ವೇ ಕಾರ್ಯ …

Read More »

ಡ್ರಗ್ಸ್​ ಜಾಲದಲ್ಲಿ ಪ್ರಭಾವಿ ರಾಜಕಾರಣಿ ಪುತ್ರ, ನಟನ ಮೈದುನ

ಬೆಂಗಳೂರು: ಡ್ರಗ್ಸ್​ ಜಾಲ ಬಗೆದಷ್ಟೂ ಆಳವಾಗುತ್ತಿದೆ. ಸ್ಯಾಂಡಲ್​ವುಡ್​ ನಟಿ ರಾಗಿಣಿ ಈಗಾಗಲೇ ಅರೆಸ್ಟ್​ ಆಗಿದ್ದಾರೆ. ಹಾಗೇ ಸಿಸಿಬಿ A-1, A-2 ಎಂದು ಆರೋಪಿಗಳ ಪಟ್ಟಿಯನ್ನು ಮಾಡಿದ್ದು, ಅದರಲ್ಲಿ A 6(ಆರೋಪಿ-6) ಆದಿತ್ಯ ಆಳ್ವ. ಡ್ರಗ್ಸ್​ ಜಾಲದಲ್ಲಿ ಪ್ರಭಾವಿ ರಾಜಕಾರಣಿಗಳ ಮಕ್ಕಳೂ ಸೇರಿದ್ದಾರೆ ಎಂಬ ಮಾತು ಮೊದಲಿನಿಂದಲೂ ಕೇಳಿಬರುತ್ತಿತ್ತು. ಅದಕ್ಕೀಗ ಸಾಕ್ಷಿಯೆಂಬಂತೆ ಆದಿತ್ಯ ಆಳ್ವ ಹೆಸರು ಕೇಳಿಬಂದಿದೆ. ಈ ಆದಿತ್ಯ ಆಳ್ವ, ಮಾಜಿ ಸಚಿವ, ದಿವಂಗತ ಜೀವರಾಜ್​ ಆಳ್ವ-ನಂದಿನಿ ಆಳ್ವ ಅವರ ಪುತ್ರ. …

Read More »

ಸುವರ್ಣಸೌಧ ಮುಂದೆ ರಾಯಣ್ಣ, ಚೆನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ಆಗ್ರಹಿಸಿ ಸಂಕಲ್ಪ ಯಾತ್ರೆ

ಬೆಳಗಾವಿ : ಸುವರ್ಣ ಸೌಧದ ಮುಂದೆ ರಾಯಣ್ಣ ಪ್ರತಿಷ್ಠಾಪನೆ ವಿಚಾರವಾಗಿ ಬೆಳಗಾವಿಯಲ್ಲಿ ಮೂಡಲಗಿಯ ಶ್ರೀಮಂತ ಶಿವಯೋಗಿ ನೇತೃತ್ವದಲ್ಲಿ ಗೋಕಾಕ್​ ತಾಲೂಕು ಮೂಡಲಗಿಯಿಂದ ನಂದಗಡದ ರಾಯಣ್ಣ ಸಮಾಧಿವರೆಗೆ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ಸುವರ್ಣಸೌಧದ ಮುಂಭಾಗ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡುವಂತೆ ಸಂಕಲ್ಪ ಯಾತ್ರೆಯಲ್ಲಿ ಯಾತ್ರಾರ್ಥಿಗಳು ಆಗ್ರಹ ಮಾಡಿದ್ದಾರೆ. ಯಾತ್ರೆಯ ವೇಳೆ ಬೆಳಗಾವಿಯ ಚೆನ್ನಮ್ಮ ಪುತ್ಥಳಿ ಹಾಗೂ ಪೀರನವಾಡಿಯ ಸಂಗೊಳ್ಳಿರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.

Read More »

ಮರು ಮೌಲ್ಯಮಾಪನ ಮಾಡ್ಸಿ ರಾಜ್ಯಕ್ಕೆ ಸೆಕೆಂಡ್ ಬಂದ SSLC ವಿದ್ಯಾರ್ಥಿನಿ: ಇದು ಕಾನ್ಫಿಡೆಂಟ್ ಅಂದ್ರೆ

ಶಿವಮೊಗ್ಗ(ಸೆ: ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನದಲ್ಲಿ ಬಂದ ಅಂಕಗಳಿಂದ ಶಿವಮೊಗ್ಗದ ವಿದ್ಯಾರ್ಥಿನಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಶಿವಮೊಗ್ಗ ನಗರದ ಕಲ್ಲಹಳ್ಳಿ ಬಡಾವಣೆಯ ಪ್ರಿಯದರ್ಶಿನಿ ಶಾಲೆಯ ಕಾವ್ಯ ಆರ್. ಮರು ಮೌಲ್ಯಮಾಪನದಿಂದ ರಾಜ್ಯಕ್ಕೆ ಸೆಕೆಂಡ್ ಬಂದ ವಿದ್ಯಾರ್ಥಿನಿ. ಇತ್ತೀಚೆಗೆ ಪ್ರಕಟಗೊಂಡಿದ್ದ ಎಸ್​​ಎಸ್‌ಎಲ್​​ಸಿ ಫಲಿತಾಂಶದಲ್ಲಿ ಈಕೆಗೆ 625ಕ್ಕೆ 620 ಅಂಕಗಳು ಬಂದಿದ್ದವು. ಇಷ್ಟು ಬಂದಿದ್ದರೂ ಕಾವ್ಯಗೆ ಸಮಾಧಾನ ಆಗಿರಲಿಲ್ಲ. ಇನ್ನೂ ಅಂಕಗಳು ಬರಬೇಕೆಂಬ ಲೆಕ್ಕಾಚಾರ ಹಾಕಿ ಕೊನೆಗೆ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದಳು. …

Read More »

ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಸ್ಫೂರ್ತಿಯಾಗಿವೆ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

ಮಂಗಳೂರು: ಸಮಾಜದಲ್ಲಿರುವ ಅಸಮಾನತೆಯ ವಿರುದ್ಧ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಸ್ಫೂರ್ತಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಅಂದು ಸಮಾಜದಲ್ಲಿ ಬೇರೂರಿದ ಜಾತಿಬೇಧ ಎನ್ನುವ ಕೆಟ್ಟ ವ್ಯವಸ್ಥೆ, ಅಸಮತೋಲನ, ಶೋಷಣೆಯ ವಿರುದ್ಧ ಧ್ವನಿ ಎತ್ತಿ ಸಾಮಾಜಿಕ ಸಮಾನತೆಯನ್ನು ಮೂಡಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ, ಚಿಂತನೆಗಳು ಇಂದಿಗೂ …

Read More »

ಮಾಜಿ ಶಾಸಕರ ಪುತ್ರ ಕೊರೋನಾ ಸೋಂಕಿಗೆ ಬಲಿ

ಬೀದರ್ : ಔರಾದ ತಾಲೂಕಿನ ಸಂತಪೂರ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಮಾಜಿ ಶಾಸಕ ಗುಂಡಪ್ಪ ವಕೀಲ ಅವರ ಪುತ್ರ ಅನೀಲ್ ಗುಂಡಪ್ಪ ಬಿರಾದಾರ (47) ಹೆಮ್ಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಹೈದ್ರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನೀಲ್ ಇಂದು (ಭಾನುವಾರ) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೋವಿಡ್ ಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ ಬೀದರಿನಲ್ಲಿ ಆರಂಭಿಕ ಚಿಕಿತ್ಸೆ ಪಡೆದು, ನಂತರ ಕಳೆದ 10 ದಿನಗಳಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ …

Read More »