Breaking News

ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್

ಬನಹಟ್ಟಿ: ಕಳೆದ ಕೆಲವು ದಿನಗಳಿಂದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸಮೀಪದಲ್ಲಿ ಹರಿಯುತ್ತಿರುವ ಕೃಷ್ಣಾ ನದಿಗೆ ಶುಕ್ರವಾರ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ ಸಂಜೆ 97000 ಕ್ಯೂಸೆಕ್ ನೀರು ಬಂದಿದೆ. ಜಲಾಶಯದ ಹೊರ ಹರಿವು 96 ಸಾವಿರ ಕ್ಯೂಸೆಕ್ ಇದ್ದು, ಜಲಾಶಯದಲ್ಲಿ ನೀರಿನ ಮಟ್ಟ …

Read More »

ಗಂಡ ಹೆಂಡತಿ ಸೇರಿ ಅಮಾಯಕ ಯುವತಿಯರ ಹನಿ ಟ್ರ್ಯಾಪ್‌

ಬೆಂಗಳೂರು: ಗಂಡನ ಅಣತಿಯಂತೆ ಫೇಸ್​ಬುಕ್​ನಲ್ಲಿ ಅಮಾಯಕ ಯುವತಿಯರ ಸ್ನೇಹ ಬೆಳೆಸುತ್ತಾಳೆ ಈ ಸುಂದರಿ. ಇದಾದ ಕೆಲವೇ ದಿನದಲ್ಲಿ ಮನೆಯಲ್ಲಿ ಹಬ್ಬ ಇದೆ ಊಟಕ್ಕೆ ಬನ್ನಿ ಎಂದು ನಯವಾಗಿ ಕರೆಯುತ್ತಾಳೆ. ಇವಳ ಆಹ್ವಾನಕ್ಕೆ ಓಗೊಟ್ಟು ಹೋದವರ ಲೈಫು ಬರ್ಬಾದ್‌ ಆಗುತ್ತೆ. ಚಂದ್ರಾಲೇಔಟ್​ನಲ್ಲಿ ವಾಸವಿರುವ ಖತರ್ನಾಕ್​ ದಂಪತಿ ಹೆಸರು ಕಾವ್ಯ ಮತ್ತು ಕೃಷ್ಣ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಈ ದಂಪತಿ ಮಾಡುವ ಕೆಲಸ ಕೇಳಿದ್ರೆ ಶಾಕ್​ ಆಗ್ತೀರಿ. ಸ್ನೇಹಿತರ ಮನೆಗೆ ಹೋಗುವ ಮುನ್ನ …

Read More »

ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ,ರಾಜ್ಯ ಸರ್ಕಾರ ವಜಾ ಮಾಡಲಿ – ಸಿದ್ದರಾಮಯ್ಯ

ಬೆಂಗಳೂರು: ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು ಶಿಫಾರಸ್ಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ಸ್ವಾಮೀಜಿಗಳ ಬಗ್ಗೆ ನಾನು ಮಾತಾಡಲ್ಲ. ಆದರೆ ಬಿಜೆಪಿಯಲ್ಲಿ ಕುರ್ಚಿಗೆ ಕಚ್ಚಾಟ ನಡೀತಿದೆ, ಆಡಳಿತ ಕುಸಿದಿದೆ, ಲೀಡರ್ ಇಲ್ಲ, ಸರ್ಕಾರ ಇಲ್ಲ, ರಾಜ್ಯ ದಿವಾಳಿ ಆಗಿದೆ. ಭ್ರಷ್ಟಾಚಾರ …

Read More »

ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ,ಎಲ್ಲಾ ಇಲಾಖೆಗಳಲ್ಲೂ ಮೂಗು ತೂರಿಸುತ್ತಾರ ₹20 ಸಾವಿರ ಕೋಟಿ ಟೆಂಡರ್‌ನಲ್ಲಿ ಭ್ರಷ್ಟಾಚಾರ : ವಿಶ್ವನಾಥ್ ಆರೋಪ

ಬೆಂಗಳೂರು: ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳಿಗೆ ತರಾತುರಿಯಲ್ಲಿ ಟೆಂಡರ್‌ ಕರೆದು ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಆರೋಪಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದ ಅವರು, ‘ಭದ್ರಾ ಮೇಲ್ದಂಡೆ ಮತ್ತು ಕಾವೇರಿ ನೀರಾವರಿ ನಿಗಮದಲ್ಲಿ ಅಕ್ರಮ ನಡೆದಿದೆ. ಸುಮಾರು ₹20 ಸಾವಿರ ಕೋಟಿ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ. ಗುತ್ತಿಗೆದಾರರಿಂದ ಹಣ ಪಡೆಯಲಾಗಿದೆ’ ಎಂದು ಅವರು ಮುಖ್ಯಮಂತ್ರಿ ವಿರುದ್ಧ ಹರಿಹಾಯ್ದರು. ಯಡಿಯೂರಪ್ಪ …

Read More »

ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ …

Read More »

ಬೆಳಗಾವಿ: 1,440 ಲೀ. ಅಕ್ರಮ ಮದ್ಯ ವಶ

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಕ್ಯಾಂಟರ್‌ನಲ್ಲಿ ಸಾಗಿಸುತ್ತಿದ್ದ 1,440 ಲೀಟರ್‌ ಮದ್ಯದ ಬಾಟಲಿಗಳನ್ನು ಇಲ್ಲಿನ ಸಿಸಿಐಬಿ ಪೊಲೀಸರು ತಾಲ್ಲೂಕಿನ ಹೊನಗಾ ಹೊರವಲಯದ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ವಶಕ್ಕೆ ಪಡೆದು, ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ. ಬೈಲಹೊಂಗಲ ತಾಲ್ಲೂಕು ಸಂಗೊಳ್ಳಿಯ ಸಿದ್ಧಾರೂಡ ಪಟಾತ (24) ಬಂಧಿತ. ಇನ್ನೊಬ್ಬ ಆರೋಪಿ ಕಣಬರ್ಗಿಯ ಶಂಕರ ದೇಸನೂರ (38) ಪರಾರಿಯಾಗಿದ್ದಾರೆ. ಗೋವಾ ರಾಜ್ಯದಲ್ಲಿ ಮಾತ್ರವೇ ಮಾರಬೇಕಿರುವ ವಿಸ್ಕಿ, ರಮ್ ಹಾಗೂ ಬ್ರಾಂಡಿ ಬಾಟಲಿಗಳು ಅವಾಗಿವೆ. ಕ್ಯಾಂಟರ್‌ ಅನ್ನೂ ಜಪ್ತಿ ಮಾಡಲಾಗಿದೆ. …

Read More »

ಬಗೆದಷ್ಟೂ ಆಳ ಸಿಮ್​ ಕಿಟ್​ ದಂಧೆಯ ಜಾಲ: ದಿನವೊಂದಕ್ಕೆ 15 ಲಕ್ಷ ಸಂಪಾದಿಸ್ತಿದ್ದ ಆರೋಪಿ

ಬೆಂಗಳೂರು: ಇತ್ತೀಚೆಗೆ ಬೆಳಕಿಗೆ ಬಂದ ಭಾರೀ ಸಿಮ್ ಕಿಟ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಲಿಟರಿ ಇಂಟಲಿಜೆನ್ಸ್ ರಹಸ್ಯ ತನಿಖೆ ನಡೆಸಿದ್ದು ರೋಪಿಗಳ ಪ್ಲ್ಯಾನಿಂಗ್​ ಸೇರಿದಂತೆ ತನಿಖೆಯ ಸಂಪೂರ್ಣ ಮಾಹಿತಿಯನ್ನ ಪೊಲೀಸರಿಗೆ ರವಾನೆ ಮಾಡಿದೆ ಎನ್ನಲಾಗಿದೆ. ಎ1 ಇಬ್ರಾಹಿಂ 10 ನೇ ಕ್ಲಾಸ್ ಓದಿದ್ರೆ.. ಎ2 ಗೌತಮ್ ಎಂಬಿಎ ಪಾಸ್ ಮಾಡಿದ್ದಾನೆ. ಹೆಚ್ಚಿನ ಹಣಕ್ಕೆ ಆಸೆ ಬಿದ್ದು ಗೌತಮ್ ಈ ಕೃತ್ಯಕ್ಕೆ ಇಳಿದಿದ್ದ ಎನ್ನಲಾಗಿದೆ. ಎ1 ಆರೋಪಿಯ ದಿನದ ಆದಾಯವೇ 15 …

Read More »

ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ; ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನದ ಬಳಿಕವೂ ನಾಯಕತ್ವ ಬದಲಾವಣೆ ಚರ್ಚೆಗೆ ಬ್ರೇಕ್ ಬಿದ್ದಿಲ್ಲ. ಇದೀಗ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯಿತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ ಎಂದು ಒತ್ತಾಯಿಸಿದ್ದಾರೆ. ಅರುಣ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಸಿಎಂ ಬದಲಾವಣೆ ವಿಚಾರಕ್ಕೂ ನಮಗೂ ಸಂಬಂಧವಿಲ್ಲ. ನಾವು ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಲೂ ಇಲ್ಲ. ಆದರೆ ರಾಜ್ಯದಲ್ಲಿ …

Read More »

ವಿಜಯೇಂದ್ರ ವಿರುದ್ಧ ಕಿಕ್ ಬ್ಯಾಕ್ ಪಡೆದ ಆರೋಪ: ಸರ್ಕಾರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಹೆಚ್.ವಿಶ್ವನಾಥ್

ಬೆಂಗಳೂರು: ಸರ್ಕಾರದ ವಿರುದ್ಧ ಮತ್ತೆ ಗುಡುಗಿರುವ ಎಂ ಎಲ್ ಸಿ ಹೆಚ್.ವಿಶ್ವನಾಥ್ ನಿರಾವರಿ ಯೋಜನೆಗಳಲ್ಲಿ ಭಾರಿ ಅಕ್ರಮ ನಡೆದಿದ್ದು, ಕಿಕ್ ಬ್ಯಾಕ್ ಪಡೆದುಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಕೆಲ ದಾಖಲೆಗಳನ್ನು ಬಿಡುಗಡೆ ಮಾಡಿದ ವಿಶ್ವನಾಥ್, ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲಿಯೂ ಬಿ.ವೈ.ವಿಜಯೇಂದ್ರ ಹಸ್ತಕ್ಷೇಪ ಹೆಚ್ಚಾಗುತ್ತಿದೆ. ಭದ್ರಾ ಮೇಲ್ದಂಡೆ ನಿರಾವರಿ ಯೋಜನೆ ಕಾಮಗಾರಿಗಾಗಿ 20 ಸಾವಿರ ಕೋಟಿ ರೂ.ಟೆಂಡರ್ ತರಾತುರಿಯಲ್ಲಿ ಕರೆಯಲಾಗಿದೆ. ಇದರ ಅಗತ್ಯವೇನಿತ್ತು? ಕಾವೇರಿ ನೀರಾವರಿ ನಿಗಮದಲ್ಲೂ …

Read More »

ಜೈಲಿನಿಂದ ಫೋನ್ ಕರೆ; ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ತನಿಖೆಗೆ ಸಿದ್ಧತೆ

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಶಾಸಕ ಬೆಲ್ಲದ್ ಅವರಿಗೆ ಜೈಲಿನಲ್ಲಿರುವ ಯುವರಾಜ ಸ್ವಾಮಿ ಎಂಬುವವರಿಂದ ಕರೆ ಬಂದಿದ್ದು, ಫೋನ್ ಕದ್ದಾಲಿಕೆ ಮಾಡುತ್ತಿರುವ ಬಗ್ಗೆ ಸ್ವತಃ ಶಾಸಕರು ಆರೋಪಿಸಿದ್ದರು. ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸುವಂತೆ ಡಿಜಿ, ಐಜಿಪಿ ಕಚೇರಿಯಿಂದ …

Read More »