ಭಾರತದ ಬಹುತೇಕ ಪ್ರತಿಯೊಬ್ಬ ಹುಡುಗಿರ ಕ್ರಶ್ ಆಗಿದ್ದಾರೆ ನೀರಜ್. ಅದೇ ಸಮಯದಲ್ಲಿ, ಈಗ ಕಿಯಾರಾ ಅಡ್ವಾಣಿ ಕೂಡ ತನ್ನ ಕ್ರಶ್ ಯಾರೆಂಬುದನ್ನು ಹೇಳಿದ್ದಾರೆ. ಟೋಕಿಯೊ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತೀಯರ ಮನೆ ಮಾತಾಗಿರುವ ನೀರಜ್ ಚೋಪ್ರಾ ಅಭಿಮಾನಿಗಳಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಸೇರಿದ್ದಾರೆ. ಸೋಶಿಯಲ್ ಮೀಡಿಯಾದಿಂದ ಹಿಡಿದು ನೀರಜ್ ವರೆಗೂ ಅವರನ್ನು ಎಲ್ಲೆಡೆ ಪ್ರಶಂಸಿಸಲಾಗುತ್ತಿದೆ. ಜಾವೆಲಿನ್ ಎಸೆತದಲ್ಲಿ ನೀರಜ್ ಚಿನ್ನದ ಪದಕ ಗೆದ್ದಾಗಿನಿಂದ, ಅವರ ಗೆಲುವಿನ ಬಗ್ಗೆ ಚರ್ಚೆಗಳು …
Read More »ಬ್ಯಾಂಕ್ ಸಿಬ್ಬಂದಿ ಕೊಂಚ ಯಾಮಾರಿದ್ದರೂ ಸಾಕಿತ್ತು ಯುವರಾಜ ಬಿರಾದಾರ ಎಂಬಾತ ಎರಡೂವರೆ ಕೋಟಿ ರೂಪಾಯಿಯನ್ನು ತನ್ನದಾಗಿಸಿಕೊಂಡು ಹೋಗುತ್ತಿದ್ದ
ಧಾರವಾಡ: ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂಬ ಮಾತಿದೆ. ಯಾರದ್ದೋ ದುಡ್ಡಿನಲ್ಲಿ ಮೋಜು-ಮಸ್ತಿ ಮಾಡುವವರನ್ನು ಕಂಡು ಈ ಮಾತು ರೂಢಿಯಲ್ಲಿ ಬಂದಿದೆ. ಇಂಥ ಮಾತಿಗೆ ಧಾರವಾಡದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ಆದರೆ ಇಲ್ಲಿ ದುಡ್ಡು ಸಿಗೋದಕ್ಕೂ ಮುನ್ನಾ ಖದೀಮರ ಮರ್ಮ ಗೊತ್ತಾಗಿ, ಅವರೆಲ್ಲಾ ಸಿಕ್ಕಿಬಿದ್ದಿದ್ದಾರೆ. ಬ್ಯಾಂಕ್ ನ ಮ್ಯಾನೇಜರ್ ಕೊಂಚ ಯಾಮಾರಿದ್ದರೂ ಖದೀಮರ ದಂಡು ಕೋಟಿ ಕೋಟಿ ರೂಪಾಯಿ ಹಣವನ್ನು ಎಗರಿಸಿಕೊಂಡು ಪರಾರಿಯಾಗುತ್ತಿತ್ತು. ಆದರೆ ಹಾಗಾಗಲಿಲ್ಲ ಅನ್ನುವುದೇ ಸಮಾಧಾನದ ಸಂಗತಿ. …
Read More »ಆತ್ಮಹತ್ಯೆಗೆ ಅವಕಾಶ ಕೊಡಿ ಎಂದ ಅನ್ವರ್ ಕಟುಂಬಸ್ಥರು; ಗೃಹ ಸಚಿವರಿಗೆ ಮನವಿ
ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷನ ಕೊಲೆ ರಾಜಾರೋಷವಾಗಿ ನಗರದ ಹೃದಯಭಾಗದಲ್ಲೂ ನಡೆದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಇಲ್ಲಿವರೆಗೂ ಯಶಸ್ಸು ಕಂಡಿಲ್ಲ. ಚಿಕ್ಕಮಗಳೂರು: ಕಾಫಿನಾಡನ್ನು ಬೆಚ್ಚಿಬೀಳಿಸಿದ ಬಿಜೆಪಿ ಮುಖಂಡ ಅನ್ವರ್ ಕೊಲೆಯಾಗಿ ಬರೋಬ್ಬರಿ 3 ವರ್ಷ 2 ತಿಂಗಳಾಯ್ತು. ಪ್ರಕರಣ ಭೇದಿಸುವ ಪೊಲೀಸರು ದಿನ-ವಾರ-ತಿಂಗಳು-ವರ್ಷ ಎಂದು ನೆಪ ಹೇಳುತ್ತಿದ್ದಾರೆ. ಇದರಿಂದ ಅನ್ವರ್ ಕುಟುಂಬಸ್ಥರು ಪೊಲೀಸ್ ಇಲಾಖೆ ಮೇಲೆ ಭರವಸೆಯನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಇದೇ ಆಗಸ್ಟ್ 15ರಂದು ಜಿಲ್ಲೆಗೆ ಬಂದಿದ್ದ ಗೃಹ …
Read More »ಮಧ್ಯ ರೈಲ್ವೇಯಿಂದ ಡಿಜಿ ಲಾಕರ್ ಸೌಲಭ್ಯ
ಮುಂಬಯಿ: ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯ ರೈಲ್ವೇ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್ಎಂಟಿ) ನಿಲ್ದಾಣದಲ್ಲಿ “ಡಿಜಿ’ ಲಾಕರ್ ಸೌಲಭ್ಯವನ್ನು ಆರಂಭಿಸಿದೆ. ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಆರಂಭಿಸಿದ ದೇಶದ ಮೊದಲ ಡಿಜಿ ಲಾಕರ್ ಸೌಲಭ್ಯ ಇದಾಗಿದ್ದು, ಈ ಸೌಲಭ್ಯವನ್ನು ದಾದರ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಸ್ನಲ್ಲಿಯೂ ಶೀಘ್ರ ಆರಂಭಿಸಲಾಗುವುದು ಎಂದು ಮಧ್ಯ ರೈಲ್ವೇ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರ ಹೆಸರು, ಮೊಬೈಲ್ ಸಂಖ್ಯೆ, ಪಿಎನ್ಆರ್ ಸಂಖ್ಯೆ ಮತ್ತು ಇ-ಮೇಲ್ ಐಡಿ ತುಂಬಿದ …
Read More »ಗಣಿಗಾರಿಕೆಯನ್ನು ಮುಂದಿನ ಮೂರು ತಿಂಗಳಲ್ಲಿ ಆರಂಭ : ಪ್ರಮೋದ್ ಸಾವಂತ್
ಪಣಜಿ : ರಾಜ್ಯದಲ್ಲಿ ಗಣಿಗಾರಿಕೆಯನ್ನು ಮುಂದಿನ ಮೂರು ತಿಂಗಳಲ್ಲಿ ಗೋವಾ ಸರ್ಕಾರಿ ಖನಿಜ ಅಭಿವೃದ್ಧಿ ನಿಗಮದ ಅಡಿಯಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭರವಸೆ ನೀಡಿದ್ದಾರೆ. ಇಂದು(ಶುಕ್ರವಾರ, ಆಗಸ್ಟ್ 20) ದಕ್ಷಿಣ ಗೋವಾದ ಧಾರಬಾಂದೋರಾದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಸಾವಂತ್, ಹೊಸದಾಗಿ ರಚನೆಯಾದ ಗೋವಾ ಖನಿಜ ಅಭಿವೃದ್ಧಿ ನಿಗಮದ ಅಡಿಯಲ್ಲಿ ಮುಂದಿನ ಮೂರು ತಿಂಗಳಲ್ಲಿ ಈಗಾಗಲೇ ಹರಾಜು ಮಾಡಿದ ಕಬ್ಬಿಣದ ಅದಿರು ಸಾಗಾಟದಂತಹ ಚಟುವಟಿಕೆಯನ್ನು ಆರಂಭಿಸಲಾಗುವುದು ಎಂದು ಮಾಹಿತಿ …
Read More »ಗೋವಾ : ಶೇ. 70 ರಷ್ಟು ಮೀನುಗಾರಿಕಾ ಬೋಟ್ ಗಳು ದಡದಲ್ಲಿಯೇ ಸ್ತಬ್ಧ.!
ಪಣಜಿ : ಗೋವಾದಲ್ಲಿ ಮೀನುಗಾರಿಕೆ ಪುನರಾರಂಭಗೊಂಡು 20 ದಿನಗಳು ಕಳೆದರೂ ಕೂಡ ಕಾರ್ಮಿಕರ ಕೊರತೆಯಿಂದಾಗಿ ಮತ್ತು ಹವಾಮಾನ ವೈಪರಿತ್ಯದಿಂದಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಲು ಸಾಧ್ಯವಾಗದೆಯೇ ಶೇ 70 ರಷ್ಟು ಮೀನುಗಾರಿಕಾ ಬೋಟ್ಗಳು ದಡದಲ್ಲಿಯೇ ನಿಂತಿರುವಂತಾಗಿದೆ. ರಾಜ್ಯದ ವಿವಿಧ ಜೆಟಿಗಳಲ್ಲಿ ಶೇ 70 ಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ಗಳು ನಿಂತಿರುವ ದೃಶ್ಯ ಕಂಡುಬರುತ್ತಿದೆ. ಮಳೆಗಾಲದಲ್ಲಿ 61 ದಿನಗಳ ಮೀನುಗಾರಿಕಾ ನಿರ್ಬಂಧದ ನಂತರ ಅಗಷ್ಟ 1 ರಿಂದ ಮೀನುಗಾರಿಕೆ ಪುನರಾರಂಭಗೊಂಡಿದೆಯಾದರೂ ಹವಾಮಾನ ವೈಪರಿತ್ಯದಿಂದ …
Read More »ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು ದುಸ್ತರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ರಾಯಚೂರು : ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಜನಾಶೀರ್ವಾದ ಸಮಾರಂಭವನ್ನು ನಡೆಸುತ್ತಿದ್ದು , ಇದಕ್ಕೂ ಪೂರ್ವದಲ್ಲಿ ಸಾರ್ವಜನಿಕರಿಗೆ ಏನನ್ನು ನೀಡಿ ಆಶೀರ್ವಾದ ಪಡೆಯಲು ಮುಂದಾಗಿರುವುದರ ಬಗ್ಗೆ ಬಿಜೆಪಿಗರು ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ . ಕೆ . ಶಿವಕುಮಾರ ಲೇವಡಿ ಮಾಡಿದ್ದಾರೆ . ಸ್ಥಳೀಯ ಖಾಸಗಿ ಹೋಟೆಲ್ ನಲ್ಲಿ ವಿಭಾಗೀಯ ಮಟ್ಟದ ಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ , ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು …
Read More »ಕೈಗಾರಿಕಾ ಪ್ರದೇಶದಲ್ಲಿ ತಲೆ ಎತ್ತಲಿದೆ ರೆಸಿಡೆನ್ಸಿಯಲ್ ಟೌನ್ ಶಿಪ್: ಮುರುಗೇಶ್ ನಿರಾಣಿ
ಬೆಂಗಳೂರು: ಇನ್ನು ಮುಂದೆ ಕೈಗಾರಿಕಾ ಪ್ರದೇಶಗಳಲ್ಲಿ ಶೇ.10ರಿಂದ 15ರಷ್ಟು ಜಾಗವನ್ನು ವಸತಿ ಬಡಾವಣೆ (ರೆಸಿಡೆನ್ಸಿಯಲ್ ಟೌನ್ಶಿಪ್) ಗಳ ನಿರ್ಮಾಣದ ಉದ್ದೇಶಕ್ಕಾಗಿ ಮೀಸಲಿಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಸಚಿವ ಮುರುಗೇಶ್ ನಿರಾಣಿ ಎಂದು ಹೇಳಿದ್ದಾರೆ. ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) …
Read More »ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರ ಸಾವು
ವಿದ್ಯುತ್ ಸ್ಪರ್ಶದಿಂದ ನೆಲಕ್ಕೆ ಬಿದ್ದವರನ್ನ ಲಿಂಗಸಗೂರು ತಾಲುಕು ಅಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ. ಸ್ಥಳಕ್ಕೆ ಮಸ್ಕಿ ಠಾಣೆಯ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ರಾಯಚೂರು: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶವಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೊಹರಂ ದೇವರನ್ನ ಹೊತ್ತಿದ್ದ ಛತ್ರಿಗೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ದೇವರನ್ನು ಹೊತ್ತಿದ್ದ ಹುಸೇನ್ ಸಾಬ್ (50) ಮತ್ತು ಒಬ್ಬ ಮಹಿಳೆ ಅಸುನೀಗಿದ್ದಾರೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಸಂತೆ ಕೆಲ್ಲೂರು …
Read More »ಇನ್ನೂ ಬಾರದ ಜಾಮೀನು ಆದೇಶ ಪ್ರತಿ: ಇನ್ನೊಂದು ದಿನ ಜೈಲಲ್ಲೇ ವಿನಯ್ ಕುಲಕರ್ಣಿ ವಾಸ್ತವ್ಯ
ಬೆಳಗಾವಿ: ಜಿ.ಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಶುಕ್ರವಾರವೂ ಬಿಡುಗಡೆ ಭಾಗ್ಯ ಸಿಗಲಿಲ್ಲ. ಜಾಮೀನು ಸಿಕ್ಕರೂ ಆದೇಶ ಪ್ರತಿ ಬಾರದ ಕಾರಣ ಇನ್ನೊಂದು ದಿನ ಜೈಲಿನಲ್ಲಿ ಉಳಿಯಬೇಕಾದ ಅನಿವಾರ್ಯತೆ ಒದಗಿ ಬಂದಿದೆ. ಸುಪ್ರೀಂ ಕೋರ್ಟ್ ಮತ್ತು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ವಿನಯ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದರೂ ಇನ್ನೊಂದು ದಿನ ಜೈಲಿನಲ್ಲಿ ಉಳಿಯಬೇಕಾಗಿದೆ. ವರಮಹಾಲಕ್ಷ್ಮೀ ಹಬ್ಬದಂದು ಶುಕ್ರವಾರ ಬಿಡುಗಡೆ ಆಗಲಿಲ್ಲ. ಹಿಂಡಲಗಾ ಜೈಲಿನಿಂದ ಬಿಡುಗಡೆ …
Read More »
Laxmi News 24×7