Breaking News

ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ

ಬೆಂಗಳೂರು – ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರಮೇಶ ಜಾರಕಿಹೊಳಿ ರಾಜಿನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಉಮೇಶ ಕತ್ತಿ ಅವರಿಗೆ ಬಾಗಲಕೋಟೆಯ ಉಸ್ತುವಾರಿ ವಹಿಸಲಾಗಿದೆ. ಅರವಿಂದ ಲಿಂಬಾವಳಿ ಬೀದರ್, ಎಂಟಿಬಿ ನಾಗರಾಜ ಕೋಲಾರ, ಮುರುಗೇಶ ನಿರಾಣಿ ಕಲಬುರಗಿ, ಎಸ್.ಅಂಗಾರ ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದಾರೆ.

Read More »

ಸರ್ಕಾರದ ಹೊಸ ಮಾರ್ಗಸೂಚಿಗೆ ತರಕಾರಿ ಮಾರಾಟ ಮಹಿಳೆಯರ ಕಣ್ಣೀರು

ಗದಗ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕನುಗುಣವಾಗಿ ಸಾವಿನ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್​ಡೌನ್​ ಜಾರಿಗೊಳಿಸಿದೆ. ಲಾಕ್​ಡೌನ್​ ನಡುವೆ ನಿನ್ನೆಯ ವರೆಗೆ ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯ ವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಿತ್ತು. ಈ ವೇಳೆ ಜನರು ಕೊರೊನಾ ಬಗ್ಗೆ ಕಿಂಚಿತ್ತು ಭಯ ಪಡದೇ, ಮಾಸ್ಕ್ ಧರಿಸದೆ ಮತ್ತು ಸಾಮಾಜಿಕ …

Read More »

ಬೆಂಗಳೂರು: ಹೊರವಲಯದಲ್ಲಿ ಸಾಮೂಹಿಕ ಶವಸಂಸ್ಕಾರ ಮುಂದುವರಿಕೆ

ಬೆಂಗಳೂರು: ಕೋವಿಡ್‌ನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಚಿತಾಗಾರಗಳ ಮುಂದೆ ಶವಗಳ ಸಾಲು ಉದ್ದವಾಗುತ್ತಲೇ ಇದೆ. ಮೃತರ ಸಂಬಂಧಿಕರು ದಿನವಿಡೀ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನಗರದ ಹೊರವಲಯದ ತಾವರೆಕೆರೆ ಮತ್ತು ಇಲ್ಲಿಂದ 2 ಕಿ.ಮೀ. ದೂರದಲ್ಲಿರುವ ಗಿಡ್ಡೇನಹಳ್ಳಿ, ಚಾಮರಾಜಪೇಟೆ ಸ್ಮಶಾನದಲ್ಲಿ ಸಾಮೂಹಿಕ ಶವಸಂಸ್ಕಾರಕ್ಕೆ ಸರ್ಕಾರ ವ್ಯವಸ್ಥೆ ಮಾಡಿದ್ದು, ಇಲ್ಲಿಯೂ ಕೂಡ ಆಂಬುಲೆನ್ಸ್‌ಗಳು ಸಾಲುಗಟ್ಟಿ ನಿಂತಿವೆ. ಏಕಕಾಲಕ್ಕೆ 26 ಶವಗಳನ್ನು ದಹನ ಮಾಡಲಾಗುತ್ತಿದೆ. ಎರಡು ಪಾಳಿಗಳಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ …

Read More »

ಅನಗತ್ಯವಾಗಿ ಹೊರಬಂದವರಿಗೆ ಬಿಗ್ ಶಾಕ್: ವಾಹನ ಬಿಡುಗಡೆ ಸದ್ಯಕ್ಕಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದವರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುಮಾರು 7000 ವಾಹನಗಳನ್ನು ಜಪ್ತಿ ಮಾಡಲಾಗಿದೆ. ರಾಜ್ಯ ವಿವಿಧ ಕಡೆಗಳಲ್ಲೂ ನೂರಾರು ಸಂಖ್ಯೆಯ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಂಡ ಹಾಕಲಾಗಿದೆ. ಜಪ್ತಿ ಮಾಡಿರುವ ವಾಹನಗಳನ್ನು ಸದ್ಯಕ್ಕೆ ಬಿಡುಗಡೆ ಮಾಡುವುದಿಲ್ಲ ಎನ್ನಲಾಗಿದೆ. ಜಪ್ತಿ ಮಾಡಿದ ವಾಹನಗಳನ್ನು ಠಾಣೆಗೆ ಸಾಗಿಸಿದ್ದು, ಅವುಗಳ ರಕ್ಷಣೆ, ಸುರಕ್ಷತೆ ಪೊಲೀಸರಿಗೆ ಸವಾಲಾಗಿದೆ. ಬಹುತೇಕ …

Read More »

ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : `LDF’ ಗೆ ಭರ್ಜರಿ ಮುನ್ನಡೆ

ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ. ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರ ಸಿಗುವ ಸಾಧ್ಯತೆ ಇದೆ. ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 76 ಸ್ಥಾನಗಳಲ್ಲಿ, ಯುಡಿಎಫ್ 47 ರಲ್ಲಿ …

Read More »

32ನೇ ಸುತ್ತಿನಲ್ಲಿ  ಬಿಜೆಪಿ 11883 ಮತಗಳಿಂದ ಮುನ್ನಡೆ

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 32ನೇ ಸುತ್ತಿನಲ್ಲಿ  ಬಿಜೆಪಿ 11883 ಮತಗಳಿಂದ ಮುನ್ನಡೆ ಸಾಧಿಸಿದೆ. ಬಿಜೆಪಿ 165362, ಕಾಂಗ್ರೆಸ್ 153479 ಮತ ಪಡೆದಿದೆ.

Read More »

ಪಶ್ಚಿಮ ಬಂಗಾಳದಲ್ಲಿ TMC, ತಮಿಳುನಾಡಲ್ಲಿ DMKಗೆ ಮುನ್ನಡೆ; ಮುಗ್ಗರಿಸುತ್ತಾ ಬಿಜೆಪಿ?

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಗೆ ಶುರುವಾಗಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಎಂಟಿಸಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಮಮತಾ ಬ್ಯಾನರ್ಜಿ ಸರ್ಕಾರದತ್ತ ಈ ಬಾರಿಯೂ ಮತದಾರರು ವಾಲಿದ್ದು, ಬೆಳಗ್ಗೆ 10 ಗಂಟೆ ಹೊತ್ತಿಗೆ 102 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಬಿಜೆಪಿಯೂ ಪ್ರಬಲ ಪೈಪೋಟಿ ನೀಡುತ್ತಿದ್ದು 84 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 292 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಯಾವ ಪಕ್ಷ ಜನ ಬೆಂಬಲದೊಂದಿಗೆ ಮ್ಯಾಜಿಕ್​ ನಂಬರ್​ …

Read More »

ಗೋಕಾಕ್ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಲಕ್ಷ್ಮೀ ಹೆಬ್ಬಾಳಕರ ಅವರ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ

ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಅಣ್ಣ ರಮೇಶ ಜಾರಕಿಹೊಳಿಯ ಕ್ಷೇತ್ರ ಗೋಕಾಕದಲ್ಲಿ ಕಾಂಗ್ರೆಸ್ ನ ಸತೀಶ ಜಾರಕಿಹೊಳಿಗೆ ಈ ಕ್ಷಣದಲ್ಲಿ ಹಿನ್ನಡೆ ಆಗಿದ್ದು, ಜತೆಗೆ ಲಕ್ಷ್ಮೀ ಹೆಬ್ಬಾಳಕರ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿದಿದೆ. ಬೆಳಗಾವಿ ಲೋಕಸಭೆ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ಪಡೆಯುತ್ತಿದ್ದು, ಬಿಜೆಪಿಯ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ ಶುರುವಾಗಿದೆ. ಸದ್ಯ 11,831 ಸಾವಿರಕ್ಕೂ ಹೆಚ್ಚು ಮತಗಳ ಅಂತರವನ್ನು ಮಂಗಳಾ …

Read More »

Karnataka By Election 2021 : ’21ನೇ ಸುತ್ತಿ’ನಲ್ಲೂ ‘ಬೆಳಗಾವಿ ಲೋಕಸಭಾ ಉಪ ಚುನಾವಣೆ’ಯಲ್ಲಿ ಬಿಜೆಪಿಯ ‘ಮಂಗಳಾ ಅಂಗಡಿ’ ಮುನ್ನೆಡೆ

ಬೆಳಗಾವಿ : ಲೋಕಸಭಾ ಉಪ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಚುನಾವಣೋತ್ತರ ಸಮೀಕ್ಷೆಯಂತೆ, ಬೆಳಗಾವಿಯಲ್ಲಿ, 21ನೇ ಸುತ್ತಿನವರೆಗೆ ಬಿಜೆಪಿಯ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 21ನೇ ಸುತ್ತಿನ ಮತಏಣಿಕೆಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ 2245 ಮತಗಳ ಅಂತರದಿಂದ ಮುನ್ನಡೆ ಹೊಂದಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ 21ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. 21ನೇ ಸುತ್ತಿನ ಮತಏಣಿಕೆ ಮುಕ್ತಾಯಗೊಂಡಿದ್ದು, 2245 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಂದಹಾಗೇ …

Read More »

ಮಸ್ಕಿ ಫಲಿತಾಂಶಕ್ಕೆ ಮೊದಲೇ ಸೋಲು ಒಪ್ಪಿಕೊಂಡ ಪ್ರತಾಪ್ ಗೌಡ

ಮಸ್ಕಿ: ಚುನಾವಣಾ ಮತ ಎಣಿಕೆಯ ಹಲಲು ಸುತ್ತುಗಳು ಬಾಕಿ ಇರುವಾಗಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ಒಪ್ಪಿಕೊಂಡಿದ್ದಾರೆ. ನಮ್ಮವರೇ ನಮಗೆ ಮೋಸ ಮಾಡಿದರು. ಈ ಪರಿಸ್ಥಿತಿ ಕಾಂಗ್ರೆಸ್ ಗೆ ಅನುಕೂಲವಾಗಿದೆ. ಕ್ಷೇತ್ರದಲ್ಲಿ ನನ್ನ ಮೇಲೆ ವಿರೋಧಿ ಅಲೆ ಸೃಷ್ಟಿಯಾಗಿದೆ ಎಂದು ಪ್ರತಾಪ್ ಗೌಡ ಪಾಟೀಲ್ ದೂರಿದ್ದಾರೆ. 9ನೇ ಸುತ್ತಿನ ಮತ ಏಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ್ ತುರ್ವಿಹಾಳ 10,311 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಬಸನಗೌಡ ಪಾಟೀಲ್ …

Read More »