Breaking News

ಬಿಹಾರದಲ್ಲಿ ಎರಡನೇ ಹಂತದ ಮತದಾನ,ಕೊರೊನಾ ಸೋಂಕಿತರು ಹಕ್ಕು ಚಲಾಯಿಸಬಹುದು.

ನವದೆಹಲಿ : ಬಿಹಾರ ವಿಧಾನಸಭೆ ಚುನಾವಣೆ ನಿರ್ಣಾಯಕ ಘಟ್ಟ ತಲುಪಿದ್ದು ಇಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ದೇಶದ 10 ರಾಜ್ಯಗಳ 54 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, ಮತದಾರರು ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. ಬಿಹಾರದ 17 ಜಿಲ್ಲೆಯ 94 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಬಿಹಾರದಲ್ಲಿ ಮುಂದಿನ ಸರ್ಕಾರ ಯಾರದ್ದು ಅನ್ನೋದನ್ನ ಬಹುತೇಕ ಈ ಹಂತ ನಿರ್ಧರಿಸಲಿದ್ದು 2.86 ಕೋಟಿ ಮತದಾರರು 1463 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಬೆಳಗ್ಗೆ …

Read More »

ಸಿಎಂ ಅಸಹಾಯಕ ಸ್ಥಿತಿಗೆ ತಂದ ಶಕ್ತಿ ಹೆಸರನ್ನು ಸಮಯ ಬಂದಾಗ ತಿಳಿಸುತ್ತೇನೆ: ಶಾಸಕ ಶಿವಲಿಂಗೇಗೌಡ

ಹಾಸನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಹಾಯಕ ಸ್ಥಿತಿ ತಲುಪಿದ್ದು, ಅವರನ್ನು ಈ ಸ್ಥಿತಿಗೆ ತಂದ ಶಕ್ತಿ ಹೆಸರನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದ್ದಾರೆ. ಅರಸೀಕೆರೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಳಿಕ ಮಾತನಾಡಿದ ಅವರು, ಅರಸೀಕೆರೆ ನಗರದ ಅಭಿವೃದ್ಧಿ ಕುಲಗೆಡಿಸಲು ಮಾಡಿದ ಅನೈತಿಕ ಮೀಸಲಾತಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದೆ. ಅವರು ರಾಜಕೀಯದ ಒತ್ತಡದಿಂದ ಇದೆಲ್ಲ ಆಗುತ್ತಿದೆ ಎಂದು ಅಸಹಾಯಕತೆ ತೋಡಿಕೊಂಡರು. ಅವರನ್ನು ಅಸಹಾಯಕ ಸ್ಥಿತಿಗೆ …

Read More »

ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕ ಚಾಕುವಿನಿಂದ ತನ್ನ ಚಿಕ್ಕಪ್ಪನನ್ನೇ ಇರಿದು ಕೊಲೆ ..

ಕೋಲಾರ: ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕ ಚಾಕುವಿನಿಂದ ತನ್ನ ಚಿಕ್ಕಪ್ಪನನ್ನೇ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಮಾಲೂರು ತಾಲೂಕಿನ ಬೆನ್ನಘಟ್ಟ ಗ್ರಾಮದಲ್ಲಿ ಘಟನೆ ನಡೆದಿದ್ದು, ತಮಿಳುನಾಡು ಗಡಿಯಲ್ಲಿ ಹೆಚ್ಚು ಸಿಗುವ ಗಾಂಜಾವನ್ನ ಅಪ್ಪ-ಮಗ ಹೊಡೆದಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದು, ಕುಡಿದ ಅಮಲಿನಲ್ಲಿ ಅಪ್ರಾಪ್ತ ಚಿಕ್ಕಪ್ಪ ವಿಜಯ್ ಕುಮಾರ್ ನನ್ನೇ ಕೊಲೆ ಮಾಡಿದ್ದಾನೆ.

Read More »

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು, ಪತ್ನಿ ಆತ್ಮಹತ್ಯೆ

ಚಿಕ್ಕಮಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು, ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರೆ, ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವಿನಿಂದ ಪಾರಾದ ಘಟನೆ ನಗರದ ಕೆಂಪನಹಳ್ಳಿಯಲ್ಲಿ ನಡೆದಿದೆ. ಮೃತಳನ್ನು 23 ವರ್ಷದ ರಂಜಿತಾ ಎಂದು ಗುರುತಿಸಲಾಗಿದ್ದು, ವಿಷ ಸೇವಿಸಿದ್ದ ಪತಿ ಅರುಣ್ ಸಾವಿನಿಂದ ಪಾರಾಗಿದ್ದಾನೆ. ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ಹೊಗರೆಹಳ್ಳಿಯ ರಂಜಿತಾಳನ್ನು ಮೂರು ವರ್ಷದ ಹಿಂದೆ ಚಿಕ್ಕಮಗಳೂರು ನಗರದ ಅರುಣ್ ವಿವಾಹವಾಗಿದ್ದ. ಮದುವೆ ಮುಂಚೆಯಿಂದಲೂ ಅರುಣ್ ಪರ ಸ್ತ್ರೀಯೊಂದಿಗೆ …

Read More »

ಆರ್.ಆರ್.ನಗರ, ಶಿರಾ ಉಪ ಕದನಗಳಿಗೆ ಇವತ್ತು ಮತದಾನ, ಕೊರೊನಾ ಸೋಂಕಿತರು ಮತದಾನ ಮಾಡಬಹುದಾಗಿದೆ.

ಬೆಂಗಳೂರು: ಪ್ರತಿಷ್ಠೆಯ, ಜಿದ್ದಾಜಿದ್ದಿನ ಕ್ಷೇತ್ರ ಎನಿಸಿಕೊಂಡಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತದಾನ ಶುರು ಆಗಿದೆ. ಕೊರೊನಾ ಹೊತ್ತಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಉಪ ಚುನಾವಣೆ ಇದಾಗಿದೆ. ಕೊರೊನಾಗೆ ಆತಂಕಗೊಳ್ಳದೇ ಮತಗಟ್ಟೆಗೆ ಬಂದು ನಿಮ್ಮ ಹಕ್ಕು ಚಲಾಯಿಸಿ ಎಂದು ಚುನಾವಣಾ ಆಯೋಗ ಮನವಿ ಮಾಡಿದೆ. ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ …

Read More »

ಬೊಕ್ಕಸದ ದುಡ್ಡು ಎಲ್ಲಿ ಹೋಯ್ತು..? : ಸಿದ್ದು

ಬೆಂಗಳೂರು, ನ.2- ನೆರೆ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೂ ಹಣವಿಲ್ಲ ಎಂದು ಹೇಳಲಾಗುತ್ತಿದೆ. ಬೋಕ್ಕಸ ಮಾತ್ರ ಖಾಲಿಯಾಗಿದೆ. ಹಾಗಿದ್ದರೆ ಹಣ ಎಲ್ಲಾ ಎಲ್ಲಿ ಹೋಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ವರ್ಷದಿಂದ ನೆರೆ ಸಂತ್ರಸ್ಥರಿಗೆ ಪರಿಹಾರ ಪಾವತಿಸಿಲ್ಲ ಎಂಬ ವರದಿಯನ್ನು ಟ್ಯಾಗ್ ಮಾಡಿ ಪ್ರಶ್ನೆ ಕೇಳಿರುವ ಸಿದ್ದರಾಮಯ್ಯ, ಉತ್ತರ ಕೊಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ …

Read More »

ಭೀಮಾ ತೀರದ ಹಂತಕ ಮಹಾದೇವ್ ಸಾಹುಕಾರ್ ಮೇಲೆ ನಡೆದ  ಫೈರಿಂಗ್  ನಲ್ಲಿ  ಬಾಬುರಾಯ ಎಂಬಾತ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ.

ವಿಜಯಪುರ:   ಭೀಮಾ ತೀರದ ಹಂತಕ ಮಹಾದೇವ್ ಸಾಹುಕಾರ್ ಮೇಲೆ ನಡೆದ  ಫೈರಿಂಗ್  ನಲ್ಲಿ  ಬಾಬುರಾಯ ಎಂಬಾತ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಇಂದು ಮಧ್ಯಾನ್ಹದ ವೇಳೆ ಚಡಚಣ ತಾಲೂಕಿನ ಕೊರೂರ್ ಬಳಿ  ಮಹಾದೇವ್ ಕಾರಿಗೆ ಟಿಪ್ಪರ್ ನಿಂದ ಡಿಕ್ಕಿ ಹೊಡೆಸಿದ ದುಷ್ಕರ್ಮಿಗಳು  3-4 ಸುತ್ತು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ  ಮಹಾದೇವ್ ಸಾಹುಕಾರ್ ಜತೆಗಿದ್ದ ಬಾಬುರಾಯ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ಗುಂಡಿನ  ದಾಳಿಯಲ್ಲಿ  ತೀವ್ರ ಗಾಯಗೊಂಡಿರುವ ಮಹಾದೇವ್ ಸೇರಿ ಮೂವರನ್ನು  …

Read More »

ಲಕ್ಷ್ಮಣ ಸವದಿ ಅವರ ಪ್ರತಿಕೃತಿ ದಹನ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿ ತಮ್ಮ ಪುಂಡಾಟ ಹೆಚ್ಚಿಸಿದಶಿವಸೇನೆ ಪುಂಡರು

ಬೆಳಗಾವಿ : ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಹೇಳಿಕೆಗೆ  ಮಹಾರಾಷ್ಟ್ರ ಶಿವಸೇನೆ ಪುಂಡರು ರಾಷ್ಟ್ರೀಯ ಹೆದ್ದಾರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ನಗರದಲ್ಲಿ ಶನಿವಾರ ಡಿಸಿಎಂ ಲಕ್ಷ್ಮಣ ಸವದಿ ಮಹಾರಾಷ್ಟ್ರ ಸಚಿವರು ಬೆಳಗಾವಿ ಗಡಿ ಮರಾಠಿಗರಿಗೆ ನೀಡಿದ ಕರಾಳ ದಿನ ಕರೆ ಪತ್ರಕ್ಕೆ ಪ್ರತಿಕ್ರಿಸಿ, ಯಾರು ಎಷ್ಟೇ ಹೇಳಿದರು, ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಎಂದು ಹೇಳಿದ್ದರು. ಇದಕ್ಕೆ ಆಕ್ರೋಶಗೊಂಡ ಮಹಾರಾಷ್ಟ್ರ …

Read More »

ಗೋಕಾಕ ನಗರಸಭೆ ಅಧ್ಯಕ್ಷರ ಅವಿರೋಧ ಆಯ್ಕೆ ಒಳ್ಳೆಯ ಬೆಳವಣಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ       ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ …

Read More »

ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರಿಗೆ ಪೊಲೀಸರ ಗುಂಡೇಟು

ಆನೇಕಲ್,ನ.2- ರೌಡಿಗಳಾಗಬೇಕು ಎಂಬ ಉದ್ದೇಶದಿಂದ ಯುವಕನೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಾಲ್ಕು ಮಂದಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿಯುವಲ್ಲಿ ಆನೇಕಲ್ ಉಪವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಅನಂತರಾಮ, ಗೋಪಿ, ಗಂಗ, ಬಸವ, ಗುಂಡೇಟು ತಗುಲಿ ಗಾಯಗೊಂಡಿರುವ ಆರೋಪಿಗಳು. ಕಾರ್ಯಾಚರಣೆ ವೇಳೆ ಆರೋಪಿಗಳಾದ ಪವನ್ ಮತ್ತು ಗುಂಡ ಮತ್ತಿತರರು ಪರಾರಿಯಾಗಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಮಾಯಸಂದ್ರ ಕೋಡಿಯಲ್ಲಿ ಬೆಸ್ತಮಾನಹಳ್ಳಿ ನಿವಾಸಿ ವಿನೂತ್ ಎಂಬಾತನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಇಂದು …

Read More »