ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ” ಬಿಎಸ್ ವೈ ಕಣ್ಣೀರು ಪದತ್ಯಾಗ’ ವಲ್ಲ ‘ಪದಚ್ಯುತಿ’ ಎಂದು ಸಾರಿ ಹೇಳುತ್ತಿದೆ” ಎಂದು ವ್ಯಂಗ್ಯವಾಡಿದೆ. ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಣೆ ಮಾಡುವ ಮೂಲಕ ಒಪ್ಪಿಕೊಂಡಂತಾಗಿದೆ. ಅವರೇ ಹೇಳಿಕೊಳ್ಳುವಂತೆ ಸಮರ್ಥ ಆಡಳಿತವೇ ಆಗಿದ್ದಿದ್ದರೆ ಈ ಬಿಜೆಪಿಯ ಹೈಕಮಾಂಡ್ …
Read More »ರಾಜೀನಾಮೆ ಬೆನ್ನಲ್ಲೇ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಬಿಎಸ್ವೈ ನಿವಾಸ ಖಾಲಿ ಖಾಲಿ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಡಾಲರ್ಸ್ ಕಾಲೋನಿಯ ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ಐವತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ ಸಿಎಂ ಡಾಲರ್ಸ್ ಕಾಲೋನಿ ನಿವಾಸದ ಎರಡು ಕಡೆಯ ರಸ್ತೆಗೆ ಮೂವತ್ತಕ್ಕೂ ಹೆಚ್ಚು ಬ್ಯಾರೀಕೆಡ್ ಹಾಕಲಾಗಿದೆ. ಆದರೆ ಕಳೆದೊಂದು ವಾರದಿಂದ ಸಿಎಂ ಡಾಲರ್ಸ್ ಕಾಲೋನಿ ನಿವಾಸ ಖಾಲಿಯೇ ಇದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕುಟುಂಬಸ್ಥರು ಯಾರು ಡಾಲರ್ಸ್ ಕಾಲೋನಿ ನಿವಾಸದಲ್ಲಿಲ್ಲ. ಸದ್ಯ ಡಾಲರ್ಸ್ …
Read More »ಬಿಎಸ್ವೈ ರಾಜೀನಾಮೆ ನಿರ್ಧಾರ: ಕಾರು ಚಾಲಕನ ಕಣ್ಣೀರು
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ. ಜನಸ್ನೇಹಿ ಆಡಳಿತ ಕಾರ್ಯಕ್ರಮದಲ್ಲಿ ಭಾವುಕರಾಗಿ ಯಡಿಯೂಪ್ಪ ತಮ್ಮ ನಿರ್ಧಾರ ತಿಳಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ವಿಧಾನ ಸೌಧದ ಹೊರಗೆ ನಿಂತಿದ್ದ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಕಾರು ಚಾಲಕನ ಕಣ್ಣೀರು ಹಾಕಿದ್ದಾರೆ. ಯಡಿಯೂರಪ್ಪ ಅವರ ನಿರ್ಧಾರ ನೆನೆದು ಕಾರು ಚಾಲಕ ರವಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
Read More »ನಾಳೆಯೇ ಕರ್ನಾಟಕಕ್ಕೆ ಹೊಸ ಸಿಎಂ ಘೋಷಣೆ…?
ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿರುವ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಈ ನಡುವೆ ನಾಳೆಯೇ ಮುಂದಿನ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನಾಳೆ ನವದೆಹಲಿಯಲ್ಲಿ ಬೆಳಿಗ್ಗೆ 9:30ಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಸಿಎಂ ರೇಸ್ ನಲ್ಲಿ ಹಲವರ ಹೆಸರು ಕೇಳಿಬಂದಿದ್ದು, ಸ್ಪೀಕರ್ ವಿಶ್ವೇಶ್ವರ …
Read More »ಮುಂದಿನ ಸಿಎಂ ಆಯ್ಕೆಯಲ್ಲಿ ನನ್ನ ಪಾತ್ರ ಇಲ್ಲ- ಯಡಿಯೂರಪ್ಪ
ವಿಧಾನಸೌಧದಲ್ಲಿಂದು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ 2ನೇ ವರ್ಷದ ಸಂಭ್ರಮಾಚರಣೆ ಜೊತೆಗೆ ವಿದಾಯಕ್ಕೂ ವೇದಿಕೆಯಾಗಿತ್ತು. ಯಡಿಯೂರಪ್ಪ ಅವರು ತಮ್ಮ ಸರ್ಕಾರ, ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಹೋರಾಟದ ಹಾದಿಯನ್ನು ಸ್ಮರಿಸಿ ಭಾವುಕರಾದರು. ಭಾಷಣದ ಕೊನೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಘೋಷಿಸಿದರು. ಈ ಮೂಲಕ ಕರ್ನಾಟಕದಲ್ಲಿನ ಬಿರುಸಿನ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಚುರುಕುಗೊಳ್ಳುವಂತಾಗಿದೆ. ಮುಂದಿನ ಸಿಎಂ ಯಾರಾಗಬಹುದು? ಯಾರೆಲ್ಲ ಡಿಸಿಎಂ ಸ್ಥಾನಕ್ಕೆ ಲಾಬಿ ನಡೆಸಿದ್ದಾರೆ? ಸಂಪುಟ ರಚನೆ ಹೇಗಿರಲಿದೆ? ಎಂಬುದರ …
Read More »4 ಬಾರಿ ಸಿಎಂ ಆದ್ರೂ ಅವಧಿ ಪೂರೈಸಿಲ್ಲ; BSY ಹೋದರೂ ಮತ್ತೋರ್ವ ಭ್ರಷ್ಟ ಸಿಎಂ ಬರ್ತಾರೆ; ಯಡಿಯೂರಪ್ಪ ರಾಜೀನಾಮೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಿನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಅಧಿಕಾರದಲ್ಲಿತ್ತು, ಯಡಿಯೂರಪ್ಪ ಮಾತ್ರವಲ್ಲ ಇಡೀ ಬಿಜೆಪಿಯೇ ರಾಜ್ಯದಿಂದ ತೊಲಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪಗೆ ಸರಿಸಾಟಿಯಾದ ನಾಯಕ ಬೇರೆ ಯಾರೂ ಇಲ್ಲ. ಆದರೆ ಯಡಿಯೂರಪ್ಪ ಓರ್ವ ಭ್ರಷ್ಟ ಸಿಎಂ ಆಗಿದ್ದರು. ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ ಎಂದು 6 ತಿಂಗಳ ಹಿಂದೆಯೇ ನಾನು ಹೇಳಿದ್ದೆ. ಇದು ಗೊತ್ತಿರುವ ವಿಚಾರ. …
Read More »ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆಂದು ಕಣ್ಣೀರಿಟ್ಟ ಬಿ.ಎಸ್. ಯಡಿಯೂರಪ್ಪ ಮುಂದಿನ ಸಿಎಂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ?
ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಾಧನಾ ಸಮಾವೇಶದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟ ನೆನಪುಗಳನ್ನು ನೆನದು ಕಣ್ಣೀರಿಟ್ಟಿದ್ದಾರೆ. ನಿಮ್ಮ ಅಪ್ಪಣೆ ಪಡೆದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಹೋರಾಟದ ದಿನಗಳನ್ನು ಭಾಷಣದ ವೇಳೆ ನೆನಪಿಸಿದ ಸಿಎಂ ಬಿಎಸ್ವೈ ಅವರು, ನಾನೊಬ್ಬನೇ ವಿಧಾನಸಭೆಯೊಳಗೆ ಹೋರಾಡಿದ್ದೇನೆ. ನನ್ನ ಕರ್ತವ್ಯವನ್ನ ಮಾಡಿದ್ದೇನೆ.. ನನಗೆ …
Read More »ಸ್ವಾಮೀಜಿಗಳು ರಾಜಕೀಯದಿಂದ ದೂರ ಉಳಿಯಬೇಕು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ: ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಪ್ರತಿಭಟನೆಗಿಳಿದಿರುವ ವೀರಶೈವ-ಲಿಂಗಾಯತ ಮಠಗಳ ಸ್ವಾಮೀಜಿಗಳ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಠದ ಮುಖ್ಯಸ್ಥರ ನೇಮಕ ವಿಚಾರದಲ್ಲಿ ರಾಜಕೀಯ ಮಧ್ಯೆ ಪ್ರವೇಶ ಮಾಡುವುದಿಲ್ಲ. ಹಾಗೆಯೇ ಸ್ವಾಮೀಜಿಗಳೂ ಕೂಡ ರಾಜಕೀಯ ನೇಮಕಾತಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬಾರದು ಎಂದು ಹೇಳಿದ್ದಾರೆ. ವೀರಶೈವ-ಲಿಂಗಾಯತ ಸಮುದಾಯದ ಮಠಾಧೀಶರು ಒಬ್ಬ ನಿರ್ದಿಷ್ಟ ನಾಯಕನಿಗಾಗಿ ಲಾಬಿ ಮಾಡುತ್ತಿದ್ದರೆ, ಇದು ಇತರ …
Read More »ಬೆಂಗಳೂರಿನಲ್ಲಿ ಮಠಾಧೀಶರ ಸಮಾವೇಶ: ಪ್ರಹ್ಲಾದ್ ಜೋಷಿ, ಬಿ.ಎಲ್.ಸಂತೋಷ್ ವಿರುದ್ಧ ಘೋಷಣೆ
ಬೆಂಗಳೂರು,ಜು.25: ಇಲ್ಲಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ ಕುರಿತು ಮಠಾಧೀಶರ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿ.ಎಸ್.ಯಡಿಯೂರಪ್ಪರ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ಯಡಿಯೂರಪ್ಪರನ್ನು ಅಧಿಕಾರದಿಂದ ಕೆಳಗಿಳಿಸುವಂತಿಲ್ಲ ಎಂದು ಕೆಲವು ಮಠಾಧೀಶರು, ಬಿಜೆಪಿ ನಾಯಕರು ಘೋಷಣೆ ಕೂಗಿ, ಒತ್ತಾಯಿಸಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಬಳಿಕ ಪೊಲೀಸರು ಮಧ್ಯಪ್ರವೇಶ …
Read More »ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ
ಬಸವಕಲ್ಯಾಣ: ತಾಲೂಕಿನ ಘೋಟಾಳ ಗ್ರಾಮದ ಮುಚ್ಚಿಹೋದ ಕೆರೆಯನ್ನು ಮನರೇಗಾ ಯೋಜನೆಯಡಿ ಪುನ: ನಿರ್ಮಿಸುವ ಮೂಲಕ ಗ್ರಾಮಸ್ಥರ ಹಾಗೂ ರೈತರ ಮೊಗದಲ್ಲಿ ಮಂದಹಾಸ ಮುಡುವಂತೆ ಮಾಡಿದೆ. ಗಡಿಭಾಗವಾದ ಈ ಗ್ರಾಮದಲ್ಲಿದ್ದ ಒಂದೇ ಒಂದು ಕೆರೆ ಸಂಪೂರ್ಣವಾಗಿ ಹೂಳು ಬಿದ್ದು ಮುಚ್ಚಿಹೋಗಿತ್ತು, ಇದರಿಂದ ಮಳೆ ನೀರು ಕೆರೆಯಲ್ಲಿ ನಿಲ್ಲದೆ ಯಾರಿಗೂ ಉಪಯೋಗಕ್ಕೆ ಬಾರದಂತೆ ಹರಿದು ಹೋಗುತ್ತಿದ್ದವು. ಇದನ್ನು ಕಂಡ ತಾ.ಪಂ.ಅಧಿಕಾರಿಗಳು ಮತ್ತು ಗ್ರಾ.ಪಂ.ಸದಸ್ಯರು ಮನರೇಗಾ ಯೋಜನೆಯಡಿ ಎರಡು ಹಂತದಲ್ಲಿ ಸುಮಾರು 10 ಲಕ್ಷ …
Read More »
Laxmi News 24×7