Breaking News

ಮಹಾನಗರ ಪಾಲಿಕೆ ಆಯುಕ್ತರ ಮನೆಯಮುಂದೆ ಶಾಸಕ ಅಭಯ ಪಾಟೀಲ ಚೆಲ್ಲಿದ್ದ ಕಸವನ್ನು ಸ್ವಚ್ಛತಾ ಸಿಬ್ಬಂದಿ ಕೆಲವೇ ಕ್ಷಣದಲ್ಲಿ ತೆಗೆದು ಸ್ವಚ್ಛಗೊಳಿಸಿದರು.

ಬೆಳಗಾವಿ – ಮಹಾನಗರ ಪಾಲಿಕೆ ಆಯುಕ್ತರ ಮನೆಯಮುಂದೆ ಶಾಸಕ ಅಭಯ ಪಾಟೀಲ ಚೆಲ್ಲಿದ್ದ ಕಸವನ್ನು ಸ್ವಚ್ಛತಾ ಸಿಬ್ಬಂದಿ ಕೆಲವೇ ಕ್ಷಣದಲ್ಲಿ ತೆಗೆದು ಸ್ವಚ್ಛಗೊಳಿಸಿದರು. ನಗರದಲ್ಲಿ ಸ್ವಚ್ಛತಾ ಕಾರ್ಯ ಸರಿಯಾಗಿ ನಡೆಯುತ್ತಿಲ್ಲ ಎಂದು ಆಕ್ರೋಶಗೊಂಡ ಶಾಸಕ ಅಭಯ ಪಾಟೀಲ ತಾವೇ ಸ್ವತಃ ಟ್ರ್ಯಾಕ್ಟರ್ ನಲ್ಲಿ ಕಸ ತುಂಬಿಕೊಂಡು ಬಂದು ಪಾಲಿಕೆ ಆಯುಕ್ತರ ಮನೆಯ ಮುಂದೆ ಚೆಲ್ಲಿದ್ದರು. ತಕ್ಷಣ ಸ್ವಚ್ಛತಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಎಲ್ಲವನ್ನೂ ಸ್ವಚ್ಛಗೊಳಿಸಿದರು. ಈ ಕುರಿತು ಮಾತನಾಡಿದ ಪಾಲಿಕೆ …

Read More »

10 ನಿಮಿಷಕ್ಕಿಂತ ಹೆಚ್ಚು ಟೈಂ ಒಂದೇ ಕಡೆ ನಿಲ್ಲೋವಂತಿಲ್ಲ – ಹೊಯ್ಸಳ ಪೊಲೀಸರಿಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಕರ್ತವ್ಯ ನಿರತರಾಗಿದ್ದ ವೇಳೆ ಕೆಲ ಹೊಯ್ಸಳ ಪೊಲೀಸರು ಸುಖಾಸುಮ್ಮನೆ ವಾಹನ ನಿಲ್ಲಿಸಿಕೊಂಡು ಕಾಲಹರಣ ಮಾಡುತ್ತಿರುವ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೊಯ್ಸಳ ಪೊಲೀಸರ ಕಾರ್ಯವೈಖರಿಗೆ ಚುರುಕು ಮುಟ್ಟಿಸುವ ಸಲುವಾಗಿ, ಒಂದಷ್ಟು ಬದಲಾವಣೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಮೊದಲು ಅಯಾಯ ಪೊಲೀಸ್ ಠಾಣೆಯಿಂದಲೇ ಹೊಯ್ಸಳ ಬೀಟ್ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿತ್ತು. ಸದ್ಯ ಕಮಿಷನರ್ ಕಚೇರಿಯ ಕಮಾಂಡೆಂಟ್ ಸೆಂಟರ್ ನಿಂದ ಹೊಯ್ಸಳ ಪೊಲೀಸರ ಕೆಲಸದ ಬಗ್ಗೆ ನಿಗಾ …

Read More »

ಹೈಕಮಾಂಡ್‍ನಿಂದ ಸಂಜೆಯ ವೇಳೆಗೆ ಸಂದೇಶ ಬರಲಿದೆ ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದು ಆಗ ತಿಳಿಯಲಿದೆ.

ಬೆಳಗಾವಿ: ಹೈಕಮಾಂಡ್‍ನಿಂದ ಸಂಜೆಯ ವೇಳೆಗೆ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಹೆಚ್ಚು ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ, ಮಾಧ್ಯಮದವರೊಂದಿಗೆ ಮಾತನಾಡಿ, ಸಂಜೆಯ ವೇಳೆಗೆ ಹೈಕಮಾಂಡ್ ಅವರ ನಿರ್ಧಾರವನ್ನು ಕಳುಹಿಸುತ್ತಾರೆ. ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದು ಆಗ ತಿಳಿಯಲಿದೆ. ಯವುದೇ ಸ್ವಾಮಿಜಿಗಳು ಸಭೆ, ಸಮಾವೇಶ ಮಾಡುವ ಅಗತ್ಯವಿಲ್ಲ. ನನಗೆ ಮೋದಿ, ಅಮಿತ್ ಶಾ ಅವರ ಕುರಿತಾಗಿ ವಿಶ್ವಾಸವಿದೆ ಎಂದಿದ್ದಾರೆ. ಎರಡು ವರ್ಷಗಳ …

Read More »

ಜೋಶಿ ನಡೆ ಕುತೂಹಲ ಮೂಡಿಸಿದ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಈ ನಡುವೆ ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಈ ನಡುವೆ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ನಿನ್ನೆ ರಾತ್ರಿ ಗೃಹ ಸಚಿವ ಬಸವರಾಜ್ …

Read More »

Tokyo Olympics 2020: ಪದಕ ಗೆಲ್ಲುವ ಭಾರತೀಯ ಕ್ರೀಡಾಪಟುಗಳ ಕೋಚ್​ಗಳಿಗೂ ನಗದು ಬಹಮಾನ ನೀಡುವ ಘೋಷಣೆ ಮಾಡಿದ ಐಒಎ

ಭಾರತದ ಕ್ರೀಡಾಪಟುಗಳು ಒಲಂಪಿಕ್ಸ್​ನಲ್ಲಿ ಪದಕ ಗೆದ್ದರೆ ಕೇವಲ ಅವರ ಬ್ಯಾಂಕ್ ಬ್ಯಾಲೆನ್ಸ್ ಮಾತ್ರ ಉಬ್ಬುವುದಿಲ್ಲ, ಅವರನ್ನು ಆ ಹಂತಕ್ಕೆ ತಯಾರು ಮಾಡಿದ ತರಬೇತುದಾರರು ಮತ್ತು ಕೋಚ್​ಗಳು ಸಹ ನಗದು ಇನಾಮು ಪಡೆಯಲಿದ್ದಾರೆ. ಶನಿವಾರದಂದು ಮಹಿಳೆಯರು ಭಾರ ಎತ್ತುವ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ನಿರ್ಮಿಸಿ ದ ಮೀರಾಬಾಯಿ ಚಾನು ಅವರ ಕೋಚ್ ವಿಜಯ ಶರ್ಮ ಅವರಿಗೆ 10 ಲಕ್ಷ ರೂ. ಗಳ ಬಹುಮಾನ ನೀಡುವ ಘೋಡಣೆಯನ್ನು ಭಾರತೀಯ ಒಲಂಪಿಕ್ …

Read More »

ಒಲಿಂಪಿಕ್ಸ್: ಬೆಳ್ಳಿ ಗೆದ್ದ ಚಾನು, ಭಾರತಕ್ಕೆ ಮೊದಲ ಪದಕದ ಪುಳಕ

ಟೋಕಿಯೊ: ಭಾರತದ ಮೀರಾಬಾಯಿ ಚಾನು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ. ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. 49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆ ಮಾಡಿದೆ.

Read More »

ಖಾಸಗೀ ಶಾಲೆಗಳನ್ನು ಆಗಸ್ಟ್‌ 2 ರಿಂದ ಆರಂಭಿಸಲು ಶಾಲೆಗಳ ಒಕ್ಕೂಟ ಪ್ರಯತ್ನ

ಬೆಂಗಳೂರು: ಕೊರೋನ ಲಾಕ್‌ ಡೌನ್‌ ನಿಂದಾಗಿ ನಿಂತೇ ಹೋಗಿರುವ ಶಾಲೆಗಳನ್ನು ಆರಂಭಿಸಲು ಖಾಸಗಿ ಶಾಲೆಗಳ ಒಕ್ಕೂಟ ಮುಂದಾಗಿದೆ. ಸರ್ಕಾರ ಶಾಲೆ ಆರಂಭಿಸದೇ ಹೋದರೆ ಅಗಸ್ಟ್ 2 ರಿಂದ ಖಾಸಗಿ ಶಾಲೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿವೆ. ಶೇ.80 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಲ್ಲದೇ, ಶಾಲೆ ಆರಂಭಕ್ಕೆ ICMC, ದೇವಿಶೆಟ್ಟಿ ವರದಿ ಹಾಗೂ ಟಾಸ್ಕ್ ಫೋರ್ಸ್ ಸಭೆ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ಜುಲೈ 30 ರ …

Read More »

ಮಳೆ ಕಡಿಮಯಾಗಿದೆ ಆದ್ರೆ ಪ್ರವಾಹದ ಭೀತಿ ಹೋಗಿಲ್ಲ ಸತೀಶ್ ಜಾರಕಿಹೊಳಿ ಗೋಕಾಕ್ ರೌಂಡ್ಸ್

ಸತತವಾಗಿ ಸುರಿಯುತ್ತಿರುವ ಮಳೆ ನಿನ್ನೆಯಿಂದ ಕೊಂಚ ನಿರಾಳ ವಾಗಿದೆ ಇಂದು ಬೇಳಂ ಬೆಳಿಗ್ಗೆ ಸತಿ ಶ ಜಾರಕಿಹೊಳಿ ಅವರು ನಗರದ ಗೋಕಾಕ ಫಾಲ್ಸ್ ,ಚಿಕ್ಕೊಳ್ಳಿ ಪರ್ಸಿ ಹಾಗೂ ಇನ್ನಿತರ ಪ್ರದೇಶ ಗಳಿಗೆ ಭೇಟಿ ನೀಡಿ ನೀರಿನ ಮಟ್ಟ ವೀಕ್ಷಿಸಿದರು ಒಬ್ಬ ವಿರೋಧ್ ಪಕ್ಷದ ನಾಯಕರು ಜನರ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದು ಎಲ್ಲರಿಗೂ ಕುತೂಹಲ ಮೂಡಿಸಿದೆ ಇದಷ್ಟೇ ಅಲ್ಲದೇ ನಿನ್ನೆ ಕಾಂಗ್ರೆಸ್ ಶಾಸಕರು ಸುಮಾರು ಕಡೆ ಭೇಟಿ ನೀಡಿದ್ದಾರೆ ನೀರಿನ …

Read More »

ಜಾರಕಿಹೊಳಿಹೆಬ್ಬಾಳಕರ್ ಪ್ರವಾಹ ಪೀಡಿತ ಜನರ ಸಂಕಷ್ಟಕ್ಕೆ ಸ್ಪಂದನೆ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ಕಡಿಮೆ, ರಾಜಕೀಯ ಜಾಸ್ತಿ

ಬೆಳಗಾವಿ – ​ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಆದೇಶದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದ ಕಾಂಗ್ರೆಸ್ ಕಾಂಗ್ರೆಸ್ ನಿಯೋಗ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದೆ. ಶನಿವಾರ ಹುಕ್ಕೇರಿ, ಚಿಕ್ಕೋಡಿ ತಾಲೂಕುಗಳಿಗೆ ಭೇಟಿ ನೀಡಿದ್ದ ನಿಯೋಗ ಭಾನುವಾರ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಿಗೆ ಭೇಟಿ ನೀಡಲಿದೆ. ಈ ವೇಳೆ ಹುಕ್ಕೇರಿಯಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, ಸರಕಾರ ತಕ್ಷಣ ಜನರ …

Read More »

ಯಡಿಯೂರಪ್ಪ ಬದಲಾವಣೆ ವಿರೋಧಿಸಿ ಚಿಂಚೋಳಿಯಲ್ಲಿ ಪ್ರತಿಭಟನೆ

ಚಿಂಚೋಳಿ : ಜುಲೈ 26ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡೋದು ಬಹುತೇಕ ಖಚಿತವಾಗಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ನಿರ್ಧಾರ ವಿರೋಧಿಸಿ ಚಿಂಚೋಳಿಯಲ್ಲಿ ವೀರಶೈವ ಲಿಂಗಾಯತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖಂಡರೂ ಭಾಗವಹಿಸಿದ್ದು, ವಿಶೇಷವಾಗಿತ್ತು. ಈ ಪ್ರತಿಭಟನೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತಾಲೂಕು ಘಟಕ ಹಾಗೂ ಬಸವೇಶ್ವರ ಸೇವಾ ಸಮಿತಿ ಆಯೋಜಿಸಿತ್ತು. ಸಮಾಜದ …

Read More »