ಬೆಂಗಳೂರು : ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಎ. 17ರಂದು ಮತದಾನ ನಡೆಯಲಿದೆ. ಇವುಗಳ ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಲಾರದು. ಆದರೆ ಕೆಲವು ನಾಯಕರ ಶಕ್ತಿ, ಸಂಘಟನ ಕೌಶಲ, ದೌರ್ಬಲ್ಯಗಳನ್ನು ಒರೆಗೆ ಹಚ್ಚುವುದು ಖಚಿತ. ಬಿಜೆಪಿ ಗೆದ್ದರೆ : – ಉತ್ತರ ಕರ್ನಾಟಕದಲ್ಲಿ ಸಿಎಂ ಬಿಎಸ್ವೈ ಶಕ್ತಿ ವೃದ್ಧಿ. – ನಾಯಕತ್ವ …
Read More »ಎಂಇಎಸ್ ಬೆಂಬಲಿಸಿ ಮತ ವ್ಯರ್ಥ ಮಾಡಬೇಡಿ: ದೇವೇಂದ್ರ ಫಡ್ನವೀಸ್
ಬೆಳಗಾವಿ, ಎ.15: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಎಂಇಎಸ್ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ನಿಮ್ಮ ಮತಗಳನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಮನವಿ ಮಾಡಿದ್ದಾರೆ. ಗುರುವಾರ ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ನಡೆದ ಆಯೋಜಿಸಲಾಗಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿ ಮತಯಾಚಿಸಿ ಮಾತನಾಡಿದ ಅವರು, ಶಿವಸೇನೆ ಮುಖಂಡ ಸಂಜಯ್ ರಾವತ್ ಕಾಂಗ್ರೆಸ್ ಅಭ್ಯರ್ಥಿಗೆ ಸಹಾಯ ಮಾಡಲು ನಿನ್ನೆ …
Read More »ಸಾರಿಗೆ ನೌಕರರಿಗೆ ಸಿಹಿ ಹಂಚಿದ ವಿಜುಗೌಡ
ವಿಜಯಪುರ: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಮುಷ್ಕರ ನಿರತ ಸಾರಿಗೆ ನೌಕರರನ್ನು ಭೇಟಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಕ್ರಮಕೈಗೊಳ್ಳಲಿದ್ದಾರೆ ಎಂದು ವಿಜುಗೌಡ ಪಾಟೀಲ ಭರವಸೆ ನೀಡಿದರು. ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ, ಯುಗಾದಿ ಹಬ್ಬದ …
Read More »ಬಿಜೆಪಿ ನಾಯಕನ ಮನೆಯಲ್ಲಿ ಪತ್ತೆಯಾಯ್ತಾ ರಾಶಿ ರಾಶಿ ಹಣ? ಫೋಟೋ ಹಿಂದಿನ ಸತ್ಯಾಂಶವೇ ಬೇರೆ!
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣೆ ಭರಾಟೆ ಜೋರಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮತ್ತು ಪೋಸ್ಟ್ ವಾರ್ಗಳು ಸಹ ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ರಾಶಿ ರಾಶಿ ಹಣದ ಕಂತೆಗಳಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಣವನ್ನು ಬಂಗಾಳ ಬಿಜೆಪಿ ನಾಯಕರೊಬ್ಬರ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕೆಲವು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಅನೇಕ ಫೇಸ್ಬುಕ್ …
Read More »ಕೊರೊನಾ ಅಟ್ಟಹಾಸ; ರಾಜ್ಯದ ಪ್ರಸಿದ್ಧ ದೇವಾಲಯಗಳು, ಐತಿಹಾಸಿಕ ತಾಣಗಳು ಬಂದ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರವಾಸಿ ತಾಣಗಳು, ಐತಿಹಾಸಿಕ ದೇವಾಲಗಳನ್ನು ಬಂದ್ ಮಾಡಲಾಗುತ್ತಿದೆ. ಹಾಸನ ಜಿಲ್ಲೆಯ ಬೇಲೂರು-ಹಳೆಬೀಡು, ಶ್ರವಣಬೆಳಗೊಳಕ್ಕೆ ಒಂದು ತಿಂಗಳು ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಮೇ 15ರವರೆಗೆ ಐತಿಹಾಸಿಕ ದೇವಾಲಯಗಳನ್ನು ಬಂದ್ ಮಾಡಿ ಭಾರತೀಯ ಪುರಾತತ್ವ ಇಲಾಖೆ ನಿರ್ದೇಶಕ ಎನ್.ಕೆ.ಪಾಟಕ್ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ವಿಜಯಪುರ ಜಿಲ್ಲೆಯ ಐತಿಹಾಸಿಕ ಗೋಲಗುಮ್ಮಟಕ್ಕೂ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ …
Read More »ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು
ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆಬಿದ್ದಿದೆ. ಇಂದು ಮನೆಮನೆ ಪ್ರಚಾರ ನಡೆಯಲಿದ್ದು, ಪ್ರಚಾರಕ್ಕೆ ಆಗಮಿಸಿದ್ದ ನಾಯಕರೆಲ್ಲ ಕ್ಷೇತ್ರದಿಂದ ಹೊರಗೆ ತೆರಳಿದ್ದಾರೆ. ಸ್ಥಳೀಯ ಕಾರ್ಯಕರ್ತರು ಮತದಾರರ ಮನವೊಲಿಕೆಗೆ ಅಂತಿಮಹಂತದ ಕಸರತ್ತು ನಡೆಸಿದ್ದಾರೆ. ಏಪ್ರಿಲ್ 17 ರಂದು ಉಪಚುನಾವಣೆಗೆ ಮತದಾನ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿ …
Read More »ಬಿಜೆಪಿ ನಾಯಕರು ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ :ಹೆಚ್ ಡಿಕೆ ಆರೋಪ
ಬೀದರ್: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವಾಗ ಬಿಜೆಪಿ ನಾಯಕರಿಗೆ ಜನರ ಜೀವಕ್ಕಿಂತ ಚುನಾವಣೆಯಲ್ಲಿ ಮತ ಗಳಿಸುವುದೇ ಮುಖ್ಯವಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಕೊರೊನಾ ವರದಿ ಸರ್ಕಾರದ ಮುಂದೆಯೇ ಇದೆ. ಹೀಗಿದ್ದರೂ ಬಿಜೆಪಿ ನಾಯಕರು ಕೇವಲ ಮತಗಳಿಕೆಯ ಉದ್ದೇಶದಿಂದ ರೋಡ್ ಷೋ ನಡೆಸುವುದನ್ನು ನೋಡಿದರೆ ನಿಜವಾಗಲೂ ಆಶ್ಚರ್ಯವಾಗುತ್ತದೆ. ಈಗಲೂ ಸಾಮಾಜಿಕ ಅಂತರವನ್ನು ಮರೆತಿರುವ ನಾಯಕರು ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ …
Read More »‘ಅನ್ನಭಾಗ್ಯ’ ಯೋಜನೆ BPL ಕಾರ್ಡ್ ದಾರರ ಅಕ್ಕಿ ಕಡಿತ, ಪಡಿತರಕ್ಕೆ ಹೊಸ ವ್ಯವಸ್ಥೆ -ರಾಗಿ ವಿತರಣೆ
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ 2 ಕೆಜಿ ಅಕ್ಕಿ 3 ಕೆಜಿ ರಾಗಿ ಹಾಗೂ ಪ್ರತಿ ಕಾರ್ಡ್ ಗೆ 2 ಕೆಜಿ ಗೋಧಿ ವಿತರಿಸಲಾಗುತ್ತದೆ. ಹಿಂದೆ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು ಕೆಲವು ಪಡಿತರ ಚೀಟಿದಾರರು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿತ್ತು. ಹೀಗೆ ಶೇಕಡ 15 ರಷ್ಟು ಅನ್ನಭಾಗ್ಯ ಅಕ್ಕಿ ದುರ್ಬಳಕೆಯಾಗುತ್ತಿದೆ ಎನ್ನಲಾಗಿದ್ದು ಹೀಗಾಗಿ ಹೊಸ …
Read More »ಪ್ರಿಯಂಕಾ ಜಾರಕಿಹೊಳಿ ಹಾಗೂ ಸಂತೋಷ್ ಜಾರಕಿಹೊಳಿ ಸೌಹಾರ್ದತೆ ಭೇಟಿ
ಗೋಕಾಕ: ಗೋಕಾಕ ತಾಲೂಕಿನ ತುಂಬಾ ಸುಮಾರು {4-5} ನಾಲ್ಕೈದು ವಾರದಿಂದ ಪ್ರಚಾರ ನಡೆಸುತ್ತಿದ್ದ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಸಂತೋಷ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಇಂದು ಬಹಿರಂಗ ಚುನಾವಣೆ ಪ್ರಚಾರ ಅಂತ್ಯ ವಾಗಿದ್ದು ಸಂತೋಷ್ ಜಾರಕಿಹೊಳಿ ಅವರನ್ನ ಭೇಟಿ ಮಾಡಿದ್ದಾರೆ ಪ್ರಿಯಂಕಾ ಜಾರಕಿಹೊಳಿ ಅವರು. ಅಷ್ಟೆ ಅಲ್ಲದೆ ಗೋಕಾಕ ಹಾಗೂ ಅರಭಾವಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿ ತಂದೆಯ ಪರ ಪ್ರಚಾರ ನಡೆಸಿದ್ದು …
Read More »ಕೊರೊನಾ ವೈರಸ್ ಹೆಚ್ಚಳ : ಕರ್ನಾಟಕದಲ್ಲೂ `ವೀಕೆಂಡ್ ಲಾಕ್ ಡೌನ್’, ರಾತ್ರಿ ಕರ್ಪ್ಯೂ ಇಡೀ ರಾಜ್ಯಕ್ಕೆ ವಿಸ್ತರಣೆ?
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ವಾರಾಂತ್ಯ ಲಾಕ್ ಡೌನ್, ರಾತ್ರಿ ಕರ್ಪ್ಯೂ ವಿಸ್ತರಣೆಯಂಥ ಕ್ರಮಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಏಪ್ರಿಲ್ 18 ರ ಭಾನುವಾರ ಸಿಎಂ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಚರ್ಚಿಸಿದ ಬಳಿಕ ರಾಜ್ಯದಲ್ಲೂ ವಾರಂತ್ಯದ ಲಾಕ್ ಡೌನ್, ರಾಜ್ಯಾದ್ಯಂತ ರಾತ್ರಿ ಕರ್ಪ್ಯೂ ವಿಸ್ತರಣೆಯಂಥ ಕ್ರಮಗಳನ್ನು ಘೋಷಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ …
Read More »