Breaking News

ಸ್ವಂತ ಚಾನೆಲ್ ‘ಐಎನ್‌ಸಿ ಟಿವಿ’ ಆರಂಭಿಸಲಿದೆ ಕಾಂಗ್ರೆಸ್

ನವದೆಹಲಿ, ಏಪ್ರಲ್ 14: ಕಾಂಗ್ರೆಸ್ ಪಕ್ಷವು ತನ್ನದೇ ಸ್ವಂತ ಡಿಜಿಟಿಲ್ ವೇದಿಕೆ ‘ಐಎನ್‌ಸಿ ಟಿವಿ’ಯನ್ನು ಏ. 14ರಂದು ಆರಂಭಿಸುತ್ತಿದೆ. ಪಕ್ಷದ ಸಂದೇಶಗಳು, ವಿಚಾರಗಳನ್ನು ನೇರವಾಗಿ ಜನರಿಗೆ ತಲುಪಿಸುವ ಉದ್ದೇಶದಿಂದ ಅದು ಈ ಚಾನೆಲ್ ಆರಂಭಿಸುತ್ತಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ. ತನ್ನ ಆನ್‌ಲೈನ್ ವೇದಿಕೆಯ ಹೆಚ್ಚಿನ ವಿವರಗಳನ್ನು ಅದು ನೀಡಲಿದೆ. ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲ, ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಸುಷ್ಮಿತಾ …

Read More »

ಸರ್ಕಾರ v/s ಸಾರಿಗೆ ನೌಕರರು: 8ನೇ ದಿನಕ್ಕೆ ಕಾಲಿಟ್ಟ ಮುಷ್ಕರ

ಬೆಂಗಳೂರು, ಏಪ್ರಿಲ್ 14: 6ನೇ ವೇತನ ಶಿಫಾರಸ್ಸು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಅದು ಇದೀಗ 8ನೇ ದಿನಕ್ಕೆ ಕಾಲಿಟ್ಟಿದೆ. ನಮ್ಮ ಬೇಡಿಕೆಗಳು ಈಡೇರಿಕೆ ಆಗುವವರೆಗೂ ಮುಷ್ಕರ ನಿಲ್ಲುವುದಿಲ್ಲ ಎಂದು ಸಾರಿಗೆ ನೌಕರರರು ಪಟ್ಟು ಹಿಡಿದಿದ್ದು, ಇತ್ತ ಸಿಎಂ ಯಡಿಯೂರಪ್ಪ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೂಡ ಇನ್ನು ಒಂದು ತಿಂಗಳು ಮುಷ್ಕರ ಮಾಡಿದರೂ ಡೋಂಟ್ ಕೇರ್ ಎನ್ನುವಂತೆ ಇದ್ದಾರೆ. ಸಾರಿಗೆ …

Read More »

ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿ ಮಾಡದೆ ಬಿಗಿ ಕ್ರಮ ತೆಗೆದು ಕೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಈಗಾಗಲೇ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯಬಿದ್ದರೆ ಒಂದೆರಡು ಜಿಲ್ಲೆಗಳಿಗೆ ನೈಟ್ ಕರ್ಪ್ಯೂ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.   ಇದೇ ತಿಂಗಳ 18 ರಂದು ಪ್ರತಿಪಕ್ಷ ನಾಯಕರ ಸಭೆ …

Read More »

SBI Recruitment 2021: ಎಸ್‌ಬಿಐನಲ್ಲಿ ಬಂಪರ್ ಉದ್ಯೋಗಾವಕಾಶ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ ಬಯಸುವವರಿಗೆ ಒಳ್ಳೆಯ ಸುದ್ದಿ ಇದೆ. ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎಸ್‌ಬಿಐ (ಎಸ್‌ಬಿಐ) ಸ್ಪೆಷಲಿಸ್ಟ್ ಕೇಡರ್ ಆಫೀಸರ್ (ಎಸ್‌ಸಿಒ) ಮತ್ತು ಫಾರ್ಮಸಿಸ್ಟ್ ಕ್ಲೆರಿಕಲ್ ಕೇಡರ್ (SBI Recruitment 2021 Notification) ಹುದ್ದೆಗಳಿಗೆ ನಿಯಮಿತವಾಗಿ ಮತ್ತು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅಧಿಸೂಚನೆ ಹೊರಡಿಸಿದೆ. ಎಸ್‌ಬಿಐ ನೇಮಕಾತಿ 2021: ಅಧಿಕೃತ ಅಧಿಸೂಚನೆ ಸ್ಟೇಟ್ ಬ್ಯಾಂಕ್ (State Bank Of India) …

Read More »

ಕ್ಯಾಚ್ ಕೈ ಚೆಲ್ಲಿದರೂ ಕೊನೆಯಲ್ಲಿ ಬೌಲರ್‌ಗಳ ಮ್ಯಾಜಿಕ್ – ಮುಂಬೈಗೆ 10 ರನ್‍ಗಳ ರೋಚಕ ಜಯ

ಮುಂಬೈ: ಕ್ಯಾಚ್ ಕೈ ಚೆಲ್ಲಿದ್ದರೂ ಕೊನೆಯಲ್ಲಿ ಬೌಲರ್‌ಗಳು ಮ್ಯಾಜಿಕ್ ಮಾಡಿದ ಪರಿಣಾಮ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ 10 ರನ್‍ಗಳಿಂದ ಪಂದ್ಯವನ್ನು ರೋಚಕವಾಗಿ ಗೆದ್ದುಕೊಂಡಿದೆ. ಮುಂಬೈ ನೀಡಿದ್ದ 153 ರನ್‍ಗಳ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ಸುಲಭವಾಗಿ ಗೆಲ್ಲಬಹುದು ಎಂದು ಆರಂಭದಲ್ಲಿ ನಿರೀಕ್ಷಿಸಲಾಗಿತ್ತು. ಆದರೆ ರಾಹುಲ್ ಚಹರ್ ಸ್ಪಿನ್ ಮೋಡಿ ಜೊತೆಗೆ ಸ್ಲಾಗ್ ಓವರ್‌ಗಳಲ್ಲಿ ರನ್‍ಗಳಿಗೆ ಮುಂಬೈ ಬೌಲರ್‍ಗಳು ಕಡಿವಾಣ ಹಾಕಿದ್ದರಿಂದ ಕೋಲ್ಕತ್ತಾ ಅಂತಿಮವಾಗಿ 7 ವಿಕೆಟ್ ನಷ್ಟಕ್ಕೆ 142 …

Read More »

ಮೊದಲ ಬಾರಿ ಕೋರ್ಟ್​ ಒಳಗೆ ಕಾಲಿಟ್ಟ ರಕ್ಷಿತ್​ ಶೆಟ್ಟಿಗೆ ಇಂಥ ಅನುಭವ! ಇನ್ನೂ ಮುಗಿದಿಲ್ಲ ಕಿರಿಕ್​ ಪಾರ್ಟಿ ಕಿರಿಕ್​

ಕಿರಿಕ್​ ಪಾರ್ಟಿ’ ಸಿನಿಮಾದ ಹಾಡೊಂದರ ಕಾಪಿರೈಟ್​ ಕೇಸ್​ಗೆ ಸಂಬಂಧಿಸಿದ ಕಿರಿಕ್​ ಇನ್ನೂ ಬಗೆಹರಿದಿಲ್ಲ. ಲಹರಿ ಮ್ಯೂಸಿಕ್​ ಆಡಿಯೋ ಕಂಪನಿ ಮತ್ತು ರಕ್ಷಿತ್ ಶೆಟ್ಟಿ ಅವರ ಪರಮ್​ವಾ ಸ್ಟುಡಿಯೋ ನಡುವೆ ಇನ್ನೂ ಜಟಾಪಟಿ ಮುಂದುವರಿದಿದೆ. ಈ ಪ್ರಕರಣದ ವಿಚಾರಣೆ ಸಲುವಾಗಿ ಸೋಮವಾರ (ಏ.12) ರಕ್ಷಿತ್​ ಶೆಟ್ಟಿ ಕೋರ್ಟ್​ಗೆ ಹಾಜರಾಗಿದ್ದರು. ವಿಚಾರಣೆ ಮುಗಿಸಿ ಹೊರಬಂದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಸಿನಿಮಾ ರಿಲೀಸ್​ ಆಗುವಾಗ ಬೇಕಂತಲೇ ಈ ರೀತಿ ಮಾಡುತ್ತಾರೆ. ತುಂಬ ಸಿನಿಮಾಗಳಿಗೆ …

Read More »

ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸಿದರೂ ಸರಿ 6ನೇ ವೇತನ ಆಯೋಗ ಜಾರಿ ಅಸಾಧ್ಯ:B.S.Y.

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 7ನೇ ದಿನಕ್ಕೆ ಕಾಲಿಟ್ಟಿದ್ದು, ಸಾರಿಗೆ ಸಿಬ್ಬಂದಿಗಳು ಹಾಗೂ ಸರ್ಕಾರದ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಮುಷ್ಕರ ನಿರತ ಸಿಬ್ಬಂದಿಗಳ ವಿರುದ್ಧ ಸಿಎಂ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಾರಿಗೆ ನೌಕರರೊಂದಿಗೆ ಮಾತುಕತೆಯ ಪ್ರಶ್ನೆಯೇ ಇಲ್ಲ, ಮುಷ್ಕರ ನಿರತ ಸಿಬ್ಬಂದಿಗಳ ಸಂಬಳ ನೀಡಲೂ ಸಾಧ್ಯವಿಲ್ಲ. ಒಂದು ತಿಂಗಳ ಕಾಲ ಪ್ರತಿಭಟನೆ …

Read More »

ಮಯನ್ಮಾರ್​​ನಿಂದ​ ಬೆಂಗಳೂರಿನವರೆಗೆ ಮಿಕ್ಸರ್​, ಗ್ರೈಂಡರ್​​ ಬಾಕ್ಸ್‌ ನಲ್ಲಿ ಡ್ರಗ್ಸ್​ ಸಾಗಾಟ ಜಾಲ ; ಪೋಲೀಸ್‌ ಬಲೆಗೆ

ಬೆಂಗಳೂರು : ಬೌನ್ಸ್ ಕಂಪನಿಯ ಬೈಕ್​ಗಳ ಮುಖಾಂತರ ಗ್ರಾಹಕರಿಗೆ ಡ್ರಗ್ಸ್​​​ ಮಾರಾಟ ಮಾಡುತ್ತಿದ್ದ ಮೂವರು ಅಂತಾರಾಜ್ಯ ದಂಧೆಕೋರರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಣಿಪುರ ಮೂಲದ ಮೊಹಮ್ಮದ್ ಸಜೀದ್ ಖಾನ್, ಮೊಹಮ್ಮದ್ ಅಜಾದ್ ಹಾಗೂ ಸಪಮ್ ಸೀತಲ್ ಕುಮಾರ್ ಸಿಂಗ್ ಬಂಧಿತ ಆರೋಪಿಗಳು. ಬಂಧಿತರಿಂದ 60 ಲಕ್ಷ ರೂ. ಮೌಲ್ಯದ 130 ಗ್ರಾಂ ಹೆರಾಯಿನ್, 2480 ಎಕ್ಸೆಟೆನ್ಸಿ ಮಾತ್ರೆಗಳನ್ನ ವಶಪಡಿಸಿಕೊಳ್ಳಲಾಗಿದೆ. .ಆರೋಪಿಗಳು ಕೆಲಸ ಅರಸಿ‌ ಮೂರು ವರ್ಷಗಳ ಹಿಂದೆ ರಾಜಧಾ‌ನಿಗೆ ಬಂದಿದ್ದರು. …

Read More »

ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್

ಬೆಂಗಳೂರು: ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್ ಮಾಡಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಕಿಶೋರ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದು, ಆರೋಪಿ ಮಂಜುನಾಥ್ ನನ್ನು ಬಂಧಿಸಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಬಲ್ ಮರ್ಡರ್ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದು, ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. …

Read More »

ಯುಗಾದಿ ‘ಹೊಸತೊಡಕು’ ಆಚರಣೆಗೆ ಭರ್ಜರಿ ಸಿದ್ದತೆ:‌ ಮಾಂಸದಂಗಡಿಗಳ ಮುಂದೆ ಕ್ಯೂ ನಿಂತ ಜನ

ರಾಜ್ಯದ ಜನತೆ ನಿನ್ನೆ ಭರ್ಜರಿಯಾಗಿ ಯುಗಾದಿ ಹಬ್ಬ ಆಚರಿಸಿ, ಬೇವು ಬೆಲ್ಲ, ಒಬ್ಬಟ್ಟು ತಿಂದು ಖುಷಿಪಟ್ಟಿದ್ರು. ಅಂತೆಯೇ ಇವತ್ತೂ ಕೂಡ ಹೊಸತೊಡಕು ಆಚರಿಸೋಕೆ ರೆಡಿಯಾಗಿದ್ದಾರೆ. ಕಳೆದ ವರ್ಷ ಕೊರೊನಾ ಲಾಕ್‌ ಡೌನ್‌ ನಡುವೆಯೂ ತಮ್ಮ ಎಂದಿನ ಆಚರಣೆಯನ್ನು ಬಿಡದ ಜನ ಹಲವು ನಿರ್ಬಂಧಗಳ ನಡುವೆಯೂ ಮಾರುದ್ದದ ಕ್ಯೂನಲ್ಲಿ ಕಾದು ನಿಂತು ಮಟನ್‌ – ಚಿಕನ್‌ ಖರೀದಿಸಿದ್ದರು. ಮಟನ್‌ – ಚಿಕನ್‌ ಬೆಲೆ ಗಗನಕ್ಕೇರಿದ್ದರೂ ಹೊಸ ತೊಡಕು ಆಚರಣೆ ಸಂಭ್ರಮವೇನು ಕಡಿಮೆಯಾಗಿಲ್ಲ. …

Read More »