ಬೆಳಗಾವಿ: ಸರ್ಕಾರ ಕೋವಿಡ್ ಎರಡನೇ ಅಲೆಯಿಂದ ಜನರನ್ನ ರಕ್ಷಣೆ ಮಾಡಬೇಕು ಅಂತ ಟಫ್ ರೂಲ್ಸ್ ಜಾರಿಗೆ ತಂದಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಎಂಟ್ರಿಯಾಗ ಬೇಕಾದರೆ ಖಾಸಗಿ ಸರ್ಕಾರಿ ವಾಹನಗಳ ಮೂಲಕ ಬರುವವರು ಕೈಲಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹಿಡಿದೇ ಬರಬೇಕು ಅಂತಿದೆ ಆದರೆ ಕರ್ನಾಟಕದ ಗಡಿಯಲ್ಲಿ ಕಟ್ಟುನಿಟ್ಟಾದ ಕ್ರಮ ಜಾರಿಗೆ ಬರ್ತಿಲ್ಲಾ. ಬಾರ್ಡರ್ ನಲ್ಲಿ ಚೆಕ್ ಪೊಸ್ಟ್ ನಿರ್ಮಾಣ ಆಗಿದೆ ಖಾಸಗಿ ಕಾರಿನಲ್ಲಿ ಬರೋರನ್ನ ಮಾತ್ರ ತಪಾಸಣೆ ಮಾಡುತ್ತಿರುವ ಪೊಲೀಸರು ಬೈಕ್ …
Read More »CD ಪ್ರಕರಣದಲ್ಲಿ 9 ಜನರು ಭಾಗಿಯಾಗಿದ್ದಾರೆ; ರಾಜಕೀಯ ಹೋದ್ರೂ ತೊಂದರೆಯಿಲ್ಲ.. ಇವರಿಗೆ ತಕ್ಕ ಶಾಸ್ತಿ ಮಾಡ್ತೇವೆ’
ಬೆಂಗಳೂರು: ರಮೇಶ್ ಜಾರಕಿಹೊಳಿ ಸೆಕ್ಸ್ CD ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆಬಾಲಚಂದ್ರ ಜಾರಕಿಹೊಳಿ ಸ್ಫೋಟಕ ಮಾಹಿತಿ ನೀಡಿದ್ದಾರೆ. ಈ ಸಿಡಿ ಪ್ರಕರಣದಲ್ಲಿ 9 ಜನರು ಭಾಗಿಯಾಗಿದ್ದಾರೆ. ಈಗಾಗಲೇ ಆ 9 ಜನರ ಮಾಹಿತಿ ನಮಗೆ ಸಿಕ್ಕಿದೆ. ಆ 9 ಜನರ ಪೈಕಿ ಕೆಲವರು ಪ್ರಭಾವಿಗಳು ಇದ್ದಾರೆ. ಪ್ರಭಾವಿಗಳು ಇರುವ ಹಿನ್ನೆಲೆ ಮತ್ತಷ್ಟು ಮಾಹಿತಿ ಕಲೆ ಹಾಕುತ್ತಿದ್ದೇವೆ. ದೂರು ದಾಖಲಿಸಲು ಮತ್ತಷ್ಟು ಮಾಹಿತಿ ಸಂಗ್ರಹಿಸ್ತಿದ್ದೇವೆ ಎಂದು ಹೇಳಿದರು. ಮೂರ್ನಾಲ್ಕು ದಿನಗಳಲ್ಲಿ ದೂರು ದಾಖಲಿಸುತ್ತೇವೆ. …
Read More »ಬೆಳಗಾವಿ ಲೋಕಸಭೆ ಉಪಚುನಾವಣೆಯ ರಾಜಕೀಯ ಲೆಕ್ಕಾಚಾರ ಅದಲು-ಬದಲು!
ಬೆಳಗಾವಿ(ಮಾರ್ಚ್ 10): ಸದ್ಯ ರಾಜ್ಯದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಜೋರಾಗಿ ಸದ್ದು ಮಾಡುತ್ತಿದೆ. ಈ ಷಡ್ಯಂತ್ರದ ಹಿಂದೆ ಇರೋದು ಯಾರು ಎಂಬುದು ನನಗೆ ಗೊತ್ತಿದೆ. ಶೀಘ್ರದಲ್ಲಿ ದೂರು ದಾಖಲಿಸಿ ಕಾನೂನು ಹೋರಾಟ ಮಾಡುತ್ತೇನೆ. ನನಗೆ ಈಗ ಅಧಿಕಾರ ಮುಖ್ಯವಲ್ಲ, ಮನೆತನದ ಮರ್ಯಾದೆ ಮುಖ್ಯ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಅಷ್ಟೇ ಅಲ್ಲ ಕಾನೂನು ಹೋರಾಟಕ್ಕೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಪ್ರಕರಣ …
Read More »ಒಡೆದ ಪೈಪ್ಲೈನ್: ಅಪಾರ ಪ್ರಮಾಣದ ನೀರು ಪೋಲು
ಬೆಳಗಾವಿ: ಇಲ್ಲಿನ ಗೋವಾವೇಸ್ ಸಮೀಪದ ರಸ್ತೆ ಬದಿಯಲ್ಲಿ ಕಾಮಗಾರಿಯೊಂದಕ್ಕಾಗಿ ಮಂಗಳವಾರ ಬೆಳಿಗ್ಗೆ ನೆಲ ಅಗೆಯುವಾಗ ಪೈಪ್ಲೈನ್ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಯಿತು. ಸುಮಾರು ಮುಕ್ಕಾಲು ತಾಸು ನೀರು ದೊಡ್ಡ ಮಟ್ಟದ ಕಾರಂಜಿಯ ರೀತಿ ಚಿಮ್ಮುತ್ತಿತ್ತು. ಇದರಿಂದ ರಸ್ತೆ ತುಂಬೆಲ್ಲಾ ನೀರು ಸಂಗ್ರಹವಾಗಿತ್ತು. ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಯಿತು. ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳ ಮೇಲೂ ನೀರು ಬಿದ್ದಿತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದೆ. ಸ್ಥಳೀಯರು ಮಾಹಿತಿ …
Read More »ಏತ ನೀರಾವರಿ ಕಾಮಗಾರಿ ಮುಗಿಯದೇ ಹಣ ಡ್ರಾ!
ಯಳಂದೂರು: ತಾಲೂಕಿನ ಕೃಷ್ಣಾಪುರ ಬಳಿ ಸಣ್ಣ ನೀರಾವರಿ ಇಲಾಖೆಯಿಂದ ನಡೆದಿರುವ ಯರಗಂಬಳ್ಳಿ ಎಲೆಕೆರೆಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯಡಿ ಕಾಮಗಾರಿಯನ್ನೇ ಪೂರ್ಣಗೊಳಿಸಿಲ್ಲ. ಆದರೂ ಹಣವನ್ನು ಡ್ರಾ ಮಾಡಲಾಗಿದೆ ಎಂದು ರೈತರು ಆರೋಪಿಸಿದರು. ಸೋಮವಾರ ಈ ಸಂಬಂಧ ರೈತರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕತ್ಯಾ ಯಿನಿ ನೇತೃತ್ವದ ತಂಡ ಯಳಂದೂರು ತಾಲೂಕಿನ ಕೃಷ್ಣಾಪುರ ಬಳಿ ನಿರ್ಮಾಣಗೊಂಡಿರುವ ಜಾಕ್ ವೆಲ್ ಹಾಗೂ ಯರ ಗಂಬಳ್ಳಿ ಗ್ರಾಮದ ಎಲೆಕೆರೆಗೆ …
Read More »ಕುಡಿಯುವ ನೀರಿಗಾಗಿ ಗದಗನ ಪಶುವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪರದಾಟ
ಗದಗ : ಕುಡಿಯುವ ನೀರಿನ ಸಮಸ್ಯೆಯಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ವಿದ್ಯಾರ್ಥಿಗಳು ಇಂದು ನಗರದ ಲೋಕೋಪಯೋಗಿ ಇಲಾಖೆಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು. ನಗರದ ಹೊಂಬಳ ಗ್ರಾಮದ ರಸ್ತೆಯಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ನೀರಿನ ಅಭಾವ ಉಂಟಾಗಿದೆ. ಜಿಲ್ಲೆಯ ಮಹತ್ವದ ಯೋಜನೆಯಾಗಿರುವ 24/7 ಕುಡಿಯುವ ನೀರು ಸರಬರಾಜುವಿನ ಪೈಪ್ಲೈನ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದರೂ, ಎರಡು ವರ್ಷಗಳಿಂದ ಕಾಲೇಜಿಗೆ ನದಿ ನೀರು ಒಂದು ಹನಿ ಸಹಿತ ನೀರು ಪೂರೈಕೆ …
Read More »ಬೆಸ್ಕಾಂ ಕಚೇರಿ ಲೆಕ್ಕಾಧಿಕಾರಿ ರಾಜು ಪತ್ತಾರ ಮನೆ ಮೇಲೆ ಎಸಿಬಿ ದಾಳಿ
ಯಾದಗಿರಿ: ನಗರದ ಬೆಸ್ಕಾಂ ಕಚೇರಿ ಲೆಕ್ಕಾಧಿಕಾರಿ ರಾಜು ಪತ್ತಾರ ಅವರ ಮನೆ, ಕಚೇರಿ, ಬ್ಯಾಂಕ್ ಲಾಕರ್ ಮೇಲೆ ದಾಳಿ ಮಾಡಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆಯೇ ಮೂರು ಕಡೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ. ₹1.71 ಲಕ್ಷ ನಗದು, 800 ಗ್ರಾಂ ಚಿನ್ನ, 1,362 ಗ್ರಾಂ ಬೆಳ್ಳಿ, ಯಾದಗಿರಿಯಲ್ಲಿ ಮೂರಂತಸ್ತಿನ ಮನೆ, ಇನ್ನುಳಿದ ಕಡೆ …
Read More »BIG NEWS: ಭಾರತದಿಂದ ಪಾಕಿಸ್ತಾನಕ್ಕೆ ಉಚಿತ ಲಸಿಕೆ
ನವದೆಹಲಿ: ಪಾಕಿಸ್ತಾನಕ್ಕೆ ಭಾರತದಲ್ಲಿ ಉತ್ಪಾದಿಸಲಾದ ಕೋವಿಡ್ ಲಸಿಕೆಯನ್ನು ರವಾನೆ ಮಾಡಲಾಗುವುದು. ಲಸಿಕೆಯನ್ನು ಉಚಿತವಾಗಿ ಪಾಕ್ ಗೆ ನೀಡಲಾಗುತ್ತದೆ. ಆಸ್ಟ್ರಾಜೆನಿಕಾ, ಆಕ್ಸ್ ಫರ್ಡ್ ವಿವಿ ಸಹಯೋಗದಲ್ಲಿ ಭಾರತದಲ್ಲಿ ಉತ್ಪಾದಿಸಿದ ಬರೋಬ್ಬರಿ 16 ಮಿಲಿಯನ್ ಡೋಸ್ ಲಸಿಕೆಯನ್ನು ಮಾರ್ಚ್ ಮಧ್ಯದಲ್ಲಿ ಪಾಕಿಸ್ತಾನಕ್ಕೆ ಕಳಿಸಲಾಗುವುದು. ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುವ ಲಸಿಕೆಯ ಮೊದಲ ಬ್ಯಾಚ್ ಈ ತಿಂಗಳಲ್ಲಿ ರವಾನಿಸಲಾಗುತ್ತದೆ. ಜೂನ್ ವೇಳೆಗೆ ಲಸಿಕೆ ಇತರೆ ಬ್ಯಾಚ್ ಕಳಿಸಲಾಗುವುದೆಂದು ಪಬ್ಲಿಕ್ ಅಕೌಂಟ್ಸ್ ಕಮಿಟಿಯಿಂದ …
Read More »ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನಕ್ಕೆ ಗೂಗಲ್ ಡೂಡಲ್ ಮೂಲಕ ಗೌರವ
ನ್ಯೂಸ್ ಡೆಸ್ಕ್ : ಭಾರತದ ಖ್ಯಾತ ಪ್ರಾಧ್ಯಾಪಕ, ವಿಜ್ಞಾನಿ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನವನ್ನು ಗೂಗಲ್ ಡೂಡಲ್ ಬುಧವಾರ ವಿಶಿಷ್ಟ ವಾಗಿ ಆಚರಿಸಿದೆ. ರಾವ್ ಅವರನ್ನು ಭಾರತದ ‘ಸ್ಯಾಟಲೈಟ್ ಮ್ಯಾನ್’ ಎಂದೇ ಸ್ಮರಿಸಲಾಗುತ್ತದೆ. 1932ರಲ್ಲಿ ಕರ್ನಾಟಕದ ದೂರದ ಹಳ್ಳಿಯಲ್ಲಿ ಜನಿಸಿದ ಪ್ರೊ.ರಾವ್ ಅವರು ಭಾರತದ ಬಾಹ್ಯಾಕಾಶ ಯೋಜನೆಯ ಪಿತಾಮಹ ಎಂದೇ ಖ್ಯಾತರಾಗಿದ್ದ ಡಾ.ವಿಕ್ರಮ್ ಸಾರಾಭಾಯಿ ಅವರ ಖಾಗೋಳಿಕ ಕಿರಣಗಳ ಭೌತವಿಜ್ಞಾನಿಯಾಗಿ ಮತ್ತು ವಿಜ್ಞಾನಿಯಾಗಿ ವೃತ್ತಿ ಜೀವನ ಆರಂಭಿಸಿದರು. ಡಾಕ್ಟರೇಟ್ …
Read More »ಮತ್ತೆ ಮಹಾಮಾರಿ ಕೊರೊನಾ ಆತಂಕ ; ಹೊಸಪೇಟೆ ರೈಲ್ವೆ ಜಂಕ್ಷನ್ ನ 18 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್
ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ರೈಲ್ವೆ ಜಂಕ್ಷನ್ನ 18 ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಎಲ್ಲ 18 ಕೊರೊನಾ ಸೋಂಕಿತರು ಒಂದೇ ಕಟ್ಟಡದಲ್ಲಿ ವಾಸವಾಗಿದ್ದಾರೆ. ಈ ಕಟ್ಟಡವನ್ನು 14 ದಿನಗಳ ಕಾಲ ಕಂಟೈನ್ಮೆಂಟ್ ವಲಯವನ್ನಾಗಿ ಒಳಪಡಿಸಲಾಗಿದೆ. ಈ ಹಿನ್ನೆಲೆ ರೈಲ್ವೆ ಮೂಲಕ ಬರುವ ಪ್ರಯಾಣಿಕರ ಸುರಕ್ಷತೆಗೂ ಕ್ರಮಕೈಗೊಳ್ಳಲು ಆಡಳಿತ ತೀರ್ಮಾನಿಸಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ …
Read More »