Breaking News

ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು?:H.D.K.

ಬೆಂಗಳೂರು: ರಾಜ್ಯದಲ್ಲಿ 500ಕ್ಕೂ ಹೆಚ್ಚು ಕೊರೊನಾ ವಾರಿಯರ್ ಗಳು ಪ್ರಾಣ ಕಳೆದುಕೊಂಡಿದ್ದು, ರಾಜ್ಯ ಸರ್ಕಾರ ಮಾತ್ರ ಒಂದೇ ಕುಟುಂಬಕ್ಕೆ ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಮ್ಮನ ಉಳಸಿಕೊಡಿ ಎಂದು ಮನವಿ ಮಾಡಿಕೊಂಡ ಪುತ್ರಿಗೆ ಶಿಕ್ಷಣ ಸಚಿವರು ಹೃದಯಹೀನ ಉತ್ತರ ನೀಡಿದ್ದಾರೆ. ಇಂತಹ ಸರ್ಕಾರದಿಂದ ಜನರು ಏನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ …

Read More »

ಒಳ್ಳೆಯ ಸ್ನೇಹಿತೆಯನ್ನು ಹುಡುಕಿಕೊಳ್ಳುವುದು ಕಷ್ಟ ಎಂದು ಟ್ವೀಟ್ ಮಾಡುವ ಮೂಲಕ ಕಿಚ್ಚ ಸುದೀಪ್ ಅವರು ತಮ್ಮ ಪತ್ನಿಗೆ ಮದುವೆ ವಾರ್ಷಿಕೋತ್ಸವದ ಶುಭಕೋರಿದ್ದಾರೆ.

ಬೆಂಗಳೂರು: ಒಳ್ಳೆಯ ಸ್ನೇಹಿತೆಯನ್ನು ಹುಡುಕಿಕೊಳ್ಳುವುದು ಕಷ್ಟ ಎಂದು ಟ್ವೀಟ್ ಮಾಡುವ ಮೂಲಕ ಕಿಚ್ಚ ಸುದೀಪ್ ಅವರು ತಮ್ಮ ಪತ್ನಿಗೆ ಮದುವೆ ವಾರ್ಷಿಕೋತ್ಸವದ ಶುಭಕೋರಿದ್ದಾರೆ. ಇಂದು ಸ್ಯಾಂಡಲ್‍ವುಡ್‍ನ ಕಿಚ್ಚ, ಅಭಿನಯ ಚಕ್ರವರ್ತಿ ಸುದೀಪ್ ಮತ್ತು ಪ್ರಿಯಾ ಸುದೀಪ್ 19ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ನೆಚ್ಚಿನ ನಟನ ಮದುವೆ ವಾರ್ಷಿಕೋತ್ಸಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡುತ್ತಿದ್ದಾರೆ. ತಮ್ಮ ಮದುವೆ ವಾರ್ಷಿಕೋತ್ಸಕ್ಕೆ ತಮ್ಮ ಪತ್ನಿಗೆ ಟ್ವೀಟ್ ಮಾಡುವ ಮೂಲಕ ವಿಶ್ …

Read More »

ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂಪರ್‌ ಹ್ಯೂಮನ್‌ ಮಯಾಂಕ್‌

ಅಬುಧಾಬಿ: ಕ್ರಿಕೆಟ್‌ ಇತಿಹಾಸದಲ್ಲಿ ಎರಡು ಸೂಪರ್‌ ಓವರ್‌ ಕಂಡು ದಾಖಲೆ ಬರೆದ ಪಂದ್ಯದಲ್ಲಿ ಕನ್ನಡಿಗ ಮಯಾಂಕ್‌ ಅಗರ್‌ವಲ್‌ ಅವರ ಅತ್ಯುತ್ತಮ ಫೀಲ್ಡಿಂಗ್‌ ಕ್ರಿಕೆಟ್‌ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಮೊದಲ ಸೂಪರ್‌ ಓವರ್‌ನಲ್ಲಿ ಬ್ಯಾಟ್‌ ಮತ್ತು ಬೌಲ್‌ ಮಾಡಿದವರು ಎರಡನೇ ಸೂಪರ್‌ ಓವರ್‌ನಲ್ಲಿ ಬ್ಯಾಟ್‌, ಬೌಲ್‌ ಮಾಡುವಂತಿಲ್ಲ ಎಂಬ ನಿಯಮದ ಹಿನ್ನೆಲೆಯಲ್ಲಿ ಪಂಜಾಬ್ ಪರ ಕ್ರಿಸ್ ಜೋರ್ಡಾನ್ ಅವರು ಎರಡನೇ ಸೂಪರ್ ಓವರ್ ಬೌಲ್ ಮಾಡಿದರು.ಮೊದಲ ಬಾಲ್‌ ವೈಡ್‌ ಆದರೆ ನಂತರದ …

Read More »

ಮಯೂರಿ ಖ್ಯಾತ್ರಿ ನಟನೆಯ ಆದ್ಯಂತ ಚಿತ್ರ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕ ಮೆಚ್ಚುಗೆ

ನವ ನಟ ದಿಲೀಪ್, ಮಯೂರಿ ಖ್ಯಾತ್ರಿ ನಟನೆಯ ಆದ್ಯಂತ ಚಿತ್ರ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕ ಮೆಚ್ಚುಗೆ ಪಡೆದುಕೊಂಡಿದ್ದ ಆದ್ಯಂತ ಚಿತ್ರ ಒಂದು ಮಿಲಿಯನ್ ವೀಕ್ಷಣೆ ಪಡೆದುಕೊಂಡು ಭರವಸೆ ಮೂಡಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಬಿಡುಗಡೆ ಹೊಸ್ತಿಲಲ್ಲಿರೋ ಚಿತ್ರತಂಡ ಕುತೂಹಲಕಾರಿ ಟೀಸರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಇದೇ ತಿಂಗಳು ಟೀಸರ್ ಪ್ರೇಕ್ಷಕರ ಮುಂದೆ ಬರಲಿದೆ. ಪುನೀತ್ ಶರ್ಮಾ ಚಿತ್ರದ …

Read More »

ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆ

ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹನಸಿ ಗ್ರಾಮದಲ್ಲಿ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ) ಅಕ್ಟೋಬರ್ 16ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಜರುಗಿತು. ಅಧ್ಯಕ್ಷರಾಗಿ ಎಮ್.ನಿಂಗಪ್ಪ, ಉಪಾಧ್ಯಕ್ಷರಾಗಿ ಎನ್.ನಾಗರಾಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರಿಟೈನಿಂಗ್ ಅಧಿಕಾರಿಗಳ ಸಮಕ್ಷಮದಲ್ಲಿ ಚುನಾವಣೆ ಜರುಗಿದೆ. ಚುನಾವಣೆ ಸಂದಭ೯ದಲ್ಲಿ ಸಂಘದ ನಿಧೇ೯ಶಕರಾದ ಮಂಜುನಾಥಗೌಡ,ಜಿ.ನಾ‍ಗರಾಜ,ಹೊನ್ನೂರ್ ಬೀ,ಬಿ.ವೀರೇಶ್,ಹೆಚ್.ಮೂಗಪ್ಪ,ಎಸ್.ಮೆಹಬೂಬ್ ಸಾಬ,ಬಿ.ಖಾಸೀಂ ಪೀರ್,ಕೆ.ಬಸವನಗೌಡ,ವೈ.ಪ್ರಸನ್ನಕುಮಾರ್,ಶ್ರೀಮತಿ ಎನ್.ನಿಮ೯ಲಮ್ಮ ಹಾಜರಿದ್ದರೆಂದು ಕಾಯ೯ದಶಿ೯ಗಳಾದ‍ ಬಸಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದಭ೯ದಲ್ಲಿ ಪೊಲೀಸ್ ಪೇದೆ ಲೋಕೇಶ್ ಹಾಜರಿದ್ದರು.

Read More »

ಕಾಪು ಬೀಚ್‍ಗೆ ಪ್ರವಾಸಕ್ಕೆಂದು ಬಂದ ಬೆಂಗಳೂರಿನ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

ಉಡುಪಿ: ಜಿಲ್ಲೆಯ ಕಾಪು ಬೀಚ್‍ಗೆ ಪ್ರವಾಸಕ್ಕೆಂದು ಬಂದ ಬೆಂಗಳೂರಿನ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಬೆಂಗಳೂರಿನ ಹೇಸರಘಟ್ಟದಿಂದ ಐವರು ಯುವಕರ ತಂಡ ಉಡುಪಿ ಪ್ರವಾಸಕ್ಕೆ ಬಂದಿತ್ತು. ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿ ಸಾವನ್ನಪ್ಪಿದ್ದಾರೆ. ಸಂಜೆ ಕಾಪು ಬೀಚ್‍ನಲ್ಲಿ ಆಟವಾಡುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ. ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, ಪ್ರಥಮ್, ದಾಮೋದರ ಪುತ್ರನ್, ಚಂದ್ರಹಾಸ ಜೊತೆಗೂಡಿ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. …

Read More »

ಸ್ವಲ್ಪ ಮಟ್ಟಿಗೆ ಮಳೆ ಹಾಗೂ ಪ್ರವಾಹ ತಗ್ಗಿದರೂ ಜನರಲ್ಲಿರುವ ಭೀತಿ ಮಾತ್ರ ಕಡಿಮೆಯಾಗಿಲ್ಲ.

ಬೆಂಗಳೂರು: ಕಳೆದೊಂದು ವಾರದಿಂದ ಸುರಿದ ಭಾರೀ ಮಳೆಯಿಂದಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಅಕ್ಷರಸಹ ನಲುಗಿ ಹೋಗಿವೆ, ಒಂದೆಡೆ ಮಳೆ, ಮತ್ತೊಂದೆಡೆ ಭೀಮಾ, ಕೃಷ್ಣಾ ನದಿ ಪ್ರವಾಹಕ್ಕೆ ಸಿಲುಕಿ ಜನ ಕಂಗಾಲಾಗಿದ್ದಾರೆ. ಮನೆ ಕಳೆದುಕೊಂಡು ಬೀದಿಯಲ್ಲಿ ನಿಲ್ಲುವಂತಾಗಿದೆ. ಇದೀಗ ಸ್ವಲ್ಪ ಮಟ್ಟಿಗೆ ಮಳೆ ಹಾಗೂ ಪ್ರವಾಹ ತಗ್ಗಿದರೂ ಜನರಲ್ಲಿರುವ ಭೀತಿ ಮಾತ್ರ ಕಡಿಮೆಯಾಗಿಲ್ಲ. ವಿಜಯಪುರ ಹಾಗೂ ಕಲಬುರಗಿಯ ಭೀಮಾ ನದಿ ತೀರಗಳಲ್ಲಿ ಹಲವು ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿದ್ದು, ಜನ ಅನ್ನ, …

Read More »

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ 15 ಸ್ಥಾನಗಳಿಗೆ ಕತ್ತಿ ಸಹೋದರರ ಬೆಂಬಲಿತ ಅಭ್ಯರ್ಥಿಗಳು ಅವಿರೋದವಾಗಿ ಆಯ್ಕೆ

ಬೆಳಗಾವಿ : ಹುಕ್ಕೇರಿ ತಾಲ್ಲೂಕಿನ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ 15 ಸ್ಥಾನಗಳಿಗೆ ಕತ್ತಿ ಸಹೋದರರ ಬೆಂಬಲಿತ ಅಭ್ಯರ್ಥಿಗಳು ಅವಿರೋದವಾಗಿ ಆಯ್ಕೆಯಾಗಿದ್ದಾರೆ.  ರಾಜಕೀಯ ಜಟಾಪಟಿ ಸಾಕ್ಷಿಯಾಗಿದ್ದ ಹುಕ್ಕೇರಿ ತಾಲ್ಲೂಕು ಗ್ರಾಮೀಣ ವಿದ್ಯುತ್ ಸಹಕಾರ ಸಂಘದ ಚುನಾವಣೆ ಕಳೆದ ಎರಡು ದಶಕದಿಂದ ಕತ್ತಿ ಸಹೋದರರ ತಂಡ ಗೆಲುವು ಸಾಧಿಸುತ್ತಾ ಬಂದಿದೆ. ಈ ಬಾರಿಯೂ ಸಹ ಶಾಸಕ ಉಮೇಶ ಕತ್ತಿ, ಮಾಜಿ ಸಂಸದ ರಮೇಶ ಕತ್ತಿ ಹಾಗೂ ಶಾಸಕ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ  …

Read More »

ಕಾರಜೋಳ ಪುತ್ರ‌ ಅವರ ಆರೋಗ್ಯ ಸ್ಥಿತಿ ಗಂಭೀರ

ಕಲಬುರಗಿ : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ‌ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರ ಪುತ್ರನಿಗೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಉಸಿರಾಟದ ತೊಂದರೆಯಾದ ಹಿನ್ನೆಲೆ ಚೆನ್ನೈ ಖಾಸಗಿ ಆಸ್ಪತ್ರೆ ಶಿಪ್ಟ್ ಮಾಡಲಾಗಿದೆ.

Read More »

ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …

Read More »