Breaking News

ಮನೆಗಳ್ಳನ ಬಂಧನ; ೨೩,೧೫,೦೦೦/- ರೂ. ಮೌಲ್ಯದ ಬಂಗಾರದ ಆಭರಣ, ಹಾಗೂ ೬೦ ಸಾವಿರ ನಗದು ವಶಕ್ಕೆ

ಬೆಳಗಾವಿ – ದಿನಾಂಕ:೦೩-೦೪-೨೦೨೧ ರಂದು ಗೌಸಮೋದಿನ ಮೈನುದ್ದಿನ ತೋರಗಲ್ಲ, ಬೆಳಗಾವಿ ಇವರು  ದಿನಾಂಕ: ೦೨-೦೪-೨೦೨೧ ರಂದು ರಾತ್ರಿ ವೇಳೆಯಲ್ಲಿ ಸಂಗಮೇಶ್ವರ ನಗರದಲ್ಲಿರುವ ತಮ್ಮ ಮನೆಯಲ್ಲಿದ್ದ ೪೭೦ ಗ್ರಾಂ ಬಂಗಾರದ ಆಭರಣ ಹಾಗೂ ಒಂದು ಲಕ್ಷ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ನೀಡಿದ ದೂರಿನನ್ವಯ ಎ.ಪಿ.ಎಮ್.ಸಿ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಮೊಹ್ಮದಸಲ್ಮಾನ ನಸೀರಅಹ್ಮದ ಅನ್ಸಾರಿ ( ವಯಾ: ೨೨ ವರ್ಷ, ಸಾ: ಸಿಕಂದರಪೂರ, …

Read More »

ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು

ಬೆಳಗಾವಿ : ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಜೆಡಿಎಸ್ ಜಿಲ್ಲಾಧ್ಯಕ್ಷ ತೀರ್ಥಹಳ್ಳಿಯ ಮಂಜುನಾಥಗೌಡ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜಂಜುನಾಥ್ ಗೌಡ ಹಾಗೂ ಬೆಂಬಲಿಗರನ್ನು ಕಾಂಗ್ರೆಸ್ಸಿಗೆ ಬರಮಾಡಿಕೊಳ್ಳಲಾಯಿತು. ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಮತ್ತಿತರರು ಹಾಜರಿದ್ದರು. ಇದೇ ವೇಳೆ ಬೆಳಗಾವಿ ಮತ್ತು ಬಾಗಲಕೋಟೆಯ ಅನ್ಯಪಕ್ಷಗಳ ಮಹಿಳಾ ಮುಖಂಡರು ಕೂಡ ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ …

Read More »

ಎಸಿಬಿ ದಾಳಿಗೆ ಹೆದರಿ 5 ಲಕ್ಷ ರೂ ನಗದನ್ನು ಸುಡಲು ಪ್ರಯತ್ನಿಸಿದ ಅಧಿಕಾರಿ

ತೆಲಂಗಾಣ : ಎಸಿಬಿ ದಾಳಿಗೆ ಹೆದರಿ ಅಧಿಕಾರಿಯ ಸಹಚರನೊಬ್ಬ ಒಂದು ಅಜಾಗರೂಕತೆಯ ಹಾಗೂ ಹಾಸ್ಯಾಸ್ಪದ ವಾದಂತಹ ಘಟನೆಗೆ ಎಡೆಮಾಡಿಕೊಟ್ಟಿದ್ದರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಎಬಿಸಿ ಅಧಿಕಾರಿಗಳ ದಾಳಿಗೆ ಹೆದರಿ 5 ಲಕ್ಷ ರೂ . ನಗದು ಸುಟ್ಟು ಹಾಕುವ ಯತ್ನ ನಡೆದಿದೆ . ನೋಟು ಸುಡುತ್ತಿರುವ ಸಂದರ್ಭದಲ್ಲಿ, ಎಸಿಬಿ ಅಧಿಕಾರಿಗಳು ಬಲವಂತವಾಗಿ ಬಾಗಿಲು ತೆಗೆದಾಗ ನೋಟುಗಳು ಶೇ .70 ರಷ್ಟು ಸುಟ್ಟು ಬಸ್ಮಾ ಬಾಗಿರುವುದು ಕಂಡುಬಂದಿದ್ದು, ಅಧಿಕಾರಿಗಳು ಆ ಸುಟ್ಟ …

Read More »

ಖಾಸಗಿ ಆಸ್ಪತ್ರೆಗಳ ಅರ್ಧದಷ್ಟು ಬೆಡ್​ಗಳು ಕೊರೋನಾ ಸೋಂಕಿತರಿಂದಲೇ ಭರ್ತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇದರ ಪರಿಣಾಮ ಕೊರೋನಾ‌ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಖಾಸಗಿ ಆಸ್ಪತ್ರೆಯಲ್ಲಿ ಅರ್ದಕ್ಕರ್ದದಷ್ಟು ಬೆಡ್ ಗಳು ಕೊರೋನಾದಿಂದ ಫುಲ್ ಆಗುತ್ತಿವೆ. ಇದೇ ವೇಗದಲ್ಲಿ ಕೊರೊನಾ ಕೇಸ್ ಹೆಚ್ಚಾದ್ರೆ ಆಸ್ಪತ್ರೆಗಳಲ್ಲಿ ಬೆಡ್​ಗಳೇ ಸಿಗೋದು ಡೌಟು. ರಾಜ್ಯದಲ್ಲಿ 2ನೆ ಅಲೆ ಕೊರೊನಾ ಅತಿ ಹೆಚ್ಚು ಪರಿಣಾಮಕಾರಿಯಾಗಿದೆ. ಕಳೆದ ವರುಷವಂತೂ ಕೊರೊನಾಗೆ ಸಾಕಷ್ಟು ನಲುಗಿದ್ದ ಜನತೆ ಈ ಬಾರಿಯೂ ಎರಡನೇ ಅಲೆಗೆ ತೊಂದರೆ ಎದುರಿಸುತ್ತಿದ್ದಾರೆ. …

Read More »

ಮುಷ್ಕರದ ನಡುವೆಯೂ ಪೀಲ್ಡಿಗಿಳಿದ ಸರ್ಕಾರಿ ಬಸ್

ಗದಗ: ಸಾರಿಗೆ ನೌಕರರು ಇಂದು ನಡೆಸುತ್ತಿರುವ ಮುಷ್ಕರದ ನಡುವೆಯೂ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಪೀಲ್ಡಿಗಿಳಿದಿದೆ. ನಗರದ ಹೊಸ ಬಸ್ ನಿಲ್ದಾಣಕ್ಕೆ ಹೊಸಪೇಟೆ ಘಟಕದ ಬಸ್ ಪ್ರಯಾಣಿಕರನ್ನು ಹೊತ್ತು ತಂದಿದೆ. ಸರ್ಕಾರಿ ಬಸ್ ಹುಬ್ಬಳ್ಳಿಯಿಂದ ಗದಗ ಮಾರ್ಗವಾಗಿ ಹೊಸಪೇಟೆಗೆ ಸಂಚರಿಸುತ್ತಿದೆ. ಈ ವೇಳೆ ಗದಗ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನು ಕರೆತಂದಿದೆ. ಎಲ್ಲಾ ಕಡೆಗಳಲ್ಲಿ ಸಾರಿಗೆ ನೌಕರರು ನಿನ್ನೆಯೇ ಸೆಕೆಂಡ್ ಶಿಫ್ಟ್‍ಗೆ ಗೈರು ಹಾಜರಾಗಿದ್ದರು. ಆದರೆ ಹೊಸಪೇಟೆ ಘಟಕದ ಕೆಲವು ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ …

Read More »

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಟ್ಟಿದ ಸಾರಿಗೆ ಮುಷ್ಕರ

ದೇವನಹಳ್ಳಿ: 6ನೇ ವೇತನ ಅಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ಇಂದು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಎಂಟಿಸಿ ಬಸ್​ಗಳು ಸಂಚರಿಸುತ್ತಿಲ್ಲ. ಹಾಗಾಗಿ ಪ್ರಯಾಣಿಕರು ದುಪ್ಪಟ್ಟು ಹಣ ಕೊಟ್ಟು ಟ್ಯಾಕ್ಸಿಗಳ ಮೊರೆ ಹೋಗುತ್ತಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಿದ್ದು, ದಿನಕ್ಕೆ 300 ಟ್ರಿಪ್ ವಾಯುವಜ್ರ ಬಸ್​ಗಳುವಿಮಾನ ನಿಲ್ದಾಣದಿಂದ ಬೆಂಗಳೂರಿನ ವಿವಿಧ ಭಾಗಗಳಿಗೆ ಸಂಚರಿಸುತ್ತಿದ್ದವು. ಸದ್ಯಕ್ಕೆ ವಿಮಾನ ನಿಲ್ದಾಣದಲ್ಲಿ ಬಸ್​ಗಳಿಲ್ಲದೆ …

Read More »

ಕೆಲಸಕ್ಕೆ ಹಾಜರಾಗದಿದ್ದರೆ ಮಾರ್ಚ್ ತಿಂಗಳ ವೇತನ ಕಟ್ :ಬಿಎಂಟಿಸಿ ಎಂಡಿ ಶಿಖಾ

ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗದೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ‌. ಇದರ ಪರಿಣಾಮ 135 ಬಸ್​ಗಳು ಮಾತ್ರ ಇವತ್ತು ಸಂಚಾರ ಮಾಡುತ್ತಿವೆ. ನಗರದ ಯಶವಂತಪುರ ಬಸ್​ ನಿಲ್ದಾಣಕ್ಕೆ ಬಿಎಂಟಿಸಿ ಎಂಡಿ ಶಿಖಾ ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಅವರು, ಬೆಂಗಳೂರಿನಲ್ಲಿ ಈವರೆಗೆ 135 ಬಿಎಂಟಿಸಿ ಬಸ್​ಗಳು ಮಾತ್ರ ಸಂಚರಿಸುತ್ತಿವೆ. ಮಂಗಳವಾರದ ಸಭೆಯಲ್ಲಿನ ತೀರ್ಮಾನದಂತೆ ಪರ್ಯಾಯವಾಗಿ ಖಾಸಗಿ ಬಸ್​ಗಳನ್ನ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ …

Read More »

6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲೂ ಸಾಧ್ಯವೇ ಇಲ್ಲ – ಬಿಎಸ್ ವೈ

ಬೆಳಗಾವಿ : ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸುವ ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ಆದ್ರೆ ಮುಷ್ಕರದ ಹಿಂದಿನ ದಿನವೂ ಬೆಳವಾಗಿಯಲ್ಲಿ ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದ ಸಿಎಂ ಬಿಎಸ್ ಯಡಿಯೂರಪ್ಪನವರು ಯಾವುದೇ ಕಾರಣಕ್ಕೂ 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಸಾರಿಗೆ ನೌಕರರ 9 ಬೇಡಿಕೆಯಲ್ಲಿ 8 ಬೇಡಿಕೆಗಳನ್ನ ಈಡೇರಿಸಿದ್ದೇವೆ. ಕೊವಿಡ್‌ನಿಂದ …

Read More »

‘ವೇತನ ಹೆಚ್ಚಿಸಲು ಸರ್ಕಾರ ಸಿದ್ಧ, ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ’: ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ

ಹುಮ್ನಾಬಾದ್: ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಅದರಿಂದ ನಾಳೆ ನಿಮಗೇ ತೊಂದರೆಯಾಗುತ್ತದೆ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿದ್ದು, ವೇತನ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು …

Read More »

ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಯಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಏ.7- ಆರನೆ ವೇತನ ಜಾರಿಯಾಗುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಬಸ್‍ಗಳಿಂದ ಸರ್ಕಾರಕ್ಕೆ ನಷ್ಟವೇ ಹೊರತು ಲಾಭವಿಲ್ಲ. ಸರ್ಕಾರ ಅವೈಜ್ಞಾನಿಕ ಪ್ರಯತ್ನ ಮಾಡುತ್ತಿದೆ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು. ಬಂದ್ ಯಶಸ್ಸಿಗೆ ಸಾರಿಗೆ ನೌಕರರ ನೋವುಗಳೇ ಕಾರಣ. ಹಲವು ದಿನಗಳಿಂದ ಅವರಿಗೆ ಸಾಕಷ್ಟು ಸಮಸ್ಯೆಗಳಿವೆ. ವ್ಯಕ್ತಿ ಪ್ರತಿಷ್ಠೆಗಿಂತ ನೌಕರರ ಸಮಸ್ಯೆ ಬಗೆಹರಿಸುವುದು …

Read More »