ಬೆಂಗಳೂರು: ಪರಪ್ಪನ ಅಗ್ರಹಾರದ ಕೈದಿಗಳಿಗೆ ಕಳೆದ ಒಂದು ತಿಂಗಳಿನಿಂದ ಹಂತ ಹಂತವಾಗಿ ಕೊರೊನಾ ಲಸಿಕೆ ನೀಡಲಾಗ್ತಿದೆ. ಈಗಾಗಲೇ 2500ಕ್ಕೂ ಹೆಚ್ಚು ಕೈದಿಗಳಿಗೆ ಮೊದಲ ಡೋಸ್ ವ್ಯಾಕ್ಸಿನೇಷನ್ ಮುಗಿದಿದೆ. ಇದರ ಬೆನ್ನಲ್ಲೇ ಜೈಲಿನಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಅಂತ ಹೇಳಲಾಗ್ತಿದೆ. ಜೈಲಿನಲ್ಲಿ ನೂರಕ್ಕೂ ಹೆಚ್ಚಿದ್ದ ಕೊರೊನಾ ಸೋಂಕಿನ ಪ್ರಮಾಣ ಈಗ ದಿಢೀರ್ ಇಳಿಕೆಯಾಗಿದೆ. ಕೇವಲ 12 ಮಂದಿ ವಿಚಾರಣಾಧೀನ ಕೈದಿಗಳು ಮಾತ್ರ ಈಗ ಸೋಂಕಿತರಾಗಿದ್ದಾರೆ ಅಂತ ತಿಳಿದುಬಂದಿದೆ. ಜೈಲಧಿಕಾರಿಗಳು ಕೈಗೊಂಡ ಕ್ರಮಗಳು …
Read More »ಕಿಲ್ಲರ್ ಕೊರೊನಾ ಸೋಂಕಿಗೆ ಸ್ಯಾಂಡಲ್ವುಡ್ ನಟ ‘ಅಜಯ್ ರಾವ್’ ಮೇಕಪ್ ಮ್ಯಾನ್ ಬಲಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಾವಿನ ಸರಣಿ ಮುಂದುವರೆದಿದ್ದು, ಸಾವಿರಾರು ಮಂದಿ ಹೆಮ್ಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದೀಗ ಕಿಲ್ಲರ್ ಕೊರೊನಾ ಸೋಂಕಿಗೆ ಸ್ಯಾಂಡಲ್ವುಡ್ ನಟ ಅಜಯ್ ರಾವ್ ಮೇಕಪ್ ಮ್ಯಾನ್ ಜಯರಾಮ್ ಮೃತಪಟ್ಟಿದ್ದಾರೆ. ಈ ಕುರಿತು ನಟ ಅಜಯ್ ರಾವ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜಯರಾಮನ್ ನನ್ನ ಪರ್ಸನಲ್ ಮೇಕಪ್ ಮ್ಯಾನ್ ಆಗಿದ್ದರು, ಕಳೆದ 11 ವರ್ಷಗಳದಿಂದ ನನ್ನ ಜೊತೆ ಕೆಲಸ ಮಾಡುತ್ತಿದ್ದರು. …
Read More »ದೇಶದಲ್ಲೇ ಮೊದಲ ಚರ್ಮದ ಬ್ಲ್ಯಾಕ್ ಫಂಗಸ್ ಚಿತ್ರದುರ್ಗದಲ್ಲಿ ಪತ್ತೆ
ಚಿತ್ರದುರ್ಗ, ಜೂನ್ 1: ಕೊರೊನಾ ಸೋಂಕಿನ ನಂತರ ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್, ಯೆಲ್ಲೋ ಫಂಗಸ್ನಂತಹ ನಾನಾ ಸೋಂಕಿನ ಸುಳಿಗೆ ಜನ ಸಿಲುಕುತ್ತಿದ್ದು, ಈಗ ಚರ್ಮ ಫಂಗಸ್ನ್ನು ಎದುರಿಸುವಂತಾಗಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ದೇಶದ ಮೊದಲ ಚರ್ಮದ ಬ್ಲ್ಯಾಕ್ ಫಂಗಸ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಚಿತ್ರದುರ್ಗದ 54 ವರ್ಷದ ರೋಗಿಯಲ್ಲಿ ಸ್ಕಿನ್ ಮ್ಯೂಕರ್ ಮೈಕೋಸಿಸ್ ಪತ್ತೆಯಾಗಿದೆ ಎಂದು ಇಎನ್ಟಿ ತಜ್ಞ ಡಾ.ಪ್ರಹ್ಲಾದ್ ತಿಳಿಸಿದ್ದಾರೆ. 54 ವರ್ಷದ ಪಂಚಾಕ್ಷರಪ್ಪ ಒಂದು ತಿಂಗಳ ಹಿಂದೆ …
Read More »ಬೆಂಗಳೂರಲ್ಲಿ ಸೋಂಕು ನಿವಾರಕ ಸಿಂಪಡಣೆಗೆ ತಡೆ
ಬೆಂಗಳೂರು, ಜೂನ್ 01; ಬಿಬಿಎಂಪಿ ವಿಮಾನದ ಮೂಲಕ ಬೆಂಗಳೂರು ನಗರದಲ್ಲಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಣೆ ಮಾಡುವ ಪ್ರಯೋಗಕ್ಕೆ ತಾತ್ಕಾಲಿಕ ತಡೆ ನೀಡಿದೆ. ನಗರದ ಆಯ್ದ ಪ್ರದೇಶದಲ್ಲಿ ಇದನ್ನು ಜಾರಿಗೊಳಿಸಬೇಕಿತ್ತು. ಸೋಮವಾರದಿಂದ ಬುಧವಾರದ ತನಕ ನಗರದ ಆಯ್ದ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಣೆ ಮಾಡಲು ಏರಿಯಲ್ ವರ್ಕ್ಸ್ ಏರೋ ಎಲ್ಎಲ್ಪಿ ಸಂಸ್ಥೆಯ ಮುಂದಾಗಿತ್ತು. ಬಿಬಿಎಂಪಿ ಆಯುಕ್ತ ಗೌರವ ಗುಪ್ತ ಸೂಚನೆ ಅನ್ವಯ ಪ್ರಾಯೋಗಿಕ ಯೋಜನೆಗೆ ತಡೆ ನೀಡಲಾಗಿದೆ. ಕೆಲವು …
Read More »ಸಿದ್ದರಾಮಯ್ಯಗೆ ತೀವ್ರ ಜ್ವರ: ಮಣಿಪಾಲ್ಗೆ ದಾಖಲು
ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಪಡೆಯಲಿದ್ದು, ಅವರು ಮಂಗಳವಾರ ಮತ್ತು ಬುಧವಾರ ಭಾಗವಹಿಸಲಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ’ ಎಂದು ಆಪ್ತ ಮೂಲಗಳು ಮಾಹಿತಿ …
Read More »ಸೆಕೆಂಡ್ ಡೋಸ್ 12 ವಾರದಿಂದ 1 ತಿಂಗಳಿಗೆ ಇಳಿಕೆ, ವಿದೇಶಕ್ಕೆ ಹೋಗುವವರಿಗೆ ಲಸಿಕೆ
ಬೆಂಗಳೂರು: ವಿದೇಶದಲ್ಲಿ ಉದ್ಯೋಗ ಮತ್ತು ವ್ಯಾಸಂಗ ಮಾಡುವವರಿಗೆ ಕೊರೋನಾ ಲಸಿಕೆಯನ್ನು ಆದ್ಯತೆಯ ಮೇಲೆ ನೀಡಲಾಗುತ್ತದೆ. ಇಂದಿನಿಂದ ಆದ್ಯತಾ ಗುಂಪಿನವರಿಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಡಿಸಿಎಂ, ಲಸಿಕೆ ಕಾರ್ಯಪಡೆ ಅಧ್ಯಕ್ಷ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಇಂದು 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡಲಿದ್ದು, ಲಸಿಕೆ ಪಡೆಯಲು ಆಧಾರ್ ಕಾರ್ಡ್, ಪಾಸ್ಪೋರ್ಟ್, ವಿದೇಶದಲ್ಲಿರುವ ತಮ್ಮ ಕೆಲಸ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು …
Read More »ಸಿಎಂ ಬದಲಾವಣೆ ಚರ್ಚೆ ನಡುವೆ ವಿಜಯೇಂದ್ರ ದಿಢೀರ್ ದೆಹಲಿ ಪ್ರಯಾಣ
ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ಆಗಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿ.ಪಿ.ಯೋಗೇಶ್ವರ್ ದೆಹಲಿ ಭೇಟಿ ಬೆನ್ನಲ್ಲೇ ತಮ್ಮ ಇಲಾಖೆಯಲ್ಲಿ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಸಿಎಂ ಬದಲಾವಣೆ ನಿಟ್ಟಿನಲ್ಲಿ ಯೋಗೇಶ್ವರ್ ಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಬೆಳವಣಿಗೆಗಳ ನಡುವೆಯೇ ಸಿ.ಪಿ.ಯೋಗೇಶ್ವರ್ …
Read More »ಬಿಜೆಪಿ ನಾಯಕರು ‘ಪವರ್ ಬೆಗ್ಗರ್ಸ್’; ಯೋಗೇಶ್ವರ್, ವಿಜಯೇಂದ್ರ ದೆಹಲಿ ಭೇಟಿಗೆ ಡಿ.ಕೆ.ಶಿವಕುಮಾರ್ ಲೇವಡಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಕಷ್ಟದಿಂದ ಜನರು ಪರದಾಡುತ್ತಿದ್ದರೆ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ವರಿಷ್ಠರ ಭೇಟಿಗೆ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಅವರೆಲ್ಲರೂ ಪವರ್ ಬೆಗ್ಗರ್ಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸಚಿವ ಸಿ.ಪಿ.ಯೋಗೇಶ್ವರ್, ಬಿ.ವೈ.ವಿಜಯೇಂದ್ರ ದೆಹಲಿ ಭೇಟಿಗೆ ಕಿಡಿಕಾರಿದ ಅವರು, ಸಿಎಂ ಯಡಿಯೂರಪ್ಪನವರು ಯಾರ್ಯಾರನ್ನೋ ಎಲ್ಲೆಲ್ಲಿಂದಲೊ ಕರೆತಂದರು. ಈಗ ಅವರೇ ಎಲ್ಲವನ್ನು ಅನುಭವಿಸುತ್ತಿದ್ದಾರೆ. ಅವರು ಮಾಡಿದ್ದನ್ನು ಅವರು ಅನುಭವಿಸುತ್ತಿದ್ದಾರೆ ಎಂದು ವ್ಯಂಗವಾಡಿದರು. ಇದೇ ವೇಳೆ ರಾಜ್ಯ …
Read More »ತಾಲೂಕಿನ ಎಲ್ಲಾ ಪೆಟ್ರೋಲ್ ಪಂಪ್ ಮಾಲೀಕರಿಗೆ ಹಾಗೂ ಸಿಬ್ಬಂದಿಗಳಿಗೆ ಸತೀಶ್ ಶುಗರ್ಸ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ಹ್ಯಾಂಡ್ ಗ್ಲೌಸ್ ವಿತರಿಸಿದ ರಾಹುಲ್ ಜಾರಕಿಹೊಳಿ
ಗೋಕಾಕ: ತಾಲೂಕಿನ ಎಲ್ಲಾ ಪೆಟ್ರೋಲ್ ಪಂಪ್ ಮಾಲೀಕರಿಗೆ ಹಾಗೂ ಸಿಬ್ಬಂದಿಗಳಿಗೆ ಸತೀಶ್ ಶುಗರ್ಸ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ಹಾಗೂ ಹ್ಯಾಂಡ್ ಗ್ಲೌಸ್ ಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಮಂಗಳವಾರ ವಿತರಿಸಿದರು. ಜಿಲ್ಲೆಯಲ್ಲಿ ಕೊರೋನಾ ವ್ಯಾಪಕವಾಗಿ ವಿಸ್ತಾರಗೊಳ್ಳುತ್ತಿರುವ ಹಿನ್ನೆಲೆ ಜನರ ರಕ್ಷಣೆಗಾಗಿ ರಾಹುಲ್ ಅವರು ಮಾಸ್ಕ್, ಸ್ಯಾನಿಟೈಸರ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸುತ್ತಿದ್ದಾರೆ. ಗ್ರಾಮೀಣ ಜನತೆ ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಈ ಹೆಮ್ಮಾರಿ ಸೋಂಕನ್ನು ಕಟ್ಟಿಹಾಕಲು ಸಾಮಾಜಿಕ ಅನಿರ್ವಾಯ ಎಂದರು. …
Read More »ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ನಡುವೆ ಶವವಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ 7 ನರ್ಸ್ ಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾ ಸರ್ಜನ್ ಆದೇಶ
ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ನಡುವೆ ಶವವಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ 7 ನರ್ಸ್ ಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾ ಸರ್ಜನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಜಿಲ್ಲಾ ಸರ್ಜನ್ ಡಾ.ಹುಸೇನ್ ಸಾಬ್ 7 ನರ್ಸ್ ಗಳ ವಿರುದ್ಧ ಕ್ರಮ ಕೈಗೊಂಡು, ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ. ತಮ್ಮ ವಿರುದ್ಧದ ಕ್ರಮಕ್ಕೆ ಕಣ್ಣೀರಿಟ್ಟ ನರ್ಸ್ ಗಳು ರಿಲಿವಿಂಗ್ …
Read More »
Laxmi News 24×7