ರಿಯಲ್ಮಿ ಸಂಸ್ಥೆ Realme 8 ಸಿರೀಸ್ ಹೆಸರಿನ ಸ್ಮಾರ್ಟ್ಫೋನನ್ನು ಸಿದ್ಧಪಡಿಸುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೂತನ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರುವ ಲಕ್ಷಣ ಕಾಣುತ್ತಿದೆ. ಅದಕ್ಕೆ ಅನುಗುಣವಾಗಿ ಕಂಪೆನಿಯ ಸಿಇಒ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮುಂಬರುವ ಸ್ಮಾರ್ಟ್ಫೋನ್ 108 ಮೆಗಾಫಿಕ್ಸೆಲ್ ಕ್ಯಾಮೆರಾ ಮೂಲಕ ಬರಲಿದೆ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ಸ್ಮಾರ್ಟ್ಫೋನ್ ಪ್ರಿಯರಲ್ಲಿ ನೂತನ ಫೋನಿನ ಬಗ್ಗೆ ಕುತೂಹಲ ಹೆಚ್ಚಾಗಿದೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ರಿಯಲ್ಮಿ 7 ಸಿರೀಸ್ ಸ್ಮಾರ್ಟ್ಫೋನ್ ಮಾರುಕಟ್ಟೆಗೆ …
Read More »ಜಲ್ಲಿಕಟ್ಟು ಕ್ರೀಡೆ ವೇಳೆ ಸಂಭವಿಸಿದ ದುರಂತ: ನಾಲ್ವರ ಸಾವು
ಚೆನ್ನೈ : ತಮಿಳುನಾಡಿನ ಜನಪದ ಕ್ರೀಡೆಯಾಗಿರುವ ಜಲ್ಲಿಕಟ್ಟು ಸ್ಪರ್ಧೆ ವೇಳೆ ದುರಂತ ಸಂಭವಿಸಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅಜಿತ್ , ಮಾರುತು , ಸೇತು ಮತ್ತು ಮಹೇಶ್ ಎನ್ನುವವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ . ಇನ್ನು …
Read More »ಚನ್ನಪಟ್ಟಣದ ಆಟಿಕೆಗಳು ಪ್ರಪಂಚದಾದ್ಯಂತ ಎಲ್ಲಾ ಮಕ್ಕಳ ಮೊಗದಲ್ಲೂ ನಗು ತರಿಸಬೇಕು: ಪ್ರಧಾನಿ ಮೋದಿ
ನವದೆಹಲಿ : ನಮ್ಮ ಸಂಸ್ಕೃತಿಯ ಪ್ರತಿರೂಪದಂತಿರುವ ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಆಟಿಕೆ ಕ್ಲಸ್ಟರ್ ನಮ್ಮ ದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ . ಶನಿವಾರ ದೆಹಲಿಯಲ್ಲಿ ವರ್ಚುವಲ್ ಕಾನ್ಸರೆನ್ಸ್ ಮೂಲಕ ಆಟಿಕೆ ಮೇಳಕ್ಕೆ ಚಾಲನೆ ನೀಡಿ, ಚನ್ನಪಟ್ಟಣದ ಆಟಿಕೆ ತಯಾರಕರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಅವರು,ಚನ್ನಪಟ್ಟಣದ ಬೊಂಬೆಯನ್ನು ವಿಶ್ವಮಟ್ಟದಲ್ಲಿ ಪ್ರಸಿದ್ಧಿಗೆ ತರಲು ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು. ಆಟಿಕೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು …
Read More »ಪೌರಕಾರ್ಮಿಕ ಆತ್ಮಹತ್ಯೆ: ₹10 ಲಕ್ಷ ಪರಿಹಾರ ನೀಡಲು ಆಗ್ರಹ
ಬೆಂಗಳೂರು: ಮಲ ಸ್ವಚ್ಛಗೊಳಿಸಲು ಪುರಸಭೆ ಅಧಿಕಾರಿಗಳು ನೀಡಿದ ಒತ್ತಡದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮದ್ದೂರಿನ ಪೌರಕಾರ್ಮಿಕ ನಾರಾಯಣ ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಹಾಗೂ ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಸದಸ್ಯರು ವಿಶ್ವೇಶ್ವರಯ್ಯ ಟವರ್ ಬಳಿಯ ಪೌರಾಡಳಿತ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಇತ್ತೀಚೆಗಷ್ಟೇ ಮದ್ದೂರಿನ ಪೌರಕಾರ್ಮಿಕ ನಾರಾಯಣ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ‘ಪುರಸಭೆ ಅಧಿಕಾರಿಗಳು ಬಲವಂತವಾಗಿ ಮಲಸ್ವಚ್ಛಗೊಳಿಸಲು ಒತ್ತಡ …
Read More »ಆಕ್ಟಿವಾ ಸ್ಕೂಟರ್ ನಲ್ಲಿ ಬಂದು ಮರಳು ಲಾರಿ ಹಿಡಿದ ಕಮೀಷನರ್ – ಡಿಸಿಪಿ
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಅವರು ಸ್ಕೂಟರ್ ನಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ. ಮರಳು ಸಾಗಾಟದ ಲಾರಿಯನ್ನು ತಲಪಾಡಿ ಟೋಲ್ ಗೇಟಿನಲ್ಲಿ ಅಡ್ಡ ಹಾಕಿದ ಅಧಿಕಾರಿಗಳು, ಲಾರಿ ಚಾಲಕನನ್ನು ವಶಕ್ಕೆ ಪಡೆದರು. ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ ನಡೆಸುತ್ತಿದ್ದ ಲಾರಿಗೆ ಎಸ್ಕಾರ್ಟ್ ನೀಡುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿದ್ದು, ಎಸ್ಕಾರ್ಟ್ ನಡೆಸುತ್ತಿದ್ದ ಚಂದ್ರ ಎಂಬುವನನ್ನು ವಶಕ್ಕೆ ಪಡೆದಿದ್ದಾರೆ.
Read More »ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಯಮಕನಮರಡಿ ಪೊಲೀಸರು
ಬೆಳಗಾವಿ: ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಯಮಕನಮರಡಿ ಪೊಲೀಸರು ಮೂವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗೋಕಾಕ್ ನ ಅರಬಾವಿ ಗ್ರಾಮದ ಸಂತೋಷ್ ಗಂಗಾರಾಮ ವಡ್ಡರ, ವಿಶಾಲ ನರಸಿಂಗ ಹಾಗೂ ಚಿನ್ನದ ವ್ಯಾಪಾರಿ ಚಂದ್ರಕಾಂತ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 18,59,776/-ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಲಾಗಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಕಿತ್ತೂರು ಠಾಣೆ ವ್ಯಾಪ್ತಿಯ 13 ಮನೆ, ಮಾರಿಹಾಳ ಠಾಣಾ ವ್ಯಾಪ್ತಿಯ 2 …
Read More »ಮಹಿಳೆಯನ್ನು ಕಟ್ಟಿಹಾಕಿ ಹಾಡಹಗಲೇ ದರೋಡೆಗೆ ಯತ್ನ: ಸಿನಿಮೀಯಾ ರೀತಿಯಲ್ಲಿ ನಡೆಯಿತು ಚೇಸಿಂಗ್
ಚಿಕ್ಕಮಗಳೂರು: ಇಬ್ಬರು ದರೋಡೆಕೋರರಿಂದ ಹಾಡಹಗಲೇ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ನಗರ ಎಐಟಿ ಸರ್ಕಲ್ ನಲ್ಲಿ ನಡೆದಿದೆ. ಎಐಟಿ ಸರ್ಕಲ್ ನಲ್ಲಿರುವ ಸಿಡಿಎ ಮಾಜಿ ಅಧ್ಯಕ್ಷ ಚಂದ್ರೇಗೌಡ ಎಂಬವರ ಮನೆ ಬಳಿ ಪಲ್ಸರ್ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಯುವಕರು ತಲೆಗೆ ಹೆಲ್ಮೆಟ್ ಧರಿಸಿ ಕೈಯಲ್ಲಿ ಚಾಕು ಹಿಡಿದು ಮನೆಯೊಳಗೆ ಪ್ರವೇಶಿಸಿದ್ದಾರೆ. ಮನೆಯಲ್ಲಿ ಚಂದ್ರೇಗೌಡ ಪತ್ನಿ ಒಬ್ಬರೇ ಇದ್ದಿದ್ದು, ಅವರ ಕೈ ಬಾಯಿಗೆ ವೇಲ್ ನಿಂದ ಕಟ್ಟಿ ದರೋಡೆಗೆ ಯತ್ನಿಸಿದ್ದಾರೆ. …
Read More »ಮಹಾರಾಷ್ಟ್ರದಲ್ಲಿ 10,12ನೇ ತರಗತಿಗಳಿಗೆ ಪರೀಕ್ಷಾ ದಿನಾಂಕ ಪ್ರಕಟ
ಪುಣೆ,ಫೆಬ್ರವರಿ 27: ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ.ಹಾಗಿದ್ದರೂ ಪ್ರೌಢಶಿಕ್ಷಣ ಮಂಡಳಿ 10 ಹಾಗೂ 12ನೇ ತರಗತಿಗಳಿಗೆ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದೆ. ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ 10 (ಎಸ್ಎಸ್ಸಿ) ಹಾಗೂ 12ನೇ ತರಗತಿ (ಎಚ್ಎಸ್ಸಿ) ಪರೀಕ್ಷೆಗಳು ಏ. 23ರಿಂದ ಮೇ 21ರ ವರೆಗೆ ನಡೆಯಲಿವೆ ಎಂದು ಮಂಡಳಿಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ನಾವು ಫೆಬ್ರವರಿ 16 ರಂದು ಪರೀಕ್ಷೆಯ ಪ್ರಸ್ತಾವಿತ ದಿನಾಂಕಗಳನ್ನು ಘೋಷಿಸಿದ್ದೆವು ಮತ್ತು ತಜ್ಞರಿಂದ …
Read More »ಕಂಗನಾ-ಹೃತಿಕ್ ಕೇಸ್: ವಿಚಾರಣೆಗೆ ಹಾಜರಾದ ‘ಕ್ರಿಶ್’ ಹೀರೋ
ಮಹಾರಾಷ್ಟ್ರ: 5 ವರ್ಷ ಹಳೆಯ ಕೇಸ್ ಒಂದರಲ್ಲಿ ಹೃತಿಕ್ ರೋಷನ್ ಇಂದು ಮುಂಬೈ ಪೊಲೀಸ್ ಸ್ಟೇಷನ್ಗೆ ಬಂದು ಕ್ರೈಂ ಬ್ರಾಂಚ್ ಅಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ್ಧಾರೆ. 2016ರಲ್ಲಿ ನಟ ಹೃತಿಕ್ ರೋಷನ್ ಮುಂಬೈ ಪೊಲೀಸ್ ಠಾಣೆಯಲ್ಲಿ ಒಂದು ದೂರು ದಾಖಲಿಸಿದ್ರು. 2013ರಿಂದ 2014ರವರೆಗೆ ನನ್ನ ಹೆಸರಲ್ಲಿ ನಕಲಿ ಇ-ಮೇಲ್ ಐಡಿ ರಚಿಸಿ, ಕಂಗನಾ ಜೊತೆ ಯಾರೋ ಮಾತನಾಡ್ತಿದ್ಧಾರೆ ಅಂತ ದೂರಿದ್ದರು. ಆದ್ರೆ ಕಂಗನಾ ಮಾತ್ರ ಹೃತಿಕ್ ನನ್ನ ಜೊತೆ ಪ್ರೀತಿಯ …
Read More »ಜೂನ್ ನಲ್ಲಿ ನಡೆಯಲಿದೆ ಎನ್ಐಒಎಸ್ ಪರೀಕ್ಷೆಗಳು
ಬೆಂಗಳೂರು, ಫೆ.27- ರಾಷ್ಟ್ರೀಯ ಮುಕ್ತ ಶಿಕ್ಷಣ ಇಲಾಖೆ (ಎನ್ಐಒಎಸ್) ವತಿಯಿಂದ ಮಾರ್ಚ್-ಏಪ್ರಿಲ್-2021ನೆ ಸಾಲಿನ ಸೆಕೆಂಡರಿ (10ನೇ ತರಗತಿ) ಮತ್ತು ಸೀನಿಯರ್ ಸೆಕೆಂಡರಿ (ದ್ವಿತೀಯ ಪಿಯುಸಿ) ಪರೀಕ್ಷೆಗಳನ್ನು ಜೂನ್ ತಿಂಗಳಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಆನ್ಲೈನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸಲು ಸೂಚಿಸಲಾಗಿದೆ. ಮಾರ್ಚ್ 1ರಿಂದ 31ರ ವರೆಗೆ ಪರೀಕ್ಷಾ ಶುಲ್ಕ ಪಾವತಿಸಬಹುದಾಗಿದೆ. ಏಪ್ರಿಲ್ 1ರಿಂದ 13ರ ವರೆಗೆ ವಿಳಂಬ ಶುಲ್ಕ ಸಹಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಳ್ಳಬಹುದಾಗಿದೆ. ಜನವರಿ, ಫೆಬ್ರವರಿ 2021ರ ಪರೀಕ್ಷೆಯಲ್ಲಿ …
Read More »