ಬೆಂಗಳೂರು, (ಜೂನ್ 22): ಕರ್ನಾಟಕದಲ್ಲಿ ಸುಳ್ಳು ಸುದ್ದಿ ((Fake News) , ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಕರಡು ಬಗ್ಗೆ ಚರ್ಚಿಸಲಾಗಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು …
Read More »ರಾಜ್ಯದಲ್ಲಿ ನಿರಂತರ ಮಾವು ಬೆಲೆ ಕುಸಿತ:
ಬೆಂಗಳೂರು: ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದಿರುವ ಹಿನ್ನೆಲೆಯಲ್ಲಿ ‘ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ’ಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರಡೆರೆಡು ರೂ.ಗಳಂತೆ ಒಟ್ಟು 4 ರೂ. ವ್ಯತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿವೆ. ಶನಿವಾರ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ವಿಡಿಯೋ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ …
Read More »ಹೂತಿಟ್ಟ ಶವದ ಹಿಂದಿನ ಕಾರಣ ಬಯಲು
ಚಾಮರಾಜನಗರ: ಹೂತಿಟ್ಟ ಶವದಿಂದ ಮುಂಗೈ ಹೊರಬಂದ ಪ್ರಕರಣದಲ್ಲಿ ಮಹಿಳೆಯ ಗುರುತು ಪತ್ತೆಯಾಗಿದ್ದು, ಕೊಲೆಗೈದ ಪ್ರಿಯಕರ ಸಿಕ್ಕಿಬಿದ್ದಿದ್ದಾನೆ. ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದ ಸುವರ್ಣಾವತಿ ನದಿ ದಂಡೆಯಲ್ಲಿ ಗುರುವಾರ ರಾತ್ರಿ ಶವದ ಮುಂಗೈ ಕಾಣಿಸಿಕೊಂಡಿತ್ತು. ಮೋಳೆ ಗ್ರಾಮದ ಸೋನಾಕ್ಷಿ (29) ಎಂಬಾಕೆಯ ಶವ ಇದಾಗಿದೆ. ಈಕೆಯನ್ನು ಪ್ರಿಯಕರ ಮಾದೇಶ(35) ಕೊಲೆ ಮಾಡಿ, ಹೂತು ಹಾಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೋನಾಕ್ಷಿ ತನ್ನ ಸೋದರ ಮಾವ ವಿಜಯ್ ಕುಮಾರ್ ಎಂಬವರನ್ನು ಮದುವೆಯಾಗಿದ್ದರೂ ಸಂಬಂಧದಲ್ಲಿ …
Read More »ಪಣಜಿ ಹೆದ್ದಾರಿಯಲ್ಲಿರುವ ಲೊಂಡಾ ಫಾಟಾದಿಂದ ಲೊಂಡಾ ಗ್ರಾಮಕ್ಕೆ ಹೋಗುವ ಸುಮಾರು 300 ಮೀಟರ್ ಉದ್ದದ ರಸ್ತೆ ತೀವ್ರವಾಗಿ ಹದಗೆಟ್ಟಿದೆ.
ಲೊಂಡಾ ಫಾಟಾದಿಂದ ಲೊಂಡಾ ಗ್ರಾಮದವರೆಗಿನ ರಸ್ತೆಯಲ್ಲಿ ಗುಂಡಿಗಳ ಸಾಮ್ರಾಜ್ಯ… ಶೀಘ್ರ ದುರಸ್ತಿಗಾಗಿ ಗ್ರಾಮಸ್ಥರ ಆಗ್ರಹ… ಬೆಳಗಾವಿ-ಪಣಜಿ ಹೆದ್ದಾರಿಯಲ್ಲಿರುವ ಲೊಂಡಾ ಫಾಟಾದಿಂದ ಲೊಂಡಾ ಗ್ರಾಮಕ್ಕೆ ಹೋಗುವ ಸುಮಾರು 300 ಮೀಟರ್ ಉದ್ದದ ರಸ್ತೆ ತೀವ್ರವಾಗಿ ಹದಗೆಟ್ಟಿದೆ. ಕಳೆದ ನಾಲ್ಕು ವರ್ಷಗಳಿಂದ ಈ ರಸ್ತೆ ದುರಸ್ತಿಗಾಗಿ ಕಾಯುತ್ತಿದ್ದು, ಇದರಿಂದ ಸಣ್ಣಪುಟ್ಟ ಅಪಘಾತಗಳು ನಿತ್ಯ ಸಹಜವಾಗಿದ್ದು ಶೀಘ್ರ ದುರಸ್ತಿಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ ಲೊಂಡಾ ಗ್ರಾಮವನ್ನು ಲೊಂಡಾ ಜಂಕ್ಷನ್ ಎಂದು ಕರೆಯಲಾಗುತ್ತದೆ, ಏಕೆಂದರೆ ಗೋವಾಕ್ಕೆ ಹೋಗುವ …
Read More »ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ:C.M.
ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಅವರ ದೊಡ್ಡ ಗುಣ: ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು : ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ ಶಾಲಾ ಶಿಕ್ಷಣಕ್ಕೆ ರಾಜಣ್ಣ ನೆರವು …
Read More »ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ತಲಾಶ್ ನಡೆಸಿದ ಪೊಲೀಸರು (
ಬೆಳಗಾವಿ: ಚಾಕು, ಮಚ್ಚು, ಲಾಂಗು ಎಂದರೆ ಆಟಿಕೆ ಸಾಮಾನು ಆದಂತಾಗಿವೆ. ಪುಸ್ತಕ, ಪೆನ್, ಊಟದ ಡಬ್ಬಿ ಇಟ್ಟುಕೊಳ್ಳುವ ಬ್ಯಾಗ್ನಲ್ಲಿ ಮಾರಕಾಸ್ತ್ರಗಳನ್ನು ಇಟ್ಟು ಶಾಲಾ ಕಾಲೇಜು ಮಕ್ಕಳು ಓಡಾಡುತ್ತಿದ್ದಾರೆ. ಇದಕ್ಕೆಲ್ಲಾ ಬ್ರೇಕ್ ಹಾಕಲು ಬೆಳಗಾವಿ ಪೊಲೀಸ್ ಕಮಿಷನರ್ ನೂತನ ಚಕ್ರವ್ಯೂಹವೊಂದನ್ನು ರಚಿಸಿದ್ದಾರೆ. ಅದುವೇ “ಚುಚ್ಚು ನಿಯಂತ್ರಣ ತಂಡ”. ಚಾಕು ಇರಿತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನರ್ ಭೂಷಣ ಗುಲಾಬರಾವ್ ಬೊರಸೆ ಅವರು ಚುಚ್ಚು ನಿಯಂತ್ರಣ ತಂಡವನ್ನು ಮೊನ್ನೆಯಷ್ಟೇ ಘೋಷಣೆ ಮಾಡಿದ್ದರು. ಈ …
Read More »30 ವರ್ಷದ ಹಿಂದೆ ಲಂಚ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಈಗ ಶಿಕ್ಷೆ
ಬೆಳಗಾವಿ : 30 ವರ್ಷದ ಹಿಂದೆ ಉತಾರ ಕೊಡಲು 500 ರೂ. ಲಂಚ ಪಡೆದಿದ್ದ ಆಗಿನ ಗ್ರಾಮ ಲೆಕ್ಕಾಧಿಕಾರಿಗೆ ಈಗ ಜೈಲು ಶಿಕ್ಷೆ ವಿಧಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಆದರೆ, ದೂರು ನೀಡಿದ್ದ ರೈತ 5 ವರ್ಷಗಳ ಹಿಂದೆ ಮೃತಪಟ್ಟಿದ್ದು, ಲಂಚ ಸ್ವೀಕರಿಸಿದ್ದ ಅಧಿಕಾರಿ ಹಿಂಡಲಗಾ ಜೈಲು ಕಂಬಿ ಎಣಿಸುತ್ತಿದ್ದಾರೆ. 1995ರಲ್ಲಿ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ರೈತ ಲಕ್ಷ್ಮಣ ರುಕ್ಕಣ್ಣ ಕಟಾಂಬಳೆ ಅವರು ತಮ್ಮ ಸಹೋದರನೊಂದಿಗೆ ಜಮೀನು ಹಂಚಿಕೆ …
Read More »ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್…
ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್… ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದಿಂದ ಬೆಳಗಾವಿಯಲ್ಲಿ ಹೊಸ ಉಪಕ್ರಮ; ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ ವಿಶ್ವ ಯೋಗ ದಿನದ ಅಂಗವಾಗಿ ಬೆಳಗಾವಿಯ ಇತಿಹಾಸದಲ್ಲೇ ಮೊದಲ ಬಾರಿ ಬೃಹತ್ ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದ ವತಿಯಿಂದ ಜೂನ್ 22 ರಂದು ಸೂರ್ಯನಮಸ್ಕಾರ ಮ್ಯಾರಾಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ ಅವರು ತಿಳಿಸಿದರು. …
Read More »11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿ: ಸಂಸದ ಜಗದೀಶ್ ಶೆಟ್ಟರ
“ಬೆಳಗಾವಿ, ಜೂ.21(ಕರ್ನಾಟಕ ವಾರ್ತೆ): ಯೋಗ ಅಭ್ಯಾಸ ಸಾವಿರಾರು ವರ್ಷಗಳಿಂದ ಪಾಲಿಸುತ್ತಿರುವ ಆರೋಗ್ಯ ಸುಧಾರಣಾ ಕ್ರಮವಾಗಿದೆ. ಯೋಗದಿಂದ ಶಾರೀರಿಕ, ಮಾನಸಿಕ ಸ್ಥಿರತೆ ಕಾಯ್ದುಕೊಳ್ಳಬಹುದು. ಜೀವನ ಶೈಲಿಯಲ್ಲಿ ಯೋಗವನ್ನು ಅಳವಡಿಸುವ ಮೂಲಕ ಆರೋಗ್ಯಕರ ಜೀವನ ರೂಪಿಸಿಕೊಳ್ಳಬಹುದು ಎಂದು ಸಂಸದ ಜಗದೀಶ್ ಶೆಟ್ಟರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಯ ಸಹಯೋಗದಲ್ಲಿ ಶನಿವಾರ (ಜೂ.21) ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ …
Read More »ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಇಡೀ ವಿಶ್ವಕ್ಕೆ ಯೋಗ ಕಲಿಸಿದ್ದು ಭಾರತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಹೇಳಿಕೆ ಉಡುಪಿ: ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು, ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ …
Read More »
Laxmi News 24×7