Breaking News

ಸಿಡಿ ಪ್ರಕರಣ; ಯುವತಿಗೆ ಕಬ್ಬನ್ ಪಾರ್ಕ್ ಪೊಲೀಸರ ನೋಟಿಸ್

ಬೆಂಗಳೂರು, ಮಾರ್ಚ್ 29; ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮಾರ್ಚ್ 30ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿ ಪರ ವಕೀಲ ಜಗದೀಶ್ ಮೂಲಕ ಸಂತ್ರಸ್ತ ಯುವತಿಗೆ ನೋಟಿಸ್ ನೀಡಿದ್ದಾರೆ. ಸೋಮವಾರ ಕಬ್ಬನ್ ಪಾರ್ಕ್ ಪೊಲೀಸರು ರಮೇಶ್ ಜಾರಕಿಹೊಳಿ ವಿಚಾರಣೆಯನ್ನು ನಡೆಸಿದ್ದರು. ಏಪ್ರಿಲ್ 2ರಂದು ಪುನಃ ವಿಚಾರಣೆಗೆ ಆಗಮಿಸಬೇಕು …

Read More »

ಎರಡು‌ವಾರಗಳ ಕಾಲ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ:B.S.Y.

ಬೆಂಗಳೂರು:  ಎರಡು‌ವಾರಗಳ ಕಾಲ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ ರಂದು ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕರೋನಾ ಹೆಚ್ಚಳದ ಹಿನ್ನೆಲೆಯಲ್ಲಿ‌ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ನಡೆಸಿದರು. ರಾಜ್ಯದಲ್ಲಿ‌ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಟಫ್ ರೂಲ್ಸ್ ಜಾರಿಗೆ ತರಲಾಗುವುದು ಎಂದು‌ ಮಾಹಿತಿಙೀಡಿದರು.ಜೊತೆ ಯಾವುದೇ ಜಾತ್ರಾ ಮಹೋತ್ಸವ ಹಾಗೂ ಸಭೆ ಸಮಾರಂಭಗಳಿ‌ಗೆ ಸದ್ಯಕ್ಕೆ ಬ್ರೇಲ್ ಹಾಕಲಾಗುವುದು ಎಂದು ಮಾಹಿತಿ‌ ನೀಡಿದರು

Read More »

ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರ ಸೆಡ್ಡು, ಖಾಸಗಿ ಬಸ್‌ಗಳಿಗೆ ಅವಕಾಶ

ಬೆಂಗಳೂರು, ಮಾರ್ಚ್ 30: ವಿವಿಧ ಬೇಡಿಕೆಗಳನ್ನು ಇರಿಸಿಕೊಂಡು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್‌ ಆಪರೇಟರ್‌ಗಳನ್ನು ಮುಂದಿರಿಕೊಂಡು ಟಕ್ಕರ್ ನೀಡಲು ಸರ್ಕಾರ ಮುಂದಾಗಿದೆ. ಏಪ್ರಿಲ್ 7 ರಂದು ಸರ್ಕಾರಿ ಬಸ್ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಖಾಸಗಿ ಬಸ್‌ಗಳ ಜತೆ ಕೈಜೋಡಿಸಲು ಸಿದ್ಧವಾಗಿದೆ. ರಾಜ್ಯದಲ್ಲಿ 10 ಸಾವಿರ ಖಾಸಗಿ ಬಸ್ ಹಾಗೂ 1 ಲಕ್ಷ ಟ್ಯಾಕ್ಸಿಗಳಿದ್ದು, ಒಂದೊಮ್ಮೆ ಬಸ್‌ಗಳನ್ನು ನಿಲ್ಲಿಸಿದ್ದೇ ಆದಲ್ಲಿ ಈ ಖಾಸಗಿ …

Read More »

ಚಿನ್ನದ ನಾಣ್ಯಗಳಿಂದ ಕರ್ನಾಟಕ ಬ್ರ್ಯಾಂಡ್‌

ಬೆಂಗಳೂರು : ಚಿನ್ನದ ನಾಣ್ಯಗಳ ಮೇಲೆ ನಾಡಿನ ಪಾರಂಪರಿಕ ಸ್ಥಳಗಳು ಮತ್ತು ಮಹನೀಯರ ಭಾವಚಿತ್ರಗಳನ್ನು ಟಂಕಿಸಿ ಮಾರುಕಟ್ಟೆ ಮಾಡುವ ಮೂಲಕ ರಾಜ್ಯದಲ್ಲಿ ಉತ್ಪಾದನೆಯಾಗುವ ಬಂಗಾರಕ್ಕೆ ಕರ್ನಾಟಕ ಬ್ರ್ಯಾಂಡ್‌ ಸೃಷ್ಟಿಸಲು ಸರಕಾರವು ಯೋಜನೆ ರೂಪಿಸಿದೆ. ಸರಕಾರವೇ ಚಿನ್ನದ ಅಂಗಡಿ ತೆರೆದು ಜನರಿಗೆ ಗುಣ ಮಟ್ಟದ ಚಿನ್ನ ಒದಗಿಸಲು ಮುಂದಾಗಿದೆ. ಬಂಗಾರದ ನಾಣ್ಯಗಳಲ್ಲಿ ರಾಜ್ಯ ಸರಕಾರದ ಲಾಂಛನ ಗಂಡ ಭೇರುಂಡದ ಜತೆಗೆ ರಾಜ್ಯದ ಇತಿಹಾಸ ಮತ್ತು ಪರಂಪರೆ ಸಾರುವ ಪಾರಂಪರಿಕ ಸ್ಥಳಗಳು ಹಾಗೂ ಮಹನೀಯರ ಭಾವಚಿತ್ರ …

Read More »

ಕೆಎಎಸ್‌ ಅಧಿಕಾರಿಗಳ ಸಂಘಕ್ಕೆ ಎಲಿಷ ಆಂಡ್ರೂಸ್‌ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ (ಕೆಎಎಸ್‌) ಅಧಿಕಾರಿಗಳ ಸಂಘದ ನೂತನ ಅಧ್ಯಕ್ಷರಾಗಿ ಎಲಿಷ ಆಂಡ್ರೂಸ್‌ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ಜರುಗಿದ್ದು, ಉಪಾಧ್ಯಕ್ಷರಾಗಿ ಅನಿತಾಲಕ್ಷ್ಮಿ, ಕಾರ್ಯದರ್ಶಿಯಾಗಿ ಸಿ.ಎಲ್‌. ಶಿವಕುಮಾರ್‌, ಜಂಟಿ ಕಾರ್ಯದರ್ಶಿಯಾಗಿ ಬಿ.ಸಿ. ಶಿವಾನಂದಮೂರ್ತಿ ಮತ್ತು ಖಜಾಂಚಿಯಾಗಿ ಬಿ.ಎಸ್‌. ರಾಜೀವ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಿ.ಎನ್‌. ವರಪ್ರಸಾದ್ ರೆಡ್ಡಿ, ಎ. ದೇವರಾಜ್‌, ನಾಗೇಂದ್ರ ಎಫ್‌. ಹೊನ್ನಳ್ಳಿ, ಎಚ್‌. …

Read More »

ಐವತ್ತು ಹಳೆಯ ನಿಷ್ಠಾವಂತ ಕಾಂಗ್ರೆಸ್ ನಾಯಕರ ಸಭೆ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನ

ಬೆಳಗಾವಿ- ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನಡೆದಿವೆ. ಗೋಕಾಕ್ ಕ್ಷೇತ್ರದ ಜೆಡಿಎಸ್ ನಾಯಕ ಅಶೋಕ ಪೂಜಾರಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತೇನೆ ಎಂದು ಘೋಷಣೆ ಮಾಡಿದ ಬೆನ್ನಲ್ಲಿಯೇ ಈಗ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ರೆಡಿಯಾಗಿದ್ದು,ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಬೆಳಗಾವಿ ವಿಧಾನಸಭಾ ಮತಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ …

Read More »

ಬೆಂಜ್ ಕಾರು ಖರೀದಿಸಿದ ‘ಕನ್ನಡತಿ’ ಖ್ಯಾತಿಯ ಕಿರಣ್ ರಾಜ್

‘ಕನ್ನಡತಿ’ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರ ನೆಚ್ಚಿನ ನಟ ಎನಿಸಿಕೊಂಡಿರುವ ಕಿರಣ್ ರಾಜ್ ಹೊಸ ಕಾರು ಖರೀದಿ ಮಾಡಿದ್ದಾರೆ. ಕಾರು ಖರೀದಿ ಮಾಡಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಕಿರಣ್ ರಾಜ್ ಅವರ ಈ ಪೋಸ್ಟ್ ನೋಡಿದ ಅಭಿಮಾನಿಗಳು ಖುಷಿಯಾಗಿದ್ದು, ಶುಭಾಶಯ ತಿಳಿಸಿದ್ದಾರೆ. ಯಾವ ಖುಷಿಗೆ ಕಾರು ಖರೀದಿಸಿದ್ದಾರೆ ಎಂದು ಕೇಳಿದ್ದಾರೆ. ಅಂದ್ಹಾಗೆ, ಕಿರಣ್ ರಾಜ್ ಕಪ್ಪು ಬಣ್ಣ ಮರ್ಸಿಡಿಸ್ ಬೆಂಜ್ ಕಾರು ಖರೀದಿ ಮಾಡಿದ್ದಾರೆ. …

Read More »

ಚಿಕ್ಕೋಡಿ ಕ್ಷೇತ್ರದಲ್ಲಿ ಶೈಕ್ಷಣಿಕ ಏಳಿಗೆಗೆ ಆದ್ಯತೆ

ಇಂದು ಚಿಕ್ಕೋಡಿ ನಗರದಲ್ಲಿರುವ ನೂತನ ಕೇಂದ್ರೀಯ ವಿದ್ಯಾಲಯಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಮೂಲಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಕೊರೊನಾ ಸುರಕ್ಷತಾ ನಿಯಮವನ್ನು ಪಾಲಿಸಿ, ಈ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪುನರಾರಂಭಿಸಲು ಸೂಚಿಸಿದರು. ನಂತರ ಏಪ್ರಿಲ್ ತಿಂಗಳ ಆರಂಭದಿಂದ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ದಾಖಲಾತಿ ಅರ್ಜಿ ಸಲ್ಲಿಸಲು ಅನುಮತಿ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ …

Read More »

ವಿಷ್ಣು ಪ್ರಿಯ ಟ್ರೈಲರ್ ಬಿಡುಗಡೆ ಮಾಡಿದ ಪವರ್ ಸ್ಟಾರ್!

ಇಂದು ಬೆಳಿಗ್ಗೆ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ಮಂಜು ಮತ್ತು ಪ್ರಿಯಾ ವಾರಿಯರ್ ನಟಿಸಿರುವ ವಿಷ್ಣು ಪ್ರಿಯ ಚಿತ್ರದ ಟ್ರೈಲರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದರು. ಔಟ್ ಅಂಡ್ ಔಟ್ ಪ್ರೇಮ ಕಥಾ ಹಂದರ ಹೊಂದಿರುವ ಟ್ರೈಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು ಕೇವಲ ಎರಡು ಗಂಟೆಯೊಳಗೆ 80000 ವೀಕ್ಷಣೆ ಕಂಡಿದೆ. ಚಿತ್ರಕ್ಕೆ ಮಲಯಾಳಂ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ವಿಕೆ ಪ್ರಕಾಶ್ …

Read More »

ರಾಬರ್ಟ್ ಸಕ್ಸಸ್: ಚಂದು ಗೌಡ ಮನೆಗೆ ಬಂತು ದುಬಾರಿ ಕಾರು

ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟ ಚಂದು ಗೌಡ ತಮ್ಮ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಂಡಿದ್ದಾರೆ. ಆಡಿ ಕ್ಯೂ 7 ಕಾರನ್ನು ಖರೀದಿಸಿದ್ದು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ”ಬೋರಿಂಗ್ ಕಾರುಗಳನ್ನು ಓಡಿಸಲು ಜೀವನ ಬಹಳ ಚಿಕ್ಕದು” ಎಂದು ಪೋಸ್ಟ್ ಹಾಕಿಕೊಂಡಿರುವ ಚಂದು ಗೌಡ, ”ಮನೆಗೆ ದೊಡ್ಡ ಕ್ವಾಟ್ರೊಗೆ ಸ್ವಾಗತ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಚಂದು ಗೌಡ ಅವರು ಹೊಸ ಕಾರು ಖರೀದಿಸಿರುವುದಕ್ಕೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಅಂದ್ಹಾಗೆ, …

Read More »