ಕಳೆದ ವರ್ಷ ಕೊರೊನಾ ವೈರಸ್ ನ್ನು ನಿಯಂತ್ರಣ ಮಾಡಲು ಲಾಕ್ಡೌನ್ ಹೇರಿಕೆ ಮಾಡಿದ ಬಳಿಕ ʼವರ್ಕ್ ಫ್ರಮ್ ಹೋಂʼಗೆ ಸೂಚನೆ ನೀಡಲಾಗಿತ್ತು. ಇದಾದ ಬಳಿಕ ಸರಿ ಸುಮಾರು ಒಂದು ವರ್ಷಗಳ ಕಾಲ ಅನೇಕ ಮಂದಿ ವರ್ಕಿಂಗ್ ಫ್ರಮ್ ಹೋಂ ಮೂಲಕವೇ ಆಫೀಸ್ ಕೆಲಸ ಮಾಡಿದ್ದಾರೆ. ಆದರೆ ಈಗ ಕೊರೊನಾ ವಿರುದ್ಧ ಲಸಿಕೆ ಪ್ರಯೋಗ ಶುರುವಾಗಿದ್ದು, ಅನೇಕ ಕಂಪನಿಗಳು ತಮ್ಮ ಸಿಬ್ಬಂದಿಯನ್ನ ವಾಪಸ್ ಕರೆಯಿಸಿಕೊಳ್ತಿವೆ, ಆದರೆ ಇಷ್ಟು ದಿನ ಮನೆಯಲ್ಲೇ ಹಾಸಿಗೆಯ …
Read More »ಅಪ್ಪ ಮಗ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡ್ತಿದ್ದಾರೆ : ಯತ್ನಾಳ್
ನವದೆಹಲಿ : ರವಿವಾರ ದೆಹಲಿಗೆ ತೆರಳಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಲ್ಲಿಂದಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇಂದು ( ಫೆ.23) ತಮ್ಮ ಫೇಸ್ ಬುಕ್ ನಲ್ಲಿ ದೆಹಲಿ ಪ್ರವಾಸದ ಕಾರಣ ಹೇಳಿಕೊಂಡಿರುವ ಯತ್ನಾಳ್, ಮಾಧ್ಯಮಗಳಲ್ಲಿ ತಂದೆ ಮತ್ತು ಮಗ ಸುಳ್ಳು ಸುದ್ದಿ ಮಾಡಿಸಿ, ಬಲ್ಲ ಮೂಲಗಳಿಂದ ಎಂದು ಹೇಳಿಸಿ ಮತ್ತು ಬರೆಸಿ ರಾಜ್ಯದ ಜನರಲ್ಲಿ ಪಕ್ಷದ …
Read More »ಅಧಿಕಾರಿಗಳ ಕಿರುಕುಳ : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪೌರಕಾರ್ಮಿಕ
ಮಂಡ್ಯ: ಬಲವಂತವಾಗಿ ಮ್ಯಾನ್ ಹೋಲ್ ಗಿಳಿಸಿ ಮಲ ಸ್ವಚ್ಛಗೊಳಿಸಿದ್ದ ಪ್ರಕರಣದಲ್ಲಿ ಬಲಿಪಶುವಾಗಿದ್ದ ಪೌರಕಾರ್ಮಿಕ ನಾರಾಯಣ ಪುರಸಭೆ ಅಧಿಕಾರಿಗಳ ಕಿರುಕುಳ ತಾಳಲಾರದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಪೌರಕಾರ್ಮಿಕ ನಾರಾಯಣನನ್ನು ಮದ್ದೂರು ಪುರಸಭೆಯ ಮುಖ್ಯಾಧಿಕಾರಿ ಮುರುಗೇಶ್, ಆರೋಗ್ಯ ನಿರೀಕ್ಷಕ ಝಾಸಿಂಖಾನ್, ಪುರಸಭೆ ಅಧ್ಯಕ್ಷ ಸುರೇಶ್ ಕುಮಾರ್ ಬಲವಂತವಾಗಿ ಮ್ಯಾನ್ ಹೋಲ್ಗಿಳಿಸಿ ಬರಿಗೈಯ್ಯಲ್ಲಿ ಮಲ ಸ್ವಚ್ಛಗೊಳಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ಮಾದ್ಯಮಗಳಲ್ಲಿ ಸೋರಿಕೆಯಾಗಲು …
Read More »ಅವಧಿ ಮೀರಿದ ಔಷಧ ಮಾರಾಟ : ಇಬ್ಬರ ಬಂಧನ, 4 ಲಕ್ಷ ಮೌಲ್ಯದ ಔಷಧ ವಶ
ವಿಜಯಪುರ : ಅವಧಿ ಮೀರಿದ ಕಾಫ್ ಸಿರಪ್ ಔಷಧಿ ಬಾಟಲಿಯ ದಿನಾಂಕ ತಿದ್ದಿ, ಅಕ್ರಮವಾಗಿ ಮಾರಾಟಕ್ಕೆ ಮುಂದಾದ ಇಬ್ಬರನ್ನು ಬಂಧಿಸಿರುವ ಜಿಲ್ಲೆಯ ಅಪರಾಧ ವಿಭಾಗದ ವಿಶೇಷ ದಳದ ಪೊಲೀಸರು 4 ಲಕ್ಷ ರೂ. ಮೌಲ್ಯದ ಔಷಧಿಯನ್ನು ವಶಕ್ಕೆ ಪಡೆದಿದ್ದಾರೆ. ನಗರದ ಪುಲಕೇಶಿ ನಗರದ ನಿರ್ಜನ ಪ್ರದೇಶದಲ್ಲಿ ಅವಧಿ ಮೀರಿದ ಔಷಧಿ ಮಾರಾಟದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಬಾಟಲ್ ಗಳನ್ನು ಸ್ಯಾನಿಟೈಸರ್ ಬಳಸಿ ಅವಧಿ ಮೀರಿದ ದಿನಾಂಕ ಅಳಿಸಿ …
Read More »ಕೋವಿಡ್ ನೆಗೆಟಿವ್ ವರದಿ ಇಲ್ಲದೇ ಬರುವ ಜನರು ಪರದಾಡುವಂತೆ ಆಗಿದೆ.
ಕಲಬುರಗಿ: ಕೋವಿಡ್ ಸೋಂಕಿನ ಎರಡನೇ ಅಲೆಯ ನಿಯಂತ್ರಣಕ್ಕಾಗಿ ರಾಜ್ಯದ ಮಹಾರಾಷ್ಟ್ರ ಗಡಿ ಭಾಗದಲ್ಲಿ ಮಂಗಳವಾರ ಬಿಗಿ ಕ್ರಮ ವಹಿಸಲಾಗಿದ್ದು, ಕೋವಿಡ್ ನೆಗೆಟಿವ್ ವರದಿ ಇಲ್ಲದೇ ಬರುವ ಜನರು ಪರದಾಡುವಂತೆ ಆಗಿದೆ. ತಮ್ಮನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದ ಮಹಿಳೆಯೊಬ್ಬರಿಗೆ ಗಡಿ ಪ್ರದೇಶಿಸಲು ಅವಕಾಶ ನೀಡದೆ ತಡೆದ ಘಟನೆ ಜಿಲ್ಲೆಯ ಬಳ್ಳೂರ್ಗಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ಅಫಜಲಪುರ ತಾಲೂಕಿನ ಬಳ್ಳೂರ್ಗಿ ಮಾರ್ಗವಾಗಿ ಮಹಿಳೆಯೊಬ್ಬರು, ವಿಜಯಪುರ ಜಿಲ್ಲೆಯ ಮೋರಟಗಿ ಗ್ರಾಮದಲ್ಲಿ ರಸ್ತೆ …
Read More »ಆಸ್ಪತ್ರೆಯಲ್ಲಿ ಯಾರೂ ಇಲ್ಲದ ವೇಳೆ ಮೈಮುಟ್ಟಿ ಕಿರುಕುಳ
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಗುತ್ತಿಗೆ ಕಾರ್ಮಿಕರಾಗಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿರುವ 33 ವರ್ಷದ ಮಹಿಳೆಗೆ ಆಸ್ಪತ್ರೆಯಲ್ಲಿ ಎಕ್ಸರೇ ಟೆಕ್ನಿಷಿಯನ್ ಆಗಿರುವ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ. ಹಾನಗಲ್ ಠಾಣೆ ಪೊಲೀಸರಿಗೆ ದೂರು ನೀಡಲಾಗಿದ್ದು, ಆಸ್ಪತ್ರೆಯಲ್ಲಿ ಯಾರೂ ಇಲ್ಲದ ವೇಳೆ ಮೈಮುಟ್ಟಿ ಕಿರುಕುಳ ನೀಡಲಾಗಿದೆ ಎಂದು ಹೇಳಲಾಗಿದೆ. ಮೊಬೈಲ್ನಲ್ಲಿ ಆತ …
Read More »ಚಿಕ್ಕೋಡಿಯ ಈ ಆಸ್ಪತ್ರೆಯಲ್ಲಿ ಹಿತ್ತಲ ಗಿಡ ‘ಮದ್ದು’
ಚಿಕ್ಕೋಡಿ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಆಯುಷ್ ವೈದ್ಯಾಧಿಕಾರಿ ಒಬ್ಬರು ರೋಗಿಗಳ ಆರೋಗ್ಯ ಸೇವೆಯೊಂದಿಗೆ ಆಸ್ಪತ್ರೆ ಆವರಣದಲ್ಲಿ ಆಯುರ್ವೇದ ಸಸ್ಯೋದ್ಯಾನ ಅಭಿವೃದ್ಧಿಪಡಿಸಿ, ಆಯುರ್ವೇದ ಔಷಧಿ ಕುರಿತು ಜನಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ವೈದ್ಯಾಧಿಕಾರಿಯಾಗಿರುವ ಡಾ.ಲಕ್ಷ್ಮೀಕಾಂತ ಕಡ್ಲೆಪ್ಪಗೋಳ ಅವರು ಆಸ್ಪತ್ರೆ ಆವರಣ ಖಾಲಿ ಜಾಗದಲ್ಲಿ ಆಯುರ್ವೇದದ ಸಸಿಗಳನ್ನು ಬೆಳೆಸಿದ್ದಾರೆ. ಡಾ.ಕಡ್ಲೆಪ್ಪಗೋಳ ಅವರು ಸರ್ಕಾರ ಜಾರಿಗೊಳಿಸಿದ್ದ ‘ಕಾಯಕಲ್ಪ’ ಯೋಜನೆಯನ್ನು ಬಳಸಿಕೊಂಡು ಆಸ್ಪತ್ರೆಯ ಆವರಣದ ಮೂಲೆಯೊಂದರಲ್ಲಿ ಪಾಳು ಬಿದ್ದಿದ್ದ …
Read More »ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ
ಚಿಕ್ಕೋಡಿ: ಗ್ರಾಹಕ-ವರ್ತಕರ ನಡುವೆ ಮುಕ್ತ ವ್ಯಾಪಾರ ಕಲ್ಪಿಸಿದಾಗಲೇ ಎಪಿಎಂಸಿ ಬಲ ಕುಗ್ಗಿ ಹೋಗಿತ್ತು. ಈಗ ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ ಕಂಡು ಚೇತರಿಸಿಕೊಳ್ಳಲಾಗದ ಸ್ಥಿತಿ ಎಪಿಎಂಸಿಗೆ ಬಂದಿದೆ. ಹೌದು. ಕರ್ನಾಟಕ-ಮಹಾರಾಷ್ಟ್ರದ ಗಡಿಭಾಗಕ್ಕೆ ಹೊಂದಿಕೊಂಡಿರುವ ನಿಪ್ಪಾಣಿ ಕೃಷಿ ಉತ್ಪನ್ನ ಮಾರುಕಟ್ಟೆ ಯಲ್ಲಿ ವ್ಯಾಪಾರು-ವಹಿವಾಟು ಇಲ್ಲವೇ ಇಲ್ಲ. ಕೇವಲ ವಾಣಿಜ್ಯ ಮಳಿಗೆಯಿಂದ ಬರುತ್ತಿದ್ದ 20ರಿಂದ 25 ಲಕ್ಷ ರೂ. ವರಮಾನ ಈ ವರ್ಷ …
Read More »ಬ್ಯಾಂಕ್ ಗ್ರಾಹಕರೇ ಗಮನಿಸಿ : ಮುಷ್ಕರ ಸೇರಿದಂತೆ ಮಾರ್ಚ್ ತಿಂಗಳಿನಲ್ಲಿ 11 ದಿನ ಬ್ಯಾಂಕ್ ಬಂದ್,
ನವದೆಹಲಿ: ಫೆಬ್ರವರಿ ತಿಂಗಳು ಮುಗಿಯುತ್ತಿರುವುದರಿಂದ ಬ್ಯಾಂಕ್ ಖಾತೆದಾರರು ಗಮನಿಸಬೇಕಾದ ಅಂಶವೆಂದರೆ ಮುಂಬರುವ ಮಾರ್ಚ್ ತಿಂಗಳಿನಲ್ಲಿ ದೇಶಾದ್ಯಂತ ಬ್ಯಾಂಕ್ ಗಳು ಮುಚ್ಚುವ 11 ದಿನಗಳು ಮುಚ್ಚಲಿವೆ. ನೀವು ನಿಮ್ಮ ಯಾವುದೇ ಕೆಲಸವನ್ನು ಮಾರ್ಚ್ ಗೆ ಮುಂದೂಡಿದ್ದರೆ, ನೀವು ಒಮ್ಮೆ ಬ್ಯಾಂಕ್ ಗಳಿಗೆ ರಜೆಯಲ್ಲಿರುವ ಕ್ಯಾಲೆಂಡರ್ ಅನ್ನು ನೋಡಬೇಕು. ಆ ದಿನಗಳಲ್ಲಿ ಯಾವುದೇ ಬ್ಯಾಂಕ್ ವ್ಯವಹಾರವನ್ನು ಯೋಜಿಸುವ ಮುನ್ನ ಬ್ಯಾಂಕ್ ರಜಾ ದಿನಗಳನ್ನು ತಿಳಿದುಕೊಳ್ಳುವುದು ಉತ್ತಮವಾಗಿದೆ ಕೂಡ. ಭಾರತೀಯ ರಿಸರ್ವ್ ಬ್ಯಾಂಕ್ …
Read More »ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ
ಮೂಡಲಗಿ: ಕೊರೊನಾ ಕಾರಣದಿಂದ ಕಳೆದ ಒಂದು ವರ್ಷದಿಂದ ಜಾತ್ರೆ, ಹಬ್ಬ ಹರಿದಿನಗಳು ನಿಂತುಹೋಗಿದ್ದವು. ದೇವಿಯ ಕೃಪೆಯಿಂದ ಕರೋನಾ ಕಾರ್ಮೋಡ ಕರಗಿ ಮತ್ತೆ ಎಂದಿನಂತೆ ಜನಜೀವನ ಸಾಗುವಂತಾಗಲಿ ಎಂದು ಶ್ರೀ ಮಹಾಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸೋಣ ಎಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದ್ದಾರೆ. ಮೂಡಲಗಿ ತಾಲೂಕಿನ ಮಸಗುಪ್ಪಿ ಗ್ರಾಮದ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ …
Read More »