Breaking News

₹ 2 ಲಕ್ಷ ಮೌಲ್ಯದ ಮೊಬೈಲ್‌ಗಳು ವಶ

ಹಾವೇರಿ: ‘ತಿಳವಳ್ಳಿ ಗ್ರಾಮದ ಹರ್ಡೇಕಲ್‌ ಸರ್ಕಲ್‌ ಬಳಿ ಭಾನುವಾರ ಪೊಲೀಸರು ದಾಳಿ ನಡೆಸಿ, ₹2 ಲಕ್ಷ ಮೌಲ್ಯದ 50 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಿದ್ದು, ಮತ್ತೊಬ್ಬ ನಾಪತ್ತೆಯಾಗಿದ್ದಾನೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೊಬೈಲ್‌ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಹಾನಗಲ್‌ ತಾಲ್ಲೂಕು ಹುಲಗಿನಕೊಪ್ಪ ಗ್ರಾಮದ ನಿತಿನ್‌ ಗೌಂಡಿ ಬಂಧಿತ ಆರೋಪಿ. ಅದೇ …

Read More »

ಮಹಿಳೆ ಹೆಸರಲ್ಲಿ ಅಶ್ಲೀಲ ಚಾಟಿಂಗ್‌ ; ಥಳಿಸಿ ಪೋಲೀಸರಿಗೆ ಒಪ್ಪಿಸಿದ ಮಹಿಳೆ

ಮಡಿಕೇರಿ : ಯುವತಿಯ ಹೆಸರನ್ನು ಹಾಕಿಕೊಂಡು ನಕಲಿ ಪ್ರೊಪೈಲ್‌ ಮಾಡಿ ಫೇಸ್​ಬುಕ್​ನಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮೆಸೇಜ್​ ಮಾಡುತಿದ್ದ ಯುವಕನನ್ನು ಉಪಾಯವಾಗಿ ಕರೆಸಿಕೊಂಡು ಥಳಿಸಿ, ನಂತರ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಇಲ್ಲಿಗೆ ಸಮೀಪದ ಹಾಕತ್ತೂರಿನ ಅಶ್ರಫ್‌ ಎಂಬ ಯುವಕ ಕಳೆದ 15 ದಿನಗಳಿಂದ ಅರುಣಾ ಎಂಬ ಯುವತಿಯ ಹೆಸರಿನ ಮೂಲಕ ಮಹಿಳೆಯೊಬ್ಬರೊಂದಿಗೆ ಅಶ್ಲೀಲವಾಗಿ ಚಾಟಿಂಗ್​ ಮಾಡುತ್ತಿದ್ದ. ಮಹಿಳೆಯು ಈ ರೀತಿ ಚಾಟಿಂಗ್‌ ಮಾಡಬಾರದೆಂದು ಎಚ್ಚರಿಕೆ ನೀಡಿದ್ದರೂ ಈ …

Read More »

ಮನೆ ದರೋಡೆ ; ಸರ್ಕಾರಿ ಶಿಕ್ಷಕ, ಗ್ರಾಪಂ ಸದಸ್ಯ ಸೇರಿ ಐವರ ಬಂಧನ

ಬಳ್ಳಾರಿ: ಕೊಟ್ಟೂರು ತಾಲೂಕಿನ ಬಸವೇಶ್ವರ ಬಡಾವಣೆಯ ಉದ್ಯಮಿ ಮಲ್ಲೇಶಪ್ಪ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಸರ್ಕಾರಿ ಶಾಲಾ ಶಿಕ್ಷಕ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಸೇರಿದಂತೆ ಒಟ್ಟು ಐದು ಜನರನ್ನು ಪೊಲೀಸರು ಬಂಧನಮಾಡಿದ್ದಾರೆ. ಉದ್ಯಮಿ ಮಲ್ಲೇಶ್ ಅವರ ಮನೆಯಲ್ಲಿ ಏ.11ರಂದು ಹತ್ತು ಜನರ ತಂಡ ರಾತ್ರಿ ಏಕಾಏಕಿ ನುಗ್ಗಿ ಮನೆಯಲ್ಲಿ ಇದ್ದ ಗಂಡ ಹೆಂಡತಿಯನ್ನು ಹೆದರಿಸಿ ಮನೆಯಲ್ಲಿದ್ದ 30 ಲಕ್ಷ ರೂ. ನಗದು …

Read More »

ತಿಹಾರ್ ಜೈಲಿನಲ್ಲಿ ನೆರವಿಗೆ ನಿಂತವನ ಕೈಬಿಡದ ಕಾಂಗ್ರೆಸ್ ನಾಯಕ; ಡಿ.ಕೆ‌. ಶಿವಕುಮಾರ್

ಕಷ್ಟದ ದಿನಗಳಲ್ಲಿ ಕೈಚಾಚಿದವರನ್ನು, ಸಹಾಯ ಮಾಡಿದವರನ್ನು ಮರೆಯಲು ಸಾಧ್ಯವೇ? ಸೆರೆಯಾಗಿದ್ದ ಹಕ್ಕಿಯು ಬಿಡುಗಡೆಯಾಗುತ್ತಿದ್ದಂತೆಯೇ ಪಂಜರದಲ್ಲಿ ಜೊತೆಯಾಗಿದ್ದ ಮತ್ತೊಂದು ಹಕ್ಕಿಯತ್ತ ಸುಳಿಯುತ್ತದೆಯೇ? ಇಲ್ಲ. ಆದರೆ, ಒಡಲ ನೋವನ್ನು ಆಲಿಸಿದ, ಕಷ್ಟದ ಘಟನೆಗಳ ಕೇಳುಗನಾದ, ಸ್ಪಂದಿಸಿ, ಸಂತೈಸಿದ ವ್ಯಕ್ತಿ ಸೆರೆಯಲ್ಲಿದ್ದಾಗ, ಹೃದಯವಂತನಾದವನು ಮತ್ತೆ ಧಾವಿಸದೇ ಇರನು. ಹಾಗೆ ಧಾವಿಸಿ, ವ್ಯಕ್ತಿಯ ಕಷ್ಟಕ್ಕೆ ಸ್ಪಂದಿಸಿದವರು ರಾಜ್ಯದ ನಾಯಕರಲ್ಲೊಬ್ಬರು. ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ‌ ಶಿವಕುಮಾರ್ ತಿಹಾರ್ ಜೈಲು ಸೇರಿದ್ರು.ಬರೋಬ್ಬರಿ …

Read More »

ಮಾನನಷ್ಟ ಮೊಕದ್ದಮೆಯಲ್ಲಿ ದೇವೇಗೌಡರಿಗೆ ಹಿನ್ನಡೆ: 2 ಕೋಟಿ ಪರಿಹಾರ ಕಟ್ಟಿಕೊಡಲು ಕೋರ್ಟ್ ಆದೇಶ

ಬೆಂಗಳೂರು: ನಂದಿ ಇನ್​ಫ್ರಾ ಸ್ಟ್ರಕ್ಚರ್ ಕಾರಿಡಾರ್ (Nandi Infrastructure Corridor Enterprises – NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ ₹ 2 ಕೋಟಿ ಪರಿಹಾರ ಕಟ್ಟಿಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ. ದೇವೇಗೌಡರ ವಿರುದ್ಧ ನೈಸ್ ಕಂಪನಿಯು ಮಾನನಷ್ಟ ದಾವೆ ಹೂಡಿತ್ತು. ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ದೇವೇಗೌಡರು ನೈಸ್ ಸಂಸ್ಥೆಯ ಗೌರವಕ್ಕೆ …

Read More »

ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ತುಮಕೂರು: ಭಯೋತ್ಪಾದನೆ, ಭ್ರಷ್ಟಾಚಾರ, ಅತ್ಯಾಚಾರ, ಲವ್ ಜಿಹಾದ್, ಗೋಹತ್ಯೆಯ ವಿರುದ್ಧ ನಾನು ಹೋರಾಟ ಮಾಡುತಿದ್ದೇನೆ. ಆದರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪದೇಪದೆ ವಿಚಾರಣೆ ನೆಪದಲ್ಲಿ ನನಗೆ ಮಾನಸಿಕ ಕಿರುಕುಳ ನೀಡುತಿದ್ದು, ಅನೇಕ ಬಾರಿ ವಿಚಾರಣೆಗೆಂದು ಕರೆದು ಸುಳ್ಳು ಆರೋಪದಡಿ ಬಂಧಿಸಿದ್ದಾರೆ. ಹಿಂದೂ ಸಮಾಜ ನನ್ನ ಬೆಂಬಲಕ್ಕೆ ನಿಲ್ಲದಿರುವುದು ತುಂಬಾ ನೋವು ತಂದಿದೆ. ನನಗೆ ಪೊಲೀಸರ ಕಿರುಕುಳ ಸಹಿಸಲಾಗುತ್ತಿಲ್ಲ. ನನಗೆ ದಯಾಮರಣ ನೀಡಿ ಎಂದು ರಾಜ್ಯಪಾಲರಿಗೆ ಮಧುಗಿರಿಮೋದಿ ಮನವಿ ಪತ್ರ ಸಲ್ಲಿಸಿದ್ದಾರೆ. …

Read More »

ಭೂಗತ ಪಾತಕಿ ರವಿ ಪೂಜಾರಿ ಕಸ್ಟಡಿಗೆ ಗುಜರಾತ್ ಮನವಿ

ಬೆಂಗಳೂರು ; ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಕಳೆದ ವರ್ಷ ಫೆ.24ರಂದು ಕರ್ನಾಟಕ ಪೊಲೀಸರು ವಿದೇಶದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಸದ್ಯ ಆತ ಕೇಂದ್ರ ಅಪರಾಧ ತನಿಖಾ ದಳದ​ ವಶದಲ್ಲಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ದೇಶದ ಅನೇಕ ಭಾಗಗಳಲ್ಲಿ ಡಾನ್ ರವಿ ಪೂಜಾರಿ ಅಪರಾಧ ನಡೆಸಿದ್ದು, ಮುಂಬೈ,ಕೇರಳ, ಬಳಿಕ ಗುಜರಾತ್ ಪೊಲೀಸರು ಇದೀಗ ವಿಚಾರಣೆಗೆ ರವಿ ಪೂಜಾರಿನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಕರ್ನಾಟಕ …

Read More »

ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ

ಬೆಂಗಳೂರು: ಕೋವಿಡ್-19 ಲಾಕ್ಡೌ ನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತಾದರೂ ಇದೀಗ. ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 22 ರಿಂದ ಸಂಚಾರ ಆರಂಭಿಸಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50 ರಷ್ಟು ಆಸನ ಸಾಮರ್ಥ್ಯ ದೊಂದಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ …

Read More »

ಯಗಚಿ ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಚಿಕ್ಕೋಡಿ, ಹಾಸನ: ಮಳೆ ಹೆಚ್ಚಾಗಿದ್ದು ಹಾಸನದಲ್ಲಿ ನದಿಭಾಗದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಚಿಕ್ಕೋಡಿಯಲ್ಲಿ ಮಳೆಯ ಪ್ರಮಾಣದಲ್ಲಿ ಅಲ್ಪ ಇಳಿಕೆಯಾಗಿದೆ. ಇ ಬೇಲೂರು, ಮೂಡಿಗೆರೆ ಚಿಕ್ಕಮಗಳೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬೇಲೂರಿನ ಸಮೀಪದಲ್ಲಿರುವ ಯಗಚಿ ಡ್ಯಾಂ ಭರ್ತಿಯಾಗಿದೆ. ನೀರಿನ ಒಳಹರಿವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಡ್ಯಾಂನಿಂದ ಯಾವುದೇ ಕ್ಷಣದಲ್ಲಾದರೂ ನೀರು ಬಿಡುಗಡೆ ಸಾಧ್ಯತೆಯಿದ್ದು, ಅಣೆಕಟ್ಟೆ ಕೆಳಭಾಗದ, ಯಗಚಿ ನದಿಪಾತ್ರದ ಜನರು, ರೈತರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ …

Read More »

ಮುಂದಿನ ಸಿಎಂ – ಸಿದ್ದರಾಮಯ್ಯ ಹೇಳಿದ್ದೇನು..?

ಕೊಪ್ಪಳ: ರಾಜು ಬಿಜೆಪಿಲ್ಲಿ ಆಗುತ್ತಿರುವ ಭಾರೀ ಬೆಳವಣಿಗೆಗಳ ಮಧ್ಯೆಯೇ ಇತ್ತ ಕಾಂಗ್ರೆಸ್ಸಿನಲ್ಲಿ ಮುಂದಿನ ಸಿಎಂ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಏರ್ಪೋರ್ಟ್ ನಲ್ಲಿ ಮಾತನಾಡಿದ ಮಾಜಿ ಸಿಎಂ, ಮುಂದಿನ ಸಿಎಂ, ಬಗ್ಗೆ ನಮ್ಮ ಪಕ್ಷದಲ್ಲಿ ಚರ್ಚೆಯಾಗುತ್ತಿಲ್ಲ. ಒಂದಿಷ್ಟು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ ಹೊರತು ಪಕ್ಷದ ಅಭಿಪ್ರಾಯವಲ್ಲ …

Read More »