Breaking News

ಕ್ರಿಕೆಟ್ ಬೆಟ್ಟಿಂಗ್ ದಂಧೆ: ವಿಜಯಪುರ, ರಾಯಚೂರಿನಲ್ಲಿ ಪೊಲೀಸ್ ಭರ್ಜರಿ ಬೇಟೆ

ವಿಜಯಪುರ: ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ. ಖಾದರ್​ ಇನಾಮದಾರ್​, ಶಾಬಾಜ್ ಇನಾಮದಾರ್, ಅಲ್ತಾಫ್ ಇನಾಮದಾರ್​ ಬಂಧಿತರು. ಇನ್ನು ಬಂಧಿತರಿಂದ 5000 ನಗದು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಓರ್ವ ಪರಾರಿಯಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇನ್ನು ರಾಯಚೂರಿನ ಸದರ್​​ ಬಜಾರ್​​ ಪೊಲೀಸರು ಅಶೋಕ್​​ ಡಿಪೋ ಬಳಿ ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಜಿಲಾನಿ, …

Read More »

ಚರಂಡಿಯಲ್ಲಿ ಬೃಹತ್‌ ಹೆಬ್ಟಾವು ಪತ್ತೆ

ಸಾಂಬ್ರಾ: ಬೆಳಗಾವಿ ಶಾಸ್ತ್ರೀನಗರದ 9ನೇ ಕ್ರಾಸ್‌ ಚರಂಡಿಯಲ್ಲಿ ಬೃಹತ್‌ ಹೆಬ್ಟಾವು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಶುಕ್ರವಾರ ರಾತ್ತಿ ಬೃಹತ್‌ ಹೆಬ್ಟಾವು ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿದ್ದಾರೆ. ಶಾಸ್ತ್ರೀನಗರದ 9ನೇ ಕ್ರಾಸ್‌ ಬಳಿ ಚರಂಡಿಗೆ ಹೋಗುತ್ತಿದ್ದಾಗ ಜನರಿಗೆ ಕಾಣಿಸಿಕೊಂಡಿದೆ. ಹೆಬ್ಟಾವಿನ ದೃಶ್ಯಾವಳಿಯನ್ನು ಜನ ಮೊಬೈಲ್‌ಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣ ಹರಿ ಬಿಟ್ಟಿದ್ದಾರೆ. ಬಳಿಕ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜನರು ಮಾಹಿತಿ ನೀಡಿದ್ದಾರೆ. ಚರಂಡಿಯಲ್ಲಿ ಇಷ್ಟೊಂದು ಬೃಹತ್‌ ಗಾತ್ರದ ಹೆಬ್ಟಾವು ಪತ್ತೆಯಾಗಿದ್ದು, …

Read More »

ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ 11ನೆ ದಿನಕ್ಕೆ ಕಾಲಿಟ್ಟ ಮುಷ್ಕ್ ರ

ಗುಡಿಬಂಡೆ: ಕೋವಿಡ್ ನಿಯಂತ್ರಿಸುವಲ್ಲಿ ಮತ್ತು ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವಲ್ಲಿ ತಮ್ಮ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸಿದರೂ ಸಹ ಸರ್ಕಾರ ನಮಗೆ ಸೇವಾ ಭದ್ರತೆ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಪ್ರತಿಭಟನೆ ಉದ್ದೇಶಿ ಸಂಘಟನೆಯ ತಾಲೂಕು ಅಧ್ಯಕ್ಷ ಈಶಣ್ಣ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಸುಮಾರು …

Read More »

ಪವರ್ ಟಿವಿ ಕ್ಯಾಮೆರಾಮೆನ್ ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್ ನಲ್ಲಿ ಮೃತ ಪಟ್ಟಿದ್ದಾರೆ

ಹುಬ್ಬಳ್ಳಿ: ಮೂರು ದಿನಗಳ ಹಿಂದೆ ನಗರದ ಕಾರವಾರ ರಸ್ತೆಯ ಚಾಟ್ನಿ ಕಾಂಪ್ಲೆಕ್ಸ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪವರ್ ಟಿವಿ ಕ್ಯಾಮೆರಾಮೆನ್ ಸುನೀಲ ಪಾಚಂ(29), ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್’ನಲ್ಲಿ ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಸುನೀಲ ಅವರು ಕರ್ತವ್ಯ ಮುಗಿಸಿ ಮನೆಗೆ ತೆರಳುವಾಗ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕಿಮ್ಸ್’ಗೆ ದಾಖಲಿಸಲಾಗಿತ್ತು. ಸುನೀಲ‌ ಅವರ ತಲೆ ಭಾಗಕ್ಕೆ ಗಂಭೀರ ಸ್ವರೂಪದ …

Read More »

ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಚಕ್ಕಡಿ ಮೇಲಿಟ್ಟು ಹೋದ

ಹಾನಗಲ್ಲ : ತಾಲೂಕಿನ ಬೈಚವಳ್ಳಿ ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಚಕ್ಕಡಿ ಮೇಲಿಟ್ಟು ಹೋದ ವೀಡಿಯೋ ವೈರಲ್‌ ಆಗಿದ್ದು, ಆರೋಗ್ಯ ಇಲಾಖೆ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾರದ ಹಿಂದೆಯೇ ಈ ಘಟನೆ ನಡೆದಿದ್ದು, ಇದೀಗ ಆ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕ್ರೂಸರ್‌ ವಾಹನದಲ್ಲಿ ಪಿಪಿಇ ಕಿಟ್‌ ಹಾಕಿದ ಶವವನ್ನು ಪಿಪಿಇ ಕಿಟ್‌ ಧರಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ತಂದು ಅದನ್ನು …

Read More »

ನಾನು ನನ್ನ ಪತ್ನಿಗೆ ಯಾವುದೇ ರೀತಿಯ ಮಾನಸಿಕ ಕಿರುಕುಳ ನೀಡಿಲ್ಲ : ಕಲ್ಯಾಣ್

ಬೆಳಗಾವಿ: ನಾನು ನನ್ನ ಪತ್ನಿಗೆ ಯಾವುದೇ ರೀತಿಯ ಮಾನಸಿಕ ಕಿರುಕುಳ ನೀಡಿಲ್ಲ. ಈಗ ಅವರು ನನ್ನ ಮೇಲೆ ಏಕಾಏಕಿ ಆರೋಪ ಮಾಡಿ ವಿಚ್ಛೇದನ ಕೇಳುತ್ತಿದ್ದಾರೆ ಎಂದರೆ ಅವರು ಯಾರದೋ ಒತ್ತಡಕ್ಕೆ ಸಿಲುಕಿ ಹೀಗೆ ಹೇಳುತ್ತಿದ್ದಾರೆ ಎಂದು ಚಿತ್ರ ಸಾಹಿತಿ ಕೆ.ಕಲ್ಯಾಣ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಕಲ್ಯಾಣ್, ನನ್ನ ಹಾಗೂ ನನ್ನ ಪತ್ನಿಯ ನಡುವೆ ಯಾವುದೇ ಗೊಂದಲಗಳಿಲ್ಲ. ನಾವಿಬ್ಬರು ಚೆನ್ನಾಗೇ ಇದ್ದೆವು. ಮನೆ ಕೆಲಸಕ್ಕೆ ಎಂದು ಬಂದ ಗಂಗಾ ಕುಲ್ಕರ್ಣಿಯಿಂದ ನಮ್ಮ …

Read More »

ಮಾಜಿ ಮುಖ್ಯಮಂತ್ರಿ ಅಂತ ಕೆಂಡಾಮಂಡಲರಾಗಿದ್ದಾರೆ.

ಬೆಂಗಳೂರು : ನಿರೂಪಕಿ ಅನುಶ್ರೀ ಪ್ರಕರಣದಲ್ಲಿ ದಿನಕ್ಕೊಂದು ಹೆಸರುಗಳು ಹೊರ ಬರುತ್ತಿವೆ. ಮಾಜಿ ಸಿಎಂ ಗಳು ಕರೆ ಮಾಡಿದ್ದರ ಬಗ್ಗೆ ಸುದ್ದಿ ಬಂದಿದೆ. ನಾನಂತೂ ತನಿಖೆಗೆ ಒತ್ತಾಯಿಸುತ್ತೇನೆ. ಯಾರು ಆ ಮಾಜಿ ಸಿಎಂ ಕರೆ ಮಾಡಿದ್ದು..? ಯಾರು ಆ ಮಾಜಿ ಮುಖ್ಯಮಂತ್ರಿ ಅಂತ ಕೆಂಡಾಮಂಡಲರಾಗಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೂಪಕಿ ಅನುಶ್ರೀಗೆ ಮಾಜಿ ಸಿಎಂ ಒಬ್ಬರು ಕರೆ ಮಾಡಿದ್ದರು ಎಂಬುದಾಗಿ ಸುದ್ದಿ ಬರ್ತಾ ಇದೆ. ಎಸ್ …

Read More »

ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಮುಷ್ಕರ ಮುಗಿಸಿ ವಾಪಸ್ಸು ಹೋಗುವಾಗ ಅಪಘಾತ

ಬೇಲೂರು: ತಾಲ್ಲೂಕಿನ ಶಿವಯೋಗಿಪುರದಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಚಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ ಡಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂಜು (30) ಮೃತಪಟ್ಟಿದ್ದಾರೆ. ಹಾಸನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಮುಷ್ಕರದಲ್ಲಿ ಭಾಗವಹಿಸಿ ವಾಪಸ್‌ ಊರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಹಿಂಬದಿ ಸವಾರರಾದ ನಾರಾಯಣ, ಮಮತಾ ಅವರ ಕೈ, ಕಾಲು, ತಲೆಗೆ ಪೆಟ್ಟಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ರಸ್ತೆ …

Read More »

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

ನವದೆಹಲಿ : ರಾಜ್ಯದ ನಾಲ್ಕು ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಜೆಡಿಎಸ್ ಬಿಟ್ಟು ಬಿಜೆಪಿ ಸೇರಿರುವ ಪುಟ್ಟಣಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ಸಿಕ್ಕಿದೆ. ಪುಟ್ಟಣಗೆ ಜೆಡಿಎಸ್ ಬಿಟ್ಟು ಬಿಜೆಪಿ ಸೇರುವಾಗಲೇ ಟಿಕೆಟ್ ಭರವಸೆ ನೀಡಲಾಗಿತ್ತು ಎನ್ನಲಾಗಿದೆ. ಅಭ್ಯರ್ಥಿಗಳ ಪಟ್ಟಿ ಆಗ್ನೇಯ ಪದವೀಧರ ಕ್ಷೇತ್ರ : ಎಂ ಚಿದಾನಂದಗೌಡ ಪಶ್ಚಿಮ ಪದವೀಧರ ಕ್ಷೇತ್ರ: ಎಸ್ ವಿ ಸುಂಕನೂರು ಬೆಂಗಳೂರು ಶಿಕ್ಷಕರ ಕ್ಷೇತ್ರ : ಪುಟ್ಟಣ್ಣ …

Read More »

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

  ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ. ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. …

Read More »