Breaking News

ಅಭಯ ಪಾಟೀಲ, ಅನಿಲ ಬೆನಕೆಯಿಂದ ಸ್ಥಳ ಪರಿಶೀಲನೆ

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ವಿನಂತಿ ಮೇರೆಗೆ ಎಲ್ & ಟಿ ಕಂಪನಿಯವರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಾರೆ. ಅಭಯ ಪಾಟೀಲ ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ  ಆನಿಲ ಬೆನಕೆ ಇಂದು ಎಲ್ & ಟಿ ಕಂಪನಿಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು. ಈ ಆಕ್ಷಿಜನ್ ಘಟಕ  ಸ್ಥಾಪನೆಯಾದಲ್ಲಿ ಸುಮಾರು 50 …

Read More »

ವೈದ್ಯರನ್ನೇ ಕಂಗೆಡಿಸಿದ ಮಾರಣಾಂತಿಕ Covid 2ನೇ ಅಲೆ.ಈವರೆಗೆ ಸಾವನ್ನಪ್ಪಿರುವ ವೈದ್ಯರೆಷ್ಟು

ಕೋವಿಡ್ ಒಂದನೇ ಮತ್ತು ಎರಡನೇ ಅಲೆಗೆ ದೇಶದಲ್ಲಿನ ಜನರು ತತ್ತರಿಸಿ ಹೋಗಿದ್ದು, ಎರಡನೇ ಅಲೆಯಲ್ಲಿ ಮಧ್ಯವಯಸ್ಕರು, ಯುವಕರು ಸಾವಿಗೀಡಾಗುತ್ತಿರುವುದು ಮತ್ತಷ್ಟು ಗಾಬರಿಗೆ ಕಾರಣವಾಗಿದೆ. ಈ ಮಾರಣಾಂತಿಕ ಕೋವಿಡ್ ಸೋಂಕು ಜನಸಾಮಾನ್ಯರಷ್ಟೇ ವೈದ್ಯರನ್ನು ಕಂಗೆಡಿಸಿದೆ ಎಂಬುದಕ್ಕೆ ಈ ವರದಿ ಸಾಕ್ಷಿ. ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯ ಕಿರಿಯ ರೆಸಿಡೆಂಟ್ ಡಾಕ್ಟರ್ ಅನಾಸ್ ಮುಜಾಹಿದ್(26ವರ್ಷ) ಕೋವಿಡ್ ನಿರ್ವಹಣೆಯ ತಜ್ಞರಾಗಿದ್ದರು. ಆದರೆ ಕೋವಿಡ್ ಪಾಸಿಟಿವ್ ಬಂದ ಗಂಟೆಯೊಳಗೆ ಡಾ.ಅನಾಸ್ ಕೊನೆಯುಸಿರೆಳೆದಿದ್ದರು. ಈ ವರ್ಷದ …

Read More »

ರಾಜ್ಯದಲ್ಲೂ ಡಿಆರ್ ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ರಕ್ಷಣಾ ಸಚಿವರಿಗೆ ಸವದಿ ಪತ್ರ

ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಪತ್ರ ಬರೆದು ಮನವಿ ಮಾಡಿದ್ದಾರೆ. ದೆಹಲಿ, ವಾರಣಾಸಿ, ಅಹಮದಾಬಾದ್, ಮತ್ತು ಲಖ್ನೋಗಳಲ್ಲಿ ಡಿಆರ್ ಡಿಒ ವತಿಯಿಂದ ವಿಶೇಷ …

Read More »

ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಗವಿಶ್ರೀಗಳಿಂದ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ

ಕೊಪ್ಪಳ: ನಾಡಿನ ಪ್ರಸಿದ್ದ ಕೊಪ್ಪಳದ ಶ್ರೀ ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳು ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ 30ಕ್ಕೂ ಹೆಚ್ಚು‌ ಸೋಂಕಿತರಿದ್ದು ಅವರ ಆರೈಕೆ ಬಗ್ಗೆ ಹೆಚ್ಚು‌ ಗಮನ ಹರಿಸಿರುವ ಶ್ರೀಗಳು, ನಿಮಗೆ ಏನೂ ಆಗಲ್ಲ. ಧೈರ್ಯವಾಗಿರಿ. ನಿಮ್ಮನ್ನು ಪ್ರತಿ ದಿನವೂ ವೈದ್ಯರು ಚಿಕಿತ್ಸೆ ನೀಡುವ ಮೂಲಕ ನಿಮ್ಮ ಆರೋಗ್ಯದ ಹೆಚ್ಚು‌ ನಿಗಾ ಇರಿಸಿದ್ದಾರೆ. ನಿಮಗೆ ಏನೇ ಸಮಸ್ಯೆಯಾದರೂ …

Read More »

ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಿಸದೇ ಹೋದಲ್ಲಿ ಅನಾಹುತ ಕಾದಿದೆ: ಮಾಜಿ ಸಿಎಂ ಹೆಚ್​ಡಿಕೆ

ರಾಜ್ಯದಲ್ಲಿ ಸದ್ಯ ಲಾಕ್​ಡೌನ್​ ವಿಸ್ತರಣೆಯದ್ದೇ ಚರ್ಚೆ. ಟ್ವಿಟರ್​ನಲ್ಲಿ ಸದಾ ಲಾಕ್​ಡೌನ್​ ವಿಸ್ತರಣೆಯ ಆಗ್ರಹ ಮಾಡುತ್ತಿದ್ದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಇದೀಗ ಮತ್ತೆ ತಮ್ಮ ಹೇಳಿಕೆಯನ್ನ ಪುನರುಚ್ಛರಿಸಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಲಾಕ್​ಡೌನ್​ ವಿಸ್ತರಣೆ ಮಾಡದೇ ಹೋದಲ್ಲಿ ದೊಡ್ಡ ಅನಾಹುತವೇ ಕಾದಿದೆ ಎಂದು ಹೇಳಿದ್ರು. ರಾಜ್ಯದ ಸದ್ಯದ ಪರಿಸ್ಥಿತಿಯನ್ನ ನೋಡ್ತಿದ್ರೆ ಲಾಕ್​ಡೌನ್​ ವಿಸ್ತರಣೆ ಮಾಡದೇ ಬೇರೆ ವಿಧಿ ಇಲ್ಲ ಎಂದೆನಿಸುತ್ತಿದೆ. ಹೀಗಾಗಿ ಜನರ ಜೀವದ ಜೊತೆ ಆಟವಾಡಬೇಡಿ. …

Read More »

ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗಲು ಸರ್ಕಾರ ಕಾರಣ : ಡಿ.ಕೆ.ಶಿವಕುಮಾರ್

ಬೆಂಗಳೂರು : ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗಲು ಸರ್ಕಾರವೇ ಕಾರಣವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವ ಜನರಿಗಾಗಿ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಲೇಬೇಕು. ಈ ಕಾಯಿಲೆ ಸರ್ಕಾರ ಕೊಟ್ಟಿದ್ದು, ಹಳ್ಳಿಗಳಲ್ಲೂ ಕೊರೊನಾ ಬರಲು ಸರ್ಕಾರವೇ ನೇರ ಕಾರಣ ಎಂದು ಕಿಡಿಕಾರಿದರು. ಇನ್ನು ಹಳ್ಳಿಗಳಲ್ಲಿ ಕೃಷಿ ಮಾಡ್ತಿದ್ದವರಿಗೂ ಕೊರೊನಾ ಬಂದಿದೆ. ಬೆಳಿಗ್ಗೆ ನನ್ಮ ತೀರ ಆತ್ಮಿಯರು …

Read More »

ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ: ಕಾಂಗ್ರೆಸ್ ಟೀಕೆ

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ರಾಜ್ಯಕ್ಕೆ ‘ಕುಂಟು ಕುದುರೆಯ ಮೇಲೆ ಕುರುಡನ ಸವಾರಿ’ಯಂತಾಗಿದೆ. ಎಲ್ಲಿ ಹಾರುತ್ತದೋ, ಎಲ್ಲಿ ಬೀಳುತ್ತದೋ ತಿಳಿಯದೆ ಕಣ್ಮುಚ್ಚಿಕೊಂಡು ‘ದೇವರೇ ಗತಿ’ ಎನ್ನುವ ಸ್ಥಿತಿಗೆ ಬಂದಿದ್ದಾರೆ ಜನ. ಹಪಹಪಿಯಿಂದ ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಾಗ ನೆರೆ ಹಾವಳಿ, ಆ ಸಂದರ್ಭದಲ್ಲಿ ಸಂಪುಟವೇ …

Read More »

ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿ

ಬೆಳಗಾವಿ – ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಕಳೆದ 15 ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೋಯುಸಿರೆಳೆದರು. ಹನುಮಾನ್ ನಗರ ನಿವಾಸಿಯಾಗಿದ್ದ ಅವರಿಗೆ ತಂದೆ, ತಾಯಿ, ಪತ್ನಿ, ಮಗ, ಮಗಳು ಇದ್ದಾರೆ.

Read More »

ಪತ್ನಿಯಿಂದಲೇ ಸುಪಾರಿ ಹತ್ಯೆ;ಪತ್ನಿ ಸೇರಿ ಇಬ್ಬರ ಬಂಧನ

ಬೆಂಗಳೂರು, : ಆತನ ದೇಹ ರೈಲ್ವೇ ಹಳಿಯ ಮೇಲೆ ಛಿದ್ರವಾಗಿತ್ತು. ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಅಂತಲೇ ಪೊಲೀಸರು ಭಾವಿಸಿದ್ದರು. ಆದರೆ, ಕುತ್ತಿಗೆ ಮೇಲಿನ ಗುರುತು ಕೊಲೆಯ ಬಗ್ಗೆ ಸಣ್ಣ ಅನುಮಾನ ಮೂಡಿಸಿತ್ತು. ಅದು ರೈಲ್ವೇ ಪೊಲೀಸರ ತನಿಖೆಯಲ್ಲಿ ನಿಜವಾಗಿದೆ. ಕೊಲೆ ಹಂತಕರನ್ನು ಕೇವಲ 24 ತಾಸಿನಲ್ಲಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಯಾಗಿದ್ದು ಕೆ.ಆರ್.ಪುರಂ ನಿವಾಸಿ ಲೋಕನಾಥ್ . ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವುದು ಮೃತನ ಪತ್ನಿ ಯಶೋಧಾ, ವಿಜಿನಾಪುರದ …

Read More »

ಜಿಯೋದಿಂದ ಎರಡು ಹೊಸ ಸಬ್‌ಸೀ ಕೇಬಲ್ ವ್ಯವಸ್ಥೆ ಯೋಜನೆ

ಮುಂಬೈ, : ಭಾರತದ ಮುಂಚೂಣಿ 4ಜಿ ಮತ್ತು ಮೊಬೈಲ್ ಬ್ರಾಡ್‌ಬ್ಯಾಂಡ್ ಡಿಜಿಟಲ್ ಸೇವಾ ಪೂರೈಕೆದಾರ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿ. (ಜಿಯೋ), ಭಾರತವನ್ನು ಕೇಂದ್ರವಾಗಿಟ್ಟುಕೊಂಡು ಅತಿ ದೊಡ್ಡ ಅಂತಾರಾಷ್ಟ್ರೀಯ ಜಲಾಂತರ್ಗಾಮಿ (ಸಬ್‌ಮೆರಿನ್) ಕೇಬಲ್ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ವಿವಿಧ ಪ್ರಮುಖ ಜಾಗತಿಕ ಪಾಲುದಾರರು ಮತ್ತು ವಿಶ್ವದರ್ಜೆಯ ಜಲಾಂತರ್ಗಾಮಿ ಕೇಬಲ್ ಪೂರೈಕೆದಾರ ಸಬ್‌ಕಾಮ್ ಸಹಯೋಗದೊಂದಿಗೆ ಜಿಯೋ ಪ್ರಸ್ತುತ ಪ್ರದೇಶದೆಲ್ಲೆಡೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಡೇಟಾ ಬೇಡಿಕೆಗೆ ಬೆಂಬಲ ಒದಗಿಸುವ ನಿಟ್ಟಿನಲ್ಲಿ ಮುಂದಿನ ತಲೆಮಾರಿನ …

Read More »