Breaking News

ಡಿ.ಕೆ. ಶಿವಕುಮಾರ್‌ ಅವರ ಭಾವೀ ಅಳಿಯ ಅಭ್ಯರ್ಥಿ

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ “ಅಚ್ಚರಿಯ ಅಭ್ಯರ್ಥಿ’ಯಾಗಿ ಬಿಜೆಪಿ ನಾಯಕ, ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಸಿದ್ಧಾರ್ಥ ಅವರ ಪುತ್ರ ಮತ್ತು ಡಿ.ಕೆ. ಶಿವಕುಮಾರ್‌ ಅವರ ಭಾವೀ ಅಳಿಯ ಅಮರ್ತ್ಯ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಉಪಚುನಾವಣೆಯಲ್ಲಿ ಈ ಕ್ಷೇತ್ರವನ್ನು ಹೇಗಾದರೂ ಕಾಂಗ್ರೆಸ್‌ ಬುಟ್ಟಿಗೆ ಹಾಕಿಕೊಳ್ಳಬೇಕು ಎಂಬುದು ಡಿ.ಕೆ. ಸಹೋದರರ ತಂತ್ರಗಾರಿಕೆ. ಹೀಗಾಗಿ ಅಚ್ಚರಿಯೆಂಬಂತೆ ಅಮರ್ತ್ಯ ಸುಬ್ರಮಣ್ಯ ಹೆಗ್ಡೆ ಅವರನ್ನು ಅಚ್ಚರಿ ಆಯ್ಕೆಯಾಗಿ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ. …

Read More »

ಯು ಪಿ ಪೊಲೀಸರ ಕರಾಳ ಮುಖವನ್ನು ಸಂತ್ರಸ್ತೆಯ ಸಂಬಂಧಿಕರು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ

ಲಖನೌ: ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆ ಉತ್ತರ ಪ್ರದೇಶದ ಹಾಥರಸ್​​ನಲ್ಲಿ ನಡೆದಿದೆ. ಪಾಲಕರನ್ನು ದೂರವಿಟ್ಟು ತರಾತುರಿಯಲ್ಲಿ ಗ್ಯಾಂಗ್​ರೇಪ್​ ದೌರ್ಜನ್ಯದಿಂದ ಮೃತಪಟ್ಟಳೆನ್ನಲಾದ ಯುವತಿಯ ಅಂತ್ಯಕ್ರಿಯೆ ನೆರವೇರಿಸಿರುವ ಪೊಲೀಸರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಇದೀಗ ಪೊಲೀಸರ ಕರಾಳ ಮುಖವನ್ನು ಸಂತ್ರಸ್ತೆಯ ಸಂಬಂಧಿಕರು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡುವುದನ್ನು ಸಂಬಂಧಿಕರಿಗೆ ನಿರ್ಬಂಧಿಸಲಾಗಿದ್ದು, ಗ್ರಾಮದಲ್ಲಿ ಹೆಚ್ಚು ಜನರು ಸೇರಿದಂತೆ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಅಲ್ಲದೆ, ಯುವತಿಯ ಶವ ಸುಟ್ಟ ಪ್ರದೇಶಕ್ಕೂ ಪೊಲೀಸರು …

Read More »

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು

  ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಇಂದು ಕೊರೋನಾ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್‌ನಲ್ಲಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾ ಬೈ ಎಲೆಕ್ಷನ್‌ ಗೆಲ್ಲಲು ಬಿಜೆಪಿ ಪ್ಲಾನ್ ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, …

Read More »

ರಾಜ್ಯದ ಆರೋಗ್ಯ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹೊರಗುತ್ತಿಗೆ ನೌಕರರಿಂದ ನಾಡಿನ ಜನತೆಗೆ ಕ್ಷಮೆಯಾಚನೆ

  ಬೆಂಗಳೂರು :ಈ ಮೂಲಕ ತಮ್ಮೆಲ್ಲರಲ್ಲಿ ಹಂಚಿಕೊಂಡಿರುವುದು ಏನೆಂದರೆ ಈ ವಿಶ್ವದಲ್ಲಿ ಮಹಾಮಾರಿಯಾಗಿ ಜನಜೀವನಕ್ಕೆ ಹಾಗೂ ಜೀವಕ್ಕೆ ಕಂಟಕ ತಂದಿರುವ ಕೋರೋಣ ವೈರಸ್ ಸಮಯದಲ್ಲಿ ರಾಜ್ಯದ ಆರೋಗ್ಯ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹೊರಗುತ್ತಿಗೆ ನೌಕರರು ಮುಷ್ಕರದಲ್ಲಿರುವುದು ತಮ್ಮೆಲ್ಲರಿಗೂ ತಿಳಿದಿರುವ ವಿಷಯ ಅಥವಾ ತಿಳಿಯಪಡಿಸುತ್ತೇನೆ. ನಮ್ಮ ಮುಷ್ಕರದಿಂದ ರಾಜ್ಯದ ಜನತೆಗೆ ಸಿಗಬೇಕಾದಂತಹ ಆರೋಗ್ಯ ಸೌಲಭ್ಯಗಳು ಸಿಗದಿರುವುದರಿಂದ ಈ ರಾಜ್ಯದ ಎಲ್ಲಾ ಜನಸಾಮಾನ್ಯರಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಗುತ್ತಿಗೆ ಹೊರಗುತ್ತಿಗೆ …

Read More »

ಬೊಲೆರೊ ಮತ್ತು ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದರು

ಸವದತ್ತಿ: ಇಲ್ಲಿನ ಧಾರವಾಡ ರಸ್ತೆಯಲ್ಲಿರುವ ಪುರಸಭೆ ಕಸ ವಿಲೇವಾರಿ ಸಂಕೀರ್ಣದ ಸಮೀಪ ಶುಕ್ರವಾರ ರಾತ್ರಿ ಬೊಲೆರೊ ಮತ್ತು ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದರು. ತಾಲ್ಲೂಕಿನ ಚುಂಚನೂರ ಹಾಗೂ ಜಕಬಾಳ ಗ್ರಾಮಗಳ ಕೂಲಿ ಕಾರ್ಮಿಕರು ಧಾರವಾಡ ಜಿಲ್ಲೆಯ ಮೊರಬ್ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿ ವಾಪಸಾಗುವಾಗ ಘಟನೆ ನಡೆದಿದೆ. ‘ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿವೆ. ಮೃತರಲ್ಲಿ ಮೂವರ ಗುರುತಷ್ಟೆ ಪತ್ತೆಯಾಗಿದೆ. ಅವರು …

Read More »

ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ರಾತ್ರಿ ಸಾಂತ್ವನ ಹೇಳಿದರು.

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮುಖಂಡರು ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ.ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ರಾತ್ರಿ ಸಾಂತ್ವನ ಹೇಳಿದರು. ಶಾಸಕರಾದ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್ ಮತ್ತು ಮಹಾಂತೇಶ ಕೌಜಗಲಿ ಧೈರ್ಯ ಹೇಳಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ‘ಸುರೇಶ ಅಂಗಡಿ ಬಹಳ ಸೌಮ್ಯ ಸ್ವಭಾವದವರಾಗಿದ್ದರು. ನನ್ನೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು. ಭೇಟಿಯೂ ಆಗಿದ್ದೆ. ಸಚಿವರಾದ ನಂತರವೂ …

Read More »

ಮೂವರು ಆರೋಪಿಗಳನ್ನು ಬಂಧಿಸಿ, ₹ 4 ಲಕ್ಷ ಮೌಲ್ಯದ 20 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ಜಿಲ್ಲಾ ಸಿಇಎನ್‌ (ಅಪರಾಧ) ಠಾಣೆಯ ಪೊಲೀಸರು ಶುಕ್ರವಾರ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಮೂವರು ಆರೋಪಿಗಳನ್ನು ಬಂಧಿಸಿ, ₹ 4 ಲಕ್ಷ ಮೌಲ್ಯದ 20 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಜತ್ತ ತಾಲ್ಲೂಕು ಬಿಳ್ಳೂರದ ರಾವಸಾಹೇಬ ಅಣ್ಣಪ್ಪ ನಂದಿವಾಲೆ, ಮೊಹೊಳ ತಾಲ್ಲೂಕು ಶೇಟಪಾಳದ ಸಂಗೀತಾ ದತ್ತಾತ್ರೇಯ ವಾಗಜ ಮತ್ತು ಫಂಡರಪುರ ತಾಲ್ಲೂಕು ಅಡಿವದ ವಿಲಾಸ ಪಾಂಡುರಂಗ ಘಾಡಗೆ ಬಂಧಿತರು. ‘ರಾವಸಾಹೇಬ, ಫಂಡರಪುರದ ಕಡೆಯಿಂದ ಅಥಣಿ ಕಡೆ ಗಾಂಜಾ ಮಾರಲು …

Read More »

ರಾಜಸ್ಥಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಸಿಕ್ತು 5 ಸಿಹಿ ಸುದ್ದಿ!

ಆರ್​ಸಿಬಿಗೆ ಗುಡ್ ನ್ಯೂಸ್ ನಂ.1 ಅಬುಧಾಬಿ ಕಂಡೀಷನ್​ಗೆ ಹೊಂದಿಕೊಂಡ ಕೊಹ್ಲಿ ಬಾಯ್ಸ್ ಮೊದಲ ಗುಡ್‌ನ್ಯೂಸ್‌ ಅಂದ್ರೆ, ಕೊಹ್ಲಿ ಪಡೆ ಅಬುಧಾಬಿ ಕಂಡೀಷನ್‌ಗೆ ಹೊಂದಿಕೊಂಡಿದೆ. ಕಳೆದ 3 ದಿನಗಳಿಂದ ಅಬುದಾಬಿಯಲ್ಲಿ, ಕೊಹ್ಲಿ ಗ್ಯಾಂಗ್ ಮಠಮಠ ಮಧ್ಯಾಹ್ನ ಪ್ರಾಕ್ಟೀಸ್‌ ಮ್ಯಾಚ್ ಆಡಿದ್ದಾರೆ. ಇಂದಿನ ಪಂದ್ಯವೂ ಮಧ್ಯಾಹ್ನವೇ ನಡೆತೀರೋದು ಆರ್​ಸಿಬಿಗೆ ಅಡ್ವಾಂಟೇಜ್ ಆಗಿದೆ. ಆರ್​ಸಿಬಿಗೆ ಗುಡ್ ನ್ಯೂಸ್ ನಂ.2 ಸ್ಟ್ರಾಂಗ್ ಆಯ್ತು ಆರ್​ಸಿಬಿ ಆಲ್​ರೌಂಡರ್ ಕೋಟಾ ಆರ್​ಸಿಬಿಗೆ 2ನೇ ಗುಡ್‌ನ್ಯೂಸ್ ಅಂದ್ರೆ, ಕ್ರಿಸ್ ಮಾರಿಸ್ …

Read More »

ರಾತ್ರಿ ಜೊತೆಯಲ್ಲೇ ಪಾರ್ಟಿ ಮಾಡಿ ಕೊನೆಗೆ ಆತನನ್ನೆ ಕೊಲೆ ಮಾಡಿದ್ರು..

ಮಂಡ್ಯ: ರಾತ್ರಿ ಫುಲ್ ಪಾರ್ಟಿ ಮಾಡುತ್ತಿದ್ದಾಗ ಜತೆಯಲ್ಲಿದ್ದವರಿಂದಲೇ ಯುವಕನ ಹತ್ಯೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ನಡೆದಿದೆ. ಪೂರ್ಣಚಂದ್ರು(28) ಕೊಲೆಯಾದ ಯುವಕ. ಕ್ರಷರ್​ನಲ್ಲಿ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರುನ ಸ್ನೇಹಿತರು ರಾತ್ರಿ ಫುಲ್ ಪಾರ್ಟಿ ಮಾಡಿ ಲಾಂಗು ಮಚ್ಚುಗಳಿಂದ ಹಲ್ಲೆಗೈದು ಕೊಲೆ ಮಾಡಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಸ್ನೇಹಿತರಾದ ಜಕ್ಕನಹಳ್ಳಿಯ ಪ್ರದೀಪ್, ಚಾಮರಾಜು ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ …

Read More »

ಶಾಲೆ ಬೇಡವೇ ಬೇಡ… 2020-21 ಅನ್ನು ಶೂನ್ಯ ಶೈಕ್ಷಣಿಕ ವರ್ಷವೆಂದು ಘೋಷಣೆ ಮಾಡಿಬಿಡಿ…

ಬೆಂಗಳೂರು: ಈ ವರ್ಷ ಪ್ರಾಥಮಿಕ ಶಾಲೆ ಬೇಡವೇ ಬೇಡ… 2020-21 ಅನ್ನು ಶೂನ್ಯ ಶೈಕ್ಷಣಿಕ ವರ್ಷವೆಂದು ಘೋಷಣೆ ಮಾಡಿಬಿಡಿ… ಇದು ರಾಜ್ಯದ ಬಹುತೇಕ ಮಕ್ಕಳ ಹೆತ್ತವರು, ಶಿಕ್ಷಕರು, ವಿದ್ಯಾರ್ಥಿಗಳು, ಜನತೆಯ ಅಭಿಪ್ರಾಯ. “ಉದಯವಾಣಿ’ ನಡೆಸಿದ ಮೆಗಾ ಸರ್ವೇಯಲ್ಲಿ 4 ಸಾವಿರಕ್ಕೂ ಹೆಚ್ಚು ಮಂದಿ ಅಭಿಪ್ರಾಯ ತಿಳಿಸಿದ್ದು, ಕೊರೊನಾ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇಂಥ ಸಂದರ್ಭದಲ್ಲಿ ಪುಟ್ಟ ಮಕ್ಕಳನ್ನು ಶಾಲೆಗೆ ಕಳುಹಿಸಲು ಸಾಧ್ಯವೇ ಎಂಬ ಪ್ರಶ್ನೆಯನ್ನೂ ಕೇಳಿದ್ದಾರೆ. ಆದರೆ ಎಸೆಸೆಲ್ಸಿ ಮತ್ತು ಪಿಯುಸಿ …

Read More »