Breaking News

ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕ

ಬೆಳಗಾವಿ: ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಕುಡುಕನೊಬ್ಬ ಹುಚ್ಚಾಟ ಮೆರೆದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದ ಬಳಿ ನಡೆದಿದೆ. ಢವಳೇಶ್ವರ ಗ್ರಾಮದ ನಿವಾಸಿ ಹಾಲಪ್ಪ, ಸಾರಾಯಿ ತರಲು ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿದ್ದಾನೆ. ಘಟಪ್ರಭಾ ನದಿ ತಟದಲ್ಲಿರುವ ಎರಡು ಗ್ರಾಮಗಳಾದ ಬೆಳಗಾವಿಯ ಢವಳೇಶ್ವರದಿಂದ ಬಾಗಲಕೋಟೆಯ ಢವಳೇಶ್ವರಕ್ಕೆ ಸಾರಾಯಿ ತರಲು ಹೋಗಿದ್ದ. ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕನ ಹುಚ್ಚಾಟ …

Read More »

ಸಿಸಿಬಿ ತನಿಖೆ ಬಳಿಕ ಅನುಶ್ರೀಗೆ ಕಾಡ್ತಿದೆ ಡೋಪಿಂಗ್ ಟೆಸ್ಟ್ ಭಯ

ಮಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ ದಿನದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಈಗಾಗಲೇ ನಟಿ ಕಂ ಆ್ಯಂಕರ್ ಅನುಶ್ರೀ ಅವರನ್ನು ಸಿಸಿಬಿ ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ನಿರೂಪಕಿಗೆ ಮತ್ತೊಂದು ಭಯ ಶುರುವಾಗಿದೆ.ಹೌದು. ಸಿಸಿಬಿ ಬಳಿಕ ಇದೀಗ ಅನುಶ್ರೀಗೆ ಡೋಪಿಂಗ್ ಟೆಸ್ಟ್ ಭಯ ಕಾಡುತ್ತಿದೆ. ಸಿಸಿಬಿ ತನಿಖೆ ಮುಗಿದ ಬಳಿಕ ಅನುಶ್ರೀ ಖುಷಿಯಾಗಿದ್ದರು. ಆದರೆ ಕಮಿಷನರ್ ಹೇಳಿಕೆ ಬಳಿಕ ನಟಿ ಚಿಂತಕ್ರಾಂತರಾಗಿದ್ದಾರೆ ಡ್ರಗ್ಸ್ ಟೆಸ್ಟ್ ಮಾಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪೊಲೀಸ್ …

Read More »

ಶಾಸಕ ರಾಮಪ್ಪ ಸೇರಿ 150 ಮಂದಿಗೆ ನೀಡಲು ತಂದಿದ್ದ ನಕಲಿ ಗೌರವ ಡಾಕ್ಟರೇಟ್ ಪದವಿ: ನಕಲಿ ವಿವಿ ಗ್ಯಾಂಗ್ ಅರೆಸ್ಟ್

ಬೆಂಗಳೂರು : ನಕಲಿ ವಿವಿ ಹೆಸರಿನಲ್ಲಿ ಹಣ ಪಡೆದು ಗೌರವ ಡಾಕ್ಟರೇಟ್ ನೀಡುತ್ತಿದ್ದ ತಮಿಳುನಾಡು ಮೂಲದ ಸಂಸ್ಥೆಯೊಂದು ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು, ಹರಿಹರದ ಶಾಸಕ ರಾಮಪ್ಪ ಸೇರಿದಂತೆ ಸುಮಾರು 150 ಮಂದಿಗೆ ನಕಲಿ ಗೌರವ ಡಾಕ್ಟರೇಟ್ ಪದವಿ ನೀಡಲು ತಮಿಳುನಾಡು ಮೂಲದ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯದ ಹೆಸರಿನ ಸಂಸ್ಥೆಯೊಂದು ಅದ್ಧೂರಿ ಸಮಾರಂಭವನ್ನು ಆಯೋಜಿಸಿತ್ತು. ಈ ಸುದ್ದಿ ತಿಳಿದ ಡಿಸಿಪಿ ಡಾ.ಎ. ಎನ್. …

Read More »

ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ

ಮೈಸೂರು: ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಸುರಕ್ಷಿತ ಜಾಗಕ್ಕೆ ಬಿಟ್ಟ ಘಟನೆ ಮೈಸೂರು ಜಿಲ್ಲೆಯ ಸಿ ಬಿ ಹುಂಡಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಸಿ ಬಿ ಹುಂಡಿ ಗ್ರಾಮದ ಜಮೀನಿನ‌ ಬಾವಿಯಲ್ಲಿ ಈ ಮೊಸಳೆ ಸೇರಿಕೊಂಡಿತ್ತು. 15 ರಿಂದ 20 ಅಡಿ ಆಳದ ಬಾವಿಯಲ್ಲಿ ಮೊಸಳೆ ಸೇರಿಕೊಂಡಿತ್ತು. ಈ ಮೊಸಳೆ ಬರೋಬ್ಬರಿ 750 ಕೆಜಿ ತೂಕದ ಹೊಂದಿತ್ತು. ಸುಮಾರು …

Read More »

ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತ

ಕಲಬುರಗಿ: ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಪಘಾತವಾಗಿರುವ ದಾರುಣ ಘಟನೆ ನಡಿದೆ. ನಿಂತಿದ್ದ ಲಾರಿಯೊಂದಕ್ಕೆ ಗರ್ಭಿಣಿ ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದ ಕಾರೊಂದು ನಸುಕಿನ ಜಾವ ಬಲವಾಗಿ ಗುದ್ದಿದೆ. ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತರ ಪೈಕಿ ನಾಲ್ವರು ಮಹಿಳೆಯರು, ಮೂವರು ಪುರುಷರಿದ್ದರು. ಮೃತರೆಲ್ಲರೂ ಕಲಬುರಗಿ ಜಿಲ್ಲೆ ಆಳಂದದವರು ಎಂದು …

Read More »

ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ.

ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ. ಸದ್ಯ ಶಾಸಕರು ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿರುವ ದಿನೇಶ್​ ಗುಂಡೂರಾವ್​, ‘ನನಗೆ ಕೋವಿಡ್​ ರೋಗಲಕ್ಷಣ ಇಲ್ಲರಲ್ಲ. ಆದರೆ ಕೋವಿಡ್ ಟೆಸ್ಟ್​ನ ವರದಿ ಪಾಸಿಟಿವ್​ ಬಂದಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೋವಿಡ್​ …

Read More »

ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ.

ಬೆಂಗಳೂರು- ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟ ಮೇಲೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ. ಅವಿಶ್ವಾಸ ನಿರ್ಣಯದ ಬಗ್ಗೆ ಎರಡನೇ ಪ್ರತಿಪಕ್ಷ ಜೆಡಿಎಸ್‍ ತಟಸ್ಥ ನಿಲುವು ಅನುಸರಿಸಿತ್ತು. ಅವಿಶ್ವಾಸವನ್ನು ವಿಭಜನೆಯ ಮತಕ್ಕೆ ಹಾಕುವುದಾದರೆ ಕೊರೊನಾ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರನ್ನು ಪಿಪಿಇ ಕಿಟ್‍ ಹಾಕಿಸಿ ವಿಧಾನಸಭೆಗೆ ಕರೆ ತರುವುದಾಗಿ ಬಿಜೆಪಿ ಹೇಳಿತ್ತು. ಈ ಕುರಿತಂತೆ ಬೆಳಗ್ಗೆ ನಡೆದ ಚರ್ಚೆಯಲ್ಲಿ …

Read More »

ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ.

ನವದೆಹಲಿ : ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ. 82 ವರ್ಷದ ಜಸ್ವಂತ್‌ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದ ಜಸ್ವಂತ್‌ ಸಿಂಗ್‌ ಬಳಿಕ ರಾಜಕೀಯಕ್ಕೆ ಪ್ರವೇಶಿಸಿ ಸಂಸತ್‌ ಗೆ ಆಯ್ಕೆಯಾಗಿದ್ದರು. ಅಟಲ್‌ ಬಿಹಾರಿ ವಾಜಪೇಯಿ ಸಚಿವ ಸಂಪುಟದಲ್ಲಿ ಹಲವಾರು ಪ್ರಮುಖ ಖಾತೆಗಳನ್ನು ಜಸ್ವಂತ್‌ ಸಿಂಗ್‌ ನಿಭಾಯಿಸಿದ್ದರು.‌ ಜಸ್ವಂತ್‌ ಸಿಂಗ್‌ …

Read More »

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

Read More »

ಬೆಳಗಾವಿ: ಗರ್ಭಿಣಿ ಸೇರಿ ಇಬ್ಬರ ಬರ್ಬರ ಕೊಲೆ

ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದ ಲಕ್ಷ್ಮಿ ನಗರದ ಹೊರವಲಯದಲ್ಲಿ ಶನಿವಾರ ಸಂಜೆ ಐದು ತಿಂಗಳ ಗರ್ಭಿಣಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅದೇ ಗ್ರಾಮದವರಾದ ರೋಹಿಣಿ ಗಂಗಪ್ಪ ಹುಲಿಮನಿ (22) ಹಾಗೂ ರಾಜಶ್ರೀ ರವಿ ಬನ್ನೂರ (21) ಕೊಲೆಯಾದವರು. ‘ಅವರು ವಾಯುವಿಹಾರಕ್ಕೆಂದು ಬ್ರಹ್ಮದೇವರ ದೇವಸ್ಥಾನದ ಕಡೆಗೆ ಹೋಗಿದ್ದಾಗ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದಿದ್ದವರು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಕತ್ತಿಗೆ ಕೊಯ್ದು ಹಾಗೂ ಬೆನ್ನಿಗೆ ಇರಿದು …

Read More »