Breaking News

ಆಮೆಗತಿಯ ಕಾಮಗಾರಿ…ಕೆಸರುಮಯವಾದ ರಸ್ತೆ… ಓಡಾಡಲಾಗದೇ ಎಲ್ ಆಂಡ್ ಟಿ ಗೆ ಹಿಡಿಶಾಪ ಹಾಕಿದ ಜನ!!

ಆಮೆಗತಿಯ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ನಗರದ ಜನರು ಪ್ರತಿದಿನ ಇನ್ನಿಲ್ಲದ ಸಮಸ್ಯೆಯನ್ನು ಎದುರಿಸುತ್ತಿದ್ದು, ಎಲ್ ಆಂಡ್ ಟಿ ಕಂಪನಿಯ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಹೌದು, ಅಭಿವೃದ್ಧಿ ಕಾಮಗಾರಿಗಾಗಿ ಬೆಳಗಾವಿ ರಾಣಿ ಚೆನ್ನಮ್ಮ ನಗರದ ಫಸ್ಟ್ ಸ್ಟೇಜ್ ರಾಣಾ ಪ್ರತಾಪ್ ಕ್ರಾಸ್ ಬಳಿಯ ಪ್ರಮುಖ ರಸ್ತೆಯನ್ನು ಅಗೆದು ಸುಮಾರು ಒಂದೂವರೆ ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಮಳೆಗಾಲದಲ್ಲಿ ಮಣ್ಣಿನ ರಾಶಿ ನೀರಿನಲ್ಲಿ ನೆನೆದು ರಸ್ತೆಯೆಲ್ಲ ಕೆಸರುಮಯವಾಗಿದ್ದು, ವಾಹನ ಸವಾರರು …

Read More »

ಹದಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ವಿವಿಧ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ

ಬೆಳಗಾವಿ : ಹದಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ವಿವಿಧ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ ಅರ್ಪಿಸಿದ ಬಸವನ ಕುಡಚಿ ಕೆಎಚ್‌ಬಿ ಹಾಗೂ ದೇವರಾಜ್ ಅರಸು ಕಾಲೋನಿ ನಿವಾಸಿಗಳು ಹತ್ತು ಹಲವು ಸಮಸ್ಯೆಗಳಿಂದ ಬಳಲುತ್ತಿರುವ ಬೆಳಗಾವಿ ಬಸವನ ಕುಡಚಿ ಕೆಎಚ್ ಬಿ ಕಾಲೋನಿ ಮೂಲಸೌಕರ್ಯ ಕೊರತೆಯಿಂದ ಉಂಟಾದ ಸಮಸ್ಯೆ ಪರಿಹರಿಸಲು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ನಿವಾಸಿಗಳು ಹದಿಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಪರಿಹರಿಸಲು ಬೆಳಗಾವಿ …

Read More »

ರೈತರ ಕಲ್ಯಾಣಕ್ಕಾಗಿ ಬಿಡಿಸಿಸಿಯಿಂದ ಹಲವು ಯೋಜನೆ

ಮುಂಬರಲಿರುವ ಬಿಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ನಡೆದ ಸೌಹಾರ್ದಯುತ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ———— ಬೆಳಗಾವಿ: ಡಿಸಿಸಿ ಬ್ಯಾಂಕ್‌ಗೆ ಅಕ್ಟೋಬರ್‌ 19ರಂದು ಚುನಾವಣೆ ಜರುಗಲಿದ್ದು, ಈಗಾಗಲೇ ನಾವು ಖಾನಾಪುರ ತಾಲೂಕು ಕೇಂದ್ರದಿಂದ ಚುನಾವಣೆ ಪ್ರಚಾರವನ್ನು ಆರಂಭಿಸಿದ್ದೇವೆ. ರೈತರ ಪ್ರಗತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ನಮ್ಮ ಪ್ಯಾನಲ್‌ ಅನ್ನು ಗೆಲ್ಲಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ರೈತರ ಶ್ರೆಯೋಭಿವೃದ್ಧಿಗೆ ಶ್ರಮಿಸಲು ಹೆಚ್ಚಿನ ಶಕ್ತಿ ಬಂದಂತಾಗುತ್ತದೆ ಎಂದು ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ …

Read More »

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ) : ನಾನು ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಆದರೆ, ಹೈಕಮಾಂಡ್ ನಿರ್ಧಾರ ಮಾಡಬೇಕು ಅಲ್ಲವೇ? ಯಾವಾಗ ಬದಲಾವಣೆ ಆಗುತ್ತದೆ, ಯಾವಾಗ ಮಾಡುತ್ತಾರೆ ಅನ್ನೋದು ಹೈಕಮಾಂಡ್​​ಗೆ ಬಿಟ್ಟಿರುವ ವಿಚಾರ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನಂತೂ ಆಕಾಂಕ್ಷಿ ಇದ್ದೇನೆ. ಹೈಕಮಾಂಡ್ ಯಾವಾಗ ಮಾಡುತ್ತಾರೆ ಕಾದು ನೋಡಬೇಕು. ನಾನು ಯಾವುದೇ ಒತ್ತಡ ಹಾಕುವುದಿಲ್ಲ ಎಂದು ಪ್ರತಿಕ್ರಿಯಿಸಿದರು. ರಾಜೀವ್ …

Read More »

ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!!

ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!! ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ದುರ್ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ವೇಗದಲ್ಲಿದ್ದ ಖಾಸಗಿ ಬಸ್ಸೊಂದು ಹಿಂಬದಿಯಿಂದ ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಟ್ರಕ್ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ರಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ಎಸ್ ಎಸ್ ಟ್ರಾವೇಲ್ಸ್ ಬಸ್ ಹಾಗೂ ಟ್ರಕ್ ನಡುವೆ …

Read More »

ಬೆಂಗಳೂರು ಕಾಲ್ತುಳಿತ ಖಂಡಿಸಿ ಬನಹಟ್ಟಿಯಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು ಕಾಲ್ತುಳಿತ ಖಂಡಿಸಿ ಬನಹಟ್ಟಿಯಲ್ಲಿ ಬಿಜೆಪಿ ಪ್ರತಿಭಟನೆ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದಲ್ಲಿ ಬಿಜೆಪಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಘಟಕದಿಂದ ವತಿಯಿಂದ ಪ್ರತಿಭಟನೆ ನಡೆಸಿ, ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು ಖಂಡಿಸಲಾಯಿತು. ಬನಹಟ್ಟಿ ನಗರದಲ್ಲಿನ ಜಮಖಂಡಿ -ಮಿರಜ್ ರಸ್ತೆ ತಡೆದು ಬನಹಟ್ಟಿ ಬಿಜೆಪಿ ನಗರ ಘಟಕದ ಅಧ್ಯಕ್ಷ …

Read More »

ತ್ರೈಮಾಸಿಕ ಕೆ.ಡಿ.ಪಿ ಸಭೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ

ಉಡುಪಿ; ತ್ರೈಮಾಸಿಕ ಕೆ.ಡಿ.ಪಿ ಸಭೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಸಲಾಯಿತು. ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ …

Read More »

ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್…

ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್… ಕಸ ವಿಲೇವಾರಿಯಾಗುತ್ತಿಲ್ಲ, ನಾಯಿಗಳ ಹಾವಳಿ, ಗಬ್ಬು ವಾಸನೆ… ಪಾಲಿಕೆ ನಿರ್ಲಕ್ಷಕ್ಕೆ ಹಿಡಿ ಶಾಪ ಹಾಕುತ್ತಿರುವ ನಿವಾಸಿಗಳು….. ಬೆಳಗಾವಿ ಅಜಂನಗರ ಕೆಎಲ್ಇ ಕಂಪೌಂಡ ಪಕ್ಕದಲ್ಲಿರುವ ಮೊದಲೇ ಕ್ರಾಸ್ ನಲ್ಲಿ ಬಿದ್ದಿರುವ ಕಸದ ರಾಶಿಯನ್ನು ನೋಡಿದರೆ ಅಕ್ಷರಶಹ ತ್ಯಾಜ್ಯ ವಿಲೇವಾರಿ ಘಟಕದಂತಾಗಿದ್ದು, ಪಾಲಿಕೆ ನಿರ್ಲಕ್ಷ್ಯಕ್ಕೆ ಇಲ್ಲಿಯ ನಿವಾಸಿಗಳು ಹಿಡಿ ಶಾಪ ಹಾಕುತ್ತಿದ್ದಾರೆ ಅಜಮ್ ನಗರ ಮಹಾನಗರ ಪಾಲಿಕೆಯಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ. …

Read More »

ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ದೇಶಿಪುರ ಕಾಲೋನಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಚಾಮರಾಜನಗರ : ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ದೇಶಿಪುರ ಕಾಲೋನಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ದೇಶಿಪುರ ಕಾಲೋನಿಯ ಪುಟ್ಟಮ್ಮ ಎಂಬಾಕೆ ಹುಲಿಗೆ ಬಲಿಯಾಗಿರುವ ದುರ್ದೈವಿ. ಇಂದು ಮಧ್ಯಾಹ್ನ ಕಾಲೋನಿ ಸಮೀಪ ಕುರಿಗಳನ್ನು ಮೇಯಿಸುವಾಗ ಹುಲಿಯೊಂದು ಅವರ ಮೇಲೆರಗಿದ್ದು ಕುತ್ತಿಗೆ, ಎದೆಭಾಗ, ಹೊಟ್ಟೆ ಭಾಗದಲ್ಲಿ ಬಲವಾಗಿ ದಾಳಿ ನಡೆಸಿ ಕೊಂದುಹಾಕಿದೆ. ಬಳಿಕ, ಮಹಿಳೆಯನ್ನು ಅರಣ್ಯದೊಳಗೆ ಎಳೆದೊಯ್ದಿತ್ತು. ಬಳಿಕ, ಗ್ರಾಮಸ್ಥರು ಹುಡುಕಾಡಿದ್ದರಿಂದಾಗಿ ಪುಟ್ಟಮ್ಮನ ಶವ ದೊರೆತಿದ್ದು, ಬಂಡೀಪುರ ಹುಲಿ ಸಂರಕ್ಷಿತ …

Read More »

ಬಿಎಸ್‌ವೈ ವಿರುದ್ಧ ಪ್ರಾಸಿಕ್ಯೂಷನ್​ ಅನುಮತಿಗೆ ವಿಳಂಬ: ರಾಜ್ಯಪಾಲರ ಕಚೇರಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ 187 ಕೋಟಿ ರೂ. ಬೆಲೆಬಾಳುವ 116.17 ಎಕರೆ ಜಮೀನನ್ನು ಕೇವಲ 50 ಕೋಟಿ ರೂ.ಗೆ ಸೆಂಟರ್‌ ಫಾರ್‌ ಎಜುಕೇಷನ್‌ ಆ್ಯಂಡ್‌ ಸೋಷಿಯಲ್‌ ಸ್ಟಡೀಸ್‌ (ಸಿಇಎಸ್‌ಎಸ್‌) ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ (ಪ್ರಾಸಿಕ್ಯೂಷನ್‌) ಪೂರ್ವಾನುಮತಿ ಕೋರಿ ಸಲ್ಲಿಸಿರುವ ಅರ್ಜಿ ಇತ್ಯರ್ಥಪಡಿಸಲು ವಿಳಂಬ ಮಾಡುತ್ತಿರುವ ಸಂಬಂಧ ರಾಜ್ಯಪಾಲರ ಕಚೇರಿ ಮತ್ತು ಲೋಕಾಯುಕ್ತ ಸಂಸ್ಥೆಗೆ ಹೈಕೋರ್ಟ್‌ ನೋಟಿಸ್‌ ಜಾರಿ …

Read More »