Breaking News

ಮಳೆಯಿಂದ ರೈತ ಮಹಿಳೆಯ ಮನೆ ಕುಸಿತ – ಎತ್ತುಗಳಿಗೆ ಗಾಯ, 3 ಮೇಕೆ ಸಾವು

ಹಾಸನ: ನಿರಂತರ ಮಳೆಯಿಂದ ರೈತ ಮಹಿಳೆಯ ಮನೆ ಮತ್ತು ಕೊಟ್ಟಿಗೆ ಕುಸಿದು ಬಿದ್ದಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಪುಟ್ಟಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಮಳೆಗೆ ಸಂಪೂರ್ಣ ಮನೆ ಕುಸಿದು ಬಿದಿದ್ದು, ಈ ವೇಳೆ ಕೊಟ್ಟಿಗೆಯಲ್ಲಿದ್ದ ಮೂರು ಮೇಕೆ ಸಾವನ್ನಪ್ಪಿವೆ ಜೊತೆಗೆ ಎರಡು ಎತ್ತುಗಳಿಗೆ ಗಾಯವಾಗಿದೆ. ಆದರೆ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಣಾಪಾಯದಿಂದ ಪಾರಾಗಿದ್ದಾರೆಕಳೆದೊಂದು ವಾರದಿಂದ ನಿರಂತರವಾಗಿ ಮಳೆಯಾಗಿದ್ದ ಪರಿಣಾಮ ಶಿಥಿಲಗೊಂಡಂತಾಗಿದ್ದ, ರೈತ ಮಹಿಳೆ ಜಯಮ್ಮ ಅವರ ಮನೆ ಮತ್ತು ಕೊಟ್ಟಿಗೆ …

Read More »

ಮಹಾ ಮಳೆಗೆ ಮುಂಬೈನ ರಸ್ತೆಗಳೇ ಮಾಯ-

ಮುಂಬೈ: ಮಂಗಳವಾರ ರಾತ್ರಿ ಸುರಿದ ಮಳೆದ ವಾಣಿಜ್ಯ ನಗರಿ ಮುಂಬೈನ ರಸ್ತೆಗಳೇ ಮಾಯವಾಗಿದ್ದು, ತಗ್ಗು ಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ. ನಗರದ ಬಹುತೇಕ ರಸ್ತೆಗಳಲ್ಲಿ ಮೂರರಿಂದ ನಾಲ್ಕು ಅಡಿಯವರೆಗೆ ನೀರು ನಿಂತಿದೆ. ಮಂಗಳವಾರ ರಾತ್ರಿ ಆರಂಭವಾದ ಮಳೆ ಬುಧವಾರ ಬೆಳಗ್ಗೆಯವರೆಗೆ ಸುರಿದಿದೆ. ಮುಂದಿನ 24 ಗಂಟೆಯೂ ಸಹ ಭಾರೀ ಮಳೆಯಾಗಲಿದೆ. ಈ ವಾರ ನಗರದಲ್ಲಿ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಬುಧವಾರದ ನಂತರ ತುಂತುರು ಮಳೆಯಾಗುವ ಸಾಧ್ಯತೆಗಳಿವೆ …

Read More »

ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್‍ಗೆ ಕರೆ/2 ಬಸ್‍ಗಳಲ್ಲಿ ರೈತರನ್ನ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಅಧಿವೇಶನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಎಪಿಎಂಸಿ ಮಸೂದೆ ಮಂಡಿಸಿದ ಬೆನ್ನಲ್ಲೇ ರಾಜ್ಯ ರೈತ ಸಂಘದ ಅಧ್ಯಕ್ಷ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ. ಈಗಾಗಲೇ ಫ್ರೀಡಂಪಾರ್ಕ್ ಮತ್ತು ಮೌರ್ಯ ಸರ್ಕಲ್‍ನಲ್ಲಿ ರೈತರು ರಸ್ತೆ ತಡೆಗೆ ಸಜ್ಜಾಗುತ್ತಿದ್ದರು. ಇದೀಗ ಪೊಲೀಸರು ಹಲವು ರೈತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಹೆದ್ದಾರಿ ಬಂದ್ ಮಾಡಿ ಶುಕ್ರವಾರ ಬೃಹತ್ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಆದರೆ ಈಗಲೇ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು …

Read More »

ಕೆಪಿಸಿಸಿ_ಕಾರ್ಯಾಧ್ಯಕ್ಷ_ಸತೀಶ_ಜಾರಕಿಹೊಳಿ_ನೇತೃತ್ವದಲ್ಲಿ_ಸಹಕಾರ_ಸಚಿವ_ಟಿ_ಸೋಮಶೇಖರಗೆ_ಮನವಿ…

ಬೆಂಗಳೂರು- ಬೆಂಗಳೂರಲ್ಲಿ ಹಂಗೇನಿಲ್ಲ,ಎಲ್ಲಾರೂ ಸೇರ್ಕೊಂಡು ಮನವಿ ಕೊಡ್ತಾರೆ ಅನ್ನೋದು,ಪೋಟೋ ನೋಡಿದ್ರೆ ನಿಮಗೆ ಗೊತ್ತಾಗುತ್ತದೆ. ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಆಡಳಿತ ಮಂಡಳಿಯ ನಿಯೋಗ ಇಂದು,ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಸಹಕಾರ,ಮತ್ತು ಎಪಿಎಂಸಿ ಸಚಿವ ಟಿ‌.ಸೋಮಸೇಖರ್ ಅವರು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿತು. ಬೆಳಗಾವಿ ಎಪಿಎಂಸಿಯ ಬಾಕಿ ಉಳಿದಿರುವ ಆರ್ ಡಿ ಪಿ ಯೋಜನೆಯ 15 ಕೋಟಿ ರೂ ಅನುದಾನ ಬಿಡುಗಡೆ ಮಾಡಬೇಕು,ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಅಭಿವೃದ್ಧಿಗಾಗಿ,ಹೆಚ್ಚುವರಿಯಾಗಿ 15 ಕೋಟಿ …

Read More »

ಕೋವಿಡ್ ನಿರ್ವಹಣೆ ಹಾಗೂ ನೈಸರ್ಗಿಕ ಪ್ರಕೃತಿ ವಿಕೋಪ ನಿರ್ವಹಣೆಗೆಂದೇ ಸರಕಾರ ಕೋಟ್ಯಾಂತರ ರೂ ತಹಶೀಲ್ದಾರ ಖಾತೆಗೆ ಹಣ ಜಮಾ: ತಹಶೀಲ್ದಾರ ಖಾತೆಯಿಂದಲೇ ಲಕ್ಷಾಂತರ ಹಣ ಲೂಟಿ

ಯಾದಗಿರಿ: ಕೋವಿಡ್ ನಿರ್ವಹಣೆ ಹಾಗೂ ನೈಸರ್ಗಿಕ ಪ್ರಕೃತಿ ವಿಕೋಪ ನಿರ್ವಹಣೆಗೆಂದೇ ಸರಕಾರ ಕೋಟ್ಯಾಂತರ ರೂ ತಹಶೀಲ್ದಾರ ಖಾತೆಗೆ ಹಣ ಜಮಾ ಮಾಡುತ್ತದೆ. ಆದರೆ, ಈಗ ತಹಶೀಲ್ದಾರ ಖಾತೆಯಿಂದಲೇ ಲಕ್ಷಾಂತರ ಹಣ ಲೂಟಿ ಮಾಡಿದ್ದಕ್ಕೆ ಈಗ ತಹಶೀಲ್ದಾರರಿಗೆ ಟೆನ್ಶನ್​​ ಶುರುವಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿಯೇ ಸರಕಾರಕ್ಕೆ ವಂಚನೆ ಮಾಡಿದ್ದ ದಂಧೆ ಬೆಳಕಿಗೆ ಬಂದಿದೆ. ಸುರಪುರ ತಹಶೀಲ್ದಾರ ನಿಂಗಪ್ಪ ಬಿರಾದಾರ ಹೆಸರಿನಲ್ಲಿಯೇ ಚೆಕ್ ಪಡೆದು ತಹಶೀಲ್ದಾರ ಸುರಪುರ ಹೆಸರಿನಲ್ಲಿ ನಕಲಿ ಸಹಿ …

Read More »

ದಿಗಂತ್‍ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು.

ಬೆಂಗಳೂರು: ಡ್ರಗ್ಸ್ ಮಾಫಿಯಾ ನಂಟಿನ ಆರೋಪದ ಮೇರೆಗೆ ಸ್ಯಾಂಡಲ್‍ವುಡ್ ಸ್ಟಾರ್ ನಟ ದೂದ್‍ಪೇಡ ದಿಗಂತ್‍ರನ್ನು ಸಿಸಿಬಿ ಪೊಲೀಸರು 2ನೇ ಬಾರಿ ವಿಚಾರಣೆ ಆರಂಭಿಸಿದ್ದಾರೆ. ದಿಗಂತ್‍ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಸಿಸಿಬಿ ಅಧಿಕಾರಿಗಳ ನೋಟಿಸ್ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದಲ್ಲಿ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದ ದಿಗಂತ್, ಚಿತ್ರೀಕರಣ ಅರ್ಧಕ್ಕೆ ಮೊಟಕುಗೊಳಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬೆಳಿಗ್ಗೆ 11.30ಕ್ಕೆ ಹಾಜರಾದ ದಿಗಂತ್‍ರನ್ನು ಸಿಸಿಬಿ ತನಿಖಾಧಿಕಾರಿ ಪುನೀತ್ ತೀವ್ರ …

Read More »

ಅಂಗಡಿ ಮುಂದೆ ಎಂಜಲು ಉಗಿದ ಎಂಬಕಾರಣಕ್ಕೆ ಯುವಕನ ಕೊಲೆ

ಚಿಕ್ಕಬಳ್ಳಾಪುರ:ಅಂಗಡಿ ಮುಂದೆ ಎಂಜಲು ಉಗಿದ ಎಂಬಕಾರಣಕ್ಕೆ ಯುವಕನ ಕೊಲೆಯೇ ಆಗಿಹೋಗಿದೆ. ತನ್ನ ಅಂಗಡಿ ಮುಂದೆ ಎಂಜಲು ಉಗಿದ ಯುವಕನನ್ನು ಅಂಗಡಿ ಮಾಲೀಕ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾನೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಪ್ಪನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಪ್ರಕರಣ ನಡೆದಿದೆ. ಕೊಲೆಗೀಡಾದ ಯುವಕನನ್ನು ಗ್ರಾಮದ ಮುನಿಕೃಷ್ಣ ಎಂದು ಗುರುತಿಸಲಾಗಿದ್ದು ಕೊಲೆ ಆರೋಪಿ ಅದೇ ಗ್ರಾಮದ ಚೇತನ್. ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಲೆ ಮಾಡಿದ ಬೆಳಗ್ಗೆ …

Read More »

ತರಕಾರಿಗಳ ಬೆಲೆಗಳು ಗಗನಕ್ಕೇರಿರುವುದರಿಂದ ಜನ ತತ್ತರಿಸಿ ಹೋಗಿದ್ದಾರೆ.

ಬೆಳಗಾವಿ :ಅತ್ತ ಕೊರೊನಾ ಬಿಟ್ಟು ಬಿಡದೇ ಕಾಡುತ್ತಿದೆ. ಇತ್ತ ಚೇತರಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಜನ ಇದ್ದಾರೆ. ಇದರ ನಡುವೆ ಒಂದೊಂದೆ ಬೆಲೆ ಏರಿಕೆಗಳು ಜನರ ಕೈ ಸುಡುತ್ತಿವೆ. ಇದರ ಮಧ್ಯೆ ತರಕಾರಿ ಬೆಲೆಗಳು ಗಗನಕ್ಕೇರುತ್ತಿವೆ. ಮೊದಲೇ ದುಡಿಮೆ ಇಲ್ಲದೆ ಆರ್ಥಿಕ ಬಿಕ್ಕಟ್ಟು ಉಂಟಾಗುತ್ತಿರುವ ಬೆನ್ನಲ್ಲೇ ಇದೀಗ ತರಕಾರಿಗಳ ಬೆಲೆಗಳು ಗಗನಕ್ಕೇರಿರುವುದರಿಂದ ಜನ ತತ್ತರಿಸಿ ಹೋಗಿದ್ದಾರೆ. ಹೌದು, ಉತ್ತರ ಕರ್ನಾಟಕದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ನಾಶವಾಗುತ್ತಿವೆ. ಹೀಗಾಗಿ ತರಕಾರಿಗಳ ಬೆಲೆ ಏರಿಕೆ …

Read More »

ಬಿ.ವೈ. ವಿಜಯೇಂದ್ರ ಮೇಲಿನ ಆರೋಪಕ್ಕೆ ದೆಹಲಿಯಿಂದ ಪ್ರತಿಕ್ರಿಯೆ ಬಂತು

ನವದೆಹಲಿ: ಸಿಎಂ ಬಿಎಸ್‌ ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮಾಡಿರುವ ಆರೋಪಕ್ಕೆ ಸಚಿವ ಸೋಮಣ್ಣ ಅವರು ತಿರುಗೇಟು ನೀಡಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಮುಖ್ಯಮಂತ್ರಿಗಳ ಮಕ್ಕಳ ಮೇಲೆ ಆರೋಪ ಮಾಡೋದು ದೇವರಾಜು ಅರಸು ಕಾಲದಿಂದ ಬಂದಿದೆ. ಎಲ್ಲಾ ಮುಖ್ಯಮಂತ್ರಿಗಳ ಮಕ್ಕಳ ಮೇಲೂ ಆರೋಪಗಳು ಬಂದಿವೆ. ಇದೇನು ಹೊಸದಲ್ಲ. ಆರೋಪಗಳು ನಿರಾಧಾರ ಎಂದು ಹೇಳಿದರು. ವಿಜಯೇಂದ್ರ ಬಿಎಸ್ ವೈಗೆ ಅರ್ಜಿ …

Read More »

ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ.

ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ. ಅಥಣಿ: ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ತಳವಾರ ಸಮುದಾಯದ ಕೆಲವು ಬಾಂಧವರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪಟ್ಟನದ ಮಿನಿ ವಿಧಾನಸೌಧದಲ್ಲಿ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಪರಿವಾರ-ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿದವರು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಮುಂದಾಗಲಿ ಎಂದು ಒತ್ತಾಯಿಸಿ ತಳವಾರ ಸಮಾಜದ ಮುಖಂಡ ರಾಜು ಜಮಖಂಡಿಕರ ಮುಂದಾಳತ್ವದಲ್ಲಿ ಪ್ರತಿಭಟನೆ ಕೈಗೊಂಡು, ವಿಧಾನಸಭಾ ಕಲಾಪ ಮುಗಿಯುವವರೆಗೆ …

Read More »