ಗುರುಗ್ರಾಮ: 34ನೇ ಸಿಆರ್ಪಿಎಫ್ನ ಮೊದಲ ಮಹಿಳಾ ತಂಡವನ್ನು ಶನಿವಾರ ವಿಶೇಷ ಜಂಗಲ್ ವಾರ್ಫೇರ್ ಕಮಾಂಡೊ ಪಡೆ ‘ಕೋಬ್ರಾ’ಗೆ(ಕಮಾಂಡೊ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್) ಸೇರಿಸಲಾಯಿತು. ಇಲ್ಲಿನ ಕಡರ್ಪುರದಲ್ಲಿರುವ ಸಿಆರ್ಪಿಎಫ್ ಶಿಬಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳೆಯರು ನಡೆಸಿದ ಯುದ್ಧಸಮರ ಕಸರತ್ತನ್ನು ಸಿಆರ್ಪಿಎಫ್ ಮಹಾನಿರ್ದೇಶಕಿ ಎ ಪಿ ಮಹೇಶ್ವರಿ ವೀಕ್ಷಿಸಿದರು. ‘ಈಗಿರುವ ಆರು ಸಿಆರ್ಪಿಎಫ್ ಮಹಿಳಾ ಬೆಟಾಲಿಯನ್ಗಳಿಂದ ಮಹಿಳೆಯರನ್ನು ಕೋಬ್ರಾ ಪಡೆಗೆ ಆಯ್ಕೆ ಮಾಡಲಾಗಿದೆ. ಇವರೆಲ್ಲರೂ …
Read More »ಏಷ್ಯಾದ ಅತೀ ದೊಡ್ಡ ಏರ್ ಶೋಗೆ ವಿಶೇಷ ಭದ್ರತೆ ನೀಡಿದ್ದು ಗುರುಡ ಪಡೆ
ಬೆಂಗಳೂರು: ಫೆಬ್ರವರಿ 3 ರಿಂದ ಮೂರು ದಿನಗಳ ಕಾಲ ನಡೆದ ಏಷ್ಯಾದ ಅತೀ ದೊಡ್ಡ ಏರ್ ಶೋ ಶುಕ್ರವಾರ ಮುಕ್ತಾಯವಾಯಿತು. ಈ ಏರ್ ಶೋಗೆ ಭಯೋತ್ಪಾದನೆ ನಿಗ್ರಹದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಗರುಡ ಸೈನ್ಯ ಭದ್ರತೆಯನ್ನ ಒದಗಿಸಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಚೀಫ್ ಆಫ್ ಡಿಫೆನ್ಸ್ ಸ್ಟಾಪ್ ಜನರಲ್ ಬಿಪಿನ್ ರಾವತ್ ಮತ್ತು ಮೂವರು ಸೇನಾ ಮುಖ್ಯಸ್ಥರು ಮತ್ತು ರಕ್ಷಣಾ ಮಂತ್ರಿಗಳು ಮತ್ತು ಇತರರು ಭಾಗವಹಿಸಿದ್ದ ಪ್ರದರ್ಶನದಲ್ಲಿ ಗರುಡ್ ಸೈನ್ಯವನ್ನ …
Read More »₹29 ಲಕ್ಷ ಪಡೆದು, ಬಳಿಕ ಕಾರ್ಯಕ್ರಮಗಳಿಗೆ ಹಾಜರಾಗದೇ ವಂಚಿಸಿದ್ದಾರೆ ಸನ್ನಿ ಲಿಯೋನ್
ತಿರುವನಂತಪುರಂ: ಕಾರ್ಯಕ್ರಮಗಳಿಗೆ ಭಾಗವಹಿಸುದಾಗಿ ಬರೋಬ್ಬರಿ ₹29 ಲಕ್ಷ ಪಡೆದು ವಂಚನೆ ಮಾಡಿರುವ ಆರೋಪದ ಮೇಲೆ ಬಾಲಿವುಡ್ ನಟಿ ಸನ್ನಿ ಲಿಯೋನ್ನ್ನ ಕೇರಳ ಪೊಲೀಸರು ಇಂದು ವಿಚಾರಣೆ ನಡೆಸಿದ್ದಾರೆ. ಕೊಚ್ಚಿಯಲ್ಲಿ ಏರ್ಪಡಿಸಲಾದ ಎರಡು ಕಾರ್ಯಕ್ರಮಗಳಿಗೆ ಭಾಗವಹಿಸುವುದಾಗಿ ಹೇಳಿ ಸನ್ನಿ ಲಿಯೋನ್ ₹29 ಲಕ್ಷ ಪಡೆದು, ಬಳಿಕ ಕಾರ್ಯಕ್ರಮಗಳಿಗೆ ಹಾಜರಾಗದೇ ವಂಚಿಸಿದ್ದಾರೆ ಎಂದು ಆಯೋಜಕರು ದೂರು ನೀಡಿದ್ದಾರೆ ಅಂತಾ ವರದಿಯಾಗಿದೆ. ದೂರಿನ ಅನ್ವಯ ಕೇರಳ ಪೊಲೀಸರು ಸನ್ನಿ ಲಿಯೋನ್ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ …
Read More »ಶರದ್ ಪವಾರ್ ಸಚಿನ್ಗೆ ಎಚ್ಚರಿಕೆ
ಮುಂಬೈ: ಬೇರೆ ಯಾವುದೇ ಕ್ಷೇತ್ರದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸುವಂತೆ ನಾನು ಸಚಿನ್ಗೆ ಸಲಹೆ ನೀಡುತ್ತೇನೆ ಅಂತಾ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಎಚ್ಚರಿಕೆಯನ್ನ ನೀಡಿದ್ದಾರೆ. ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮೊನ್ನೆ ಪಾಪ್ ಸಿಂಗರ್ ರಿಹಾನಾ ಟ್ವೀಟ್ ಮಾಡಿದ್ದರು. ಇದನ್ನ ಖಂಡಿಸಿ ಬಾಲಿವುಡ್ ಹಾಗೂ ಕ್ರಿಕೆಟ್ ಸ್ಟಾರ್ಗಳು #IndiaTogether #IndiaAgainstPropaganda ಹ್ಯಾಶ್ ಟ್ಯಾಗ್ ಅಡಿ ಅಭಿಯಾನ ಶುರುಮಾಡಿದ್ದರು. ಈ ಅಭಿಯಾನಕ್ಕೆ ಕೈಜೋಡಿಸಿ ಟ್ವೀಟ್ ಮಾಡಿದ್ದ ತೆಂಡೂಲ್ಕರ್.. ಭಾರತದ ಸಾರ್ವಭೌಮತ್ವ ವಿಚಾರದಲ್ಲಿ …
Read More »ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾದ ಕಳ್ಳತನ ಕೆಲವು ಪ್ರಕರಣದಲ್ಲಿ ಆರೋಪಿ ಸುಳಿವು ಸಿಕ್ಕಿಲ್ಲ.
ಕಾರವಾರ: ಕೊರೋನಾ ಮಹಾಮಾರಿ ತಂದಿಟ್ಟ ಸಂಕಷ್ಟ ಒಂದೆರಡಲ್ಲ ಹತ್ತಾರು ಮಾರ್ಗದಲ್ಲಿ ಜನರನ್ನ ಸಂಕಷ್ಟದ ಗುಹೆಗೆ ನೂಕಿಸಿದೆ. ಇದರ ಬಾಗವಾಗಿ ಲಾಕ್ಡೌನ್ ನಂತರ ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮತ್ತು ರಾಷ್ಟ್ರೀಯ ಹೆದ್ದಾರಿ ಪಕ್ಕದ ಮನೆಗಳಲ್ಲಿ ಕಳ್ಳತನ ಪ್ರಕರಣಗಳು ಅಧಿಕವಾಗಿದೆ. ಲಾಕ್ಡೌನ್ ಬಳಿಕ ನಾಲ್ವತ್ತಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲಾಗಿವೆ ಇದಕ್ಕೆಲ್ಲ ಕಾರಣ ಲಾಕ್ಡೌನ್ ನಲ್ಲಿ ಕೆಲಸ ಇಲ್ಲದವರ ಕೃತ್ಯ ಎನ್ನಲಾಗಿದೆ. ಈ ಪೈಕಿ ರಾಷ್ಟ್ರೀಯ …
Read More »B.S.Y.. ಗೆ ವಯಸ್ಸಾಗಿದೆ ತಮ್ಮ ಮೊಮ್ಮಕ್ಕಳ ಜೊತೆ ಕಾಲ ಕಳೆಯುವುದು ಉತ್ತಮ: ಯತ್ನಾಳ
ಚಿತ್ರದುರ್ಗ : ಸಿಎಂ ಯಡಿಯೂರಪ್ಪ ಅವರಿಗೆ ದಣಿವಾಗಿದೆ. ಅವರ ಕುಟುಂಬವೇ ಸರ್ಕಾರವನ್ನು ನಡೆಸುತ್ತಿದೆ. ಅವರ ಮಗ ವಿಜಯೇಂದ್ರ, ಇಡೀ ಕುಟುಂಬ ಕಾವೇರಿ ನಿವಾಸದಲ್ಲಿ ನೇರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದನ್ನು ಹೈಕಮಾಂಡ್ ಗಮನಿಸುತ್ತಿದೆ. ತಮ್ಮ ಕುಟುಂಬವನ್ನು ಮತ್ತಷ್ಟು ಉದ್ಧಾರ ಮಾಡಲು ಯಡಿಯೂರಪ್ಪ ಸಿಎಂ ಆಗಿ ಉಳಿದಿದ್ದಾರೆ. ಅವರು ಆದಷ್ಟು ಬೇಗ ರಾಜಕೀಯ ನಿವೃತ್ತಿ ಪಡೆದು ಮೊಮ್ಮಕ್ಕಳನ್ನು ಆಡಿಸಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ದ ವಾಗ್ದಾಳಿ …
Read More »ಇಂದು ಕುರುಬ ಸಮುದಾಯದಿಂದ ಬೃಹತ್ ಸಮಾವೇಶ
ಬೆಂಗಳೂರು (ಫೆ. 7): ಕುರುಬ ಸಮುದಾಯ ಬೃಹತ್ ಸಮಾವೇಶಕ್ಕೆ ಇಂದು ರಾಜಧಾನಿ ಸಾಕ್ಷಿಯಾಗಲಿದೆ. ಈ ಮೂಲಕ ತಮ್ಮ ಮೀಸಲಾತಿಯ ಕೂಗನ್ನು ಸರ್ಕಾರಕ್ಕೆ ಮುಟ್ಟಿಸಲು ಸಮುದಾಯ ನಿರ್ಧರಿಸಿದೆ. ಈಗಾಗಲೇ ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರಿಗೆ ಯಶಸ್ವಿ ಪಾದಯಾತ್ರೆಯನ್ನು ನಡೆಸಲಾಗಿದೆ. ನಗರದ ಹೊರವಲದಲ್ಲಿರುವ ಮಾದಾವರ ಅಂತಾರಾಷ್ಟ್ರೀಯ ಪ್ರದರ್ಶನ ಮೈದಾನದಲ್ಲಿ ಇಂದು ಬೃಹತ್ ಸಮಾವೇಶ ನಡೆಯಲಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ. ರಾಜ್ಯ …
Read More »ಯಾವುದೆ ಆಪತ್ತಿರಲಿ ತುರ್ತು ಸಂಖ್ಯೆ 112 ಕರೆ ಮಾಡುವುದು ನೆನಪಿರಲಿ : PSI ನಾಗರಾಜ ಖಿಲಾರೆ.
ಗೋಕಾಕ : ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಶನಿವಾರ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿ,ಎಸ್,ಆಯ್, ನಾಗರಾಜ ಖಿಲಾರೆಯವರು ಶ್ರೀಲಕ್ಷ್ಮಿ ದೇವಸ್ಥಾನದಲ್ಲಿ ಜನಸಂಪರ್ಕ ಸಭೆ ಮತ್ತು ಅಂಬೇಡ್ಕರ ನಗರದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನಡೆದ ದಲಿತ ಸಬೆ ಮತ್ತು ಒಂದೆ ದೇಶ ಒಂದೆ ತುರ್ತು ಸಂಖ್ಯೆಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸ್ಥಳಿಯರನ್ನು ಉದ್ದೇಶಿಸಿ ಮಾತನಾಡಿ ತಮ್ಮ ಸುತ್ತಮುತ್ತಲು ಅಗ್ನಿ ದುರಂತ ಸಂಭವಿಸಿದ್ದಲ್ಲಿ,ಅಪಘಾತವಾಗಿದ್ದಲ್ಲಿ,ಅಪರಾಧವಾಗಿದ್ದಲ್ಲಿ ಹಾಗೂ ವಿನಾಕಾರಣ ಯಾರಾದರೂ ಅಣ್ಯ ವ್ಯಕ್ತಿಗಳು ಕುಡಿದು …
Read More »ಮದ್ವೆಯಾದ 2 ತಿಂಗಳಲ್ಲಿ ಗಂಡನಿಂದಲೇ ಬಿ.ಟೆಕ್ ವಿದ್ಯಾರ್ಥಿನಿ ಹತ್ಯೆ: ಕೊಲೆಗೆ ಕಾರಣ ಕೇಳಿ ಬೆಚ್ಚಿಬಿದ್ದ ಪಾಲಕರು!
ಖಮ್ಮಮ್: ತೆಲಂಗಾಣದ ಖಮ್ಮಮ್ ಜಿಲ್ಲೆಯ ಪೆನುಬಲ್ಲಿ ವಲಯದ ನ್ಯೂ ಲಂಕಪಲ್ಲಿಯಲ್ಲಿ ಶುಕ್ರವಾರ (ಫೆ.5) ಪತಿಯಿಂದಲೇ ನಡೆದ ನವವಿವಾಹಿತೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಮದುವೆಯಾದ ಕೇವಲ ಎರಡೇ ತಿಂಗಳಲ್ಲಿ ಪತ್ನಿಯ ಕೊಲ್ಲುವ ನಿರ್ಧಾರದ ಹಿಂದೆ ಪತಿಯ ಅಕ್ರಮ ಸಂಬಂಧ ಕಾರಣ ಎಂದು ಬಹಿರಂಗವಾಗಿದೆ. ನವ್ಯಾ ರೆಡ್ಡಿ (22) ಪತಿಯಿಂದಲೇ ಕೊಲೆಯಾದ ದುರ್ದೈವಿ. ಸಾಯಿ ಸ್ಫೂರ್ತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಟೆಕ್ ವಿದ್ಯಾರ್ಥಿನಿಯಾಗಿದ್ದ ನವ್ಯಾ, ತುಂಬಾ …
Read More »ಅವಿರೋಧ ಆಯ್ಕೆಯಾದ್ರು ನಿತ್ಯ ತರಕಾರಿ ಸೊಪ್ಪು ಮಾರುವ ಗ್ರಾ.ಪಂ ಅಧ್ಯಕ್ಷೆ:
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲಲು ಸಾಕಷ್ಟು ಖರ್ಚು ಮಾಡುವುದನ್ನು ನೋಡಿದ್ದೇವೆ. ಇನ್ನು ಅಧ್ಯಕ್ಷ ಸ್ಥಾನಕ್ಕಾಗಿ ದುಡ್ಡಿನ ಮಳೆಯನ್ನೇ ಹರಿಸುತ್ತಾರೆ. ಆದರೆ, ಅಧಿಕಾರ ಬಂದ ಬಳಿಕ ಪಂಚಾಯಿತಿ ಬರುವ ನಿಧಿಯನ್ನೆಲ್ಲ ಗುಳಂ ಮಾಡುತ್ತಾರೆ. ಗ್ರಾಮ ಅಭಿವೃದ್ಧಿಗೆ ಬಳಸುವ ಹಣ ಏಕ ವ್ಯಕ್ತಿಯ ಉದ್ಧಾರಕ್ಕಾಗಿ ದುರ್ಬಳಕೆ ಮಾಡಲಾಗುತ್ತದೆ. ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅನೇಕರು ಪೈಪೋಟಿ ನಡೆಸುತ್ತಾರೆ. ಆದರೆ, ಇಲ್ಲೊಬ್ಬ ಮಹಿಳೆ ಅವಿರೋಧವಾಗಿ ಒಂದು ರೂಪಾಯಿ ಖರ್ಚಿಲ್ಲದೆ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಹೀಗಿದ್ದರೂ ಆ ಮಹಿಳೆ …
Read More »