Breaking News

ಬಿಜೆಪಿ ಸರ್ಕಾರ ಬಂದ ಮೇಲೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಒಂದು ಪೈಸೆ ಕೊಡ್ತಿಲ್ಲ.: ಯತೀಂದ್ರ ಸಿದ್ದರಾಮಯ್ಯ

ಮೈಸೂರು:ಬಿಜೆಪಿ ಸರ್ಕಾರ ಬಂದ ಮೇಲೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಒಂದು ಪೈಸೆ ಕೊಡ್ತಿಲ್ಲ. ಎಷ್ಟೇ ಪತ್ರ ಬರೆದರೂ ಹಣ ಕೊಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕ್ಷೇತ್ರದಲ್ಲಿ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಯತೀಂದ್ರ, ಚುನಾವಣೆ ಸಮಯದಲ್ಲಿ ಕೊಟ್ಟ ಭರವಸೆಗಳನ್ನ ಈಡೇರಿಸಲು ಆಗ್ತಿಲ್ಲ. ರಸ್ತೆ, ಚರಂಡಿ ಕಾಮಗಾರಿಗೇ ಇವರು ಹಣ ಕೊಡುತ್ತಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ರಸ್ತೆಗಳು ನಡೆಯುತ್ತವೆ. ಹೀಗಾಗಿ ನಾನು …

Read More »

ಸಪ್ಲಾಯರ್ ಕೆಲಸ ಮಾಡಿಲ್ಲ. ಹೀಗಾಗಿ ಸಪ್ಲೈಯರ್ ಗಳಿಂದ ನಾನು ಏನನ್ನೂ ಕಲಿಯಬೇಕಿಲ್ಲ ಎಂದು ಕಿಡಿ‌ ಕಾರಿದ ಯತ್ನಾಳ

ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.   ಮಂತ್ರಿ ಆಗಲು ನಾನು ಯಾರಿಗೂ …

Read More »

ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಯೋಧರು ಹುತಾತ್ಮ, 18 ಯೋಧರು ನಾಪತ್ತೆ!

ಛತ್ತೀಸ್ ಗಢ್: ಇಲ್ಲಿನ ಸುಕ್ಮಾ- ಬಿಜಾಪುರ ಗಡಿ ಪ್ರದೇಶದಲ್ಲಿ ಶನಿವಾರ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿಎಂಟು ಮಂದಿ ಯೋಧರು ಹುತಾತ್ಮರಾಗಿದ್ದು, 18 ಮಂದಿ ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಸಿಆರ್‌ಪಿಎಫ್ ನ ಕೋಬ್ರಾ ಪಡೆ, ವಿಶೇಷ ಕಾರ್ಯಾಚರಣೆ ಪಡೆ, ಜಿಲ್ಲಾ ಮೀಸಲು ಗಾರ್ಡ್ಸ್‌ನ 2 ಸಾವಿರ ಸಿಬ್ಬಂದಿ ಛತ್ತೀಸ್‌ಗಡದ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಜಾಗರ್‌ಗುಂಡಾ ಠಾಣೆ …

Read More »

ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ: ಸಿದ್ದರಾಮಯ್ಯ

ಬೆಂಗಳೂರು: ಅನ್ನ ಭಾಗ್ಯ ಯೋಜನೆ ವಿಚಾರದ ಬಗ್ಗೆ ಮಾತನಾಡುವಾಗ ಸರ್ಕಾರಿ ದುಡ್ಡು ಯಾರಪ್ಪನ ಮನೆ ದುಡ್ಡಲ್ಲ ಎಂದಿದೆ. ಅದು ಬೈಗುಳವೇ? ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ನಲವತ್ತು ವರ್ಷದ ಅನುಭವವಿದೆ. ಇದು ಯಡಿಯೂರಪ್ಪ ಮನೆ ಹಣ ಅಲ್ಲ, ಸರ್ಕಾರದ ಹಣ ಅಂತ ಹೇಳೋದು ಅಸಂವಿಧಾನಿಕ ಪದವೇ ಎಂದು ಪ್ರಶ್ನಿಸಿದರು. ಜಾರಕಿಹೊಳಿ …

Read More »

ಸಿಡಿ ಇಟ್ಟುಕೊಂಡು ಎಂಎಲ್ ಸಿ, ಮಂತ್ರಿ ಆದವರಿಂದ ಕಲಿಯಬೇಕಾದದ್ದೇನಿಲ್ಲ: ಯತ್ನಾಳ್

ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.   ಮಂತ್ರಿ ಆಗಲು ನಾನು ಯಾರಿಗೂ …

Read More »

2.10 ಲಕ್ಷ ಮೌಲ್ಯದ ಗಾಂಜಾ ವಶ: ಇಬ್ಬರ ಬಂಧನ

ದಾವಣಗೆರೆ: ಇಲ್ಲಿನ ಬಾಡ ಕ್ರಾಸ್ ಬಳಿಯ ಚಿಂದೋಡಿ ಲೀಲಾ ರಂಗಲೋಕದ ಹಿಂಭಾಗದ ರಾಷ್ಟ್ರೀಯ ಹೆದ್ದಾರಿ-4ರ ಸರ್ವೀಸ್ ರಸ್ತೆಯ ಪಕ್ಕದ ಮಣ್ಣಿನ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಇಎನ್ ಠಾಣೆಯ ಪೊಲೀಸರು, 8 ಕೆ.ಜಿ 600 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಛತ್ತೀಸಗಡ ರಾಜ್ಯದ ರಾಯಗಡ ಜಿಲ್ಲೆಯ ಅಂತರಾಮ್ ತಿರ್ಕಿ (21) ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಬಂಡೆಬಸಾಪುರ ಗ್ರಾಮದ ಮಧುರಾಜ್ (40) ಬಂಧಿತರು. ಇವರನ್ನು ನ್ಯಾಯಾಂಗ ಬಂಧನಕ್ಕೆ …

Read More »

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ವೆಬ್ ಸೈಟ್‌ನಲ್ಲಿ ಹೆಸರು

ನವದೆಹಲಿ, ಏಪ್ರಿಲ್ 4; ಕೇಂದ್ರ ಮೋಟಾರು ವಾಹನ ಕಾಯ್ದೆಯ ತಿದ್ದುಪಡಿ ಅನ್ವಯ ರಾಜ್ಯಗಳಿಗೆ ಹೊಸ ಅಧಿಕಾರವನ್ನು ಕೊಡಲಾಗಿದೆ. ಪದೇ ಪದೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರ ಹೆಸರನ್ನು ರಾಜ್ಯ ಸಾರಿಗೆ ಇಲಾಖೆಯ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಕುಡಿದು ವಾಹನ ಚಾಲನೆ, ಅತಿಯಾದ ವೇಗ, ರೇಸ್‌ ಮಾಡುವವರು, ಅಪಾಯಕಾರಿ ಚಾಲನೆ, ಹೆಲ್ಮೆಟ್ ಧರಿಸದೇ ಚಾಲನೆ ಮಾಡುವವರ ಹೆಸರನ್ನು ನೇಮ್ ಎಂಡ್ ಶೇಮ್ ಎಂಬ ಪಟ್ಟಿಯಡಿ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.   ಒಂದು …

Read More »

ಖಾತೆ ಬದಲಾಯಿಸಿ ಎಂದು ಹೇಳಿದ ನಿರ್ಮಾಪಕ ಕೆ. ಮಂಜುಗೆ ಸಚಿವ ಸುಧಾಕರ್ ತಿರುಗೇಟು

ಆರೋಗ್ಯ ಖಾತೆಯಿಂದ ಸಚಿವ ಸುಧಾಕರ್ ಅವರನ್ನು ಬದಲಾಯಿಸಿ ಎಂದು ನಿರ್ಮಾಪಕ ಕೆ. ಮಂಜು ನೀಡಿದ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ. ಕೆ. ಮಂಜು ಅಂದ್ರೆ ಯಾರು ಎಂಬುದೇ ನನಗೆ ಗೊತ್ತಿಲ್ಲ. ನಾನು ಯಾರ ಟೀಕೆಗಳಿಗೂ ತಲೆಕೆಡಿಸಿಕೊಳ್ಳುವುದಿಲ್ಲ. ಆರೋಗ್ಯ ಸಚಿವನಾಗಿ ಕೊರೋನಾ ನಿಯಂತ್ರಣಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನಮಗೆ ಜನರ ಆರೋಗ್ಯ ರಕ್ಷಣೆ ಮುಖ್ಯವಾಗಿದ್ದು ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಕೆಲಸ ಮಾಡುತ್ತೇನೆ. ಮುಖ್ಯಮಂತ್ರಿಗಳು ಚಿತ್ರರಂಗದ ಮನವಿಗೆ ಸ್ಪಂದಿಸಿದ್ದು …

Read More »

ಸಿಎಂ BSY ವಿರುದ್ಧ ಸಚಿವ ಈಶ್ವರಪ್ಪ ಬರೆದ ಪತ್ರದ ಬಗ್ಗೆ ಕ್ರಮ: ಅಮಿತ್ ಶಾ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪ್ರಸ್ತಾಪವಾದಾಗ ಪ್ರತಿಕ್ರಿಯೆ ನೀಡಿದ ಅಮಿತ್ ಶಾ, ಈಶ್ವರಪ್ಪ ಬರೆದ ಪತ್ರದ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗಮನಹರಿಸಲಿದ್ದಾರೆ. ಚುನಾವಣೆ ಮುಗಿದ ನಂತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ. ಇದು ಪಕ್ಷದ …

Read More »

ಸ್ಯಾಂಡಲ್ ವುಡ್ ಮನವಿಗೆ ಮಣಿದ ಸರ್ಕಾರ : ಹೌಸ್ ಫುಲ್ ಪ್ರದರ್ಶನಕ್ಕೆ ಅಸ್ತು

ಬೆಂಗಳೂರು : ಸಿನಿಮಾ ಟಾಕೀಸ್ ಗಳಿಗೆ 50% ಪ್ರವೇಶ ವಿಧಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಈ ಸಂಬಂಧ ಕನ್ನಡ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಇಂದು ( ಏಪ್ರಿಲ್ 3) ಸಿಎಂ ಬಿಎಸ್‍ವೈ , ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವ ಅಪ್ಪು, ಚಿತ್ರಮಂದಿರಗಳಲ್ಲಿ 50% ಸೀಟು ಭರ್ತಿಗೆ ನೀಡಿರುವ ಆದೇಶದಿಂದ ಉಂಟಾಗುವ ಸಂಕಷ್ಟದ …

Read More »