Breaking News

ಸಚಿವ ಸ್ಥಾನ ಭಗ್ನಗೊಂಡ ಬೆನ್ನಲ್ಲೇ ಮತ್ತೊಂದು ಹುದ್ದೆಗೆ ಕರ್ಚಿಫ್ ಹಾಕಿದ ಹೆಚ್. ವಿಶ್ವನಾಥ್

ಬೆಂಗಳೂರು: ಎಂ.ಎಲ್.ಸಿ. ಹೆಚ್. ವಿಶ್ವನಾಥ್ ವಿರುದ್ಧ ಹೈಕೋರ್ಟ್ ನೀಡಿದ್ದ ಅನರ್ಹತೆ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇದೀಗ ಹೆಚ್. ವಿಶ್ವನಾಥ್ ಮತ್ತೊಂದು ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ನಾನು ಒಂಟಿಯಲ್ಲ ಎಂದು ಹೇಳಿದ್ದಕ್ಕೆ ಧನ್ಯವಾದ. ಆದರೆ ನನಗೆ ಸಚಿವರ ಸಹಾನುಭೂತಿ ಬೇಕಿಲ್ಲ. ನಮ್ಮ 17 ಜನರ ಟೀಂ ಸಿಎಂ ಯಡಿಯೂರಪ್ಪ ಜೊತೆ …

Read More »

ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಬಸವರಾಜ ಹೊರಟ್ಟಿ

ಬೆಂಗಳೂರು, ಜ.28- ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ತಮ್ಮ ಹೆಸರು ಘೋಷಣೆ ಮಾಡಿದ್ದಕ್ಕೆ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಆಗಮಿಸಿದ ಬಸವರಾಜ ಹೊರಟ್ಟಿ ಅವರು ಹೂಗುಚ್ಛ ನೀಡಿ ಗೌಡರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೋನರೆಡ್ಡಿ ಉಪಸ್ಥಿತರಿದ್ದರು. ಬಿಜೆಪಿ ಸಭಾಪತಿ ಸ್ಥಾನವನ್ನು ಜೆಡಿಎಸ್‍ಗೆ …

Read More »

2022ರೊಳಗೆ 75 ಕಿ.ಮೀ. ಮೆಟ್ರೋ ಮಾರ್ಗ ನಿರ್ಮಿಸುವ ಗುರಿ ರಾಜ್ಯ ಸರ್ಕಾರ ಹೊಂದಿದೆ:

ಬೆಂಗಳೂರು,ಜ.28- ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 2022ರೊಳಗೆ 75 ಕಿ.ಮೀ. ಮೆಟ್ರೋ ಮಾರ್ಗ ನಿರ್ಮಿಸುವ ಗುರಿ ರಾಜ್ಯ ಸರ್ಕಾರ ಹೊಂದಿದೆ ಎಂದು ರಾಜ್ಯಪಾಲ ವಿ.ಆರ್.ವಾಲ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಇಂದಿನಿಂದ ಆರಂಭವಾದ ಪ್ರಸಕ್ತ ಸಾಲಿನ ಜಂಟಿ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಹಂತ-2 …

Read More »

ವಿಧಾನಪರಿಷತ್‍ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು, ಜ.28- ವಿಧಾನಪರಿಷತ್‍ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಗ್ಗೆ 9.30ಕ್ಕೆ ಪಕ್ಷದ ಮುಖಂಡರೊಂದಿಗೆ ಆಗಮಿಸಿದ ಪ್ರಾಣೇಶ್ ಅವರು ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ …

Read More »

ಉದ್ಧವ್ ಠಾಕ್ರೆ ಒಬ್ಬ ‘ಮಹಾ’ ಹುಚ್ಚ : ಸಾ.ರಾ.ಗೋವಿಂದು

ಬೆಂಗಳೂರು, ಜ.28- ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಒಬ್ಬ ಅರೆಹುಚ್ಚ ಎಂದುಕೊಂಡಿದ್ದೆವು. ಪೂರ್ತಿ ಹುಚ್ಚ ಎಂಬುದು ಅವರ ಹೇಳಿಕೆಯಿಂದ ಸಾಬೀತಾಗಿದೆ ಎಂದು ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಕಿಡಿಕಾರಿದ್ದಾರೆ. ಮರಾಠಿ ಮಾತನಾಡುವವರು ಇರುವ ಕರ್ನಾಟಕದ ಗಡಿ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶ ಎಂಬುದಾಗಿ ಘೋಷಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು ರಾಜಕೀಯ ಅಸ್ತಿತ್ವಕ್ಕಾಗಿ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡಿರುವ ಉದ್ಧವ್ ಠಾಕ್ರೆ ಅವರಿಗೆ …

Read More »

ದರೋಡೆಗೆ ಹೋದ ಮನೆಯಲ್ಲಿ ಸೇಬು ತಿಂದು ಸಿಕ್ಕಿಬಿತ್ತು ಕಳ್ಳರ ಗ್ಯಾಂಗ್!

ಬೆಂಗಳೂರು (ಜ. 28): ಥೇಟ್ ಸಿನಿಮಾ ಶೈಲಿಯಲ್ಲಿ ಸ್ಕೆಚ್ ಹಾಕುತ್ತಿದ್ದ ಆ ಗ್ಯಾಂಗ್ ದೊಡ್ಡ ದೊಡ್ಡ ಮನೆಗಳನ್ನು ನೋಡಿ ಟಾರ್ಗೆಟ್ ಮಾಡುತ್ತಿತ್ತು. ಅವರು ಇಟ್ಟ ಗುರಿ ಯಾವತ್ತೂ ಮಿಸ್ ಆಗೇ ಇಲ್ಲ. ಆ ಗ್ಯಾಂಗ್‌ನ ಲೀಡರ್ ಮಾಡಿರೋ ಕೃತ್ಯಗಳು ಒಂದೆರಡಲ್ಲ. ಬರೋಬ್ಬರಿ 50ಕ್ಕೂ ಹೆಚ್ಚು ಪ್ಲಾನ್‌ ಮಾಡುತ್ತಿದ್ದ ಆ ಗ್ಯಾಂಗ್ ಕಂಬಿಯ ಹಿಂದೆ ಹೋಗಿದೆ. ಆ ಕಳ್ಳರ ಗ್ಯಾಂಗನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸಲಾಗಿದೆ. ಕದಿಯಲು ಹೋದ ಮನೆಯ ಅಡುಗೆ ಮನೆಯಲ್ಲಿ ಸೇಬು …

Read More »

ವಿಧಾನಮಂಡಲ ಅಧಿವೇಶನ ಪ್ರಾರಂಭ; ರಾಜ್ಯಪಾಲರ ಭಾಷಣದ ಹೈಲೈಟ್ಸ್

ಬೆಂಗಳೂರು(ಜ. 28): ಇಂದಿನಿಂದ ಏಳು ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಅಧಿವೇಶನ ಪ್ರಾರಂಭವಾಯಿತು. ಫೆ. 5ರವರೆಗೆ ನಡೆಯುವ ಈ ಅಧಿವೇಶನದಲ್ಲಿ ತೀವ್ರ ರಾಜಕೀಯ ಜಟಾಪಟಿ ನಡೆಯುವುದು ನಿಶ್ಚಿತವಾಗಿದೆ. ಈ ಮಧ್ಯೆ 11 ಮಸೂದೆಗಳು ಮಂಡನೆಗೆ ಸಿದ್ಧವಾಗಿವೆ. ಇವುಗಳ ಪೈಕಿ 2-3 ಮಸೂದೆಗಳ ಸುಗ್ರೀವಾಜ್ಞೆ ಕೂಡ ಆಗಲಿದೆ. ವಿಧಾನಪರಿಷತ್​ನಲ್ಲಿ ಸಭಾಪತಿ ಸ್ಥಾನಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮಧ್ಯೆ ಒಪ್ಪಂದ ಆಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. …

Read More »

ನಾವು ಮುಂಬೈ ಪಡದೇ ತಿರುತ್ತೇವೆ : ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು : ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು. ಅಲ್ಲಿಯವರೆಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈಯನ್ನು ಕರ್ನಾಟಕದ ಭಾಗ ಎಂದು ತೀರ್ಮಾನಿಸಿದ್ದೇವೆ. ಹಾಗಾಗಿ ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಿ ಎಂದಿದ್ದಾರೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಸಂಬಂಧ ಮಹಾಜನ್​ …

Read More »

ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದ್ರೆ ನಾವು ಕೈಕಟ್ಟಿ ಕೂರುವುದಿಲ್ಲ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ರಾಜ್ಯದಲ್ಲಿ ಪಕ್ಷಾತೀತ ವಿರೋಧ ವ್ಯಕ್ತವಾಗಿದ್ದು, ಎಲ್ಲ ಪಕ್ಷದ ನಾಯಕರು ಕಿಡಿ ಕಾರಿದ್ಧಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯೂ ಸಹ ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಬೇಕು ಎಂದಿದ್ದಾರೆ. ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದರೆ ನಾವು ಕೈಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಅವರು ಹಾಗೆ ಕೇಳಿದರೆ ನಾವೂ ಸೊಲ್ಲಾಪುರ, ಮುಂಬೈಯನ್ನು ಕೇಳ ಬೇಕಾಗುತ್ತದೆ. ನಾವು ವಿವಿಧತೆಯಲ್ಲಿ ಏಕತೆ …

Read More »

ಸಿಂದಗಿ ಶಾಸಕ ಎಂ.ಸಿ. ಮನಗೂಳಿ ನಿಧನ

ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ‌ ಪಟ್ಟಣದ ಅವರ …

Read More »