ಬೆಂಗಳೂರು : ವಿಧಾನಪರಿಷತ್ ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಪಕ್ಷದ ಮುಖಂಡರೊಂದಿಗೆ ಆಗಮಿಸಿ, ಇಂದು ಬೆಳಗ್ಗೆ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಗೊಂದು ವೇಳೆ ಕಾಂಗ್ರೆಸ್ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಪ್ರಾಣೇಶ್ ಅವರ ಆಯ್ಕೆಗೆ …
Read More »ವಿಧಾನಮಂಡಲ ಅಧಿವೇಶನ ಆರಂಭ : ಭಿತ್ತಿಪತ್ರ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಭಿತ್ರಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆಯೂ ಸಹ ರಾಜ್ಯಪಾಲರು ಭಾಷಣ ಆರಂಭಿಸಿದರು. ಕೊರೊನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಸರ್ಕಾರದ ನಿಯಮವನ್ನು ಜನರು ಅಚ್ಚುಕಟ್ಟಾಗಿ ಪಾಲಿಸಿದ್ದು, ಕೊರೊನಾ ವಾರಿಯರ್ಸ್ ಗೆ ಧನ್ಯವಾದಗಳು ಎಂದರು. ಕೊರೊನಾಗೆ ಬಲಿಯಾದ …
Read More »ಆರೋಗ್ಯಾಧಿಕಾರಿ ವ್ಯವಸ್ಥಾಪಕ ಅಧಿಕಾರಿ ಲಂಚ ಸ್ವೀಕರಿಸುವ ವೇಳೆಯಲ್ಲಿ ACB ರೇಡ್…!
ವಿಜಯಪುರ : ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚದ ಬೇಡಿಕೆ ಇಟ್ಟಿದ ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು ದಂತ ಸಹಾಯಕ ಹುದ್ದೆ ನೇಮಕಾತಿ ಮಾಡಿಸುವುದಾಗಿ ಬೇಡಿಕೆ ಇಟ್ಟಿದ್ದ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಮನೋಹರ್ ಪಾಟೀಲ್ ಮೂವತ್ತು ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿ ತನಿಖೆ ಮುಂದುವರೆಸಿದ್ದಾರೆ, ಪ್ರಕರಣ ಕುರಿತು ವಿಜಯಪುರ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ರಾಯಬಾಗ ಬಳಿ ರೈಲ್ವೆ ಹಳಿ ಮೇಲೆ ನಾಲ್ವರ ಆತ್ಮಹತ್ಯೆ ತಂದೆ, ತಾಯಿ ಮಕ್ಕಳು
ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಒಂದೇ ಕುಟುಂಬದ 4 ಜನರು ರಾಯಬಾಗ ರೈಲ್ವೆ ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಘಟನೆ ನಡೆದಿದೆ. ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಕಲ್ಲಪ್ಪ ಬಡಿಗೇರ ಮತ್ತು ಆತನ ಪತ್ನಿ ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾತಪ್ಪ ಅಣ್ಣಪ್ಪ ಸುತಾರ (60),ಮಹಾದೇವಿ ಸಾತಪ್ಪ ಸುತಾರ (50), ಸಂತೋಷ ಸಾತಪ್ಪ ಸುತಾರ (26), ದತ್ತಾತ್ರಯ ಸಾತಪ್ಪ ಸುತಾರ (28) ಆತ್ಮಹತ್ಯೆ ಮಾಡಿಕೊಂಡವರು. ತಂದೆ …
Read More »ಬ್ಯಾಂಕ್ ಖಾತೆಗೆ ಪಿಂಚಣಿ
ಬೆಂಗಳೂರು: ರಾಜ್ಯ ಸರಕಾರ “ಮನೆ ಬಾಗಿಲಿಗೇ ಮಾಸಾಶನ’ ಎಂಬ ಅಭಿಯಾನ ಆರಂಭಿಸಿದ್ದು, ಇನ್ನು ಮುಂದೆ ಹಿರಿಯ ನಾಗರಿಕರು ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳು ಮಾಸಾಶನಕ್ಕಾಗಿ ಕಚೇರಿಗಳಿಗೆ ಅಲೆಯಬೇಕಿಲ್ಲ! ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅಭಿಯಾನ ಹಾಗೂ “ನವೋದಯ’ ಆಯಪ್ ಮತ್ತು ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ 9 ಮಾಸಿಕ ಪಿಂಚಣಿ ಯೋಜನೆ ಹಾಗೂ 3 ಏಕಕಾಲಿಕ ಸಹಾಯಧನ ನೆರವು ಯೋಜನೆ ಜಾರಿಯಲ್ಲಿದೆ. ಈಗಾಗಲೇ ಸೌಲಭ್ಯ ಪಡೆಯುತ್ತಿರುವವರ ಮಾಹಿತಿ ಮರು …
Read More »ಫೇಸ್ ಬುಕ್’ ಬಳಕೆದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಡಿಜಿಟಲ್ ಡೆಸ್ಕ್: 500 ಮಿಲಿಯನ್ ಫೇಸ್ ಬುಕ್ ಬಳಕೆದಾರರ ಮಾಹಿತಿಯನ್ನ ಡೇಟಾಬೇಸ್ ಒಳಗೊಂಡಿದೆ ಎಂದು ಸೇವೆಯ ಜಾಹೀರಾತು ನೀಡಿದ ವ್ಯಕ್ತಿಯೊಬ್ಬರು ಮದರ್ ಬೋರ್ಡ್ʼಗೆ ತಿಳಿಸಿದ್ದಾರೆ. ಇನ್ನು ಈ ದತ್ತಾಂಶವು ಮಾರ್ಕ್ ಜುಕರ್ ಬರ್ಗ್ ನೇತೃತ್ವದ ಕಂಪನಿ 2019ರ ಆಗಸ್ಟ್ʼನಲ್ಲಿ ನಿಗದಿ ಮಾಡಿದ ದುರ್ಬಲತೆಗೆ ಸಂಬಂಧಿಸಿದೆ ಎಂದು ವರದಿಯಾಗಿದೆ. ವೈಸ್ ಬಾಟ್ʼನ್ನ ಪರೀಕ್ಷಿಸಿದ ಮತ್ತು ಟೆಲಿಗ್ರಾಂ ಬೋಟ್ʼನಿಂದ ಆರಂಭಿಕ ಫಲಿತಾಂಶಗಳು ರಿಡ್ ಆಕ್ಟೀವಡ್ ಆಗಿರುವುದನ್ನ ಕಂಡುಹಿಡಿಯಲಾಯಿತು. ಆದ್ರೆ, ಕ್ರೆಡಿಟ್ʼಗಳನ್ನ ಖರೀದಿಸುವ ಮೂಲಕ …
Read More »ಆದಾಯ ತೆರಿಗೆ ಕಡಿತಗೊಳಿಸಲು ಈ ಬಾರಿ ಬಜೆಟ್ನಲ್ಲಿ ಚಿಂತನೆ
ನವದೆಹಲಿ: ಬಜೆಟ್ ನಲ್ಲಿ ತೆರಿಗೆ ಹೊರೆ ಇಳಿಕೆಯಾಗುವ ಸಾಧ್ಯತೆಯಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಲಿರುವ ಬಜೆಟ್ ನಲ್ಲಿ ವಾರ್ಷಿಕ 80 ಸಾವಿರ ರೂ. ರೂಪಾಯಿಯವರೆಗೂ ವಿನಾಯಕ ನೀಡುವ ಸಾಧ್ಯತೆ ಇದೆ ಎಂದು ಹಣಕಾಸು ಸಚಿವಾಲಯದ ಮೂಲಗಳು ಹೇಳಿವೆ. ಸ್ಟ್ಯಾಂಡರ್ಡ್ ಡಿಡೆಕ್ಷನ್ ಮಿತಿ ಹೆಚ್ಚಳ ಮಾಡಲು ಕಳೆದ ಬಜೆಟ್ನಲ್ಲಿ ಜಾರಿಗೆ ತರಲಾಗಿದ್ದ ತೆರಿಗೆ ವ್ಯವಸ್ಥೆಗಳನ್ನು ಬದಲಾವಣೆ ಮಾಡಬಹುದು ಎಂದು ಹೇಳಲಾಗಿದೆ. …
Read More »ಒಂದು ದೇಶ; ಒಂದು ಚುನಾವಣೆ ಚರ್ಚೆ
ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಗುರುವಾರ ಆರಂಭವಾಗಲಿದೆ. ಮೊದಲ ದಿನ ರಾಜ್ಯಪಾಲ ವಜುಭಾç ವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದರೆ, ಕೊನೆಯ 2 ದಿನ “ಒಂದು ದೇಶ; ಒಂದು ಚುನಾವಣೆ’ ಬಗ್ಗೆ ಚರ್ಚೆ ನಡೆಯಲಿದೆ ಎಂದು ವಿಧಾನ ಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ ಹೇಳಿದ್ದಾರೆ. ಮೊದಲ ದಿನ ರಾಜ್ಯಪಾಲರ ಭಾಷಣದ ಅನಂತರ ಸಂತಾಪ ಸೂಚನೆ ನಡೆಯಲಿದೆ. ಉಳಿದ ಆರು ದಿನ ಪ್ರಶ್ನೋತ್ತರ ಹಾಗೂ ವಿವಿಧ …
Read More »ಮಾಜಿ ಸಚಿವ, ಜೆಡಿಎಸ್ ಶಾಸಕ ಎಂ.ಸಿ ಮನಗುಳಿ ನಿಧನ
ಬೆಂಗಳೂರು: ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ, ಮಾಜಿ ಸಚಿವ ಎಂ.ಸಿ ಮನಗುಳಿ ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮನಗುಳಿ ಅವರನ್ನು ಕಳೆದ ಶನಿವಾರ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ ಅವರು ಸತತ ಏಳು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಎರಡು ಬಾರಿ ಶಾಸಕರಾಗಿದ್ದರು. 1994ರಲ್ಲಿ ದೇವೇಗೌಡರ ಸಂಪುಟದಲ್ಲಿ ಸಚಿವರಾಗಿದ್ದರು. ಮತ್ತೆ ಕಳೆದ ಕಾಂಗ್ರೆಸ್- ಜೆಡಿಎಸ್ ಮೈತ್ರಿ …
Read More »ಸಿನೆಮಾ ಪ್ರಿಯರಿಗೊಂದು ಸಿಹಿ ಸುದ್ದಿ.
ಹೊಸದಿಲ್ಲಿ/ಬೆಂಗಳೂರು: ಸಿನೆಮಾ ಪ್ರಿಯರಿಗೊಂದು ಸಿಹಿ ಸುದ್ದಿ. ಸಿನೆಮಾ ಹಾಲ್ಗಳಲ್ಲಿ ಶೇ. 50 ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು ಎಂಬ ನಿಯಮವನ್ನು ತೆಗೆದುಹಾಕಿರುವ ಕೇಂದ್ರ ಸರಕಾರ ಹೆಚ್ಚಿನ ಪ್ರೇಕ್ಷಕರ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದೆ. ಈ ಸಂಬಂಧ ಬುಧವಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಿನೆಮಾ ಮಂದಿರ ಮತ್ತು ಈಜುಕೊಳಗಳ ಸಂಬಂಧ ಮಹತ್ವದ ಬದಲಾವಣೆ ಮಾಡಲಾಗಿದೆ. ಆದರೆ ಎಷ್ಟು ಮಂದಿಗೆ ಅವಕಾಶ ಕೊಡಬೇಕು ಎಂಬ ಬಗ್ಗೆ ಶೀಘ್ರದಲ್ಲೇ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ …
Read More »