Breaking News

ಹೊಸಪೇಟೆ; ಒಂದೇ ದಿನದ ಅಂತರದಲ್ಲಿ ಕೋವಿಡ್‌ಗೆ ಅಕ್ಕ, ತಮ್ಮ ಬಲಿ

ವಿಜಯನಗರ, ಮೇ 30; ಕೋವಿಡ್ ಸೋಂಕಿಗೆ ಅಕ್ಕ ಮತ್ತು ತಮ್ಮ ಬಲಿಯಾದ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೇ ಒಂದೇ ದಿನದ ಅಂತರದಲ್ಲಿ ಇಬ್ಬರೂ ಸಹ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯ ಕ್ಯಾರೋಲಿನ್ ಲೂಸಿಯಾ ಸ್ಮಿತ್ (45) ಹಾಗೂ ಸಾವಿಯೋ ಸ್ಮಿತ್ (42) ಎಂದು ಗುರುತಿಸಲಾಗಿದೆ. ಕೋವಿಡ್ ಸೋಂಕು ತಗುಲಿದ ಬಳಿಕ 8 ದಿನಗಳಿಂದ ಬಳ್ಳಾರಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.   ಕಾಂಗ್ರೆಸ್‌ನ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಕ್ಯಾರೋಲಿನ್ …

Read More »

ರಾಜ್ಯದಲ್ಲಿ ಲಸಿಕೆ ಹಗರಣ; ಹೈಕೋರ್ಟ್ ಮಧ್ಯ ಪ್ರವೇಶಕ್ಕೆ ಡಿಕೆಶಿ ಮನವಿ

ಬೆಂಗಳೂರು, ಮೇ 29: ರಾಜ್ಯ ಸರ್ಕಾರ ಖರೀದಿಸಿದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿ, ದುಬಾರಿ ಬೆಲೆಗೆ ಮಾರುತ್ತಿರುವ ಹಗರಣದ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಮಾಧ್ಯಮಗಳ ಮಾತನಾಡಿದ ಅವರು, “ಬೆಡ್ ಹಗರಣ ಬೆಳಕಿಗೆ ಬಂತು. ಬಿಜೆಪಿ ನಾಯಕರು ಒಂದು ಸಮುದಾಯವನ್ನು …

Read More »

ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಯಶಸ್ವಿ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯನ್ಮು ನಿಯಂತ್ರಿಸಲು ಅಧಿಕಾರಿಗಳು ಹಾಗೂ ಎಲ್ಲ ಜನ ಪ್ರತಿನಿಧಿಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಶನಿವಾರ ಮುಖ್ಯಮಂತ್ರಿಗಳಾದ ಬಿ ಎಸ್.ಯಡಿಯೂರಪ್ಪ ಅವರು ಕರೆದಿದ್ದ ಐದು ಜಿಲ್ಲೆಗಳ ಜನ ಪ್ರತಿನಿಧಿಗಳು ಮತ್ತು ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ …

Read More »

ಅನಾಥ ಮಕ್ಕಳಿಗೆ ಸರಕಾರದ ಆಸರೆ: ತಂದೆ-ತಾಯಂದಿರನ್ನು ಕಳೆದುಕೊಂಡ ಮಕ್ಕಳಿಗೆ ಮಾಸಿಕ 3,500 ರೂ.

ಕೊರೊನಾ 2ನೇ ಅಲೆ ಅದೆಷ್ಟೋ ಕುಟುಂಬಗಳನ್ನು ಕಾಡಿದೆ. ಸಾವಿರಾರು ಸಂಸಾರಗಳು ದುಡಿಯುವವರನ್ನು ಕಳೆದುಕೊಂಡಿವೆ. ಸಾವಿರಾರು ಮಕ್ಕಳು ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಇಂಥ ಎಳೆಯರಿಗೆ ಮತ್ತು ಆದಾಯದ ಆಧಾರಸ್ತಂಭ ಕಳೆದುಕೊಂಡವರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಹಾಯದ ಹಸ್ತ ಚಾಚಿವೆ. ಬಾಲ ಸೇವಾ ಯೋಜನೆ ಕೇಂದ್ರ ಸರಕಾರದ ಸಲಹೆಯ ಮೇರೆಗೆ ರಾಜ್ಯ ಸರಕಾರವು ಕೊರೊನಾದಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಮುಖ್ಯಮಂತ್ರಿ ಬಾಲಸೇವಾ ಯೋಜನೆ ಪ್ರಕಟಿಸಿದೆ. ಈ ಮೂಲಕ ಪ್ರತೀ ತಿಂಗಳು 3,500 ರೂ. …

Read More »

ಶಿಕ್ಷಕರ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ

ಯಾದಗಿರಿ: ನಗರದ ಆರ್‌ಟಿಒ ಕಚೇರಿ ಹಿಂಭಾಗದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆರಂಭಿಸಲಾದ ಶಿಕ್ಷಕರ ಕೋವಿಡ್ ಆರೈಕೆ ಕೇಂದ್ರಕ್ಕೆ ಲ್ಲಾ ಉಸ್ತುವಾರಿ ಸಚಿವ ಆರ್. ಶಂಕರ್‌ ಚಾಲನೆ ನೀಡಿದರು. ಕೋವಿಡ್‌ನಿಂದ ಮೃತಪಟ್ಟ 17 ಶಿಕ್ಷಕರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಲಾಯಿತು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ಅವರು ಮೃತ ಶಿಕ್ಷಕರ ನೆನಪಿಗಾಗಿ ಶಾಲಾ ಆವರಣದಲ್ಲಿ ಸಸಿ ನೆಟ್ಟರು. ಶಾಸಕ ವೆಂಕಟರೆಡ್ಡಿ ಮುದ್ನಾಳ, ಸಂಸದ ರಾಜಾ ಅಮರೇಶ್ವರ ನಾಯಕ, …

Read More »

ಶಾಸಕರ ಅನುದಾನದಲ್ಲಿ ಯಲ್ಲಾಪುರ ಕ್ಕೆ ನಾಲ್ಕು ಆಂಬುಲೆನ್ಸ್‌ ನೀಡಿದ ಶಿವರಾಮ ಹೆಬ್ಬಾರ್‌

ಕಾರವಾರ: ಶಾಸಕರ ಅನುದಾನದಲ್ಲಿ ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ತಮ್ಮ ವಿಧಾನಸಭಾ ಕ್ಷೇತ್ರ ಯಲ್ಲಾಪುರಕ್ಕೆ ನಾಲ್ಕು ಅಂಬುಲೆನ್ಸ್ ಖರೀದಿಸಿದ್ದಾರೆ. ಖರೀದಿಸಿದ ಅಂಬುಲೆನ್ಸ್ ಗಟ್ಟಿಮುಟ್ಟಾಗಿದೆಯೇ ಎಂದು ಪರೀಕ್ಷಿಸಲು ತಾವೇ ಸ್ವತ: ಹೊಸದಾಗಿ ಬಂದ ಅಂಬುಲೆನ್ಸ್ ಏರಿ ವಾಹನ ಚಲಾಯಿಸಿ ಟ್ರಯಲ್ ನೋಡಿದರು. ಯಲ್ಲಾಪುರದ ಪ್ರವಾಸಿ ಮಂದಿರದಿಂದ ಯಲ್ಲಾಪುರ ನಗರವನ್ನು ಒಂದು ಸುತ್ತುಹಾಕಿ ನಂತರ ಅಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು. ಸಚಿವ ಶಿವರಾಮ್ ಹೆಬ್ಬಾರ್ ರವರು …

Read More »

ಮುಖ್ಯಮಂತ್ರಿ ಬದಲಾವಣೆ ವಿಚಾರ ಪ್ರಹ್ಲಾದ್ ಜೋಶಿ ಸ್ಪಷ್ಟನೆ

  ಹುಬ್ಬಳ್ಳಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಸಮರ್ಥರು ಇದ್ದಾರೋ ಇಲ್ಲೊ ಅನ್ನೊದಕ್ಕಿಂತ, ಇದ್ದವರು ಸಮರ್ಥರಿದ್ದಾರೋ ಇಲ್ಲವೊ, ಅವರನ್ನು ಮುಂದುವರೆಸಬೇಕು ಬೇಡವೋ ಅನ್ನೊ ಪ್ರಶ್ನೆ ಇದೆ ಎಂದು ಕುತೂಹಲ ಕಾರಿ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೆಡ್ ಕ್ವಾರ್ಟರ್ಸ್ ದೆಹಲಿ, ಆ ಕಾರಣಕ್ಕೆ ದೆಹಲಿಯಲ್ಲಿ ಇರುತ್ತೇನೆ. ಮುಖ್ಯಮಂತ್ರಿ ಹುದ್ದೆ ಈಗ ಖಾಲಿ ಇಲ್ಲ ಯಡಿಯೂರಪ್ಪ ನವರು …

Read More »

ಜನ ಸಹಕರಿಸಿದರೆ ಜೂ.7ರ ನಂತರ ಲಾಕ್‍ಡೌನ್ ಇರಲ್ಲ : ಸಿಎಂ

ಬೆಂಗಳೂರು,- ಜನ ಅಗತ್ಯ ಸಹಕಾರ ನೀಡಿದರೆ ಜೂನ್ 7ರ ನಂತರ ಲಾಕ್‍ಡೌನ್ ಮುಂದುವರೆಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 7ರವರೆಗೂ ಎಂದಿನಂತೆ ಲಾಕ್‍ಡೌನ್ ಮುಂದುವರೆಯಲಿದೆ. 7ರ ನಂತರ ಪರಿಸ್ಥಿತಿ ಅವಲೋಕಿಸಿ ಲಾಕ್‍ಡೌನ್ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ಜನ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಜೂನ್ 7ರ ನಂತರ ಲಾಕ್‍ಡೌನ್ ವಿಸ್ತರಣೆಯ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಜನರು ಲಾಕ್‍ಡೌನ್ ಸಂದರ್ಭದಲ್ಲಿ …

Read More »

ಕಮಿಷನ್‌ ಪಡೆದ ಆರೋಪ ; ಶಾಸಕ ರವಿ ಸುಬ್ರಮಣ್ಯ ವಿರುದ್ದ ಪೋಲೀಸ್‌ ದೂರು

ಬೆಂಗಳೂರು: ‘ಉಚಿತವಾಗಿ ನೀಡಬೇಕಾದ ಕೋವಿಡ್‌ ಲಸಿಕೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ಜನರಿಗೆ ಮಾರಾಟ ಮಾಡಲಾಗುತ್ತಿದೆ. ಬಸವನಗುಡಿ ಕ್ಷೇತ್ರದ ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಹಣ ಪಡೆಯುತ್ತಿದ್ದಾರೆ’ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಎಚ್‌.ಎಂ.ವೆಂಕಟೇಶ್‌ ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಅವರಿಗೆ ಶನಿವಾರ ದೂರು ನೀಡಿದ್ದಾರೆ. ‘ಲಸಿಕೆ’ ಪಡೆಯುವ ಬಗ್ಗೆ ವಿಚಾರಿಸಲು ಹೊಸಕೆರೆಹಳ್ಳಿಯ ಎ.ವಿ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆ ಮಾಡಿರುವ ವೆಂಕಟೇಶ್‌, ಅಲ್ಲಿನ ಸಿಬ್ಬಂದಿಜೊತೆ ಮಾತನಾಡಿದ ಆಡಿಯೊ ತುಣುಕನ್ನೂ ದೂರಿನ ಜೊತೆ …

Read More »

ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ

ಬೆಳಗಾವಿ: ಕೊರೊನಾ ಲಾಕ್ ಡೌನ್ ನಡುವೆ ಬೆಳಗಾವಿಯಲ್ಲಿ ದುರಂತವೊಂದು ಸಂಭವಿಸಿದೆ. ಮನೆಮುಂದೆ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮನೆ ಮುಂದೆ ಇದ್ದ ಚಂಡಿಗೆ ಸಾದಿಕಾ ಸದ್ದಾಂ ಎಂಬ ಒಂದು ವರ್ಷದ ಮಗು ಬಿದ್ದು ಸಾವನ್ನಪ್ಪಿದೆ. ಚರಂಡಿ ನೀರು ಮನೆ ಮುಂದೆ ಕಟ್ಟಿಕೊಂಡಿದ್ದರೂ ಈ ಬಗ್ಗೆ ಮನೆಯವರಾಗಲಿ, ಸಂಬಂಧಪಟ್ಟವರಾಗಲಿ ಗಮನಹರಿಸಿಲ್ಲ. ಆಟವಾಡಲು ಹೋದ ಮಗು ಆಯತಪ್ಪಿ …

Read More »