Breaking News

ಕೆಂಪುಕೋಟೆಯ ಮೇಲೆ ಧ್ವಜ್ ಹಾರಿಸಿದ್ದು ಬಿಜೆಪಿ ಕಾರ್ಯಕರ್ತ !! ರೈತ ಸಂಘಟನೆಗಳ ಆರೋಪ, ತನಿಖೆಗೆ ಒತ್ತಾಯ

ಹೊಸದಿಲ್ಲಿ: ದೆಹಲಿಯಲ್ಲಿ ಮಂಗಳವಾರ ನಡೆದ ಗಲಭೆ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲೆ ಸಿಖ್ ಧ್ವಜ್ ಹಾರಿಸಿದ್ದು ಪಂಜಾಬಿ ಚಿತ್ರನಟ ಹಾಗೂ ಬಿಜೆಪಿ ಕಾರ್ಯಕರ್ತ ದೀಪ್ ಸಿಧು ಹಾಗೂ ಬೆಂಬಲಿಗರು ಎಂದು ರೈತ ಸಂಘಟನೆಗಳು ಆರೋಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ದೀಪ್ ಸಿಧು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಫೋಟೊಗಳು ಹಾಗೂ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಿಧು ತೆಗೆಸಿಕೊಂಡ ಫೋಟೊಗಳು ವೈರಲ್ ಆಗಿವೆ. ಈ ಹಿಂದೆ ದೆಹಲಿ ಗಡಿಯಲ್ಲಿ ನಡೆದ …

Read More »

ನಾಳೆಯಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಾಳೆಯಿಂದ ಫೆ.5 ರವರೆಗೆ ನಡೆಯಲಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಅಧಿವೇಶನ ವೇದಿಕೆಯಾಗಲಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜ.29ರಿಂದ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು, ಅಧಿವೇಶನ ನಡೆಯಲಿದ್ದು, ಅನುದಾನ ವಿಳಂಬದ ಬಗ್ಗೆ ಶಾಸಕರ ಅಪಸ್ವರ, ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಎರಡೂ ಸದನಗಳಲ್ಲಿ ಪ್ರತಿಧ್ವನಿಸಲಿದೆ. …

Read More »

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ಪೆರಿಂಥಲಮನ್ನ ಪಟ್ಟಣದಲ್ಲಿ ಮಹಿಳೆಯೊಬ್ಬಳು ಮೊದಲ ಪ್ರಸವದಲ್ಲೇ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪಲಕ್ಕಾಡ್​ನ ಛಲಾವರ ಮೂಲದ ದಂಪತಿ ಮುಸ್ತಫಾ ಮತ್ತು ಮುಬೀನಾ ಕಳೆದ ವರ್ಷ ಮದುವೆಯಾಗಿದ್ದರು. ಗರ್ಭಾವಸ್ಥೆಯ ಆರಂಭದಲ್ಲೇ ಮುಬೀನಾ ನಾಲ್ಕು ಮಕ್ಕಳ ತಾಯಿ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಪೆರಿಂಥಲ್​ಮನ್ನದ ಮೌಲಾನಾ ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ. ಅಬ್ದುಲ್​ ವಾಹಾಬ್​ ಅವರ ಬಳಿ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದರು. ಗರ್ಭಾವತಿಯಾಗಿ 8 ತಿಂಗಳು …

Read More »

ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2019-20 ನೇ ಸಾಲಿನಲ್ಲಿ ವಿಶೇಷ ಚೇತನರಿಗೆ ಮಂಜೂರಾದ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಹಂಚಿಕೆ ಮಾಡಿದರು. ಇಲ್ಲಿನ ತಮ್ಮ ಗೃಹ ಕಚೇರಿ ಆವರಣದಲ್ಲಿ 15 ವ ವಿಶೇಷಚೇತನ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಟಿ.ಆರ್ ಕಾಗಲ ಮಡ್ಡಪ್ಪ ತೋಳಿನವರ.ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಇಲಾಖೆ ಅಧಿಕಾರಿಗಳು,ಮುಖಂಡರು ಉಪಸ್ಥಿತರಿದ್ದರು.

Read More »

ವಿವಾದಾತ್ಮಕ ಪುಸ್ತಕ ಬಿಡುಗಡೆ; ಮಹಾ ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ

ಗೋಕಾಕ- ಕನಾ೯ಟಕ ಸೀಮಾವಾದ ಸಂಘಷ೯ ಸಂಕಲ್ಪ ಎಂಬ ವಿವಾದಾತ್ಮಕ ಪುಸ್ತಕವನ್ನು ಇಂದು ಮಹಾರಾಷ್ಟ್ರ ಸರ್ಕಾರ ಬಿಡುಗಡೆಗೊಳ್ಳಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ವಾಲ್ಮೀಕಿ ವೃತ್ತದಲ್ಲಿ ಸೇರಿ ಮಹಾ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪುಸ್ತಕದ ಮುಖ ಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಕೃಷ್ಣಾ ಖಾನಪ್ಪನವರ, ದೀಪಕ ಹಂಜಿ, ಮುಗುಟ ಪೈಲ್ವಾನ್, ರಮೇಶ ಕಮತಿ, ಶೆಟ್ಟೆಪ್ಪಾ ಗಾಡಿವಡ್ಡರ, …

Read More »

ಏ. 1 ರಿಂದ ಪಡಿತರ ಚೀಟಿದಾರರಿಗೆ ಜೋಳ, ತೊಗರಿ, ರಾಗಿ: ಉಮೇಶ ಕತ್ತಿ

ಕಲಬುರ್ಗಿ: ‘ಉತ್ತರ ‌ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ‌ಕರ್ನಾಟಕ ದಲ್ಲಿ ಬೆಳೆಯುವ ರಾಗಿಯನ್ನು ಪಡಿತರ ಚೀಟಿದಾರರಿಗೆ ನೀಡಲು ನಿರ್ಧರಿಸಲಾಗಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಮಂಗಳವಾರ ಪ್ರಕಟಿಸಿದರು. ನಗರದ ಡಿಎಆರ್ ಮೈದಾನದಲ್ಲಿ ‌ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜೋಳ, ತೊಗರಿ, ರಾಗಿ ನೀಡ ಬೇಕು ಎಂಬುದು ಬಹಳ ದಿನಗಳ …

Read More »

ಮನೆಯಲ್ಲೇ ಕುಳಿತು ‘ಪ್ರಧಾನಮಂತ್ರಿ ಆವಾಸ್‌ ಯೋಜನೆ’ಯ ಸಬ್ಸಿಡಿ/ಅರ್ಜಿಯನ್ನು ಈ ರೀತಿ ಪರಿಶೀಲಿಸಿ

ನವದೆಹಲಿ: 2015ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂ ಆವಾಸ್ ಯೋಜನೆ) ಆರಂಭಿಸಲಾಗಿತ್ತು. 2022ರ ವೇಳೆಗೆ ದೇಶದ ಎಲ್ಲರಿಗೂ ಮನೆ ನೀಡುವ ಗುರಿಯನ್ನು ಕೇಂದ್ರ ಸರ್ಕಾರದ ಹೊಂದಿದೆ. ಮಧ್ಯಮ ಆದಾಯದ ಗುಂಪುಗಳಿಗೆ (MIG), ಮನೆಗಳ ಸ್ವಾಧೀನ / ನಿರ್ಮಾಣಕ್ಕಾಗಿ (ಮರು ಖರೀದಿಗಳನ್ನು ಒಳಗೊಂಡಂತೆ) ಹೌಸಿಂಗ್ ಲೋನ್‌ಗಳ ಮೇಲೆ ಬಡ್ಡಿ ಸಬ್ಸಿಡಿಯನ್ನು ಒದಗಿಸಲಾಗುತ್ತದೆ. ಆರ್ಥಿಕ ದುರ್ಬಲ ವರ್ಗದ (EWS)/ಕಡಿಮೆ ಆದಾಯ ಗುಂಪಿಗೆ, ಸ್ವಾಧೀನ ಪಡಿಸಿಕೊಳ್ಳಲು, ಮನೆ ಕಟ್ಟುವುದಕ್ಕಾಗಿ ಹೌಸಿಂಗ್ ಲೋನ್ ಮೇಲೆ …

Read More »

ನಾನು ಬೀಫ್​ ತಿಂದಿಲ್ಲ, ತಿನ್ನಬೇಕು ಅನಿಸಿದರೆ ತಿನ್ನುತ್ತೇನೆ? ನೀನು ಯಾರಯ್ಯ ಅದನ್ನೆಲ್ಲ ಕೇಳೋದಕ್ಕೆ? : ಸಿದ್ದರಾಮಯ್

ಬೀದರ್​: ನಾನು ಬೀಫ್​ ತಿಂದಿಲ್ಲ, ತಿನ್ನಬೇಕು ಅನಿಸಿದರೆ ತಿನ್ನುತ್ತೇನೆ? ನೀನು ಯಾರಯ್ಯ ಅದನ್ನೆಲ್ಲ ಕೇಳೋದಕ್ಕೆ? ಆಹಾರ ನನ್ನ ಹಕ್ಕು ಯಾವುದನ್ನು ತಿನ್ನಬೇಕು ಎನ್ನುವುದು ನನಗೆ ಬಿಟ್ಟದ್ದು, ಅದನ್ನು ಕೇಳುವುದಕ್ಕೆ ನೀನು ಯಾರು ಅಂತ ನೇರವಾಗಿ ಆಹಾರದ ಬಗ್ಗೆ ಪ್ರಶ್ನೆ ಮಾಡುವವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.ಅವರು ಮಂಗಳವಾರ ಬೀದರ್‌ ಜಿಲ್ಲೆಯ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಸಂವಿಧಾನ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ …

Read More »

ಮಧುಮೇಹ ಇರುವವರಿಗೆ ಅತ್ಯುತ್ತಮ ಆಹಾರ ಯಾವುದು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ಕೆಎನ್‌ಎನ್‌ಡಿಜಿಟಲ್‌ಡಿಸ್ಕ್‌: ಕೆಲವು ಆಹಾರಗಳು ಆರೋಗ್ಯವನ್ನು ಕಾಪಾಡಲು, ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸಲು ಮತ್ತು ಭವಿಷ್ಯದ ತೊಡಕುಗಳನ್ನು ತಡೆಗಟ್ಟಲು ಸಹಾಯ ಮಾಡಬಹುದು. ಮಧುಮೇಹ ಇರುವವರು ಯಾವ ಆಹಾರ ಗಳನ್ನು ಸೇವಿಸಬೇಕು, ಯಾವ ಆಹಾರಗಳನ್ನು ಆಹಾರದಲ್ಲಿ ಮಿತಿಯಲ್ಲಿ ಸೇವನೆ ಮಾಡಬೇಕು ಎನ್ನುವುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಮಧುಮೇಹದೊಂದಿಗೆ ಬದುಕುವುದು ಎಂದರೆ ಎಲ್ಲವನ್ನೂ ಬಿಟ್ಟು ಬದುಕುವುದು ಎನ್ನುವುದಲ್ಲ, ಈ ಜನರು ಜನರು ತಾವು ಸೇವಿಸುವ ಆಹಾರಗಳನ್ನು ಸಮತೋಲನದಲ್ಲಿಡುವುದನ್ನು ವೈದ್ಯರ ಸಲಹೆ ಮೇರೆಗೆ ಆಹಾರವನ್ನು ಸೇವನೆ ಮಾಡಬಹುದಾಗಿದೆ. …

Read More »

ಸಭಾಪತಿ ಸ್ಥಾನಕ್ಕೆ ‘ಬಸವರಾಜ್ ಹೊರಟ್ಟಿ’ ಹೆಸರು

ಬೆಂಗಳೂರು : ಮೂರು ಗಂಟೆಗಳ ಕಾಲ ನಡೆದ ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯವಾಗಿದ್ದು, ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರನ್ನು ದಳಪತಿಗಳು ಅಂತಿಮಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಇಂದು ನಡೆದ ಸಭೆಯಲ್ಲಿ ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಂತರ ಸಭೆಯಲ್ಲಿ ಹೊರಟ್ಟಿಯವರ ಬಗ್ಗೆ ಎಲ್ಲಾ ಸದಸ್ಯರು ಒಮ್ಮತ ಸೂಚಿಸಿದ್ದಾರೆ. ಇನ್ನೂ, ಸಭೆಯಲ್ಲಿ ಶ್ರೀಕಂಠೇಗೌಡ, ಭೋಜೇಗೌಡ, ಬಸವರಾಜ ಹೊರಟ್ಟಿ, ಅಪ್ಪಾಜಿಗೌಡ, ಕಾಂತರಾಜ್, ಗೋವಿಂದ …

Read More »