ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ. ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್ನ ಬಜೆಟ್ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ …
Read More »ಶಾರ್ಟ್ ಸರ್ಕಿಟ್ : ಸುಟ್ಟು ಕರಕಲಾದ 150 ಎಕರೆ ಪ್ರದೇಶದ ಮೇವು
ಚಿಕ್ಕೋಡಿ : ಗಾಳಿ ವಿದ್ಯುತ್ ಉತ್ಪಾದನಾ ಘಟಕದಲ್ಲಿ (ವಿಂಡ ಪಾವರ್) ಶಾರ್ಟ್ ಸರ್ಕಿಟ್ ದಿಂದ ಲಕ್ಷಾಂತರ ರೂ.ಮೌಲ್ಯದ 150 ಎಕರೆ ಪ್ರದೇಶದಲ್ಲಿ ಬೆಳೆದಿರುವ ಹುಲ್ಲು ಗಾವಲು ಸುಟ್ಟು ಕರಕಲಾಗಿದೆ. ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಸಂಭವಿಸಿದೆ. ಬೇಸಿಗೆ ಕಾಲದಲ್ಲಿ ಜೈನಾಪೂರ ಗ್ರಾಮದ ಜಾನುವಾರುಗಳಿಗೆ ಮೇವು ಪೂರೈಕೆ ಮಾಡುತ್ತಿದ್ದ ಬೆಟ್ಟದಲ್ಲಿನ ಹುಲ್ಲು ಸುಟ್ಟು ಕರಕಲಾಗಿದ್ದು, ಜಾನುವಾರುಗಳಿಗೆ ಮೇವು ಇಲ್ಲದೆ ಗ್ರಾಮದ ರೈತರು ಕಂಗಾಲಾಗಿದ್ದಾರೆ. ರೈತರು ಬೇಸಿಗೆಯಲ್ಲಿ ಅದೇ ಮೇವಿನ ಮೇಲೆ …
Read More »ಗೋಕಾಕ 33 ಗ್ರಾಮ ಪಂಚಾಯತಿ ಮೀಸಲಾತಿ ಪ್ರಕಟ: ಇಲ್ಲಿದೆ ಫುಲ್ ಡಿಟೇಲ್ಸ್!!
ಗೋಕಾಕ: ತಾಲೂಕಿನ 33 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದೆ. ಇಲ್ಲಿನ ಶುಗರ್ ಪ್ಯಾಕ್ಟರಿ ಕ್ರಾಸ್ ಘಟಪ್ರಭಾ ರಸ್ತೆ ಸಮೀಪದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಮೀಸಲಾತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮೀಸಲಾತಿ ಪ್ರಕಟಿಸಿದರು. ತಳಕಟ್ನಾಳ ಗ್ರಾ.ಪಂ ಅಧ್ಯಕ್ಷ (ಹಿಂದುಳಿದ‘ಅ’ವರ್ಗ), ಉಪಾಧ್ಯಕ್ಷ (ಎಸ್.ಸಿ.ಮಹಿಳೆ). ಖನಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ),ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ಪಾಮಲದಿನ್ನಿ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ನಂದಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ …
Read More »ಮುಂದಿನ ಮಳೆಗಾಲದಲ್ಲಿ ವೇದಾವತಿ ಕಣಿವೆಯಿಂದ ವಾಣಿ ವಿಲಾಸ ಜಲಾಯಶಕ್ಕೆ ನೀರು : ಸಚಿವ ರಮೇಶ್ ಜಾರಕಿಹೊಳಿ
ಹಾಸನ : ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಜಿಲ್ಲೆಯ ಬೇಲೂರು ತಾಲ್ಲೂಕಿನ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಶುಕ್ರವಾರ ಪರಿವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಹಂತ-1ರ ಕಾಮಗಾರಿಗಳು ಮತ್ತು ಹಂತ-2ರ 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದರು. ಪ್ರಾಯೋಗಿಕ ನೀರನ್ನು …
Read More »ನನಗೂ ಸಿಎಂ ಆಗುವ ಆಸೆ ಇದೆ : ಸಚಿವ ಉಮೇಶ ಕತ್ತಿ
ತುಮಕೂರು : ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ. ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಸೀನಿಯರ್ ಇದಾರೆ. ಅವರಿಗಿಂತ ನಾನು ಸೀನಿಯರ್ ಇದ್ದೇನಿ. ಸಿಎಂ ಸ್ಥಾನಕ್ಕೆ ಯತ್ನಾಳ ಹಾಗೂ ನನಗೆ ಪೈಪೋಟಿ ನಡೆಯಲಿ ಎಂದು ನೂತನ ಸಚಿವ ಉಮೇಶ ಕತ್ತಿ ಹಾಸ್ಯವಾಗಿ ಹೇಳಿದರು. ತುಮಕೂರು ಸಿದ್ದಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಈಗ ಖಾಲಿ ಇಲ್ಲ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಬಿಜೆಪಿಯಲ್ಲಿ 75 ವರ್ಷದವರೆಗೂ …
Read More »15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕೆಪಿಟಿಸಿಎಲ್ನಿಂದ 15.09 ಕೋಟಿ ರೂ. ವೆಚ್ಚದ 110 ಕೆವ್ಹಿ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ …
Read More »ಗೋಕಾಕ್ : ಪೊಲೀಸ್ ಇಲಾಖೆಯಿಂದ ಸೇವೆ ಅವಶ್ಯಕತೆ ಇದ್ದಾಗ 112 ಸಂಖ್ಯೆಗೆ ಕರೆ ಮಾಡಿ ತುರ್ತು ಸಹಾಯ ಪಡೆಯಬಹುದೆಂದು.ಡಿ ವಾಯ್ ಎಸ್ ಪಿ ಜಾವೀದ್ ಇನಾಮದಾರ ಹೇಳಿದರು.
ತುರ್ತು ಪರಿಸ್ಥಿತಿಗೆ 112 ಸಂಖ್ಯೆಗೆ ಕರೆ (24 Jan 2021 ,06 ತುರ್ತು ಸ್ಪಂದನಾ ವಾಹನಗಳನ್ನು ಚಾಲನೆ) ಗೋಕಾಕ್ : ಪೊಲೀಸ್ ಇಲಾಖೆಯಿಂದ ಸೇವೆ ಅವಶ್ಯಕತೆ ಇದ್ದಾಗ 112 ಸಂಖ್ಯೆಗೆ ಕರೆ ಮಾಡಿ ತುರ್ತು ಸಹಾಯ ಪಡೆಯಬಹುದೆಂದು.ಡಿ ವಾಯ್ ಎಸ್ ಪಿ ಜಾವೀದ್ ಇನಾಮದಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾರ್ವಜನಿಕರು ಯಾವುದೇ ಅವಘಡಗಳು ಸಂಭವಿಸಿದಾಗ ಅಥವಾ ಎಂಥದೆ ತುರ್ತು ಪರಿಸ್ಥಿತಿ ಎದುರಾದಾಗ ಇನ್ನು ಮುಂದೆ 112 …
Read More »ಹಿರೇಬಾಗೇವಾಡಿ ಟೋಲ್ ಬಳಿ ಕರವೇ ಯುವಸೇನೆ ದಾಳಿ: ಶಿವಸೇನೆ ಪುಂಡಾಟ ಖಂಡಿಸಿ ಘೋಷಣೆ, ಕನ್ನಡಮ್ಮನಿಗೆ ಉರುಳು ಸೇವೆ
ಬೆಳಗಾವಿ ಗಡಿಯಲ್ಲಿ ಶಿವಸೇನೆ ಪುಂಡಾಟ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ಬೆಳಗಾವಿ ಚಲೋ ಕರೆ ನೀಡಿದ್ದು, ನಾನಾ ಜಿಲ್ಲೆಗಳಿಂದ 30 ವಾಹನಗಳಲ್ಲಿ ಬೆಳಗಾವಿಗೆ ಬಂದಿದ್ದಾರೆ. ಬೆಳಗಾವಿ ಹಿರೇಬಾಗೇವಾಡಿ ಟೋಲ್ ಗೇಟ್ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟಗಾರರನ್ನ ಪೆÇಲೀಸರು ತಡೆದಿದ್ದಾರೆ. ಗಡಿಯಲ್ಲಿ ಭಗವಾ ಧ್ವಜ ಹಿಡಿದು ಬೆಳಗಾವಿಯತ್ತ ಹೊರಟಿದ್ದ ಶಿವಸೇನೆ ಕಾರ್ಯಕರ್ತರ ಪುಂಡಾಟ, ಪೊಲೀಸರೊಂದಿಗೆ ನೂಕಾಟ ತಳ್ಳಾಟ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ಬೆಳಗಾವಿ ಚಲೋ …
Read More »ಮಿತ್ರಮಂಡಳಿ ಅದೆಲ್ಲಾ ಹಳೆ ಕಥೆ..ಈಗ ನಾವೆಲ್ಲಾ ಒಂದೇ..ರಮೇಶ ಜಾರಕಿಹೊಳಿ
ಬಿಜೆಪಿಯ ಎಲ್ಲಾ ಶಾಸಕ ಮಿತ್ರರು, ಸಚಿವರು ಒಟ್ಟಾಗಿದ್ದೇವೆ. ಮಿತ್ರಮಂಡಳಿ ಅದೆಲ್ಲಾ ಹಳೆ ಕಥೆ, ಈಗ ನಾವೆಲ್ಲಾ ಒಂದೇ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಖಾತೆ ಹಂಚಿಕೆಯಲ್ಲ ಅಸಮಾಧಾನ ವಿಚಾರ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಂಗಳೂರಿನಲ್ಲಿ ಮಾತನಾಡಿದ ರಮೇಶ ಜಾರಕಿಹೊಳಿ ಸುಧಾಕರ್ ಜೊತೆ ಈ ಸಂಬಂಧ ದೂರವಾಣಿ ಮೂಲಕ ಮಾತನಾಡಿದ್ದೇನೆ. ಮುನಿರತ್ನ ಜೊತೆ ಮಾತನಾಡಬೇಕಿತ್ತು. ಆದ್ರೆ ಎತ್ತಿನಹೊಳೆ ಯೋಜನೆ ವೀಕ್ಷಣೆಗೆ ತೆರಳುತ್ತಿದ್ದೇನೆ. ಸಾಯಂಕಾಲ ಬಂದು …
Read More »ಗೋಕತ್ತರಿಸಿ ಮಾರಾಟ ಮಾಡುತ್ತಿದ್ದವನು ಬಂಧನ
ಗೋ ಕತ್ತರಿಸಿ, ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿ ಬಂಧಿಸಿರುವ ಘಟನೆ ನಡೆದಿದೆ. ಗೋ ಹತ್ಯೆ ನಿಷೇಧ ಕಾಯ್ದೆಯಡಿ ಬಂಧಿಸಲಾಗಿದ್ದು ವಿಜಯಪುರ ಜಿಲ್ಲೆಯ ಕೂಡಗಿ ಗ್ರಾಮದ ಸಿಕಂದರಸಾಬ ರಾಜೇಸಾಬ ಬೇಪಾರಿ (35) ಬಂಧಿತ ಆರೋಪಿಯಾಗಿದ್ದು ಸಿಕಂದರಸಾಬ ಬೇಪಾರಿ ಕೊಲ್ಹಾರ ಸಂತೆಯಲ್ಲಿ ರೈತನಿಂದ ಗೋ ಖರೀದಿಸಿದ್ದ ಖಚಿತ ಮಾಹಿತಿ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಹಾಗೂ ಪೊಲೀಸರು ಕಸಾಯಿಖಾನೆ ಸ್ಥಳಕ್ಕೆ ತೆರಳಿ, ಆರೋಪಿಯ ಬಂಧಿಸಿ ಇನ್ನೊಂದು ಗೋ ರಕ್ಷಣೆ ಮಾಡಿದ್ದಾರೆ. ಪಿಎಸ್ಐ …
Read More »