Breaking News

ಕೋವಿಡ್‌ ಟೈಮಲ್ಲಿ 25ಸಾವಿರ ಕೋಟಿ ರಸ್ತೆ ಯೋಜನೆ ಬೇಕಾ? ನಿಮಗೆಷ್ಟು ಕಮಿಷನ್‌ ಸಿಗುತ್ತೆ?ʼ

ಬೆಂಗಳೂರು: ಕೋವಿಡ್ ಪ್ರೇರಿತ ಲಾಕ್‌ಡೌನ್‌ನಿಂದಾಗಿ ಉಂಟಾಗಿರುವ ನಷ್ಟಕ್ಕೆ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಆರ್ಥಿಕ ಪ್ಯಾಕೇಜ್‌ ಕುರಿತು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮಾಂತರ ಪ್ರದೇಶಗಳಿಗೆ ಕೋವಿಡ್ ಎರಡನೇ ಅಲೆ‌ ತಗುಲಿ ಜನ ವಿಲವಿಲ ಒದ್ದಾಡ್ತಿದ್ದಾರೆ. ಮಾನ್ಯ ಯಡಿಯೂರಪ್ಪನವರೇ ನಿನಗೆ ಒಂದು ಪ್ರಶ್ನೆ‌ ಕೇಳ್ತೇನೆ. ಕಳೆದ‌ ಒಂದು ವಾರದಿಂದ ನಗರದ ರಿಂಗ್ ರಸ್ತೆಗಳಿಗೆ 25 ಸಾವಿರ ಕೋಟಿ ಯೋಜನೆ ಕೈಗೆತ್ತಿಕೊಂಡಿದ್ದೀರಿ. ಸಾಲ ಸೋಲ‌ಮಾಡಿ ಈ ಯೋಜನೆ‌ ಮಾಡ್ತಿದ್ದೀರಾ..? …

Read More »

ಕೊರೊನಾ ವಿಶೇಷ ಪ್ಯಾಕೇಜ್​ ಗೆ ರಾಜ್ಯ ರೈತ ಸಂಘದ ಆಕ್ರೋಶ

ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಜೀವನ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವಿಶೇಷ ಆರ್ಥಿಕ ಪ್ಯಾಕೇಜ್​ ಬಗ್ಗೆ ರಾಜ್ಯ ರೈತ ಸಂಘ ಅಸಮಾಧಾನ ಹೊರಹಾಕಿದೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಈ ಆರ್ಥಿಕ ಪ್ಯಾಕೇಜ್​ ಮೂಲಕ ಸಿಎಂ ಯಡಿಯೂರಪ್ಪ ಬಡವರ ಕಣ್ಣೊರೆಸುವ ತಂತ್ರ ಮಾಡಿದ್ದಾರೆ ಎಂದು ಹೇಳಿದ್ರು. ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಯಾವುದೇ ಅಂಶ ಈ ಪ್ಯಾಕೇಜ್​ನಲ್ಲಿಲ್ಲ. ಯಡಿಯೂರಪ್ಪ ಘೋಷಣೆ ಮಾಡಿದ ಈ …

Read More »

ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆಯಾಗೋವರೆಗೆ ಲಾಕ್​ಡೌನ್ ಮುಂದುವರೆಸಿ; ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು (ಮೇ 19): ಕರ್ನಾಟಕದಲ್ಲಿ ಲಾಕ್​ಡೌನ್ ಮುಂದುವರಿಸಿ ಬಡವರಿಗೆ ಆಹಾರ ಹಾಗೂ ದುಡ್ಡು ಕೊಡಬೇಕು. ರಾಜ್ಯದಲ್ಲಿ ಕೊರೋನಾ ಟೆಸ್ಟ್ ಕಡಿಮೆ ಮಾಡಿದಾರೆ, ಪಾಸಿಟಿವ್ ರೇಟ್ ಜಾಸ್ತಿ ಆಗಿದೆ. ರಾಜ್ಯದ ಎರಡು ಜಿಲ್ಲೆಗಳಲ್ಲಿ ಶೇ. 55 ಪಾಸಿಟಿವಿಟಿ ರೇಟ್ ಇದೆ. ಅದು ಕಂಟ್ರೋಲ್ ಗೆ ಬರಬೇಕು ಅಂದರೆ 5%ಗಿಂತ ಕಡಿಮೆ ಇರಬೇಕು. ಕರ್ನಾಟಕದಲ್ಲಿ ಲಾಕ್​ಡೌನ್ ಮುಂದುವರೆಸಿ. ಪಾಸಿಟಿವ್ ರೇಟ್ ಶೇ. 5ಕ್ಕಿಂತ ಕಡಿಮೆ ಬರೊ ತನಕ ಲಾಕ್ಡೌನ್ ಮಾಡಿ. ನಾನು ಸರ್ಕಾರಕ್ಕೆ …

Read More »

ಹಿಂದಿನ ಬಾರಿಯ ಪ್ಯಾಕೇಜ್ ಇನ್ನೂ ತಲುಪಿಲ್ಲವೆಂಬ ವಿಪಕ್ಷಗಳ ಆರೋಪಕ್ಕೆ ಡಿಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಿಶೇಷ ಪ್ಯಾಕೇಜ್​ ಘೋಷಣೆಯಾಗುತ್ತಿದ್ದಂತೆಯೇ ವಿರೋಧ ಪಕ್ಷಗಳ ನಾಯಕರ ಆರ್ಭಟ ಜೋರಾಗಿದೆ. ಕಳೆದ ಬಾರಿಯ ಪ್ಯಾಕೇಜ್​ ಇನ್ನೂ ಫಲಾನುಭವಿಗಳ ಕೈ ತಲುಪಿಲ್ಲ ಅಂತಾ ಆರೋಪಗಳು ಕೇಳಿ ಬರ್ತಿದೆ. ವಿಪಕ್ಷಗಳ ಈ ಆರೋಪವನ್ನ ಡಿಸಿಎಂ ಅಶ್ವತ್ಥ ನಾರಾಯಣ್​ ತಳ್ಳಿ ಹಾಕಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಈ ಆರ್ಥಿಕ ಪ್ಯಾಕೇಜ್​ನಲ್ಲಿ ಕೆಲವು ವಲಯಗಳಿಗೆ ಆದ್ಯತೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಬೇರೆ ವಲಯಗಳಿಗೆ ಆದ್ಯತೆ ನೀಡುವ ಪ್ಯಾಕೇಜ್​ ಕೂಡ …

Read More »

ಖಾಸಗಿ ವಾಹಿನಿ ನಕಲಿ ಗುರುತಿನಚೀಟಿ ತೋರಿಸಿ ಸಿಕ್ಕಿಬಿದ್ದ ಕದೀಮ

ಹುಬ್ಬಳ್ಳಿ: ಕೊರೊನಾ ಕರ್ಫ್ಯೂ ಬಿಗಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೆಲವರು ನಕಲಿ ಐಡಿ ಕಾರ್ಡ್‌ಗಳನ್ನು ತೋರಿಸಿ ಓಡಾಡುತ್ತಿರುವುದನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಮಂಗಳವಾರ ಚನ್ನಮ್ಮ ವೃತ್ತದಲ್ಲಿ ಖಾಸಗಿ ವಾಹಿನಿಯೊಂದರ ನಕಲಿ ಗುರುತಿನ ಚೀಟಿ ತೋರಿಸಿ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ಫ್ಯೂ ಬಿಗಿಗೊಳಿ ಸಲಾಗುತ್ತಿದೆ. ಚೆಕ್‌ಪೋಸ್ಟ್‌ ಗಳನ್ನು ಬಿಗಿಗೊಳಿಸಲಾಗುತ್ತಿದೆ. ಅನಗತ್ಯ ಸಂಚಾರ ಎಂದು ಕಂಡುಬಂದರೆ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ. ಹೀಗಾಗಿ ಪೊಲೀಸರ ಕಣ್ಣು …

Read More »

ಆಂಬುಲೆನ್ಸ್ ದುಬಾರಿ ದರಕ್ಕೆ ಬ್ರೇಕ್!

ಶಿವಮೊಗ್ಗ: ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಆಂಬ್ಯುಲೆನ್ಸ್ ಎಗ್ಗಿಲ್ಲದೇ ಪಡೆಯುವ ಫೀಸ್ ಹಾವಳಿಗೆ ಇದೀಗ ಶಿವಮೊಗ್ಗದಲ್ಲಿ ಬ್ರೇಕ್ ಬಿದ್ದಿದೆ. ದುಬಾರಿ ಬಾಡಿಗೆ ಸುಲಿಗೆ ತಡೆಯಲು ಹೊಸ ಪ್ಲಾನ್ ಮಾಡಲಾಗಿದೆ. ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ಮಾಫಿಯಾ ನಡೆಯುತ್ತಿದ್ದು ಅದನ್ನು ತಡೆಯಲು ಇದೀಗ ಪೋಲಿಸ್, ಆರ್.ಟಿ.ಒ. ಜಂಟಿಯಾಗಿ ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸಿದೆ. ಆಂಬುಲೆನ್ಸ್‌ಗಳಿಗೆ ಪ್ರೀಪೇಯ್ಡ್ ವ್ಯವಸ್ಥೆ ಮಾಡಲಾಗಿದೆ. ಮೆಗ್ಗಾನ್‌ನಿಂದ ಕೊರೋನಾ ಸೋಂಕಿತರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ಯುವ ವೇಳೆ …

Read More »

ಕೋವಿಡ್ ನಿರ್ವಹಣೆಗೆ ಗ್ರಾ.ಪಂ ಗಳಿಗೆ ಹಣ : ಸಿಎಂ

ಬೆಂಗಳೂರು : ಕೊರೊನಾ ವೈರಸ್ ಇದೀಗ ಗ್ರಾಮೀಣ ಪ್ರದೇಶಗಳಲ್ಲೂ ತನ್ನ ಕಬಂದ ಬಾಹುಗಳನ್ನು ಚಾಚಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆಗೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಹಣ ನೀಡುವುದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿರುವ ಅವರು, ಕೋವಿಡ್ ನಿರ್ವಹಣೆಗೆ ಗ್ರಾ.ಪಂ ಗಳಿಗೆ ಹಣ ನೀಡುವುದಾಗಿ ತಿಳಿಸಿದರು. ಗ್ರಾಮ ಪಂಚಾಯಿತಿಗಳಿವೆ 50,000 ಮುಂಗಡ ಹಣ ಪಾವತಿ ಮಾಡಲಾಗುವುದು. ಇದರಿಂದ 6 ಸಾವಿರ ಗ್ರಾ.ಪಂ ಗಳಿಗೆ ಲಾಭವಾಗಲಿದೆ ಎಂದು …

Read More »

ಕಾಟಾಚಾರಕ್ಕೆ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ; ಸತೀಶ್ ಜಾರಕಿಹೊಳಿ

ಬೆಳಗಾವಿ: ವಿರೋಧ ಪಕ್ಷದವರ ಒತ್ತಡದಿಂದ ಮತ್ತು ಜನರಿಗೆ ಪ್ಯಾಕೇಜ್ ಕೊಟ್ಟಿದ್ದೇವೆ ಎಂದು ಬಿಂಬಿಸಿಕೊಳ್ಳುವುದಕ್ಕಾಗಿ ಮಾತ್ರ ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಘೋಷಣೆ ಮಾಡಿರುವ ಕೋವಿಡ್ ಪ್ಯಾಕೇಜ್ ನಲ್ಲಿ ಜನರಿಗೆ ಅನುಕೂಲವಾಗುವ ಯೋಜನೆಗಳು ಇಲ್ಲ. ಕೇವಲ ಕಾಟಾಚಾರಕ್ಕಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ತಮಿಳುನಾಡಿನಲ್ಲಿ ಪ್ರತಿಯೊಬ್ಬರಿಗೂ 4,000 ರೂ. ಘೋಷಣೆ …

Read More »

ಸ್ಮಶಾನ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ನಟ ಚೇತನ್ ಮನವಿ

ಬೆಂಗಳೂರು: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ …

Read More »

ಆಟೋ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ಎಷ್ಟು ಪರಿಹಾರ?

ಬೆಂಗಳೂರು, ಮೇ 19; ಕೋವಿಡ್ 2ನೇ ಅಲೆಯು ಹರಡುವಿಕೆ ತಡೆಯಲು ಕರ್ನಾಟಕದಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಆಟೋ, ಕ್ಯಾಬ್ ಚಾಲಕರು ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗಾಗಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸುಮಾರು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿದರು. ವಿವಿಧ ವರ್ಗದ ಜನರಿಗೆ ಸಹಾಯಕವಗುವಂತೆ ಪ್ಯಾಕೇಜ್ ಘೋಷಣೆ ಮಾಡಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ …

Read More »